ಹರ್ಯಾಣ ಮತ್ತು ಪಂಜಾಬ್ ನಡುವಿನ ಶಂಭು ಗಡಿಯಲ್ಲಿ ರೈತರು ದೆಹಲಿಯತ್ತ ಪಾದಯಾತ್ರೆ ನಡೆಸುತ್ತಿದ್ದಾಗ ಪೊಲೀಸರು ಅಶ್ರುವಾಯು ಶೆಲ್ಗಳನ್ನು ಹಾರಿಸಿದ್ದು, ತಮ್ಮ ಮೂಲಭೂತ ಹಕ್ಕುಗಳಿಗಾಗಿ ಹೋರಾಡುತ್ತಿರುವ ರೈತರ ಮೇಲೆ ದಾಳಿ ಮಾಡಿದರೆ ದೇಶ ಹೇಗೆ ಪ್ರಗತಿ ಸಾಧಿಸುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
‘ರೈತರು ತಮ್ಮ ಮೂಲಭೂತ ಹಕ್ಕುಗಳಿಗಾಗಿ ಹೋರಾಡುತ್ತಿರುವ ರೈತರ ಮೇಲೆ ಅಶ್ರುವಾಯು ಶೆಲ್ಗಳಿಂದ ದಾಳಿ ನಡೆಸಿದಾಗ ನಮ್ಮ ದೇಶ ಹೇಗೆ ಪ್ರಗತಿ ಹೊಂದುತ್ತದೆ? ಬಿಜೆಪಿ (ಭಾರತೀಯ ಜನತಾ ಪಕ್ಷ) ನಮ್ಮ ರೈತರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವುದನ್ನು ನಾನು ಬಲವಾಗಿ ಖಂಡಿಸುತ್ತೇನೆ’ ಎಂದು ಬ್ಯಾನರ್ಜಿ ‘ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಕೇಂದ್ರ ಸರ್ಕಾರ ನಡೆಯನ್ನು ಖಂಡಿಸಿದ ದೀದಿ, ‘ರೈತರು ಮತ್ತು ಕಾರ್ಮಿಕರನ್ನು ಬೆಂಬಲಿಸುವಲ್ಲಿ ಬಿಜೆಪಿ ವಿಫಲವಾಗಿರುವುದು ಅವರ ‘ವಿಕಸಿತ್ ಭಾರತ್’ (ಅಭಿವೃದ್ಧಿ ಹೊಂದಿದ ಭಾರತ) ಭ್ರಮೆಯನ್ನು ಬಹಿರಂಗಪಡಿಸುತ್ತದೆ’ ಎಂದು ಹೇಳಿದರು.
‘ರೈತರು ಮತ್ತು ಕಾರ್ಮಿಕರನ್ನು ಬೆಂಬಲಿಸುವಲ್ಲಿ ಕೇಂದ್ರ ಸರ್ಕಾರದ ವಿಫಲತೆ, ನಿರರ್ಥಕ ಪಿಆರ್ ಸ್ಟಂಟ್ಗಳೊಂದಿಗೆ ಸೇರಿಕೊಂಡು ‘ವಿಕಸಿತ್ ಭಾರತ್’ನ ಭ್ರಮೆಯನ್ನು ಬಹಿರಂಗಪಡಿಸುತ್ತದೆ. ರೈತರ ಪ್ರತಿಭಟನೆಯನ್ನು ಹತ್ತಿಕ್ಕುವ ಬದಲು, ಬಿಜೆಪಿಯು ಅವರ ಉಬ್ಬಿಕೊಂಡಿರುವ ಅಹಂಕಾರಗಳು, ಅಧಿಕಾರದ ಹಸಿವಿನ ಮಹತ್ವಾಕಾಂಕ್ಷೆಗಳು ಮತ್ತು ನಮ್ಮ ರಾಷ್ಟ್ರಕ್ಕೆ ಹಾನಿ ಮಾಡಿದ ಅಸಮರ್ಪಕ ಆಡಳಿತವನ್ನು ತಗ್ಗಿಸುವತ್ತ ಗಮನಹರಿಸಬೇಕು’ ಎಂದು ವಾಗ್ದಾಳಿ ನಡೆಸಿದ್ದಾರೆ.
