Homeಅಂಕಣಗಳು“ಬೇರೆಯವರು ನಿರಾಸೆಯ ಬೇಸರದಲ್ಲಿರುವಾಗ ಒಬ್ಬನೇ ಒಬ್ಬ ಖುಷಿಯಾಗಿರಲು ಹೇಗೆ ಸಾಧ್ಯ?”

“ಬೇರೆಯವರು ನಿರಾಸೆಯ ಬೇಸರದಲ್ಲಿರುವಾಗ ಒಬ್ಬನೇ ಒಬ್ಬ ಖುಷಿಯಾಗಿರಲು ಹೇಗೆ ಸಾಧ್ಯ?”

- Advertisement -
- Advertisement -

ಅಂತರ್ಜಾಲದ ಪುಟದ ಮೇಲೆ ಪುಟಕ್ಕಿಟ್ಟು ಮನಪಟಲದಲ್ಲಿ ಹೊಳೆಯುತ್ತಿರುವ ಬರಹವಿದು.

ದಕ್ಷಿಣ ಬ್ರೆಜಿಲಿನ ಫ್ಲೋರಿಯಾನೋಪಾಲಿಸ್‍ನಲ್ಲಿ ನಡೆದಿತ್ತೊಂದು ಶಾಂತಿಯ ಉತ್ಸವ. ಪತ್ರಕರ್ತೆಯೂ ಮತ್ತು ತತ್ವಜ್ಞಾನಿಯೂ ಆದ ಲಿಯಾ ಡಿಸ್ಕಿನ್ ನಿರೂಪಿಸಿದ ಸಂಗತಿ ಅಂತರ್ಜಾಲದಲ್ಲಿ ಅಲೆದಾಡುತ್ತಿದ್ದ ಸೌಹಾರ್ದ ಪ್ರಿಯರ, ಮಾನವತಾ ಪ್ರೇಮಿಗಳ ಹೃದಯವನ್ನು ಮುಟ್ಟಿತು.

ಮಾನವಶಾಸ್ತ್ರಜ್ಞನೊಬ್ಬ ಈ ಬುಡಕಟ್ಟನ್ನು ಅಧ್ಯಯನ ಮಾಡುತ್ತಿದ್ದ. ಅವನ ಕೆಲಸಗಳನ್ನೆಲ್ಲಾ ಮುಗಿಸಿಕೊಂಡು ಹೊರಡುವ ಮುನ್ನ ತನ್ನ ಸುತ್ತುವರಿದಿದ್ದ ಬುಡಕಟ್ಟಿನ ಮಕ್ಕಳಿಗೆ ಆಟವಾಡಿಸಲು ಮತ್ತು ತನ್ನ ಪ್ರೀತಿಯ ಸಂಕೇತವಾಗಿ ಸಿಹಿ ಹಂಚಲು ಹೋಗಿ, ಒಂದು ಸಂಗತಿ ಜಗತ್ತಿಗೆ ತಿಳಿಯಲು ಕಾರಣನಾದ.

ಪಟ್ಟಣದಿಂದ ತಂದಿದ್ದ ಚಾಕೊಲೆಟ್ ಮತ್ತಿತರ ಸಿಹಿತಿನಿಸುಗಳನ್ನು ಬುಟ್ಟಿಯೊಂದರಲ್ಲಿಟ್ಟು ಅದನ್ನು ಒಂದಷ್ಟು ದೂರದಲ್ಲಿರುವ ಮರದ ಕೆಳಗೆ ಇಟ್ಟ. ಮಕ್ಕಳನ್ನೆಲ್ಲಾ ಒಟ್ಟಾಗಿಸಿ ಸಾಲಾಗಿ ನಿಲ್ಲಿಸಿದ. ನಾನು ಸೀಟಿ ಊದಿದಾಗ ಓಡಲು ಪ್ರಾರಂಭಿಸಬೇಕು, ಯಾರು ಮೊದಲು ಓಡುತ್ತಾರೋ ಅವರಿಗೆ ಆ ಎಲ್ಲಾ ತಿನಿಸುಗಳು ಎಂದು ಪೈಪೋಟಿಯನ್ನು ಒಡ್ಡಿದ. ಮಕ್ಕಳೆಲ್ಲಾ ನಿಂತರು. ಈತ “ಹೋಗಿ” ಎಂದು ಸೀಟಿ ಊದುತ್ತಿದ್ದಂತೆ ಆ ಮಕ್ಕಳೆಲ್ಲಾ ಜೋರಾಗಿ ಓಡುವುದು ಬಿಟ್ಟು ಒಬ್ಬರೊಬ್ಬರ ಕೈಗಳನ್ನು ಹಿಡಿದು ಒಟ್ಟಾಗಿ, ಎಲ್ಲರೂ ಓಡುವಂತಾಗುವಂತೆ ಲಘು ವೇಗದಲ್ಲಿ ಓಡಿ, ಒಟ್ಟಿಗೆ ಮುಟ್ಟಿ ಆ ತಿನಿಸುಗಳನ್ನು ಎಲ್ಲರೂ ಹಂಚಿಕೊಂಡು ಸಂತೋಷದಿಂದ ತಿಂದರು.

