Homeಮುಖಪುಟರಾಷ್ಟ್ರಪತಿ ದ್ರೌಪದಿ ಮುರ್ಮು ಹೆಸರು ಹಿಮಾಲಯದೆತ್ತರಕ್ಕೆ?

ರಾಷ್ಟ್ರಪತಿ ದ್ರೌಪದಿ ಮುರ್ಮು ಹೆಸರು ಹಿಮಾಲಯದೆತ್ತರಕ್ಕೆ?

- Advertisement -
- Advertisement -

ಪ್ರಸ್ತುತ ಪ್ರಜಾಸತ್ತೆಯ ಹೆಸರಿನಲ್ಲಿ ನಡೆಯುತ್ತಿರುವ ರಾಜಪ್ರಭುತ್ವದ ಆಚರಣೆಗಳು ಬ್ರಾಹ್ಮಣಶಾಹಿಯ ದಿಗ್ವಿಜಯದಂತಿವೆ. ಪ್ರಧಾನಿ ನರೇಂದ್ರ ಮೋದಿಯವರು ಬ್ರಾಹ್ಮಣ ಪುರೋಹಿತರ ದಂಡಿನೊಂದಿಗೆ ದಕ್ಷಿಣದ ಚೋಳ ರಾಜರ ಕಾಲದ್ದೆಂಬ ರಾಜದಂಡ “ಸೆಂಗೋಲ್”ಅನ್ನು ಸಂಸತ್ ಭವನದಲ್ಲಿ ಯಜ್ಞದೀಕ್ಷಿತರಾಗಿ ಪ್ರತಿಷ್ಠಾಪಿಸಿದರು-ರಾಜನ ಪಟ್ಟಾಭಿಷೇಕದಂತೆ.

ರಾಷ್ಟ್ರದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ’ಶಿಷ್ಟಾಚಾರ’ ಕಾರಣದಿಂದ ಆಹ್ವಾನಿಸಿರಲಿಲ್ಲ. ಆದರೆ, ಆ ಶಿಷ್ಟಾಚಾರ ಏನೆಂದು ತಿಳಿದುಬರುವುದಿಲ್ಲ. ಮೊದಲಿಗೆ, ಮುರ್ಮು ಅವರು ಒಬ್ಬ ವಿಧವೆ, ಅದೂ ಬುಡಕಟ್ಟು (ಎಸ್.ಟಿ) ಮಹಿಳೆ. ಆದ್ದರಿಂದ ಅವರು ನೂತನ ಸಂಸತ್ ಭವನವನ್ನು ಉದ್ಘಾಟಿಸಿದರೆ ಅದರ ಪಾವಿತ್ರ್ಯತೆಗೆ ಭಂಗ ಬರುತ್ತದೆ ಎಂಬ ಸನಾತನ ’ಶಿಷ್ಟತೆ’ಗಳು ಕಾರಣವಾದವೇ? ಅಥವಾ ’ಸೆಂಗೋಲ್’ ಎಂಬ ರಾಜದಂಡವನ್ನು ಪುರುಷನು ಮಾತ್ರ ಸ್ವೀಕರಿಸಲರ್ಹ ಎಂಬ ರಾಜಪ್ರಭುತ್ವದ ಸಂಪ್ರದಾಯವೋ?- ಈ ಚರ್ಚೆಗಳು ಜಾರಿಯಲ್ಲಿವೆ. ಒಟ್ಟಾರೆ ಮುರ್ಮು ಅವರನ್ನು ಸಮಾರಂಭಕ್ಕೆ ಆಹ್ವಾನಿಸದೆ ಸ್ತ್ರೀ ಸಂಕುಲವನ್ನೇ ಅವಮಾನಿಸಲಾಯಿತು. ಇದು ಪ್ರಜಾತಂತ್ರದಲ್ಲಿ ದೇಶದ ಪ್ರಥಮ ಮಹಿಳೆಗೆ ನಾವು ತೋರಿದ ಅಕ್ಷಮ್ಯ ಅಪರಾಧ!

