Homeಅಂಕಣಗಳು“ಬೇರೆಯವರು ನಿರಾಸೆಯ ಬೇಸರದಲ್ಲಿರುವಾಗ ಒಬ್ಬನೇ ಒಬ್ಬ ಖುಷಿಯಾಗಿರಲು ಹೇಗೆ ಸಾಧ್ಯ?”

“ಬೇರೆಯವರು ನಿರಾಸೆಯ ಬೇಸರದಲ್ಲಿರುವಾಗ ಒಬ್ಬನೇ ಒಬ್ಬ ಖುಷಿಯಾಗಿರಲು ಹೇಗೆ ಸಾಧ್ಯ?”

- Advertisement -
- Advertisement -

ಅಂತರ್ಜಾಲದ ಪುಟದ ಮೇಲೆ ಪುಟಕ್ಕಿಟ್ಟು ಮನಪಟಲದಲ್ಲಿ ಹೊಳೆಯುತ್ತಿರುವ ಬರಹವಿದು.

ದಕ್ಷಿಣ ಬ್ರೆಜಿಲಿನ ಫ್ಲೋರಿಯಾನೋಪಾಲಿಸ್‍ನಲ್ಲಿ ನಡೆದಿತ್ತೊಂದು ಶಾಂತಿಯ ಉತ್ಸವ. ಪತ್ರಕರ್ತೆಯೂ ಮತ್ತು ತತ್ವಜ್ಞಾನಿಯೂ ಆದ ಲಿಯಾ ಡಿಸ್ಕಿನ್ ನಿರೂಪಿಸಿದ ಸಂಗತಿ ಅಂತರ್ಜಾಲದಲ್ಲಿ ಅಲೆದಾಡುತ್ತಿದ್ದ ಸೌಹಾರ್ದ ಪ್ರಿಯರ, ಮಾನವತಾ ಪ್ರೇಮಿಗಳ ಹೃದಯವನ್ನು ಮುಟ್ಟಿತು.

ಮಾನವಶಾಸ್ತ್ರಜ್ಞನೊಬ್ಬ ಈ ಬುಡಕಟ್ಟನ್ನು ಅಧ್ಯಯನ ಮಾಡುತ್ತಿದ್ದ. ಅವನ ಕೆಲಸಗಳನ್ನೆಲ್ಲಾ ಮುಗಿಸಿಕೊಂಡು ಹೊರಡುವ ಮುನ್ನ ತನ್ನ ಸುತ್ತುವರಿದಿದ್ದ ಬುಡಕಟ್ಟಿನ ಮಕ್ಕಳಿಗೆ ಆಟವಾಡಿಸಲು ಮತ್ತು ತನ್ನ ಪ್ರೀತಿಯ ಸಂಕೇತವಾಗಿ ಸಿಹಿ ಹಂಚಲು ಹೋಗಿ, ಒಂದು ಸಂಗತಿ ಜಗತ್ತಿಗೆ ತಿಳಿಯಲು ಕಾರಣನಾದ.

ಪಟ್ಟಣದಿಂದ ತಂದಿದ್ದ ಚಾಕೊಲೆಟ್ ಮತ್ತಿತರ ಸಿಹಿತಿನಿಸುಗಳನ್ನು ಬುಟ್ಟಿಯೊಂದರಲ್ಲಿಟ್ಟು ಅದನ್ನು ಒಂದಷ್ಟು ದೂರದಲ್ಲಿರುವ ಮರದ ಕೆಳಗೆ ಇಟ್ಟ. ಮಕ್ಕಳನ್ನೆಲ್ಲಾ ಒಟ್ಟಾಗಿಸಿ ಸಾಲಾಗಿ ನಿಲ್ಲಿಸಿದ. ನಾನು ಸೀಟಿ ಊದಿದಾಗ ಓಡಲು ಪ್ರಾರಂಭಿಸಬೇಕು, ಯಾರು ಮೊದಲು ಓಡುತ್ತಾರೋ ಅವರಿಗೆ ಆ ಎಲ್ಲಾ ತಿನಿಸುಗಳು ಎಂದು ಪೈಪೋಟಿಯನ್ನು ಒಡ್ಡಿದ. ಮಕ್ಕಳೆಲ್ಲಾ ನಿಂತರು. ಈತ “ಹೋಗಿ” ಎಂದು ಸೀಟಿ ಊದುತ್ತಿದ್ದಂತೆ ಆ ಮಕ್ಕಳೆಲ್ಲಾ ಜೋರಾಗಿ ಓಡುವುದು ಬಿಟ್ಟು ಒಬ್ಬರೊಬ್ಬರ ಕೈಗಳನ್ನು ಹಿಡಿದು ಒಟ್ಟಾಗಿ, ಎಲ್ಲರೂ ಓಡುವಂತಾಗುವಂತೆ ಲಘು ವೇಗದಲ್ಲಿ ಓಡಿ, ಒಟ್ಟಿಗೆ ಮುಟ್ಟಿ ಆ ತಿನಿಸುಗಳನ್ನು ಎಲ್ಲರೂ ಹಂಚಿಕೊಂಡು ಸಂತೋಷದಿಂದ ತಿಂದರು.

