Homeಅಂಕಣಗಳು“ಬೇರೆಯವರು ನಿರಾಸೆಯ ಬೇಸರದಲ್ಲಿರುವಾಗ ಒಬ್ಬನೇ ಒಬ್ಬ ಖುಷಿಯಾಗಿರಲು ಹೇಗೆ ಸಾಧ್ಯ?”

“ಬೇರೆಯವರು ನಿರಾಸೆಯ ಬೇಸರದಲ್ಲಿರುವಾಗ ಒಬ್ಬನೇ ಒಬ್ಬ ಖುಷಿಯಾಗಿರಲು ಹೇಗೆ ಸಾಧ್ಯ?”

- Advertisement -
- Advertisement -

ಅಂತರ್ಜಾಲದ ಪುಟದ ಮೇಲೆ ಪುಟಕ್ಕಿಟ್ಟು ಮನಪಟಲದಲ್ಲಿ ಹೊಳೆಯುತ್ತಿರುವ ಬರಹವಿದು.

ದಕ್ಷಿಣ ಬ್ರೆಜಿಲಿನ ಫ್ಲೋರಿಯಾನೋಪಾಲಿಸ್‍ನಲ್ಲಿ ನಡೆದಿತ್ತೊಂದು ಶಾಂತಿಯ ಉತ್ಸವ. ಪತ್ರಕರ್ತೆಯೂ ಮತ್ತು ತತ್ವಜ್ಞಾನಿಯೂ ಆದ ಲಿಯಾ ಡಿಸ್ಕಿನ್ ನಿರೂಪಿಸಿದ ಸಂಗತಿ ಅಂತರ್ಜಾಲದಲ್ಲಿ ಅಲೆದಾಡುತ್ತಿದ್ದ ಸೌಹಾರ್ದ ಪ್ರಿಯರ, ಮಾನವತಾ ಪ್ರೇಮಿಗಳ ಹೃದಯವನ್ನು ಮುಟ್ಟಿತು.

ಮಾನವಶಾಸ್ತ್ರಜ್ಞನೊಬ್ಬ ಈ ಬುಡಕಟ್ಟನ್ನು ಅಧ್ಯಯನ ಮಾಡುತ್ತಿದ್ದ. ಅವನ ಕೆಲಸಗಳನ್ನೆಲ್ಲಾ ಮುಗಿಸಿಕೊಂಡು ಹೊರಡುವ ಮುನ್ನ ತನ್ನ ಸುತ್ತುವರಿದಿದ್ದ ಬುಡಕಟ್ಟಿನ ಮಕ್ಕಳಿಗೆ ಆಟವಾಡಿಸಲು ಮತ್ತು ತನ್ನ ಪ್ರೀತಿಯ ಸಂಕೇತವಾಗಿ ಸಿಹಿ ಹಂಚಲು ಹೋಗಿ, ಒಂದು ಸಂಗತಿ ಜಗತ್ತಿಗೆ ತಿಳಿಯಲು ಕಾರಣನಾದ.

ಪಟ್ಟಣದಿಂದ ತಂದಿದ್ದ ಚಾಕೊಲೆಟ್ ಮತ್ತಿತರ ಸಿಹಿತಿನಿಸುಗಳನ್ನು ಬುಟ್ಟಿಯೊಂದರಲ್ಲಿಟ್ಟು ಅದನ್ನು ಒಂದಷ್ಟು ದೂರದಲ್ಲಿರುವ ಮರದ ಕೆಳಗೆ ಇಟ್ಟ. ಮಕ್ಕಳನ್ನೆಲ್ಲಾ ಒಟ್ಟಾಗಿಸಿ ಸಾಲಾಗಿ ನಿಲ್ಲಿಸಿದ. ನಾನು ಸೀಟಿ ಊದಿದಾಗ ಓಡಲು ಪ್ರಾರಂಭಿಸಬೇಕು, ಯಾರು ಮೊದಲು ಓಡುತ್ತಾರೋ ಅವರಿಗೆ ಆ ಎಲ್ಲಾ ತಿನಿಸುಗಳು ಎಂದು ಪೈಪೋಟಿಯನ್ನು ಒಡ್ಡಿದ. ಮಕ್ಕಳೆಲ್ಲಾ ನಿಂತರು. ಈತ “ಹೋಗಿ” ಎಂದು ಸೀಟಿ ಊದುತ್ತಿದ್ದಂತೆ ಆ ಮಕ್ಕಳೆಲ್ಲಾ ಜೋರಾಗಿ ಓಡುವುದು ಬಿಟ್ಟು ಒಬ್ಬರೊಬ್ಬರ ಕೈಗಳನ್ನು ಹಿಡಿದು ಒಟ್ಟಾಗಿ, ಎಲ್ಲರೂ ಓಡುವಂತಾಗುವಂತೆ ಲಘು ವೇಗದಲ್ಲಿ ಓಡಿ, ಒಟ್ಟಿಗೆ ಮುಟ್ಟಿ ಆ ತಿನಿಸುಗಳನ್ನು ಎಲ್ಲರೂ ಹಂಚಿಕೊಂಡು ಸಂತೋಷದಿಂದ ತಿಂದರು.

