Homeಮುಖಪುಟಮಹಾರಾಷ್ಟ್ರ ಕೊರೋನಾ ಪಾಲಿಟಿಕ್ಸ್: ಬಿಜೆಪಿ ಮುಖಂಡರಿಂದ 4.75 ಕೋಟಿ ರೂ. ಮೌಲ್ಯದ ರೆಮ್‌ಡಿಸಿವಿರ್ ಅಕ್ರಮ ಸಂಗ್ರಹ...

ಮಹಾರಾಷ್ಟ್ರ ಕೊರೋನಾ ಪಾಲಿಟಿಕ್ಸ್: ಬಿಜೆಪಿ ಮುಖಂಡರಿಂದ 4.75 ಕೋಟಿ ರೂ. ಮೌಲ್ಯದ ರೆಮ್‌ಡಿಸಿವಿರ್ ಅಕ್ರಮ ಸಂಗ್ರಹ ಆರೋಪ

- Advertisement -
- Advertisement -

ಕೊರೋನಾ ಪೀಡಿತರಿಗೆ ಚಿಕಿತ್ಸೆ ನೀಡುವಾಗ ಬಳಸುವ ರೆಮ್‌ಡಿಸಿವಿರ್ ಔಷಧಿ ಕೊರತೆ ಬಗ್ಗೆ ಎಲ್ಲೆಲ್ಲೂ ದೂರುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಮಹರಾಷ್ಟ್ರ ಬಿಜೆಪಿ ಮುಖಂಡರು 4.75 ಕೋಟಿ ರೂ. ಮೌಲ್ಯದ ರೆಮ್‌ಡಿಸಿವಿರ್ ಅಕ್ರಮ ಸಂಗ್ರಹ ಆರೋಪ ಕೇಳಿಬಂದಿದೆ. ರೆಮ್ಡೆಸಿವಿರ್ ಸುತ್ತ ನಡೆಯುತ್ತಿರುವ ಈ ಗದ್ದಲದಲ್ಲಿ, ಕೊರೋನಾ ವಿಷಯದಲ್ಲೂ ಬಿಜೆಪಿ ರಾಜಕೀಯ ಮಾಡುತ್ತಿದೆಯೇ ಎಂಬ ಪ್ರಶ್ನೆಗಳು ಎದ್ದಿವೆ.

ಶನಿವಾರ ಮುಂಜಾನೆ ಮಹಾರಾಷ್ಟ್ರ ಸಚಿವ ನವಾಬ್ ಮಲೀಕ್ ರಾಜ್ಯಕ್ಕೆ ರೆಮ್‌ಡಿಸಿವಿರ್ ಔಷಧಿಯನ್ನು ಪೂರೈಸಬಾರದು ಎಂದು ಕೇಂದ್ರ ಸರ್ಕಾರ ಮತ್ತು ಬಿಜೆಪಿ ಪೂರೈಕೆದಾರರ ಮೇಲೆ ಒತ್ತಡ ಹಾಕುತ್ತಿದೆ. ಪೂರೈಸಿದರೆ ಲೈಸೆನ್ಸ್ ರದ್ದು ಮಾಡುತ್ತೀವಿ ಎಂದು ಅವರನ್ನು ಬೆದರಿಸಲಾಗುತ್ತಿದೆ’ ಎಂಬ ಗಂಭೀರ ಆರೋಪ ಮಾಡಿದ್ದರು.

ನಂತರ ರೆಮ್‌ಡಿಸಿವಿರ್ ಮಾತ್ರೆಗಳ ಹೆಚ್ಚುವರಿ ಸಂಗ್ರಹವಿದೆ ಎಂದು ಮುಂಬೈ ಪೊಲೀಸರು ಫಾರ್ಮಾ ಕಂಪನಿಯ ನಿರ್ದೇಶಕರೊಬ್ಬರನ್ನು ಪ್ರಶ್ನಿಸಿದಾಗ, ಅಲ್ಲಿಗೆ ಧಾವಿಸಿದ ದೇವೇಂದ್ರ ಫಢ್ನವೀಸ್ ಫಾರ್ಮಾ ಕಂಪನಿ ಪರ ಮಾತಾನಾಡಿ, ನಾವು ಅವನ್ನು ಕೊಳ್ಳಲು ಆರ್ಡರ್ ಕೊಟ್ಟಿ ಎಂದು ಹೇಳಿರುವುದು ಹೊಸ ವಿವಾದ ಹುಟ್ಟುಹಾಕಿದೆ.

