Homeಅಂಕಣಗಳು“ಬೇರೆಯವರು ನಿರಾಸೆಯ ಬೇಸರದಲ್ಲಿರುವಾಗ ಒಬ್ಬನೇ ಒಬ್ಬ ಖುಷಿಯಾಗಿರಲು ಹೇಗೆ ಸಾಧ್ಯ?”

“ಬೇರೆಯವರು ನಿರಾಸೆಯ ಬೇಸರದಲ್ಲಿರುವಾಗ ಒಬ್ಬನೇ ಒಬ್ಬ ಖುಷಿಯಾಗಿರಲು ಹೇಗೆ ಸಾಧ್ಯ?”

- Advertisement -
- Advertisement -

ಅಂತರ್ಜಾಲದ ಪುಟದ ಮೇಲೆ ಪುಟಕ್ಕಿಟ್ಟು ಮನಪಟಲದಲ್ಲಿ ಹೊಳೆಯುತ್ತಿರುವ ಬರಹವಿದು.

ದಕ್ಷಿಣ ಬ್ರೆಜಿಲಿನ ಫ್ಲೋರಿಯಾನೋಪಾಲಿಸ್‍ನಲ್ಲಿ ನಡೆದಿತ್ತೊಂದು ಶಾಂತಿಯ ಉತ್ಸವ. ಪತ್ರಕರ್ತೆಯೂ ಮತ್ತು ತತ್ವಜ್ಞಾನಿಯೂ ಆದ ಲಿಯಾ ಡಿಸ್ಕಿನ್ ನಿರೂಪಿಸಿದ ಸಂಗತಿ ಅಂತರ್ಜಾಲದಲ್ಲಿ ಅಲೆದಾಡುತ್ತಿದ್ದ ಸೌಹಾರ್ದ ಪ್ರಿಯರ, ಮಾನವತಾ ಪ್ರೇಮಿಗಳ ಹೃದಯವನ್ನು ಮುಟ್ಟಿತು.

ಮಾನವಶಾಸ್ತ್ರಜ್ಞನೊಬ್ಬ ಈ ಬುಡಕಟ್ಟನ್ನು ಅಧ್ಯಯನ ಮಾಡುತ್ತಿದ್ದ. ಅವನ ಕೆಲಸಗಳನ್ನೆಲ್ಲಾ ಮುಗಿಸಿಕೊಂಡು ಹೊರಡುವ ಮುನ್ನ ತನ್ನ ಸುತ್ತುವರಿದಿದ್ದ ಬುಡಕಟ್ಟಿನ ಮಕ್ಕಳಿಗೆ ಆಟವಾಡಿಸಲು ಮತ್ತು ತನ್ನ ಪ್ರೀತಿಯ ಸಂಕೇತವಾಗಿ ಸಿಹಿ ಹಂಚಲು ಹೋಗಿ, ಒಂದು ಸಂಗತಿ ಜಗತ್ತಿಗೆ ತಿಳಿಯಲು ಕಾರಣನಾದ.

ಪಟ್ಟಣದಿಂದ ತಂದಿದ್ದ ಚಾಕೊಲೆಟ್ ಮತ್ತಿತರ ಸಿಹಿತಿನಿಸುಗಳನ್ನು ಬುಟ್ಟಿಯೊಂದರಲ್ಲಿಟ್ಟು ಅದನ್ನು ಒಂದಷ್ಟು ದೂರದಲ್ಲಿರುವ ಮರದ ಕೆಳಗೆ ಇಟ್ಟ. ಮಕ್ಕಳನ್ನೆಲ್ಲಾ ಒಟ್ಟಾಗಿಸಿ ಸಾಲಾಗಿ ನಿಲ್ಲಿಸಿದ. ನಾನು ಸೀಟಿ ಊದಿದಾಗ ಓಡಲು ಪ್ರಾರಂಭಿಸಬೇಕು, ಯಾರು ಮೊದಲು ಓಡುತ್ತಾರೋ ಅವರಿಗೆ ಆ ಎಲ್ಲಾ ತಿನಿಸುಗಳು ಎಂದು ಪೈಪೋಟಿಯನ್ನು ಒಡ್ಡಿದ. ಮಕ್ಕಳೆಲ್ಲಾ ನಿಂತರು. ಈತ “ಹೋಗಿ” ಎಂದು ಸೀಟಿ ಊದುತ್ತಿದ್ದಂತೆ ಆ ಮಕ್ಕಳೆಲ್ಲಾ ಜೋರಾಗಿ ಓಡುವುದು ಬಿಟ್ಟು ಒಬ್ಬರೊಬ್ಬರ ಕೈಗಳನ್ನು ಹಿಡಿದು ಒಟ್ಟಾಗಿ, ಎಲ್ಲರೂ ಓಡುವಂತಾಗುವಂತೆ ಲಘು ವೇಗದಲ್ಲಿ ಓಡಿ, ಒಟ್ಟಿಗೆ ಮುಟ್ಟಿ ಆ ತಿನಿಸುಗಳನ್ನು ಎಲ್ಲರೂ ಹಂಚಿಕೊಂಡು ಸಂತೋಷದಿಂದ ತಿಂದರು.