ಯಾರು ಮೊದಲು ಓಡುತ್ತಾರೋ, ಮಾಡುತ್ತಾರೋ ಅವರಿಗೇ ಬಹುಮಾನ ಎನ್ನುವಂತ ಸ್ಪರ್ಧೆಯ ಆಟವನ್ನು ಬಾಲ್ಯದಿಂದಲೇ ರೂಢಿಗೊಳಿಸಿಕೊಂಡಿರುವಂತಹ ಸಮಾಜದ ಈ ಮಾನವ ಶಾಸ್ತ್ರಜ್ಞನಿಗೆ ಇವರ ರೇಸ್ ಇಲ್ಲದ, ಸ್ಪರ್ಧೆ ಹೂಡದ, ಸಹಕಾರದ ಓಟ ಆಶ್ಚರ್ಯ ತಂದಿತು. “ಯಾಕೆ ಯಾರಾದರೊಬ್ಬರು, ಸಾಮರ್ಥ್ಯವಿರುವವರು ಓಡಿ ಬಹುಮಾನವನ್ನು ಗೆಲ್ಲಲಿಲ್ಲ? ಅದೊಂದು ಖುಷಿ (ಫನ್) ಅಲ್ಲವೇ” ಎಂದು ಕೇಳಿದ.

ಹಾಗೆ ತನ್ನೊಂದಿಗಿರುವವರನ್ನು ಬಿಟ್ಟು ತಾನೊಬ್ಬನೇ ಓಡಿ ಹೋಗಿ ಅದೇನನ್ನೋ ಪಡೆಯುವುದು ಬಹುಮಾನವಲ್ಲ, ಅದು ಅವಮಾನ ಎಂಬ ಸಂಸ್ಕೃತಿಯನ್ನು ರೂಢಿಸಿಕೊಂಡಿರುವ ಆ ಬುಡಕಟ್ಟಿನ ಹೆಣ್ಣುಮಗುವೊಂದು ಮರುಪ್ರಶ್ನಿಸಿತು, “ಬೇರೆಯವರು ನಿರಾಸೆಯ ಬೇಸರದಲ್ಲಿರುವಾಗ ಒಬ್ಬನೇ ಒಬ್ಬ ಖುಷಿಯಾಗಿರಲು ಹೇಗೆ ಸಾಧ್ಯ?”

ಉಬೂಂಟು ಅಲ್ಲಿನ ಬುಡಕಟ್ಟು ರೂಢಿಸಿಕೊಂಡಿರುವ ಪ್ರಜ್ಞೆ. ಅದಿರುವುದು ದಕ್ಷಿಣ ಆಫ್ರಿಕಾದಲ್ಲಿ. ನೀನು ವೇಗವಾಗಿ ಕ್ರಮಿಸಬೇಕಾದರೆ ಒಬ್ಬನೇ ಓಡು. ಆದರೆ ನೀನು ಬಹುದೂರ ಕ್ರಮಿಸಬೇಕಾದರೆ ಒಟ್ಟಾಗಿ ಹೋಗು ಎನ್ನುವ ಆಫ್ರಿಕಾದ ಗಾದೆಯ ಮಾತಿನಂತೆ ಉಬೂಂಟು ಒಂದು ಜೀವನಾದರ್ಶದ ರೂಢಿ.

