Homeಅಂಕಣಗಳು“ಬೇರೆಯವರು ನಿರಾಸೆಯ ಬೇಸರದಲ್ಲಿರುವಾಗ ಒಬ್ಬನೇ ಒಬ್ಬ ಖುಷಿಯಾಗಿರಲು ಹೇಗೆ ಸಾಧ್ಯ?”

“ಬೇರೆಯವರು ನಿರಾಸೆಯ ಬೇಸರದಲ್ಲಿರುವಾಗ ಒಬ್ಬನೇ ಒಬ್ಬ ಖುಷಿಯಾಗಿರಲು ಹೇಗೆ ಸಾಧ್ಯ?”

- Advertisement -
- Advertisement -

ಅಂತರ್ಜಾಲದ ಪುಟದ ಮೇಲೆ ಪುಟಕ್ಕಿಟ್ಟು ಮನಪಟಲದಲ್ಲಿ ಹೊಳೆಯುತ್ತಿರುವ ಬರಹವಿದು.

ದಕ್ಷಿಣ ಬ್ರೆಜಿಲಿನ ಫ್ಲೋರಿಯಾನೋಪಾಲಿಸ್‍ನಲ್ಲಿ ನಡೆದಿತ್ತೊಂದು ಶಾಂತಿಯ ಉತ್ಸವ. ಪತ್ರಕರ್ತೆಯೂ ಮತ್ತು ತತ್ವಜ್ಞಾನಿಯೂ ಆದ ಲಿಯಾ ಡಿಸ್ಕಿನ್ ನಿರೂಪಿಸಿದ ಸಂಗತಿ ಅಂತರ್ಜಾಲದಲ್ಲಿ ಅಲೆದಾಡುತ್ತಿದ್ದ ಸೌಹಾರ್ದ ಪ್ರಿಯರ, ಮಾನವತಾ ಪ್ರೇಮಿಗಳ ಹೃದಯವನ್ನು ಮುಟ್ಟಿತು.

ಮಾನವಶಾಸ್ತ್ರಜ್ಞನೊಬ್ಬ ಈ ಬುಡಕಟ್ಟನ್ನು ಅಧ್ಯಯನ ಮಾಡುತ್ತಿದ್ದ. ಅವನ ಕೆಲಸಗಳನ್ನೆಲ್ಲಾ ಮುಗಿಸಿಕೊಂಡು ಹೊರಡುವ ಮುನ್ನ ತನ್ನ ಸುತ್ತುವರಿದಿದ್ದ ಬುಡಕಟ್ಟಿನ ಮಕ್ಕಳಿಗೆ ಆಟವಾಡಿಸಲು ಮತ್ತು ತನ್ನ ಪ್ರೀತಿಯ ಸಂಕೇತವಾಗಿ ಸಿಹಿ ಹಂಚಲು ಹೋಗಿ, ಒಂದು ಸಂಗತಿ ಜಗತ್ತಿಗೆ ತಿಳಿಯಲು ಕಾರಣನಾದ.

ಪಟ್ಟಣದಿಂದ ತಂದಿದ್ದ ಚಾಕೊಲೆಟ್ ಮತ್ತಿತರ ಸಿಹಿತಿನಿಸುಗಳನ್ನು ಬುಟ್ಟಿಯೊಂದರಲ್ಲಿಟ್ಟು ಅದನ್ನು ಒಂದಷ್ಟು ದೂರದಲ್ಲಿರುವ ಮರದ ಕೆಳಗೆ ಇಟ್ಟ. ಮಕ್ಕಳನ್ನೆಲ್ಲಾ ಒಟ್ಟಾಗಿಸಿ ಸಾಲಾಗಿ ನಿಲ್ಲಿಸಿದ. ನಾನು ಸೀಟಿ ಊದಿದಾಗ ಓಡಲು ಪ್ರಾರಂಭಿಸಬೇಕು, ಯಾರು ಮೊದಲು ಓಡುತ್ತಾರೋ ಅವರಿಗೆ ಆ ಎಲ್ಲಾ ತಿನಿಸುಗಳು ಎಂದು ಪೈಪೋಟಿಯನ್ನು ಒಡ್ಡಿದ. ಮಕ್ಕಳೆಲ್ಲಾ ನಿಂತರು. ಈತ “ಹೋಗಿ” ಎಂದು ಸೀಟಿ ಊದುತ್ತಿದ್ದಂತೆ ಆ ಮಕ್ಕಳೆಲ್ಲಾ ಜೋರಾಗಿ ಓಡುವುದು ಬಿಟ್ಟು ಒಬ್ಬರೊಬ್ಬರ ಕೈಗಳನ್ನು ಹಿಡಿದು ಒಟ್ಟಾಗಿ, ಎಲ್ಲರೂ ಓಡುವಂತಾಗುವಂತೆ ಲಘು ವೇಗದಲ್ಲಿ ಓಡಿ, ಒಟ್ಟಿಗೆ ಮುಟ್ಟಿ ಆ ತಿನಿಸುಗಳನ್ನು ಎಲ್ಲರೂ ಹಂಚಿಕೊಂಡು ಸಂತೋಷದಿಂದ ತಿಂದರು.