ಯಾರು ಮೊದಲು ಓಡುತ್ತಾರೋ, ಮಾಡುತ್ತಾರೋ ಅವರಿಗೇ ಬಹುಮಾನ ಎನ್ನುವಂತ ಸ್ಪರ್ಧೆಯ ಆಟವನ್ನು ಬಾಲ್ಯದಿಂದಲೇ ರೂಢಿಗೊಳಿಸಿಕೊಂಡಿರುವಂತಹ ಸಮಾಜದ ಈ ಮಾನವ ಶಾಸ್ತ್ರಜ್ಞನಿಗೆ ಇವರ ರೇಸ್ ಇಲ್ಲದ, ಸ್ಪರ್ಧೆ ಹೂಡದ, ಸಹಕಾರದ ಓಟ ಆಶ್ಚರ್ಯ ತಂದಿತು. “ಯಾಕೆ ಯಾರಾದರೊಬ್ಬರು, ಸಾಮರ್ಥ್ಯವಿರುವವರು ಓಡಿ ಬಹುಮಾನವನ್ನು ಗೆಲ್ಲಲಿಲ್ಲ? ಅದೊಂದು ಖುಷಿ (ಫನ್) ಅಲ್ಲವೇ” ಎಂದು ಕೇಳಿದ.

ಹಾಗೆ ತನ್ನೊಂದಿಗಿರುವವರನ್ನು ಬಿಟ್ಟು ತಾನೊಬ್ಬನೇ ಓಡಿ ಹೋಗಿ ಅದೇನನ್ನೋ ಪಡೆಯುವುದು ಬಹುಮಾನವಲ್ಲ, ಅದು ಅವಮಾನ ಎಂಬ ಸಂಸ್ಕೃತಿಯನ್ನು ರೂಢಿಸಿಕೊಂಡಿರುವ ಆ ಬುಡಕಟ್ಟಿನ ಹೆಣ್ಣುಮಗುವೊಂದು ಮರುಪ್ರಶ್ನಿಸಿತು, “ಬೇರೆಯವರು ನಿರಾಸೆಯ ಬೇಸರದಲ್ಲಿರುವಾಗ ಒಬ್ಬನೇ ಒಬ್ಬ ಖುಷಿಯಾಗಿರಲು ಹೇಗೆ ಸಾಧ್ಯ?”

ಉಬೂಂಟು ಅಲ್ಲಿನ ಬುಡಕಟ್ಟು ರೂಢಿಸಿಕೊಂಡಿರುವ ಪ್ರಜ್ಞೆ. ಅದಿರುವುದು ದಕ್ಷಿಣ ಆಫ್ರಿಕಾದಲ್ಲಿ. ನೀನು ವೇಗವಾಗಿ ಕ್ರಮಿಸಬೇಕಾದರೆ ಒಬ್ಬನೇ ಓಡು. ಆದರೆ ನೀನು ಬಹುದೂರ ಕ್ರಮಿಸಬೇಕಾದರೆ ಒಟ್ಟಾಗಿ ಹೋಗು ಎನ್ನುವ ಆಫ್ರಿಕಾದ ಗಾದೆಯ ಮಾತಿನಂತೆ ಉಬೂಂಟು ಒಂದು ಜೀವನಾದರ್ಶದ ರೂಢಿ.