ಯಾರು ಮೊದಲು ಓಡುತ್ತಾರೋ, ಮಾಡುತ್ತಾರೋ ಅವರಿಗೇ ಬಹುಮಾನ ಎನ್ನುವಂತ ಸ್ಪರ್ಧೆಯ ಆಟವನ್ನು ಬಾಲ್ಯದಿಂದಲೇ ರೂಢಿಗೊಳಿಸಿಕೊಂಡಿರುವಂತಹ ಸಮಾಜದ ಈ ಮಾನವ ಶಾಸ್ತ್ರಜ್ಞನಿಗೆ ಇವರ ರೇಸ್ ಇಲ್ಲದ, ಸ್ಪರ್ಧೆ ಹೂಡದ, ಸಹಕಾರದ ಓಟ ಆಶ್ಚರ್ಯ ತಂದಿತು. “ಯಾಕೆ ಯಾರಾದರೊಬ್ಬರು, ಸಾಮರ್ಥ್ಯವಿರುವವರು ಓಡಿ ಬಹುಮಾನವನ್ನು ಗೆಲ್ಲಲಿಲ್ಲ? ಅದೊಂದು ಖುಷಿ (ಫನ್) ಅಲ್ಲವೇ” ಎಂದು ಕೇಳಿದ.

ಹಾಗೆ ತನ್ನೊಂದಿಗಿರುವವರನ್ನು ಬಿಟ್ಟು ತಾನೊಬ್ಬನೇ ಓಡಿ ಹೋಗಿ ಅದೇನನ್ನೋ ಪಡೆಯುವುದು ಬಹುಮಾನವಲ್ಲ, ಅದು ಅವಮಾನ ಎಂಬ ಸಂಸ್ಕೃತಿಯನ್ನು ರೂಢಿಸಿಕೊಂಡಿರುವ ಆ ಬುಡಕಟ್ಟಿನ ಹೆಣ್ಣುಮಗುವೊಂದು ಮರುಪ್ರಶ್ನಿಸಿತು, “ಬೇರೆಯವರು ನಿರಾಸೆಯ ಬೇಸರದಲ್ಲಿರುವಾಗ ಒಬ್ಬನೇ ಒಬ್ಬ ಖುಷಿಯಾಗಿರಲು ಹೇಗೆ ಸಾಧ್ಯ?”

ಉಬೂಂಟು ಅಲ್ಲಿನ ಬುಡಕಟ್ಟು ರೂಢಿಸಿಕೊಂಡಿರುವ ಪ್ರಜ್ಞೆ. ಅದಿರುವುದು ದಕ್ಷಿಣ ಆಫ್ರಿಕಾದಲ್ಲಿ. ನೀನು ವೇಗವಾಗಿ ಕ್ರಮಿಸಬೇಕಾದರೆ ಒಬ್ಬನೇ ಓಡು. ಆದರೆ ನೀನು ಬಹುದೂರ ಕ್ರಮಿಸಬೇಕಾದರೆ ಒಟ್ಟಾಗಿ ಹೋಗು ಎನ್ನುವ ಆಫ್ರಿಕಾದ ಗಾದೆಯ ಮಾತಿನಂತೆ ಉಬೂಂಟು ಒಂದು ಜೀವನಾದರ್ಶದ ರೂಢಿ.

