Homeಮುಖಪುಟಮಹಾರಾಷ್ಟ್ರ ಕೊರೋನಾ ಪಾಲಿಟಿಕ್ಸ್: ಬಿಜೆಪಿ ಮುಖಂಡರಿಂದ 4.75 ಕೋಟಿ ರೂ. ಮೌಲ್ಯದ ರೆಮ್‌ಡಿಸಿವಿರ್ ಅಕ್ರಮ ಸಂಗ್ರಹ...

ಮಹಾರಾಷ್ಟ್ರ ಕೊರೋನಾ ಪಾಲಿಟಿಕ್ಸ್: ಬಿಜೆಪಿ ಮುಖಂಡರಿಂದ 4.75 ಕೋಟಿ ರೂ. ಮೌಲ್ಯದ ರೆಮ್‌ಡಿಸಿವಿರ್ ಅಕ್ರಮ ಸಂಗ್ರಹ ಆರೋಪ

- Advertisement -
- Advertisement -

ಕೊರೋನಾ ಪೀಡಿತರಿಗೆ ಚಿಕಿತ್ಸೆ ನೀಡುವಾಗ ಬಳಸುವ ರೆಮ್‌ಡಿಸಿವಿರ್ ಔಷಧಿ ಕೊರತೆ ಬಗ್ಗೆ ಎಲ್ಲೆಲ್ಲೂ ದೂರುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಮಹರಾಷ್ಟ್ರ ಬಿಜೆಪಿ ಮುಖಂಡರು 4.75 ಕೋಟಿ ರೂ. ಮೌಲ್ಯದ ರೆಮ್‌ಡಿಸಿವಿರ್ ಅಕ್ರಮ ಸಂಗ್ರಹ ಆರೋಪ ಕೇಳಿಬಂದಿದೆ. ರೆಮ್ಡೆಸಿವಿರ್ ಸುತ್ತ ನಡೆಯುತ್ತಿರುವ ಈ ಗದ್ದಲದಲ್ಲಿ, ಕೊರೋನಾ ವಿಷಯದಲ್ಲೂ ಬಿಜೆಪಿ ರಾಜಕೀಯ ಮಾಡುತ್ತಿದೆಯೇ ಎಂಬ ಪ್ರಶ್ನೆಗಳು ಎದ್ದಿವೆ.

ಶನಿವಾರ ಮುಂಜಾನೆ ಮಹಾರಾಷ್ಟ್ರ ಸಚಿವ ನವಾಬ್ ಮಲೀಕ್ ರಾಜ್ಯಕ್ಕೆ ರೆಮ್‌ಡಿಸಿವಿರ್ ಔಷಧಿಯನ್ನು ಪೂರೈಸಬಾರದು ಎಂದು ಕೇಂದ್ರ ಸರ್ಕಾರ ಮತ್ತು ಬಿಜೆಪಿ ಪೂರೈಕೆದಾರರ ಮೇಲೆ ಒತ್ತಡ ಹಾಕುತ್ತಿದೆ. ಪೂರೈಸಿದರೆ ಲೈಸೆನ್ಸ್ ರದ್ದು ಮಾಡುತ್ತೀವಿ ಎಂದು ಅವರನ್ನು ಬೆದರಿಸಲಾಗುತ್ತಿದೆ’ ಎಂಬ ಗಂಭೀರ ಆರೋಪ ಮಾಡಿದ್ದರು.

ನಂತರ ರೆಮ್‌ಡಿಸಿವಿರ್ ಮಾತ್ರೆಗಳ ಹೆಚ್ಚುವರಿ ಸಂಗ್ರಹವಿದೆ ಎಂದು ಮುಂಬೈ ಪೊಲೀಸರು ಫಾರ್ಮಾ ಕಂಪನಿಯ ನಿರ್ದೇಶಕರೊಬ್ಬರನ್ನು ಪ್ರಶ್ನಿಸಿದಾಗ, ಅಲ್ಲಿಗೆ ಧಾವಿಸಿದ ದೇವೇಂದ್ರ ಫಢ್ನವೀಸ್ ಫಾರ್ಮಾ ಕಂಪನಿ ಪರ ಮಾತಾನಾಡಿ, ನಾವು ಅವನ್ನು ಕೊಳ್ಳಲು ಆರ್ಡರ್ ಕೊಟ್ಟಿ ಎಂದು ಹೇಳಿರುವುದು ಹೊಸ ವಿವಾದ ಹುಟ್ಟುಹಾಕಿದೆ.