ಲಿಯಾ ಡಿಸ್ಕಿನ್

‘ಊ-ಬೂನ್-ಟೂ’ ಎಂದರೆ ನಮ್ಮಿಂದ ‘ನಾನು’ ಎಂದು ಅರ್ಥ ಜಲು ಅಥವಾ ಖ್ಸೋಸ ಭಾಷೆಯಲ್ಲಿ.

ಆರ್ಚ್ ಬಿಷಪ್ ಮತ್ತು ಸಾಮಾಜಿಕ ಕಾರ್ಯಕರ್ತ ಡೆಸ್ಮಂಡ್ ಟುಟು ಹೇಳುವಂತೆ “ಉಬೂಂಟು ಎನ್ನುವುದು ಮಾನವನಾಗಿರುವುದರ ಸಾರತತ್ವ. ಇದು ಈ ಜಗತ್ತಿಗೆ ಆಫ್ರಿಕನ್ನರ ಕೊಡುಗೆ. ಇದರಲ್ಲಿ ಅತಿಥಿಗಳನ್ನು ಆದರಿಸುವುದು, ಒಬ್ಬರು ಮತ್ತೊಬ್ಬರಿಗೆ ಕಾಳಜಿ ವಹಿಸುವುದು, ಇತರರಿಗಾಗಿ ಪ್ರತಿಫಲಾಪೇಕ್ಷೆ ಇಲ್ಲದೇ ತಮ್ಮ ಕಾಯಕವನ್ನು ವಿಸ್ತರಿಸುವುದು, ಒಬ್ಬನ ಒಳಿತಿನಲ್ಲಿ ತನ್ನಯ ಒಳಿತು ಎಂಬ ಸಿದ್ಧಾಂತವನ್ನು ಪಾಲಿಸುವುದು; ಎಲ್ಲಾ ಇವೆ. ಒಬ್ಬ ವ್ಯಕ್ತಿಯು ಮತ್ತೊಬ್ಬ ವ್ಯಕ್ತಿಯ ಮೂಲಕ ಅನುಬಂಧಕ್ಕೆ ಒಳಗಾಗಿರುವುದೇ ಮಾನವತೆ. ಒಬ್ಬ ಮತ್ತೊಬ್ಬ ವ್ಯಕ್ತಿಯನ್ನು ಅಮಾನವೀಯವಾಗಿ ನಡೆಸಿಕೊಂಡಲ್ಲಿ ತನ್ನನ್ನೇ ಅಮಾನವೀಯಗೊಳಿಸಿಕೊಂಡಂತೆ. ಒಬ್ಬರ ಮೇಲೆ ದಬ್ಬಾಳಿಕೆ ಮಾಡುವುದು ಯಾವುದೇ ಮನುಷ್ಯನಿಗೆ ಅವಮಾನದ ಸಂಗತಿ. ಮನುಷ್ಯರ ಐಕ್ಯತೆ ನಿರ್ಬಂಧಗಳಿಗೆ ಒಳಗಾಗಿದೆ. ಸಮುದಾಯದ ಸಾಮಾನ್ಯ ಒಳಿತಿಗೆ ಸಾಮಾನ್ಯತೆಯಲ್ಲಿ ಅದರ ಭಾಗವಾಗಿರುವ ಪ್ರಜ್ಞೆಯೇ ಒಬ್ಬನ ಮಾನವತೆಯಾಗಿರುತ್ತದೆ.”