ಯಾರು ಮೊದಲು ಓಡುತ್ತಾರೋ, ಮಾಡುತ್ತಾರೋ ಅವರಿಗೇ ಬಹುಮಾನ ಎನ್ನುವಂತ ಸ್ಪರ್ಧೆಯ ಆಟವನ್ನು ಬಾಲ್ಯದಿಂದಲೇ ರೂಢಿಗೊಳಿಸಿಕೊಂಡಿರುವಂತಹ ಸಮಾಜದ ಈ ಮಾನವ ಶಾಸ್ತ್ರಜ್ಞನಿಗೆ ಇವರ ರೇಸ್ ಇಲ್ಲದ, ಸ್ಪರ್ಧೆ ಹೂಡದ, ಸಹಕಾರದ ಓಟ ಆಶ್ಚರ್ಯ ತಂದಿತು. “ಯಾಕೆ ಯಾರಾದರೊಬ್ಬರು, ಸಾಮರ್ಥ್ಯವಿರುವವರು ಓಡಿ ಬಹುಮಾನವನ್ನು ಗೆಲ್ಲಲಿಲ್ಲ? ಅದೊಂದು ಖುಷಿ (ಫನ್) ಅಲ್ಲವೇ” ಎಂದು ಕೇಳಿದ.

ಹಾಗೆ ತನ್ನೊಂದಿಗಿರುವವರನ್ನು ಬಿಟ್ಟು ತಾನೊಬ್ಬನೇ ಓಡಿ ಹೋಗಿ ಅದೇನನ್ನೋ ಪಡೆಯುವುದು ಬಹುಮಾನವಲ್ಲ, ಅದು ಅವಮಾನ ಎಂಬ ಸಂಸ್ಕೃತಿಯನ್ನು ರೂಢಿಸಿಕೊಂಡಿರುವ ಆ ಬುಡಕಟ್ಟಿನ ಹೆಣ್ಣುಮಗುವೊಂದು ಮರುಪ್ರಶ್ನಿಸಿತು, “ಬೇರೆಯವರು ನಿರಾಸೆಯ ಬೇಸರದಲ್ಲಿರುವಾಗ ಒಬ್ಬನೇ ಒಬ್ಬ ಖುಷಿಯಾಗಿರಲು ಹೇಗೆ ಸಾಧ್ಯ?”

ಉಬೂಂಟು ಅಲ್ಲಿನ ಬುಡಕಟ್ಟು ರೂಢಿಸಿಕೊಂಡಿರುವ ಪ್ರಜ್ಞೆ. ಅದಿರುವುದು ದಕ್ಷಿಣ ಆಫ್ರಿಕಾದಲ್ಲಿ. ನೀನು ವೇಗವಾಗಿ ಕ್ರಮಿಸಬೇಕಾದರೆ ಒಬ್ಬನೇ ಓಡು. ಆದರೆ ನೀನು ಬಹುದೂರ ಕ್ರಮಿಸಬೇಕಾದರೆ ಒಟ್ಟಾಗಿ ಹೋಗು ಎನ್ನುವ ಆಫ್ರಿಕಾದ ಗಾದೆಯ ಮಾತಿನಂತೆ ಉಬೂಂಟು ಒಂದು ಜೀವನಾದರ್ಶದ ರೂಢಿ.