ಯಾರು ಮೊದಲು ಓಡುತ್ತಾರೋ, ಮಾಡುತ್ತಾರೋ ಅವರಿಗೇ ಬಹುಮಾನ ಎನ್ನುವಂತ ಸ್ಪರ್ಧೆಯ ಆಟವನ್ನು ಬಾಲ್ಯದಿಂದಲೇ ರೂಢಿಗೊಳಿಸಿಕೊಂಡಿರುವಂತಹ ಸಮಾಜದ ಈ ಮಾನವ ಶಾಸ್ತ್ರಜ್ಞನಿಗೆ ಇವರ ರೇಸ್ ಇಲ್ಲದ, ಸ್ಪರ್ಧೆ ಹೂಡದ, ಸಹಕಾರದ ಓಟ ಆಶ್ಚರ್ಯ ತಂದಿತು. “ಯಾಕೆ ಯಾರಾದರೊಬ್ಬರು, ಸಾಮರ್ಥ್ಯವಿರುವವರು ಓಡಿ ಬಹುಮಾನವನ್ನು ಗೆಲ್ಲಲಿಲ್ಲ? ಅದೊಂದು ಖುಷಿ (ಫನ್) ಅಲ್ಲವೇ” ಎಂದು ಕೇಳಿದ.

ಹಾಗೆ ತನ್ನೊಂದಿಗಿರುವವರನ್ನು ಬಿಟ್ಟು ತಾನೊಬ್ಬನೇ ಓಡಿ ಹೋಗಿ ಅದೇನನ್ನೋ ಪಡೆಯುವುದು ಬಹುಮಾನವಲ್ಲ, ಅದು ಅವಮಾನ ಎಂಬ ಸಂಸ್ಕೃತಿಯನ್ನು ರೂಢಿಸಿಕೊಂಡಿರುವ ಆ ಬುಡಕಟ್ಟಿನ ಹೆಣ್ಣುಮಗುವೊಂದು ಮರುಪ್ರಶ್ನಿಸಿತು, “ಬೇರೆಯವರು ನಿರಾಸೆಯ ಬೇಸರದಲ್ಲಿರುವಾಗ ಒಬ್ಬನೇ ಒಬ್ಬ ಖುಷಿಯಾಗಿರಲು ಹೇಗೆ ಸಾಧ್ಯ?”

ಉಬೂಂಟು ಅಲ್ಲಿನ ಬುಡಕಟ್ಟು ರೂಢಿಸಿಕೊಂಡಿರುವ ಪ್ರಜ್ಞೆ. ಅದಿರುವುದು ದಕ್ಷಿಣ ಆಫ್ರಿಕಾದಲ್ಲಿ. ನೀನು ವೇಗವಾಗಿ ಕ್ರಮಿಸಬೇಕಾದರೆ ಒಬ್ಬನೇ ಓಡು. ಆದರೆ ನೀನು ಬಹುದೂರ ಕ್ರಮಿಸಬೇಕಾದರೆ ಒಟ್ಟಾಗಿ ಹೋಗು ಎನ್ನುವ ಆಫ್ರಿಕಾದ ಗಾದೆಯ ಮಾತಿನಂತೆ ಉಬೂಂಟು ಒಂದು ಜೀವನಾದರ್ಶದ ರೂಢಿ.