ಎರಡನೆಯದಾಗಿ, ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್‌ನ ವಿರುದ್ಧ ಕಳೆದೊಂದು ತಿಂಗಳಿನಿಂದ ಜಂತರ್‌ಮಂತರ್‌ನಲ್ಲಿ ಆತನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಮಹಿಳಾ ಕುಸ್ತಿ ಪಟುಗಳು ಆತನನ್ನು ಬಂಧಿಸಿ ವಿಚಾರಣೆಗೊಳಪಡಿಸಿ ಎಂದು ಧರಣಿ ಸತ್ಯಾಗ್ರಹ ಹಿಡಿದಿದ್ದಾರೆ. ಅವರು ಇದೇ ನೂತನ ಸಂಸತ್ ಭವನದ ಉದ್ಘಾಟನೆ ಸಮಾರಂಭದ ದಿನ ಇಂಡಿಯಾ ಗೇಟ್ ಬಳಿ ಧರಣಿ ಕೂರಲು ಹೊರಟರು. ಆದರೆ ಇದರಿಂದ ಶಾಂತಿ ಭಂಗವಾಗುತ್ತದೆಂದು ನೆಪವೊಡ್ಡಿ ಪೊಲೀಸರು ಅವರನ್ನು ಬಡಿದು ಎಳೆದು ಹಾಕಿದರು. ಆ ದೃಶ್ಯ ಸುದ್ದಿ ಮಾಧ್ಯಮಗಳಲ್ಲಿ ಹರಿದುಬಂತು. ಅತ್ತ ಉದ್ಘಾಟನೆಯ ಮಂತ್ರಘೋಷ ದಿಗ್ಮಂಡಲ ತುಂಬಿದರೆ, ಇತ್ತ ಒಲಂಪಿಕ್ಸ್‌ನಲ್ಲಿ ಪದಕಗಳಿಸಿ ದೇಶದ ಕೀರ್ತಿಯನ್ನು ದಿಗಂತ ವಿಸ್ತಾರಗೊಳಿಸಿದ ಮಹಿಳಾ ಕುಸ್ತಿಪಟುಗಳ ಅಸಹಾಯಕ ಅರಣ್ಯ ರೋದನ. ಈ ಪ್ರಹಸನದ ಬಗ್ಗೆ ಪ್ರಧಾನಿ ಮೋದಿಯವರು ತುಟಿಬಿಚ್ಚುತ್ತಿಲ್ಲ; ಗುಟ್ಟು ಏನೆಂದು ತಿಳಿಯುತ್ತಿಲ್ಲ. ನಮ್ಮ ರಾಷ್ಟ್ರಪತಿಗಳಾದರೂ ಮೌನ ಮುರಿಯುತ್ತಿಲ್ಲ. ಏಕೆ? ಕಾರಣ ತಿಳಿಯುತ್ತಿಲ್ಲ!

ಈ ಹಿನ್ನೆಲೆಯಲ್ಲಿ ಅವಲೋಕಿಸಿದರೆ ಈ ದೇಶದಲ್ಲಿ ಮಹಿಳೆಯರಿಗೆ ಕವಡೆ ಕಾಸಿನ ಕಿಮ್ಮತ್ತೂ ಇಲ್ಲವಾಗಿದೆ. ಹೆಣ್ಣು ಏನಿದ್ದರೂ ಗೃಹಸ್ವಾಮಿನಿ ಮಾತ್ರ ಎನ್ನುತ್ತದೆ ಮನುಧರ್ಮ ಶಾಸ್ತ್ರ. ಈ ಎಲ್ಲ ಬೆಳವಣಿಗೆಯನ್ನು ಮನಗಂಡು ನಮ್ಮ ರಾಷ್ಟ್ರಪತಿಯವರು ಸರ್ಕಾರಕ್ಕೆ ಸ್ಪಷ್ಟೀಕರಣ ಕೋರಿ ಒಂದು ದಿಟ್ಟ ಕ್ರಮಕ್ಕಾದರೂ ಮುಂದಾಗಬಹುದೇ?. ಹಾಗೆ ಮಾಡಬೇಕೆಂಬುದು ಪ್ರಜಾತಂತ್ರವಾದಿಗಳ ಅದಮ್ಯ ಅಪೇಕ್ಷೆ! ಇದು ತಮ್ಮ ಅಧಿಕಾರದ ಚೌಕಟ್ಟಿನಲ್ಲಿ ಮಾಡಬಹುದಾಗಿದ್ದರೆ, ಅಧಿಕಾರದಾಚೆಗೂ ಪ್ರತಿಭಟಿಸುವ ಅವಕಾಶ ಅವರಿಗಿದೆ.