ಲಿಯಾ ಡಿಸ್ಕಿನ್

‘ಊ-ಬೂನ್-ಟೂ’ ಎಂದರೆ ನಮ್ಮಿಂದ ‘ನಾನು’ ಎಂದು ಅರ್ಥ ಜಲು ಅಥವಾ ಖ್ಸೋಸ ಭಾಷೆಯಲ್ಲಿ.

ಆರ್ಚ್ ಬಿಷಪ್ ಮತ್ತು ಸಾಮಾಜಿಕ ಕಾರ್ಯಕರ್ತ ಡೆಸ್ಮಂಡ್ ಟುಟು ಹೇಳುವಂತೆ “ಉಬೂಂಟು ಎನ್ನುವುದು ಮಾನವನಾಗಿರುವುದರ ಸಾರತತ್ವ. ಇದು ಈ ಜಗತ್ತಿಗೆ ಆಫ್ರಿಕನ್ನರ ಕೊಡುಗೆ. ಇದರಲ್ಲಿ ಅತಿಥಿಗಳನ್ನು ಆದರಿಸುವುದು, ಒಬ್ಬರು ಮತ್ತೊಬ್ಬರಿಗೆ ಕಾಳಜಿ ವಹಿಸುವುದು, ಇತರರಿಗಾಗಿ ಪ್ರತಿಫಲಾಪೇಕ್ಷೆ ಇಲ್ಲದೇ ತಮ್ಮ ಕಾಯಕವನ್ನು ವಿಸ್ತರಿಸುವುದು, ಒಬ್ಬನ ಒಳಿತಿನಲ್ಲಿ ತನ್ನಯ ಒಳಿತು ಎಂಬ ಸಿದ್ಧಾಂತವನ್ನು ಪಾಲಿಸುವುದು; ಎಲ್ಲಾ ಇವೆ. ಒಬ್ಬ ವ್ಯಕ್ತಿಯು ಮತ್ತೊಬ್ಬ ವ್ಯಕ್ತಿಯ ಮೂಲಕ ಅನುಬಂಧಕ್ಕೆ ಒಳಗಾಗಿರುವುದೇ ಮಾನವತೆ. ಒಬ್ಬ ಮತ್ತೊಬ್ಬ ವ್ಯಕ್ತಿಯನ್ನು ಅಮಾನವೀಯವಾಗಿ ನಡೆಸಿಕೊಂಡಲ್ಲಿ ತನ್ನನ್ನೇ ಅಮಾನವೀಯಗೊಳಿಸಿಕೊಂಡಂತೆ. ಒಬ್ಬರ ಮೇಲೆ ದಬ್ಬಾಳಿಕೆ ಮಾಡುವುದು ಯಾವುದೇ ಮನುಷ್ಯನಿಗೆ ಅವಮಾನದ ಸಂಗತಿ. ಮನುಷ್ಯರ ಐಕ್ಯತೆ ನಿರ್ಬಂಧಗಳಿಗೆ ಒಳಗಾಗಿದೆ. ಸಮುದಾಯದ ಸಾಮಾನ್ಯ ಒಳಿತಿಗೆ ಸಾಮಾನ್ಯತೆಯಲ್ಲಿ ಅದರ ಭಾಗವಾಗಿರುವ ಪ್ರಜ್ಞೆಯೇ ಒಬ್ಬನ ಮಾನವತೆಯಾಗಿರುತ್ತದೆ.”