ಲಿಯಾ ಡಿಸ್ಕಿನ್

‘ಊ-ಬೂನ್-ಟೂ’ ಎಂದರೆ ನಮ್ಮಿಂದ ‘ನಾನು’ ಎಂದು ಅರ್ಥ ಜಲು ಅಥವಾ ಖ್ಸೋಸ ಭಾಷೆಯಲ್ಲಿ.

ಆರ್ಚ್ ಬಿಷಪ್ ಮತ್ತು ಸಾಮಾಜಿಕ ಕಾರ್ಯಕರ್ತ ಡೆಸ್ಮಂಡ್ ಟುಟು ಹೇಳುವಂತೆ “ಉಬೂಂಟು ಎನ್ನುವುದು ಮಾನವನಾಗಿರುವುದರ ಸಾರತತ್ವ. ಇದು ಈ ಜಗತ್ತಿಗೆ ಆಫ್ರಿಕನ್ನರ ಕೊಡುಗೆ. ಇದರಲ್ಲಿ ಅತಿಥಿಗಳನ್ನು ಆದರಿಸುವುದು, ಒಬ್ಬರು ಮತ್ತೊಬ್ಬರಿಗೆ ಕಾಳಜಿ ವಹಿಸುವುದು, ಇತರರಿಗಾಗಿ ಪ್ರತಿಫಲಾಪೇಕ್ಷೆ ಇಲ್ಲದೇ ತಮ್ಮ ಕಾಯಕವನ್ನು ವಿಸ್ತರಿಸುವುದು, ಒಬ್ಬನ ಒಳಿತಿನಲ್ಲಿ ತನ್ನಯ ಒಳಿತು ಎಂಬ ಸಿದ್ಧಾಂತವನ್ನು ಪಾಲಿಸುವುದು; ಎಲ್ಲಾ ಇವೆ. ಒಬ್ಬ ವ್ಯಕ್ತಿಯು ಮತ್ತೊಬ್ಬ ವ್ಯಕ್ತಿಯ ಮೂಲಕ ಅನುಬಂಧಕ್ಕೆ ಒಳಗಾಗಿರುವುದೇ ಮಾನವತೆ. ಒಬ್ಬ ಮತ್ತೊಬ್ಬ ವ್ಯಕ್ತಿಯನ್ನು ಅಮಾನವೀಯವಾಗಿ ನಡೆಸಿಕೊಂಡಲ್ಲಿ ತನ್ನನ್ನೇ ಅಮಾನವೀಯಗೊಳಿಸಿಕೊಂಡಂತೆ. ಒಬ್ಬರ ಮೇಲೆ ದಬ್ಬಾಳಿಕೆ ಮಾಡುವುದು ಯಾವುದೇ ಮನುಷ್ಯನಿಗೆ ಅವಮಾನದ ಸಂಗತಿ. ಮನುಷ್ಯರ ಐಕ್ಯತೆ ನಿರ್ಬಂಧಗಳಿಗೆ ಒಳಗಾಗಿದೆ. ಸಮುದಾಯದ ಸಾಮಾನ್ಯ ಒಳಿತಿಗೆ ಸಾಮಾನ್ಯತೆಯಲ್ಲಿ ಅದರ ಭಾಗವಾಗಿರುವ ಪ್ರಜ್ಞೆಯೇ ಒಬ್ಬನ ಮಾನವತೆಯಾಗಿರುತ್ತದೆ.”