ದಕ್ಷಿಣ ಆಫ್ರಿಕಾದ ಅನೇಕ ಭಾಗಗಳಲ್ಲಿ ಉಬೂಂಟು ಪಾಲಿಸುವ ಬುಡಕಟ್ಟಿನ ಜನರಿದ್ದು ಅವರದೊಂದು ಸಕಾರಾತ್ಮಕ ಪದ್ಧತಿಯೊಂದು ಚಾಲ್ತಿಯಲ್ಲಿದೆ. ಅದೇನೆಂದರೆ ಯಾವುದೇ ವ್ಯಕ್ತಿಯು ಏನೇ ತಪ್ಪು ಅಥವಾ ಅಪರಾಧ ಮಾಡಿದರೂ ಅವನನ್ನು ಹಳ್ಳಿಯ ಮಧ್ಯಭಾಗಕ್ಕೆ ಕರೆದುಕೊಂಡು ಬರುತ್ತಾರೆ. ನಂತರ ಊರಿನ ಜನರೆಲ್ಲಾ ಸುತ್ತುವರೆದು, ಎರಡು ದಿನಗಳ ಕಾಲ ಅವನು ಮಾಡಿರುವ ಒಳ್ಳೆಯ ಕೆಲಸಗಳನ್ನೆಲ್ಲಾ ಹೇಳುತ್ತಿರುತ್ತಾರೆ. ಅವರ ಪ್ರಕಾರ ಯಾವುದೇ ವ್ಯಕ್ತಿಯು ಮೂಲದಲ್ಲಿ ಒಳ್ಳೆಯವನೇ ಆಗಿರುತ್ತಾನೆ. ಆದರೆ ಯಾವುದೋ ಒಂದು ಗಳಿಗೆಯಲ್ಲಿ ತಪ್ಪು ಮಾಡಿಬಿಡುತ್ತಾನೆ. ಹೊರಗಿನ ದುಷ್ಟ ಶಕ್ತಿಯ ಪ್ರಭಾವದಿಂದ ತಪ್ಪು ಸಂಭವಿಸಿರುತ್ತದೆ. ಆ ತಪ್ಪು ಮಾಡುವುದೆಂದರೆ ತನ್ನ ಒಳ್ಳೆಯತನವನ್ನು ಮರುಕಳಿಸೆಂದು ಅವನ ಕೂಗು ಅಥವಾ ಅಳಲಾಗಿರುತ್ತದೆ. ಆದ್ದರಿಂದ ಹಳ್ಳಿಯವರೆಲ್ಲಾ ಒಗ್ಗಟ್ಟಾಗಿ ತನ್ನ ಒಳ್ಳೆಯತನಕ್ಕಾಗಿ ಹಾತೊರೆಯುತ್ತಾ ಸಹಾಯ ಬೇಡುತ್ತಿರುವವನಿಗೆ ಸಹಕರಿಸಲೆಂದು ಅವನ ಒಳ್ಳೆಯ ಕೆಲಸಗಳನ್ನು, ಗುಣಗಳನ್ನು ಹೇಳುವಂತಹ ಕೆಲಸವನ್ನು ಮಾಡುತ್ತಾರೆ. ಈ ಆಚರಣೆಯ ಮೂಲಕ ತಪ್ಪು ಮಾಡಿರುವವನು ನಿಸರ್ಗದಿಂದ ಪಡೆದಿರುವ ಒಳ್ಳೆಯತನವನ್ನು ಮರಳಿಪಡೆಯುತ್ತಾನೆಂದು ಅವರ ನಂಬಿಕೆ. ಶಿಕ್ಷೆ ಮತ್ತು ಅವಮಾನಗಳನ್ನು ಮಾಡುವುದರಿಂದ ವ್ಯಕ್ತಿಯು ತಮ್ಮಿಂದ ನಿಸರ್ಗದತ್ತವಾದ ಗುಣರಹಿತನಾಗಿ ಸಂಪೂರ್ಣ ಹೊರಟೇ ಹೋಗುತ್ತಾನೆಂದು ಅವರು ಹೆದರುತ್ತಾರೆ. ಆದ್ದರಿಂದ ಆತನನ್ನು ಅಪಮಾನಿಸುವುದೂ ಇಲ್ಲ, ಶಿಕ್ಷಿಸುವುದೂ ಇಲ್ಲ. ಬದಲಿಗೆ ಅವನ ಒಳ್ಳೆಯತನವನ್ನು ಸ್ಮರಣೆಗೆ ತರುವುದರ ಮೂಲಕ, ಅವನು ಮತ್ತು ನಿಸರ್ಗದ ಕೊಡುಗೆಗೆ ಬೆರೆತುಕೊಳ್ಳಲು ಪ್ರೋತ್ಸಾಹಿಸುತ್ತಾರೆ.