ಲಿಯಾ ಡಿಸ್ಕಿನ್

‘ಊ-ಬೂನ್-ಟೂ’ ಎಂದರೆ ನಮ್ಮಿಂದ ‘ನಾನು’ ಎಂದು ಅರ್ಥ ಜಲು ಅಥವಾ ಖ್ಸೋಸ ಭಾಷೆಯಲ್ಲಿ.

ಆರ್ಚ್ ಬಿಷಪ್ ಮತ್ತು ಸಾಮಾಜಿಕ ಕಾರ್ಯಕರ್ತ ಡೆಸ್ಮಂಡ್ ಟುಟು ಹೇಳುವಂತೆ “ಉಬೂಂಟು ಎನ್ನುವುದು ಮಾನವನಾಗಿರುವುದರ ಸಾರತತ್ವ. ಇದು ಈ ಜಗತ್ತಿಗೆ ಆಫ್ರಿಕನ್ನರ ಕೊಡುಗೆ. ಇದರಲ್ಲಿ ಅತಿಥಿಗಳನ್ನು ಆದರಿಸುವುದು, ಒಬ್ಬರು ಮತ್ತೊಬ್ಬರಿಗೆ ಕಾಳಜಿ ವಹಿಸುವುದು, ಇತರರಿಗಾಗಿ ಪ್ರತಿಫಲಾಪೇಕ್ಷೆ ಇಲ್ಲದೇ ತಮ್ಮ ಕಾಯಕವನ್ನು ವಿಸ್ತರಿಸುವುದು, ಒಬ್ಬನ ಒಳಿತಿನಲ್ಲಿ ತನ್ನಯ ಒಳಿತು ಎಂಬ ಸಿದ್ಧಾಂತವನ್ನು ಪಾಲಿಸುವುದು; ಎಲ್ಲಾ ಇವೆ. ಒಬ್ಬ ವ್ಯಕ್ತಿಯು ಮತ್ತೊಬ್ಬ ವ್ಯಕ್ತಿಯ ಮೂಲಕ ಅನುಬಂಧಕ್ಕೆ ಒಳಗಾಗಿರುವುದೇ ಮಾನವತೆ. ಒಬ್ಬ ಮತ್ತೊಬ್ಬ ವ್ಯಕ್ತಿಯನ್ನು ಅಮಾನವೀಯವಾಗಿ ನಡೆಸಿಕೊಂಡಲ್ಲಿ ತನ್ನನ್ನೇ ಅಮಾನವೀಯಗೊಳಿಸಿಕೊಂಡಂತೆ. ಒಬ್ಬರ ಮೇಲೆ ದಬ್ಬಾಳಿಕೆ ಮಾಡುವುದು ಯಾವುದೇ ಮನುಷ್ಯನಿಗೆ ಅವಮಾನದ ಸಂಗತಿ. ಮನುಷ್ಯರ ಐಕ್ಯತೆ ನಿರ್ಬಂಧಗಳಿಗೆ ಒಳಗಾಗಿದೆ. ಸಮುದಾಯದ ಸಾಮಾನ್ಯ ಒಳಿತಿಗೆ ಸಾಮಾನ್ಯತೆಯಲ್ಲಿ ಅದರ ಭಾಗವಾಗಿರುವ ಪ್ರಜ್ಞೆಯೇ ಒಬ್ಬನ ಮಾನವತೆಯಾಗಿರುತ್ತದೆ.”