ದಕ್ಷಿಣ ಆಫ್ರಿಕಾದ ಅನೇಕ ಭಾಗಗಳಲ್ಲಿ ಉಬೂಂಟು ಪಾಲಿಸುವ ಬುಡಕಟ್ಟಿನ ಜನರಿದ್ದು ಅವರದೊಂದು ಸಕಾರಾತ್ಮಕ ಪದ್ಧತಿಯೊಂದು ಚಾಲ್ತಿಯಲ್ಲಿದೆ. ಅದೇನೆಂದರೆ ಯಾವುದೇ ವ್ಯಕ್ತಿಯು ಏನೇ ತಪ್ಪು ಅಥವಾ ಅಪರಾಧ ಮಾಡಿದರೂ ಅವನನ್ನು ಹಳ್ಳಿಯ ಮಧ್ಯಭಾಗಕ್ಕೆ ಕರೆದುಕೊಂಡು ಬರುತ್ತಾರೆ. ನಂತರ ಊರಿನ ಜನರೆಲ್ಲಾ ಸುತ್ತುವರೆದು, ಎರಡು ದಿನಗಳ ಕಾಲ ಅವನು ಮಾಡಿರುವ ಒಳ್ಳೆಯ ಕೆಲಸಗಳನ್ನೆಲ್ಲಾ ಹೇಳುತ್ತಿರುತ್ತಾರೆ. ಅವರ ಪ್ರಕಾರ ಯಾವುದೇ ವ್ಯಕ್ತಿಯು ಮೂಲದಲ್ಲಿ ಒಳ್ಳೆಯವನೇ ಆಗಿರುತ್ತಾನೆ. ಆದರೆ ಯಾವುದೋ ಒಂದು ಗಳಿಗೆಯಲ್ಲಿ ತಪ್ಪು ಮಾಡಿಬಿಡುತ್ತಾನೆ. ಹೊರಗಿನ ದುಷ್ಟ ಶಕ್ತಿಯ ಪ್ರಭಾವದಿಂದ ತಪ್ಪು ಸಂಭವಿಸಿರುತ್ತದೆ. ಆ ತಪ್ಪು ಮಾಡುವುದೆಂದರೆ ತನ್ನ ಒಳ್ಳೆಯತನವನ್ನು ಮರುಕಳಿಸೆಂದು ಅವನ ಕೂಗು ಅಥವಾ ಅಳಲಾಗಿರುತ್ತದೆ. ಆದ್ದರಿಂದ ಹಳ್ಳಿಯವರೆಲ್ಲಾ ಒಗ್ಗಟ್ಟಾಗಿ ತನ್ನ ಒಳ್ಳೆಯತನಕ್ಕಾಗಿ ಹಾತೊರೆಯುತ್ತಾ ಸಹಾಯ ಬೇಡುತ್ತಿರುವವನಿಗೆ ಸಹಕರಿಸಲೆಂದು ಅವನ ಒಳ್ಳೆಯ ಕೆಲಸಗಳನ್ನು, ಗುಣಗಳನ್ನು ಹೇಳುವಂತಹ ಕೆಲಸವನ್ನು ಮಾಡುತ್ತಾರೆ. ಈ ಆಚರಣೆಯ ಮೂಲಕ ತಪ್ಪು ಮಾಡಿರುವವನು ನಿಸರ್ಗದಿಂದ ಪಡೆದಿರುವ ಒಳ್ಳೆಯತನವನ್ನು ಮರಳಿಪಡೆಯುತ್ತಾನೆಂದು ಅವರ ನಂಬಿಕೆ. ಶಿಕ್ಷೆ ಮತ್ತು ಅವಮಾನಗಳನ್ನು ಮಾಡುವುದರಿಂದ ವ್ಯಕ್ತಿಯು ತಮ್ಮಿಂದ ನಿಸರ್ಗದತ್ತವಾದ ಗುಣರಹಿತನಾಗಿ ಸಂಪೂರ್ಣ ಹೊರಟೇ ಹೋಗುತ್ತಾನೆಂದು ಅವರು ಹೆದರುತ್ತಾರೆ. ಆದ್ದರಿಂದ ಆತನನ್ನು ಅಪಮಾನಿಸುವುದೂ ಇಲ್ಲ, ಶಿಕ್ಷಿಸುವುದೂ ಇಲ್ಲ. ಬದಲಿಗೆ ಅವನ ಒಳ್ಳೆಯತನವನ್ನು ಸ್ಮರಣೆಗೆ ತರುವುದರ ಮೂಲಕ, ಅವನು ಮತ್ತು ನಿಸರ್ಗದ ಕೊಡುಗೆಗೆ ಬೆರೆತುಕೊಳ್ಳಲು ಪ್ರೋತ್ಸಾಹಿಸುತ್ತಾರೆ.