ದಕ್ಷಿಣ ಆಫ್ರಿಕಾದ ಅನೇಕ ಭಾಗಗಳಲ್ಲಿ ಉಬೂಂಟು ಪಾಲಿಸುವ ಬುಡಕಟ್ಟಿನ ಜನರಿದ್ದು ಅವರದೊಂದು ಸಕಾರಾತ್ಮಕ ಪದ್ಧತಿಯೊಂದು ಚಾಲ್ತಿಯಲ್ಲಿದೆ. ಅದೇನೆಂದರೆ ಯಾವುದೇ ವ್ಯಕ್ತಿಯು ಏನೇ ತಪ್ಪು ಅಥವಾ ಅಪರಾಧ ಮಾಡಿದರೂ ಅವನನ್ನು ಹಳ್ಳಿಯ ಮಧ್ಯಭಾಗಕ್ಕೆ ಕರೆದುಕೊಂಡು ಬರುತ್ತಾರೆ. ನಂತರ ಊರಿನ ಜನರೆಲ್ಲಾ ಸುತ್ತುವರೆದು, ಎರಡು ದಿನಗಳ ಕಾಲ ಅವನು ಮಾಡಿರುವ ಒಳ್ಳೆಯ ಕೆಲಸಗಳನ್ನೆಲ್ಲಾ ಹೇಳುತ್ತಿರುತ್ತಾರೆ. ಅವರ ಪ್ರಕಾರ ಯಾವುದೇ ವ್ಯಕ್ತಿಯು ಮೂಲದಲ್ಲಿ ಒಳ್ಳೆಯವನೇ ಆಗಿರುತ್ತಾನೆ. ಆದರೆ ಯಾವುದೋ ಒಂದು ಗಳಿಗೆಯಲ್ಲಿ ತಪ್ಪು ಮಾಡಿಬಿಡುತ್ತಾನೆ. ಹೊರಗಿನ ದುಷ್ಟ ಶಕ್ತಿಯ ಪ್ರಭಾವದಿಂದ ತಪ್ಪು ಸಂಭವಿಸಿರುತ್ತದೆ. ಆ ತಪ್ಪು ಮಾಡುವುದೆಂದರೆ ತನ್ನ ಒಳ್ಳೆಯತನವನ್ನು ಮರುಕಳಿಸೆಂದು ಅವನ ಕೂಗು ಅಥವಾ ಅಳಲಾಗಿರುತ್ತದೆ. ಆದ್ದರಿಂದ ಹಳ್ಳಿಯವರೆಲ್ಲಾ ಒಗ್ಗಟ್ಟಾಗಿ ತನ್ನ ಒಳ್ಳೆಯತನಕ್ಕಾಗಿ ಹಾತೊರೆಯುತ್ತಾ ಸಹಾಯ ಬೇಡುತ್ತಿರುವವನಿಗೆ ಸಹಕರಿಸಲೆಂದು ಅವನ ಒಳ್ಳೆಯ ಕೆಲಸಗಳನ್ನು, ಗುಣಗಳನ್ನು ಹೇಳುವಂತಹ ಕೆಲಸವನ್ನು ಮಾಡುತ್ತಾರೆ. ಈ ಆಚರಣೆಯ ಮೂಲಕ ತಪ್ಪು ಮಾಡಿರುವವನು ನಿಸರ್ಗದಿಂದ ಪಡೆದಿರುವ ಒಳ್ಳೆಯತನವನ್ನು ಮರಳಿಪಡೆಯುತ್ತಾನೆಂದು ಅವರ ನಂಬಿಕೆ. ಶಿಕ್ಷೆ ಮತ್ತು ಅವಮಾನಗಳನ್ನು ಮಾಡುವುದರಿಂದ ವ್ಯಕ್ತಿಯು ತಮ್ಮಿಂದ ನಿಸರ್ಗದತ್ತವಾದ ಗುಣರಹಿತನಾಗಿ ಸಂಪೂರ್ಣ ಹೊರಟೇ ಹೋಗುತ್ತಾನೆಂದು ಅವರು ಹೆದರುತ್ತಾರೆ. ಆದ್ದರಿಂದ ಆತನನ್ನು ಅಪಮಾನಿಸುವುದೂ ಇಲ್ಲ, ಶಿಕ್ಷಿಸುವುದೂ ಇಲ್ಲ. ಬದಲಿಗೆ ಅವನ ಒಳ್ಳೆಯತನವನ್ನು ಸ್ಮರಣೆಗೆ ತರುವುದರ ಮೂಲಕ, ಅವನು ಮತ್ತು ನಿಸರ್ಗದ ಕೊಡುಗೆಗೆ ಬೆರೆತುಕೊಳ್ಳಲು ಪ್ರೋತ್ಸಾಹಿಸುತ್ತಾರೆ.