ಇದಕ್ಕೆ ಪೂರಕವಾಗಿ ಭಾರತೀಯ ಸಂಸ್ಕೃತಿಯ ಕೆನೆಯಂತಿರುವ ರಾಮಾಯಣದ ಹಾಗೂ ಶಾಕುಂತಲ ನಾಟಕದ ಸೀತಾ-ಶಕುಂತಲೆಯರ ಪಾತ್ರಗಳ ನಿರ್ಧಾರವನ್ನು ಇಲ್ಲಿ ಪ್ರಸ್ತಾಪಿಸಬಹುದು. ಈ ಇಬ್ಬರು ನಾಯಕಿಯರು ತಾವು ತೀವ್ರ ಅವಮಾನಿತರಾದಾಗ ತೆಗೆದುಕೊಳ್ಳುವ ಅಂತಿಮ ನಿರ್ಧಾರ ಅನುಪಮ. ಮೊದಲಿಗೆ, ಲವ-ಕುಶರ ಕಾಳಗದ ನಂತರ ಪುರುಷೋತ್ತಮ ರಾಮನು ಸೀತೆಯನ್ನು ಸಂಧಿಸಿ ಅಯೋಧ್ಯೆಗೆ ಬರಲು ಆಹ್ವಾನಿಸುತ್ತಾನೆ. ಆದರೆ ಅಂದು ಪರಿತ್ಯಾಗಗೊಂಡ ಭೂಜಾತೆ ಸೀತೆ ತಣ್ಣಗೆ ರಾಜನ ಆಹ್ವಾನವನ್ನು ನಿರಾಕರಿಸಿ ವಾಲ್ಮೀಕಿ ಆಶ್ರಮದಲ್ಲೇ ಉಳಿಯುತ್ತಾಳೆ. ಇದು ಉತ್ತರ ರಾಮಾಯಣದ ಅಮೋಘ ದರ್ಶನ ಸಾರ.

ಇನ್ನು ಶಾಕುಂತಲ ನಾಟಕದಲ್ಲಿ ಬೇಟೆಗೆಂದು ಬಂದ ದುಷ್ಯಂತ ಕಣ್ವಾಶ್ರಮದಲ್ಲಿ ಮಗ ಭರತ ಹಾಗೂ ಅವನ ತಾಯಿ ಶಕುಂತಲೆಯನ್ನು ಕಂಡು ’ವಸಂತಕಾಲಕ್ಕೆ ಬಳ್ಳಿ ಹೂ ತಳೆಯುವಂತೆ ನೀನು ಈ ಅಭಿಜ್ಞಾನವನ್ನು ಪುನಃ ತೊಡು’ ಎಂದು ಗುರುತಿನ ಉಂಗುರವನ್ನು ನೀಡುತ್ತಾನೆ. ಆದರೆ ’ಸರಿಯಾದ ಸಮಯಕ್ಕೆ ಅದು ನನಗೆ ಕೈ ಕೊಟ್ಟಿತು, ಬೇಡ’ ಎಂದು ತಣ್ಣಗೆ ನಿರಾಕರಿಸುತ್ತಾಳೆ. ಮತ್ತು ಋಷ್ಯಾಶ್ರಮದಲ್ಲೇ ಉಳಿಯುತ್ತಾಳೆ ಶಕುಂತಲೆ. ಈ ಎರಡೂ ಜಾಗತಿಕ ಪ್ರತಿರೋಧಗಳು ಸ್ತ್ರೀ ಸಂವೇದನೆಯ ಸಂಪುಟಗಳಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡಬಹುದಾದ ಸಂದರ್ಭಗಳಾಗಿವೆ.