‘ನೆನಪಿಡಿ, ಉನ್ನತ ಮತ್ತು ಶಕ್ತಿಶಾಲಿ ಸೇರಿದಂತೆ ನಮ್ಮೆಲ್ಲರನ್ನೂ ಪೋಷಿಸುವವರು ಈ ರೈತರು. ಸರ್ಕಾರದ ದೌರ್ಜನ್ಯದ ವಿರುದ್ಧ ನಮ್ಮ ರೈತರೊಂದಿಗೆ ಒಗ್ಗಟ್ಟಿನಿಂದ ನಿಲ್ಲೋಣ’ ಎಂದು ಅವರು ಕರೆ ನೀಡಿದರು.
How can our country progress when the farmers are attacked with tear gas shells for fighting for their basic rights? I strongly condemn the brutal assault on our farmers by the BJP.
The Central Govt.'s failure to support farmers and labourers, coupled with futile PR stunts,…
— Mamata Banerjee (@MamataOfficial) February 13, 2024
ಇಂದು ದೆಹಲಿಯತ್ತ ಮೆರವಣಿಗೆ ನಡೆಸುತ್ತಿದ್ದ ಹಲವಾರು ಪ್ರತಿಭಟನಾಕಾರರನ್ನು ಹರಿಯಾಣ ಪೊಲೀಸರು ಬಂಧಿಸಿದ್ದಾರೆ. ಪ್ರತಿಭಟನಾನಿರತ ರೈತರು ತಮ್ಮ ಟ್ರ್ಯಾಕ್ಟರ್ ಮತ್ತು ತಮ್ಮ ಕೈಗಳನ್ನು ಬಳಸಿ ಬಹುಪದರದ ಬ್ಯಾರಿಕೇಡ್ಗಳನ್ನು ಒಡೆಯಲು ಪ್ರಯತ್ನಿಸುತ್ತಿರುವುದು ಕಂಡುಬಂದಿತು.
ಪ್ರತಿಭಟನಾಕಾರರನ್ನು ರಾಷ್ಟ್ರ ರಾಜಧಾನಿಗೆ ಪ್ರವೇಶಿಸದಂತೆ ತಡೆಯಲು ಪೊಲೀಸರು ಪ್ರಯತ್ನಿಸುತ್ತಿದ್ದಂತೆ ಶಂಭು ಗಡಿಯಲ್ಲಿ ಗೊಂದಲದ ಘರ್ಷಣೆ ಉಂಟಾಗಿದೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಮತ್ತು ಜಲ ಫಿರಂಗಿಗಳನ್ನು ಹಾರಿಸಿದ್ದರಿಂದ ರೈತರು ರಸ್ತೆಯ ಬದಿಗಳಲ್ಲಿ ಹತ್ತಿರದ ಕೃಷಿಭೂಮಿಗೆ ಓಡುತ್ತಿರುವ ದೃಶ್ಯಗಳು ಕಂಡುಬಂದವು.
ಕಾಂಕ್ರೀಟ್ ಚಪ್ಪಡಿಗಳು, ಕಬ್ಬಿಣದ ಮೊಳೆಗಳು, ಬ್ಯಾರಿಕೇಡ್ಗಳು, ಮುಳ್ಳುತಂತಿಗಳು, ಪೊಲೀಸ್ ಮತ್ತು ಅರೆಸೇನಾ ಸಿಬ್ಬಂದಿಯನ್ನು ಗಡಿಯ ಹಲವು ಭಾಗಗಳಲ್ಲಿ ನಿಯೋಜಿಸಲಾಗಿದೆ.
ರೈತರು 12 ಪ್ರಮುಖ ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದೆ ಇಟ್ಟಿದ್ದು, ಇದಕ್ಕಾಗಿ ದೆಹಲಿಗೆ ಪಾದಯಾತ್ರೆ ನಡೆಸುತ್ತಿದ್ದೇವೆ. ಈ ಬಾರಿಯ ಪ್ರತಿಭಟನೆಗೆ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಪಂಜಾಬ್ ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿಯು ರೈತ ಸಂಘದ ಮುಖಂಡರಾದ ಜಗಜೀತ್ ಸಿಂಗ್ ದಲ್ಲೆವಾಲ್ ಮತ್ತು ಸರ್ವಾನ್ ಸಿಂಗ್ ಪಂಧೇರ್ ನೇತೃತ್ವದಲ್ಲಿ ಕರೆ ನೀಡಿದೆ.