ಲಿಯಾ ಡಿಸ್ಕಿನ್

‘ಊ-ಬೂನ್-ಟೂ’ ಎಂದರೆ ನಮ್ಮಿಂದ ‘ನಾನು’ ಎಂದು ಅರ್ಥ ಜಲು ಅಥವಾ ಖ್ಸೋಸ ಭಾಷೆಯಲ್ಲಿ.

ಆರ್ಚ್ ಬಿಷಪ್ ಮತ್ತು ಸಾಮಾಜಿಕ ಕಾರ್ಯಕರ್ತ ಡೆಸ್ಮಂಡ್ ಟುಟು ಹೇಳುವಂತೆ “ಉಬೂಂಟು ಎನ್ನುವುದು ಮಾನವನಾಗಿರುವುದರ ಸಾರತತ್ವ. ಇದು ಈ ಜಗತ್ತಿಗೆ ಆಫ್ರಿಕನ್ನರ ಕೊಡುಗೆ. ಇದರಲ್ಲಿ ಅತಿಥಿಗಳನ್ನು ಆದರಿಸುವುದು, ಒಬ್ಬರು ಮತ್ತೊಬ್ಬರಿಗೆ ಕಾಳಜಿ ವಹಿಸುವುದು, ಇತರರಿಗಾಗಿ ಪ್ರತಿಫಲಾಪೇಕ್ಷೆ ಇಲ್ಲದೇ ತಮ್ಮ ಕಾಯಕವನ್ನು ವಿಸ್ತರಿಸುವುದು, ಒಬ್ಬನ ಒಳಿತಿನಲ್ಲಿ ತನ್ನಯ ಒಳಿತು ಎಂಬ ಸಿದ್ಧಾಂತವನ್ನು ಪಾಲಿಸುವುದು; ಎಲ್ಲಾ ಇವೆ. ಒಬ್ಬ ವ್ಯಕ್ತಿಯು ಮತ್ತೊಬ್ಬ ವ್ಯಕ್ತಿಯ ಮೂಲಕ ಅನುಬಂಧಕ್ಕೆ ಒಳಗಾಗಿರುವುದೇ ಮಾನವತೆ. ಒಬ್ಬ ಮತ್ತೊಬ್ಬ ವ್ಯಕ್ತಿಯನ್ನು ಅಮಾನವೀಯವಾಗಿ ನಡೆಸಿಕೊಂಡಲ್ಲಿ ತನ್ನನ್ನೇ ಅಮಾನವೀಯಗೊಳಿಸಿಕೊಂಡಂತೆ. ಒಬ್ಬರ ಮೇಲೆ ದಬ್ಬಾಳಿಕೆ ಮಾಡುವುದು ಯಾವುದೇ ಮನುಷ್ಯನಿಗೆ ಅವಮಾನದ ಸಂಗತಿ. ಮನುಷ್ಯರ ಐಕ್ಯತೆ ನಿರ್ಬಂಧಗಳಿಗೆ ಒಳಗಾಗಿದೆ. ಸಮುದಾಯದ ಸಾಮಾನ್ಯ ಒಳಿತಿಗೆ ಸಾಮಾನ್ಯತೆಯಲ್ಲಿ ಅದರ ಭಾಗವಾಗಿರುವ ಪ್ರಜ್ಞೆಯೇ ಒಬ್ಬನ ಮಾನವತೆಯಾಗಿರುತ್ತದೆ.”