ಅದಿರಲಿ, ಪ್ರಸ್ತುತ ನಮ್ಮ ಪ್ರಜಾಪ್ರಭುತ್ವ ಸಂದರ್ಭದಲ್ಲಿ ವಿಚಾರ ಮಾಡಿದರೆ ಪುರುಷಪಾರಮ್ಯದ ನೀತಿಯನ್ನನುಸರಿಸುವ ಪ್ರಧಾನಿ ಮೋದಿಯವರ ನಡೆ ನೋಡಿದರೆ ಈ ಸರ್ಕಾರ ಬುಡಕಟ್ಟು ಮಹಿಳೆಯನ್ನು ರಾಷ್ಟ್ರಪತಿ ಮಾಡಿದ್ದೇವೆ ಎಂದು ಬೀಗುತ್ತಿದೆಯೇ ಹೊರತು ವಾಸ್ತವವಾಗಿ ಮಹಿಳೆಯರಿಗೆ ನೀಡುವ ಘನತೆ ಗೌರವಗಳಿಗೆ ಲೋಪವೆಸಗುತ್ತಾ ಬರುತ್ತಿದೆ. ಆದ ಪ್ರಯುಕ್ತ ಈ ಸಂಘರ್ಷ ಸಮಯದಲ್ಲಿ ದ್ರೌಪದಿ ಮುರ್ಮು ಅವರು ತಮ್ಮ ರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ದೃಢನನಿರ್ಧಾರ ತೆಗೆದುಕೊಂಡು ರಾಷ್ಟ್ರಪತಿಭವನದಿಂದ ಹೊರಬರುವುದು ಪ್ರತಿಭಟನೆಯ ಸಂಕೇತವಾದೀತು. ಈ ಒಂದು ದಿಟ್ಟ ನಿರ್ಧಾರವನ್ನು ತೆಗೆದುಕೊಳ್ಳಲು ಅವರಿಂದ ಸಾಧ್ಯವೆ? ಹಾಗೇನಾದರೂ ಅವರು ಮಾಡಿದರಾದರೆ ಇದೊಂದು ಅನನ್ಯ ಐತಿಹಾಸಿಕ ಘಟನೆಯಾಗುತ್ತದೆ. ಮುರ್ಮು ಅವರ ಹೆಸರು ಸೀತಾ-ಶಕುಂತಲೆಯರ ಸಾಲಿಗೆ ನಿಲ್ಲುತ್ತದೆ. ಮತ್ತು ಜಾಗತಿಕ ಸ್ತ್ರೀ ಸಂಕುಲದಲ್ಲಿ ಆತ್ಮವಿಶ್ವಾಸವನ್ನು ತುಂಬುತ್ತದೆ. ಮುರ್ಮು ಅವರು ಬಡತನ ಸಿರಿತನಗಳನ್ನು ಕಂಡುಂಡು ಬಾಳಿ ಬದುಕಿದವರು. ಅವರಿಗೆ ರಾಷ್ಟ್ರಪತಿ ಭವನವನ್ನು ತೊರೆದು ಬರಲು ಅಂಥ ಮೋಹವೇನೂ ಇರಲಾರದು. ಹೇಗೂ ಐದು ವರ್ಷದ ತರುವಾಯ ತೆರವುಗೊಳಿಸಲೇಬೇಕಲ್ಲಾ! ’ನಾಳೆ ಬಪ್ಪುದು ಇಂದೇ ಬರಲಿ’ ಎಂದು ಹೊರಬಂದರೆ ಅದೊಂದು ಅಮೃತ ಮುಹೂರ್ತ! ಅದು ಎಷ್ಟೋ ದಮನಿತ ಮಹಿಳೆಯರಿಗೆ ಸ್ಪೂರ್ತಿದಾಯಕವೂ ಆದೀತು ಮತ್ತು ಅವರ ಹೆಸರು ಹಿಮಾಲಯದೆತ್ತರಕ್ಕೆ ಏರುತ್ತದೆ!.

ಪ್ರೊ. ಶಿವರಾಮಯ್ಯ

ಪ್ರೊ. ಶಿವರಾಮಯ್ಯ
ಕನ್ನಡ ಪ್ರಾಧ್ಯಾಪಕರಾಗಿ ನಿವೃತ್ತರಾಗಿರುವ ಶಿವರಾಮಯ್ಯನವರು ತಮ್ಮ ಅಧ್ಯಾಪನ ಮತ್ತು ಸಂಶೋಧನಾ ಕಾರ್ಯಗಳ ಜೊತೆಗೆ ಜನಪರ ಹೋರಾಟಗಳಲ್ಲಿ ಗುರುತಿಸಿಕೊಂಡವರು. ಸ್ವಪ್ನ ಸಂಚಯ (ಕವನ ಸಂಕಲನ), ಉರಿಯ ಉಯಾಲೆ (ವಿಮರ್ಶಾ ಬರಹಗಳ ಸಂಕಲನ), ದನಿ ಇಲ್ಲದವರ ದನಿ, ಪಂಪಭಾರತ ಭಾಗ-1 &2 (ಸಂಪಾದನೆ ಮತ್ತು ಗದ್ಯಾನುವಾದ) ಅವರ ಪುಸ್ತಕಗಳಲ್ಲಿ ಕೆಲವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...