“ನಾಲ್ಕು ದಿನಗಳ ಹಿಂದೆ ನಾವು ರೆಮ್‌ಡಿಸಿವಿರ್ ಪೂರೈಸುವಂತೆ ಬ್ರಕ್ ಫಾರ್ಮಾಗೆ ವಿನಂತಿಸಿದ್ದೆವು. ಆದರೆ ಅನುಮತಿ ನೀಡುವವರೆಗೂ ಅವರಿಗೆ ಔಷಧಿ ಪೂರೈಸಲು ಸಾಧ್ಯವಾಗಲಿಲ್ಲ. ನಾನು ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರೊಂದಿಗೆ ಮಾತನಾಡಿದ ನಂತರ ಅನುಮತಿ ಸಿಕ್ಕಿತು” ಎಂದು ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ. ಅಲ್ಲದೆ ರೆಮ್‌ಡಿಸಿವಿರ್ ಪೂರೈಕೆದಾರರಿಗೆ ಮಹಾರಾಷ್ಟ್ರ ಸರ್ಕಾರ ಕಿರುಕುಳ ಕೊಡುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಕುರಿತಾಗಿ ಆರ್‌ಟಿಐ ಕಾರ್ಯಕರ್ತ ಮತ್ತು ಸಾಮಾಜಿಕ ಹೋರಾಟಗಾರ ಸಾಕೇತ್ ಗೋಖಲೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. “ಕಳೆದ ರಾತ್ರಿ ಮುಂಬೈನ ವೈಲ್ ಪಾರ್ಲೆ ಪೊಲೀಸರು ಗುಜರಾತ್ ಫಾರ್ಮಾ ಕಂಪನಿ ಅಕ್ರಮವಾಗಿ ಸಂಗ್ರಹಿಸಿದ್ದ 4.75 ಕೋಟಿ ರೂ. ಮೌಲ್ಯದ ರೆಮ್‌ಡಿಸಿವಿರ್ ಮಾತ್ರೆಗಳನ್ನು ವಶಪಡಿಸಿಕೊಂಡರು. ಥಟ್ಟನೆ ನಟ್ಟನಡುರಾತ್ರಿ ವೈಲ್ ಪಾರ್ಲೆ ಪೊಲೀಸ್ ಸ್ಟೇಷನ್‌ನಲ್ಲಿ ಪ್ರತ್ಯಕ್ಷರಾದ ಮಾಜಿ ಸಿಎಂ ದೇವೇಂದ್ರ ಫಢ್ನವೀಸ್, ‘ಬಿಜೆಪಿ ಈ ಔಷಧಿಗಳನ್ನು ಆರ್ಡರ್ ಮಾಡಿ ದಮನ್ ಮತ್ತು ಗುಜರಾತ್‌ನಿಂದ ತರಿಸಿಕೊಂಡಿದೆ’ ಎನ್ನುತ್ತಾರೆ. ನಂತರವರು ಜನರಿಗೆ ವಿತರಿಸಲು ಆ ಸ್ಟಾಕ್ ಅನ್ನು ಬಿಜೆಪಿ ತರಿಸಿಕೊಂಡಿದೆ ಎಂದು ಸಮರ್ಥಿಸಿಕೊಂಡಿದ್ದಾರೆ” ಎಂದು ಗೋಖಲೆ ಟ್ವೀಟ್ ಮಾಡಿದ್ದಾರೆ.