ದಕ್ಷಿಣ ಆಫ್ರಿಕಾದ ಅನೇಕ ಭಾಗಗಳಲ್ಲಿ ಉಬೂಂಟು ಪಾಲಿಸುವ ಬುಡಕಟ್ಟಿನ ಜನರಿದ್ದು ಅವರದೊಂದು ಸಕಾರಾತ್ಮಕ ಪದ್ಧತಿಯೊಂದು ಚಾಲ್ತಿಯಲ್ಲಿದೆ. ಅದೇನೆಂದರೆ ಯಾವುದೇ ವ್ಯಕ್ತಿಯು ಏನೇ ತಪ್ಪು ಅಥವಾ ಅಪರಾಧ ಮಾಡಿದರೂ ಅವನನ್ನು ಹಳ್ಳಿಯ ಮಧ್ಯಭಾಗಕ್ಕೆ ಕರೆದುಕೊಂಡು ಬರುತ್ತಾರೆ. ನಂತರ ಊರಿನ ಜನರೆಲ್ಲಾ ಸುತ್ತುವರೆದು, ಎರಡು ದಿನಗಳ ಕಾಲ ಅವನು ಮಾಡಿರುವ ಒಳ್ಳೆಯ ಕೆಲಸಗಳನ್ನೆಲ್ಲಾ ಹೇಳುತ್ತಿರುತ್ತಾರೆ. ಅವರ ಪ್ರಕಾರ ಯಾವುದೇ ವ್ಯಕ್ತಿಯು ಮೂಲದಲ್ಲಿ ಒಳ್ಳೆಯವನೇ ಆಗಿರುತ್ತಾನೆ. ಆದರೆ ಯಾವುದೋ ಒಂದು ಗಳಿಗೆಯಲ್ಲಿ ತಪ್ಪು ಮಾಡಿಬಿಡುತ್ತಾನೆ. ಹೊರಗಿನ ದುಷ್ಟ ಶಕ್ತಿಯ ಪ್ರಭಾವದಿಂದ ತಪ್ಪು ಸಂಭವಿಸಿರುತ್ತದೆ. ಆ ತಪ್ಪು ಮಾಡುವುದೆಂದರೆ ತನ್ನ ಒಳ್ಳೆಯತನವನ್ನು ಮರುಕಳಿಸೆಂದು ಅವನ ಕೂಗು ಅಥವಾ ಅಳಲಾಗಿರುತ್ತದೆ. ಆದ್ದರಿಂದ ಹಳ್ಳಿಯವರೆಲ್ಲಾ ಒಗ್ಗಟ್ಟಾಗಿ ತನ್ನ ಒಳ್ಳೆಯತನಕ್ಕಾಗಿ ಹಾತೊರೆಯುತ್ತಾ ಸಹಾಯ ಬೇಡುತ್ತಿರುವವನಿಗೆ ಸಹಕರಿಸಲೆಂದು ಅವನ ಒಳ್ಳೆಯ ಕೆಲಸಗಳನ್ನು, ಗುಣಗಳನ್ನು ಹೇಳುವಂತಹ ಕೆಲಸವನ್ನು ಮಾಡುತ್ತಾರೆ. ಈ ಆಚರಣೆಯ ಮೂಲಕ ತಪ್ಪು ಮಾಡಿರುವವನು ನಿಸರ್ಗದಿಂದ ಪಡೆದಿರುವ ಒಳ್ಳೆಯತನವನ್ನು ಮರಳಿಪಡೆಯುತ್ತಾನೆಂದು ಅವರ ನಂಬಿಕೆ. ಶಿಕ್ಷೆ ಮತ್ತು ಅವಮಾನಗಳನ್ನು ಮಾಡುವುದರಿಂದ ವ್ಯಕ್ತಿಯು ತಮ್ಮಿಂದ ನಿಸರ್ಗದತ್ತವಾದ ಗುಣರಹಿತನಾಗಿ ಸಂಪೂರ್ಣ ಹೊರಟೇ ಹೋಗುತ್ತಾನೆಂದು ಅವರು ಹೆದರುತ್ತಾರೆ. ಆದ್ದರಿಂದ ಆತನನ್ನು ಅಪಮಾನಿಸುವುದೂ ಇಲ್ಲ, ಶಿಕ್ಷಿಸುವುದೂ ಇಲ್ಲ. ಬದಲಿಗೆ ಅವನ ಒಳ್ಳೆಯತನವನ್ನು ಸ್ಮರಣೆಗೆ ತರುವುದರ ಮೂಲಕ, ಅವನು ಮತ್ತು ನಿಸರ್ಗದ ಕೊಡುಗೆಗೆ ಬೆರೆತುಕೊಳ್ಳಲು ಪ್ರೋತ್ಸಾಹಿಸುತ್ತಾರೆ.