ದಕ್ಷಿಣ ಆಫ್ರಿಕಾದ ಅನೇಕ ಭಾಗಗಳಲ್ಲಿ ಉಬೂಂಟು ಪಾಲಿಸುವ ಬುಡಕಟ್ಟಿನ ಜನರಿದ್ದು ಅವರದೊಂದು ಸಕಾರಾತ್ಮಕ ಪದ್ಧತಿಯೊಂದು ಚಾಲ್ತಿಯಲ್ಲಿದೆ. ಅದೇನೆಂದರೆ ಯಾವುದೇ ವ್ಯಕ್ತಿಯು ಏನೇ ತಪ್ಪು ಅಥವಾ ಅಪರಾಧ ಮಾಡಿದರೂ ಅವನನ್ನು ಹಳ್ಳಿಯ ಮಧ್ಯಭಾಗಕ್ಕೆ ಕರೆದುಕೊಂಡು ಬರುತ್ತಾರೆ. ನಂತರ ಊರಿನ ಜನರೆಲ್ಲಾ ಸುತ್ತುವರೆದು, ಎರಡು ದಿನಗಳ ಕಾಲ ಅವನು ಮಾಡಿರುವ ಒಳ್ಳೆಯ ಕೆಲಸಗಳನ್ನೆಲ್ಲಾ ಹೇಳುತ್ತಿರುತ್ತಾರೆ. ಅವರ ಪ್ರಕಾರ ಯಾವುದೇ ವ್ಯಕ್ತಿಯು ಮೂಲದಲ್ಲಿ ಒಳ್ಳೆಯವನೇ ಆಗಿರುತ್ತಾನೆ. ಆದರೆ ಯಾವುದೋ ಒಂದು ಗಳಿಗೆಯಲ್ಲಿ ತಪ್ಪು ಮಾಡಿಬಿಡುತ್ತಾನೆ. ಹೊರಗಿನ ದುಷ್ಟ ಶಕ್ತಿಯ ಪ್ರಭಾವದಿಂದ ತಪ್ಪು ಸಂಭವಿಸಿರುತ್ತದೆ. ಆ ತಪ್ಪು ಮಾಡುವುದೆಂದರೆ ತನ್ನ ಒಳ್ಳೆಯತನವನ್ನು ಮರುಕಳಿಸೆಂದು ಅವನ ಕೂಗು ಅಥವಾ ಅಳಲಾಗಿರುತ್ತದೆ. ಆದ್ದರಿಂದ ಹಳ್ಳಿಯವರೆಲ್ಲಾ ಒಗ್ಗಟ್ಟಾಗಿ ತನ್ನ ಒಳ್ಳೆಯತನಕ್ಕಾಗಿ ಹಾತೊರೆಯುತ್ತಾ ಸಹಾಯ ಬೇಡುತ್ತಿರುವವನಿಗೆ ಸಹಕರಿಸಲೆಂದು ಅವನ ಒಳ್ಳೆಯ ಕೆಲಸಗಳನ್ನು, ಗುಣಗಳನ್ನು ಹೇಳುವಂತಹ ಕೆಲಸವನ್ನು ಮಾಡುತ್ತಾರೆ. ಈ ಆಚರಣೆಯ ಮೂಲಕ ತಪ್ಪು ಮಾಡಿರುವವನು ನಿಸರ್ಗದಿಂದ ಪಡೆದಿರುವ ಒಳ್ಳೆಯತನವನ್ನು ಮರಳಿಪಡೆಯುತ್ತಾನೆಂದು ಅವರ ನಂಬಿಕೆ. ಶಿಕ್ಷೆ ಮತ್ತು ಅವಮಾನಗಳನ್ನು ಮಾಡುವುದರಿಂದ ವ್ಯಕ್ತಿಯು ತಮ್ಮಿಂದ ನಿಸರ್ಗದತ್ತವಾದ ಗುಣರಹಿತನಾಗಿ ಸಂಪೂರ್ಣ ಹೊರಟೇ ಹೋಗುತ್ತಾನೆಂದು ಅವರು ಹೆದರುತ್ತಾರೆ. ಆದ್ದರಿಂದ ಆತನನ್ನು ಅಪಮಾನಿಸುವುದೂ ಇಲ್ಲ, ಶಿಕ್ಷಿಸುವುದೂ ಇಲ್ಲ. ಬದಲಿಗೆ ಅವನ ಒಳ್ಳೆಯತನವನ್ನು ಸ್ಮರಣೆಗೆ ತರುವುದರ ಮೂಲಕ, ಅವನು ಮತ್ತು ನಿಸರ್ಗದ ಕೊಡುಗೆಗೆ ಬೆರೆತುಕೊಳ್ಳಲು ಪ್ರೋತ್ಸಾಹಿಸುತ್ತಾರೆ.