ಯಾರಾದರೊಬ್ಬರು ಏನಾದರೊಂದು ತಪ್ಪು ಮಾಡಿದರೆ ಸಾಕು, ಆತ ಮಾಡಿರುವ ಒಳ್ಳೆಯ ಕೆಲಸ ಮತ್ತು ಸಹಾಯಗಳನ್ನೆಲ್ಲಾ ಮರೆತು ಚಾರಿತ್ರ್ಯವಧೆ ಮಾಡುವ ಜನರ ನಡುವೆ ಉಬೂಂಟು ಜನ ವಿಶೇಷವಾಗಿ ಮತ್ತು ಸಕಾರಾತ್ಮಕವಾಗಿ ಕಾಣುತ್ತಾರೆ. ಚಿತ್ತಾರವನ್ನು ಮಸಿ ನುಂಗಿತು ಎಂದಿಲ್ಲ ಇವರಲ್ಲಿ. ಅಡಿಕೆ ಕದ್ದ ಮಾನ ಆನೆ ಕೊಟ್ಟರೂ ಬಾರದು ಎನ್ನುವ ಜನರಲ್ಲ ಇವರು.

ಇದು ಆಫ್ರಿಕಾದ ಪ್ರಾಚೀನ ಸಾಂಪ್ರದಾಯಿಕ ಧಾರ್ಮಿಕತೆಯ ತತ್ವವೇ ಆಗಿತ್ತು ಎಂದು ತಮ್ಮ ಮಹಾಪ್ರಬಂಧಗಳಲ್ಲಿ ಮಾನವಶಾಸ್ತ್ರಜ್ಞರು ಹೇಳಿದ್ದಾರೆ. ಅವರು ಹಾಗೆ ಇರಲೇ ಬೇಕಾದದ್ದು ಧಾರ್ಮಿಕ ಶ್ರದ್ಧೆ ಮತ್ತು ಸಂಪ್ರದಾಯವೇ ಆಗಿದ್ದು ಉಟೂಂಬುವನ್ನು ಹೆಚ್ಚು ಉತ್ಪ್ರೇಕ್ಷೆಗೊಳಿಸುವ ಅಗತ್ಯವಿಲ್ಲ. ಇತರ ಅಂಧಶ್ರದ್ಧೆಗಳಂತೆ ಇದನ್ನೂ ಪಾಲಿಸುತ್ತಾರೆ ಎಂದೂ ಉಟೂಂಬುವನ್ನು ವೈಭವೀಕರಿಸದಿರಲು ಪಾಶ್ಚಾತ್ಯ ವಿದ್ವಾಂಸರು ವಿಮರ್ಶಿಸುತ್ತಾರೆ.

ಮಾನವನ ಹಿತವನ್ನು ಸಮುದಾಯದ ಸುಖವನ್ನು ಹೊಂದಲು ವಿಶೇಷವಾದ ಪಾಂಡಿತ್ಯದ ಅರ್ಥವಂತಿಕೆ ಏಕೆ ಬೇಕು? ಮಾನವತೆಯ ದುರ್ಭಿಕ್ಷದ ಕಾಲದಲ್ಲಿ, ಒಡಕುಗಳನ್ನೇ ಬಲಗೊಳಿಸುವ ತತ್ವಗಳು ಮೆರೆಯುವಲ್ಲಿ ಅಂಧಾನುಕರುಣೆಯೋ ಅಥವಾ ಉತ್ಪ್ರೇಕ್ಷೆಯೋ ಒಟ್ಟಾರೆ ಯಾವುದೇ ನಡವಳಿಕೆ ಮತ್ತು ರೂಢಿಯು ಮಾನವನಿಗೆ ಸಾಮೂಹಿಕವಾಗಿ ಹಿತವನ್ನು ತಂದರೆ, ಐಕ್ಯತೆಯನ್ನು ಬಲಪಡಿಸುವಂತಾದರೆ ಅದರಲ್ಲಿ ಕೂದಲು ಸೀಳುವುದೇಕೆ ಎನ್ನುತ್ತಾರೆ ಸೌಹಾರ್ದದ ಪ್ರೇಮಿಗಳು.


ಇದನ್ನು ಓದಿ: ತೇಜಸ್ವಿಯವರ ಒಂದು ಸೀಟಿನ ಸ್ಕೂಟರ್‍ರೂ… ಡ್ರಾಪಾಯಣದ ಸಮೃದ್ಧ ಅನುಭವವೂ….
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...