ಯಾರಾದರೊಬ್ಬರು ಏನಾದರೊಂದು ತಪ್ಪು ಮಾಡಿದರೆ ಸಾಕು, ಆತ ಮಾಡಿರುವ ಒಳ್ಳೆಯ ಕೆಲಸ ಮತ್ತು ಸಹಾಯಗಳನ್ನೆಲ್ಲಾ ಮರೆತು ಚಾರಿತ್ರ್ಯವಧೆ ಮಾಡುವ ಜನರ ನಡುವೆ ಉಬೂಂಟು ಜನ ವಿಶೇಷವಾಗಿ ಮತ್ತು ಸಕಾರಾತ್ಮಕವಾಗಿ ಕಾಣುತ್ತಾರೆ. ಚಿತ್ತಾರವನ್ನು ಮಸಿ ನುಂಗಿತು ಎಂದಿಲ್ಲ ಇವರಲ್ಲಿ. ಅಡಿಕೆ ಕದ್ದ ಮಾನ ಆನೆ ಕೊಟ್ಟರೂ ಬಾರದು ಎನ್ನುವ ಜನರಲ್ಲ ಇವರು.

ಇದು ಆಫ್ರಿಕಾದ ಪ್ರಾಚೀನ ಸಾಂಪ್ರದಾಯಿಕ ಧಾರ್ಮಿಕತೆಯ ತತ್ವವೇ ಆಗಿತ್ತು ಎಂದು ತಮ್ಮ ಮಹಾಪ್ರಬಂಧಗಳಲ್ಲಿ ಮಾನವಶಾಸ್ತ್ರಜ್ಞರು ಹೇಳಿದ್ದಾರೆ. ಅವರು ಹಾಗೆ ಇರಲೇ ಬೇಕಾದದ್ದು ಧಾರ್ಮಿಕ ಶ್ರದ್ಧೆ ಮತ್ತು ಸಂಪ್ರದಾಯವೇ ಆಗಿದ್ದು ಉಟೂಂಬುವನ್ನು ಹೆಚ್ಚು ಉತ್ಪ್ರೇಕ್ಷೆಗೊಳಿಸುವ ಅಗತ್ಯವಿಲ್ಲ. ಇತರ ಅಂಧಶ್ರದ್ಧೆಗಳಂತೆ ಇದನ್ನೂ ಪಾಲಿಸುತ್ತಾರೆ ಎಂದೂ ಉಟೂಂಬುವನ್ನು ವೈಭವೀಕರಿಸದಿರಲು ಪಾಶ್ಚಾತ್ಯ ವಿದ್ವಾಂಸರು ವಿಮರ್ಶಿಸುತ್ತಾರೆ.

ಮಾನವನ ಹಿತವನ್ನು ಸಮುದಾಯದ ಸುಖವನ್ನು ಹೊಂದಲು ವಿಶೇಷವಾದ ಪಾಂಡಿತ್ಯದ ಅರ್ಥವಂತಿಕೆ ಏಕೆ ಬೇಕು? ಮಾನವತೆಯ ದುರ್ಭಿಕ್ಷದ ಕಾಲದಲ್ಲಿ, ಒಡಕುಗಳನ್ನೇ ಬಲಗೊಳಿಸುವ ತತ್ವಗಳು ಮೆರೆಯುವಲ್ಲಿ ಅಂಧಾನುಕರುಣೆಯೋ ಅಥವಾ ಉತ್ಪ್ರೇಕ್ಷೆಯೋ ಒಟ್ಟಾರೆ ಯಾವುದೇ ನಡವಳಿಕೆ ಮತ್ತು ರೂಢಿಯು ಮಾನವನಿಗೆ ಸಾಮೂಹಿಕವಾಗಿ ಹಿತವನ್ನು ತಂದರೆ, ಐಕ್ಯತೆಯನ್ನು ಬಲಪಡಿಸುವಂತಾದರೆ ಅದರಲ್ಲಿ ಕೂದಲು ಸೀಳುವುದೇಕೆ ಎನ್ನುತ್ತಾರೆ ಸೌಹಾರ್ದದ ಪ್ರೇಮಿಗಳು.


ಇದನ್ನು ಓದಿ: ತೇಜಸ್ವಿಯವರ ಒಂದು ಸೀಟಿನ ಸ್ಕೂಟರ್‍ರೂ… ಡ್ರಾಪಾಯಣದ ಸಮೃದ್ಧ ಅನುಭವವೂ….
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...