ಯಾರಾದರೊಬ್ಬರು ಏನಾದರೊಂದು ತಪ್ಪು ಮಾಡಿದರೆ ಸಾಕು, ಆತ ಮಾಡಿರುವ ಒಳ್ಳೆಯ ಕೆಲಸ ಮತ್ತು ಸಹಾಯಗಳನ್ನೆಲ್ಲಾ ಮರೆತು ಚಾರಿತ್ರ್ಯವಧೆ ಮಾಡುವ ಜನರ ನಡುವೆ ಉಬೂಂಟು ಜನ ವಿಶೇಷವಾಗಿ ಮತ್ತು ಸಕಾರಾತ್ಮಕವಾಗಿ ಕಾಣುತ್ತಾರೆ. ಚಿತ್ತಾರವನ್ನು ಮಸಿ ನುಂಗಿತು ಎಂದಿಲ್ಲ ಇವರಲ್ಲಿ. ಅಡಿಕೆ ಕದ್ದ ಮಾನ ಆನೆ ಕೊಟ್ಟರೂ ಬಾರದು ಎನ್ನುವ ಜನರಲ್ಲ ಇವರು.

ಇದು ಆಫ್ರಿಕಾದ ಪ್ರಾಚೀನ ಸಾಂಪ್ರದಾಯಿಕ ಧಾರ್ಮಿಕತೆಯ ತತ್ವವೇ ಆಗಿತ್ತು ಎಂದು ತಮ್ಮ ಮಹಾಪ್ರಬಂಧಗಳಲ್ಲಿ ಮಾನವಶಾಸ್ತ್ರಜ್ಞರು ಹೇಳಿದ್ದಾರೆ. ಅವರು ಹಾಗೆ ಇರಲೇ ಬೇಕಾದದ್ದು ಧಾರ್ಮಿಕ ಶ್ರದ್ಧೆ ಮತ್ತು ಸಂಪ್ರದಾಯವೇ ಆಗಿದ್ದು ಉಟೂಂಬುವನ್ನು ಹೆಚ್ಚು ಉತ್ಪ್ರೇಕ್ಷೆಗೊಳಿಸುವ ಅಗತ್ಯವಿಲ್ಲ. ಇತರ ಅಂಧಶ್ರದ್ಧೆಗಳಂತೆ ಇದನ್ನೂ ಪಾಲಿಸುತ್ತಾರೆ ಎಂದೂ ಉಟೂಂಬುವನ್ನು ವೈಭವೀಕರಿಸದಿರಲು ಪಾಶ್ಚಾತ್ಯ ವಿದ್ವಾಂಸರು ವಿಮರ್ಶಿಸುತ್ತಾರೆ.

ಮಾನವನ ಹಿತವನ್ನು ಸಮುದಾಯದ ಸುಖವನ್ನು ಹೊಂದಲು ವಿಶೇಷವಾದ ಪಾಂಡಿತ್ಯದ ಅರ್ಥವಂತಿಕೆ ಏಕೆ ಬೇಕು? ಮಾನವತೆಯ ದುರ್ಭಿಕ್ಷದ ಕಾಲದಲ್ಲಿ, ಒಡಕುಗಳನ್ನೇ ಬಲಗೊಳಿಸುವ ತತ್ವಗಳು ಮೆರೆಯುವಲ್ಲಿ ಅಂಧಾನುಕರುಣೆಯೋ ಅಥವಾ ಉತ್ಪ್ರೇಕ್ಷೆಯೋ ಒಟ್ಟಾರೆ ಯಾವುದೇ ನಡವಳಿಕೆ ಮತ್ತು ರೂಢಿಯು ಮಾನವನಿಗೆ ಸಾಮೂಹಿಕವಾಗಿ ಹಿತವನ್ನು ತಂದರೆ, ಐಕ್ಯತೆಯನ್ನು ಬಲಪಡಿಸುವಂತಾದರೆ ಅದರಲ್ಲಿ ಕೂದಲು ಸೀಳುವುದೇಕೆ ಎನ್ನುತ್ತಾರೆ ಸೌಹಾರ್ದದ ಪ್ರೇಮಿಗಳು.


ಇದನ್ನು ಓದಿ: ತೇಜಸ್ವಿಯವರ ಒಂದು ಸೀಟಿನ ಸ್ಕೂಟರ್‍ರೂ… ಡ್ರಾಪಾಯಣದ ಸಮೃದ್ಧ ಅನುಭವವೂ….
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...