ಯಾರಾದರೊಬ್ಬರು ಏನಾದರೊಂದು ತಪ್ಪು ಮಾಡಿದರೆ ಸಾಕು, ಆತ ಮಾಡಿರುವ ಒಳ್ಳೆಯ ಕೆಲಸ ಮತ್ತು ಸಹಾಯಗಳನ್ನೆಲ್ಲಾ ಮರೆತು ಚಾರಿತ್ರ್ಯವಧೆ ಮಾಡುವ ಜನರ ನಡುವೆ ಉಬೂಂಟು ಜನ ವಿಶೇಷವಾಗಿ ಮತ್ತು ಸಕಾರಾತ್ಮಕವಾಗಿ ಕಾಣುತ್ತಾರೆ. ಚಿತ್ತಾರವನ್ನು ಮಸಿ ನುಂಗಿತು ಎಂದಿಲ್ಲ ಇವರಲ್ಲಿ. ಅಡಿಕೆ ಕದ್ದ ಮಾನ ಆನೆ ಕೊಟ್ಟರೂ ಬಾರದು ಎನ್ನುವ ಜನರಲ್ಲ ಇವರು.

ಇದು ಆಫ್ರಿಕಾದ ಪ್ರಾಚೀನ ಸಾಂಪ್ರದಾಯಿಕ ಧಾರ್ಮಿಕತೆಯ ತತ್ವವೇ ಆಗಿತ್ತು ಎಂದು ತಮ್ಮ ಮಹಾಪ್ರಬಂಧಗಳಲ್ಲಿ ಮಾನವಶಾಸ್ತ್ರಜ್ಞರು ಹೇಳಿದ್ದಾರೆ. ಅವರು ಹಾಗೆ ಇರಲೇ ಬೇಕಾದದ್ದು ಧಾರ್ಮಿಕ ಶ್ರದ್ಧೆ ಮತ್ತು ಸಂಪ್ರದಾಯವೇ ಆಗಿದ್ದು ಉಟೂಂಬುವನ್ನು ಹೆಚ್ಚು ಉತ್ಪ್ರೇಕ್ಷೆಗೊಳಿಸುವ ಅಗತ್ಯವಿಲ್ಲ. ಇತರ ಅಂಧಶ್ರದ್ಧೆಗಳಂತೆ ಇದನ್ನೂ ಪಾಲಿಸುತ್ತಾರೆ ಎಂದೂ ಉಟೂಂಬುವನ್ನು ವೈಭವೀಕರಿಸದಿರಲು ಪಾಶ್ಚಾತ್ಯ ವಿದ್ವಾಂಸರು ವಿಮರ್ಶಿಸುತ್ತಾರೆ.

ಮಾನವನ ಹಿತವನ್ನು ಸಮುದಾಯದ ಸುಖವನ್ನು ಹೊಂದಲು ವಿಶೇಷವಾದ ಪಾಂಡಿತ್ಯದ ಅರ್ಥವಂತಿಕೆ ಏಕೆ ಬೇಕು? ಮಾನವತೆಯ ದುರ್ಭಿಕ್ಷದ ಕಾಲದಲ್ಲಿ, ಒಡಕುಗಳನ್ನೇ ಬಲಗೊಳಿಸುವ ತತ್ವಗಳು ಮೆರೆಯುವಲ್ಲಿ ಅಂಧಾನುಕರುಣೆಯೋ ಅಥವಾ ಉತ್ಪ್ರೇಕ್ಷೆಯೋ ಒಟ್ಟಾರೆ ಯಾವುದೇ ನಡವಳಿಕೆ ಮತ್ತು ರೂಢಿಯು ಮಾನವನಿಗೆ ಸಾಮೂಹಿಕವಾಗಿ ಹಿತವನ್ನು ತಂದರೆ, ಐಕ್ಯತೆಯನ್ನು ಬಲಪಡಿಸುವಂತಾದರೆ ಅದರಲ್ಲಿ ಕೂದಲು ಸೀಳುವುದೇಕೆ ಎನ್ನುತ್ತಾರೆ ಸೌಹಾರ್ದದ ಪ್ರೇಮಿಗಳು.


ಇದನ್ನು ಓದಿ: ತೇಜಸ್ವಿಯವರ ಒಂದು ಸೀಟಿನ ಸ್ಕೂಟರ್‍ರೂ… ಡ್ರಾಪಾಯಣದ ಸಮೃದ್ಧ ಅನುಭವವೂ….
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...