ಯಾರಾದರೊಬ್ಬರು ಏನಾದರೊಂದು ತಪ್ಪು ಮಾಡಿದರೆ ಸಾಕು, ಆತ ಮಾಡಿರುವ ಒಳ್ಳೆಯ ಕೆಲಸ ಮತ್ತು ಸಹಾಯಗಳನ್ನೆಲ್ಲಾ ಮರೆತು ಚಾರಿತ್ರ್ಯವಧೆ ಮಾಡುವ ಜನರ ನಡುವೆ ಉಬೂಂಟು ಜನ ವಿಶೇಷವಾಗಿ ಮತ್ತು ಸಕಾರಾತ್ಮಕವಾಗಿ ಕಾಣುತ್ತಾರೆ. ಚಿತ್ತಾರವನ್ನು ಮಸಿ ನುಂಗಿತು ಎಂದಿಲ್ಲ ಇವರಲ್ಲಿ. ಅಡಿಕೆ ಕದ್ದ ಮಾನ ಆನೆ ಕೊಟ್ಟರೂ ಬಾರದು ಎನ್ನುವ ಜನರಲ್ಲ ಇವರು.

ಇದು ಆಫ್ರಿಕಾದ ಪ್ರಾಚೀನ ಸಾಂಪ್ರದಾಯಿಕ ಧಾರ್ಮಿಕತೆಯ ತತ್ವವೇ ಆಗಿತ್ತು ಎಂದು ತಮ್ಮ ಮಹಾಪ್ರಬಂಧಗಳಲ್ಲಿ ಮಾನವಶಾಸ್ತ್ರಜ್ಞರು ಹೇಳಿದ್ದಾರೆ. ಅವರು ಹಾಗೆ ಇರಲೇ ಬೇಕಾದದ್ದು ಧಾರ್ಮಿಕ ಶ್ರದ್ಧೆ ಮತ್ತು ಸಂಪ್ರದಾಯವೇ ಆಗಿದ್ದು ಉಟೂಂಬುವನ್ನು ಹೆಚ್ಚು ಉತ್ಪ್ರೇಕ್ಷೆಗೊಳಿಸುವ ಅಗತ್ಯವಿಲ್ಲ. ಇತರ ಅಂಧಶ್ರದ್ಧೆಗಳಂತೆ ಇದನ್ನೂ ಪಾಲಿಸುತ್ತಾರೆ ಎಂದೂ ಉಟೂಂಬುವನ್ನು ವೈಭವೀಕರಿಸದಿರಲು ಪಾಶ್ಚಾತ್ಯ ವಿದ್ವಾಂಸರು ವಿಮರ್ಶಿಸುತ್ತಾರೆ.

ಮಾನವನ ಹಿತವನ್ನು ಸಮುದಾಯದ ಸುಖವನ್ನು ಹೊಂದಲು ವಿಶೇಷವಾದ ಪಾಂಡಿತ್ಯದ ಅರ್ಥವಂತಿಕೆ ಏಕೆ ಬೇಕು? ಮಾನವತೆಯ ದುರ್ಭಿಕ್ಷದ ಕಾಲದಲ್ಲಿ, ಒಡಕುಗಳನ್ನೇ ಬಲಗೊಳಿಸುವ ತತ್ವಗಳು ಮೆರೆಯುವಲ್ಲಿ ಅಂಧಾನುಕರುಣೆಯೋ ಅಥವಾ ಉತ್ಪ್ರೇಕ್ಷೆಯೋ ಒಟ್ಟಾರೆ ಯಾವುದೇ ನಡವಳಿಕೆ ಮತ್ತು ರೂಢಿಯು ಮಾನವನಿಗೆ ಸಾಮೂಹಿಕವಾಗಿ ಹಿತವನ್ನು ತಂದರೆ, ಐಕ್ಯತೆಯನ್ನು ಬಲಪಡಿಸುವಂತಾದರೆ ಅದರಲ್ಲಿ ಕೂದಲು ಸೀಳುವುದೇಕೆ ಎನ್ನುತ್ತಾರೆ ಸೌಹಾರ್ದದ ಪ್ರೇಮಿಗಳು.


ಇದನ್ನು ಓದಿ: ತೇಜಸ್ವಿಯವರ ಒಂದು ಸೀಟಿನ ಸ್ಕೂಟರ್‍ರೂ… ಡ್ರಾಪಾಯಣದ ಸಮೃದ್ಧ ಅನುಭವವೂ….
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...