ಪ್ರತಿಭಟನಾನಿರತ ರೈತರ ಪ್ರಕಾರ, ಕೇಂದ್ರವು ಅವರಿಗೆ ಕನಿಷ್ಠ ಬೆಂಬಲ ಬೆಲೆಯ (ಎಂಎಸ್ಪಿ) ಭರವಸೆ ನೀಡಿದ ನಂತರ ಅವರು 2021ರ ಪ್ರತಿಭಟನೆಯನ್ನು ಕೊನೆಗೊಳಿಸಿದರು. ಸ್ವಾಮಿನಾಥನ್ ಆಯೋಗದ ವರದಿಯ ಶಿಫಾರಸಿನಂತೆ ಎಲ್ಲ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಖಾತರಿಪಡಿಸುವ ಕಾನೂನನ್ನು ಜಾರಿಗೆ ತರಲು ಅವರು ಈಗ ಒತ್ತಾಯಿಸುತ್ತಿದ್ದಾರೆ.
ಸಂಪೂರ್ಣ ಸಾಲ ಮನ್ನಾ ಮಾಡಬೇಕು ಮತ್ತು ರೈತರು ಮತ್ತು ರೈತ ಕಾರ್ಮಿಕರಿಗೆ ಪಿಂಚಣಿ ನೀಡುವ ಯೋಜನೆಯನ್ನು ಸಹ ಅವರು ಒತ್ತಾಯಿಸುತ್ತಿದ್ದಾರೆ. 2020ರ ವಿದ್ಯುತ್ ತಿದ್ದುಪಡಿ ಮಸೂದೆಯನ್ನು ಕೈಬಿಡುವಂತೆ ರೈತರು ಒತ್ತಾಯಿಸಿದ್ದು, ರೈತರಿಂದ ಒಪ್ಪಿಗೆ ಹಾಗೂ ಜಿಲ್ಲಾಧಿಕಾರಿ ದರಕ್ಕಿಂತ 4 ಪಟ್ಟು ಹೆಚ್ಚಿನ ಪರಿಹಾರ ನೀಡಬೇಕು ಎಂಬ 2013ರ ಭೂಸ್ವಾಧೀನ ಕಾಯಿದೆಯನ್ನು ಪುನಃ ಜಾರಿಗೆ ತರುವಂತೆ ಒತ್ತಾಯಿಸಿದ್ದಾರೆ. ಮುಖ್ಯವಾಗಿ, ಲಖಿಂಪುರ ಖೇರಿ ಹತ್ಯೆಯಲ್ಲಿ ಭಾಗಿಯಾದವರನ್ನು ಶಿಕ್ಷಿಸಬೇಕೆಂದು ಅವರು ಒತ್ತಾಯಿಸುತ್ತಿದ್ದಾರೆ.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ, 2005 (ಎಂಜಿಎನ್ಆರ್ಇಜಿಎ) ಅಡಿಯಲ್ಲಿ ವರ್ಷಕ್ಕೆ 200 ದಿನಗಳ ಉದ್ಯೋಗ ಮತ್ತು ₹700 ದೈನಂದಿನ ಕೂಲಿಯನ್ನು ಕೃಷಿಯೊಂದಿಗೆ ಜೋಡಿಸುವಂತೆ ರೈತರು ಕೇಂದ್ರಸ ಮುಂದೆ ಬೇಡಿಕೆ ಇಟ್ಟಿದ್ದಾರೆ.
ಇದನ್ನೂ ಓದಿ; ಚಲೋ ದೆಹಲಿ ಮೆರವಣಿಗೆ: ರೈತರ ಪ್ರತಿಭಟನೆಗೆ ಪಂಜಾಬ್ ಕಾಂಗ್ರೆಸ್ ಬೆಂಬಲ