1. ಸರ್ಕಾರಗಳಿಗಷ್ಟೇ ಮಾರಬೇಕಾದ ರೆಮ್‌ಡಿಸಿವಿರ್ ಅನ್ನು ಫಡ್ನವೀಸ್ ಅವರಂತಹ ಖಾಸಗಿ ವ್ಯಕ್ತಿ, ಗುಜರಾತ್‌ನಿಂದ ಹೇಗೆ ತರಿಸಿಕೊಳ್ಳುತ್ತಾರೆ?
2. ಪೂರೈಕೆದಾರರ ಕುರಿತು ಫಡ್ನವೀಸ್ ರಾಜ್ಯ ಸರ್ಕಾರಕ್ಕೆ ತಿಳಿಸಿ, ಅಧಿಕೃತ ಮಾರ್ಗದಲ್ಲೇ ರಾಜ್ಯ ಸರ್ಕಾರ ಅವನ್ನು ಖರೀದಿಸಲು ಅವಕಾಶವನ್ನೇಕೆ ಮಾಡಿಕೊಡಲಿಲ್ಲ?
3. ತೀವ್ರ ಕೊರತೆ ಇರುವ ಈ ಸಂದರ್ಭದಲ್ಲಿ ಬಿಜೆಪಿ ರೆಮ್‌ಡಿಸಿವಿರ್ ಅನ್ನು ತನ್ನ ಪಾರ್ಟಿ ಆಫೀಸ್‌ನಲ್ಲಿ (ಗುಜರಾತ್‌ನಲ್ಲೂ ಹೀಗೇ ಆಗಿದೆ) ಸ್ಟಾಕ್ ಮಾಡಿದ್ದು ಏಕೆ?
ರಾಜ್ಯ ಸಚಿವ ನವಾಬ್ ಮಲೀಕ್ ನಿನ್ನೆಯಷ್ಟೇ, ರೆಮ್‌ಡಿಸಿವಿರ್ ಪಡೆಯಲು ಕೇಂದ್ರ ಸರ್ಕಾರ ಅಡ್ಡಿ ಮಾಡುತ್ತಿದೆ ಎಂದಿದ್ದಾರೆ. ಆದರೆ ಫಡ್ನವೀಸರ ಬಿಜೆಪಿ ಪಕ್ಷ ಜನರಿಗೆ ವಿತರಿಸಲು ರೆಮ್‌ಡಿಸಿವಿರ್ ಸ್ಟಾಕ್ ಮಾಡಿಕೊಂಡಿದೆ. ಇದು ಪಕ್ಕಾ ಬಿಜೆಪಿ ಪಾಲಿಟಿಕ್ಸ್ ಎಂದಿರುವ ಸಾಕೇತ್ ಗೋಖಲೆ, ಸಂಕಷ್ಟದ ಸಮತದಲ್ಲೂ ಬೇಳೆ ಬೇಯಿಸಿಕೊಳ್ಳುವ ಬಿಜೆಪಿ ರಾಜಕಾರಣವನ್ನು ಟೀಕಿಸಿದ್ದಾರೆ,
ಈ ಬಗ್ಗೆ ಸರಿಯಾದ ತನಿಖೆ ಮಾಡುವಂತೆ ಅವರು ಮಹಾರಾಷ್ಟ್ರ ಗೃಹ ಸಚಿವ, ಆರೋಗ್ಯ ಸಚಿವರಿಗೆ ಪತ್ರ ಬರೆಯಲಿದ್ದಾರೆ.


ಇದನ್ನೂ ಓದಿ: ಮಹಾರಾಷ್ಟ್ರಕ್ಕೆ ರೆಮ್‌ಡಿಸಿವಿರ್ ನೀಡಿದರೆ ಲೈಸನ್ಸ್‌ ರದ್ದು ಮಾಡುತ್ತೇವೆಂದು ಕಂಪನಿಗಳಿಗೆ ಕೇಂದ್ರ ಬೆದರಿಕೆ’: ಮಹಾಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...