“ನಾಲ್ಕು ದಿನಗಳ ಹಿಂದೆ ನಾವು ರೆಮ್‌ಡಿಸಿವಿರ್ ಪೂರೈಸುವಂತೆ ಬ್ರಕ್ ಫಾರ್ಮಾಗೆ ವಿನಂತಿಸಿದ್ದೆವು. ಆದರೆ ಅನುಮತಿ ನೀಡುವವರೆಗೂ ಅವರಿಗೆ ಔಷಧಿ ಪೂರೈಸಲು ಸಾಧ್ಯವಾಗಲಿಲ್ಲ. ನಾನು ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರೊಂದಿಗೆ ಮಾತನಾಡಿದ ನಂತರ ಅನುಮತಿ ಸಿಕ್ಕಿತು” ಎಂದು ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ. ಅಲ್ಲದೆ ರೆಮ್‌ಡಿಸಿವಿರ್ ಪೂರೈಕೆದಾರರಿಗೆ ಮಹಾರಾಷ್ಟ್ರ ಸರ್ಕಾರ ಕಿರುಕುಳ ಕೊಡುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಕುರಿತಾಗಿ ಆರ್‌ಟಿಐ ಕಾರ್ಯಕರ್ತ ಮತ್ತು ಸಾಮಾಜಿಕ ಹೋರಾಟಗಾರ ಸಾಕೇತ್ ಗೋಖಲೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. “ಕಳೆದ ರಾತ್ರಿ ಮುಂಬೈನ ವೈಲ್ ಪಾರ್ಲೆ ಪೊಲೀಸರು ಗುಜರಾತ್ ಫಾರ್ಮಾ ಕಂಪನಿ ಅಕ್ರಮವಾಗಿ ಸಂಗ್ರಹಿಸಿದ್ದ 4.75 ಕೋಟಿ ರೂ. ಮೌಲ್ಯದ ರೆಮ್‌ಡಿಸಿವಿರ್ ಮಾತ್ರೆಗಳನ್ನು ವಶಪಡಿಸಿಕೊಂಡರು. ಥಟ್ಟನೆ ನಟ್ಟನಡುರಾತ್ರಿ ವೈಲ್ ಪಾರ್ಲೆ ಪೊಲೀಸ್ ಸ್ಟೇಷನ್‌ನಲ್ಲಿ ಪ್ರತ್ಯಕ್ಷರಾದ ಮಾಜಿ ಸಿಎಂ ದೇವೇಂದ್ರ ಫಢ್ನವೀಸ್, ‘ಬಿಜೆಪಿ ಈ ಔಷಧಿಗಳನ್ನು ಆರ್ಡರ್ ಮಾಡಿ ದಮನ್ ಮತ್ತು ಗುಜರಾತ್‌ನಿಂದ ತರಿಸಿಕೊಂಡಿದೆ’ ಎನ್ನುತ್ತಾರೆ. ನಂತರವರು ಜನರಿಗೆ ವಿತರಿಸಲು ಆ ಸ್ಟಾಕ್ ಅನ್ನು ಬಿಜೆಪಿ ತರಿಸಿಕೊಂಡಿದೆ ಎಂದು ಸಮರ್ಥಿಸಿಕೊಂಡಿದ್ದಾರೆ” ಎಂದು ಗೋಖಲೆ ಟ್ವೀಟ್ ಮಾಡಿದ್ದಾರೆ.

1. ಸರ್ಕಾರಗಳಿಗಷ್ಟೇ ಮಾರಬೇಕಾದ ರೆಮ್‌ಡಿಸಿವಿರ್ ಅನ್ನು ಫಡ್ನವೀಸ್ ಅವರಂತಹ ಖಾಸಗಿ ವ್ಯಕ್ತಿ, ಗುಜರಾತ್‌ನಿಂದ ಹೇಗೆ ತರಿಸಿಕೊಳ್ಳುತ್ತಾರೆ?
2. ಪೂರೈಕೆದಾರರ ಕುರಿತು ಫಡ್ನವೀಸ್ ರಾಜ್ಯ ಸರ್ಕಾರಕ್ಕೆ ತಿಳಿಸಿ, ಅಧಿಕೃತ ಮಾರ್ಗದಲ್ಲೇ ರಾಜ್ಯ ಸರ್ಕಾರ ಅವನ್ನು ಖರೀದಿಸಲು ಅವಕಾಶವನ್ನೇಕೆ ಮಾಡಿಕೊಡಲಿಲ್ಲ?
3. ತೀವ್ರ ಕೊರತೆ ಇರುವ ಈ ಸಂದರ್ಭದಲ್ಲಿ ಬಿಜೆಪಿ ರೆಮ್‌ಡಿಸಿವಿರ್ ಅನ್ನು ತನ್ನ ಪಾರ್ಟಿ ಆಫೀಸ್‌ನಲ್ಲಿ (ಗುಜರಾತ್‌ನಲ್ಲೂ ಹೀಗೇ ಆಗಿದೆ) ಸ್ಟಾಕ್ ಮಾಡಿದ್ದು ಏಕೆ?
ರಾಜ್ಯ ಸಚಿವ ನವಾಬ್ ಮಲೀಕ್ ನಿನ್ನೆಯಷ್ಟೇ, ರೆಮ್‌ಡಿಸಿವಿರ್ ಪಡೆಯಲು ಕೇಂದ್ರ ಸರ್ಕಾರ ಅಡ್ಡಿ ಮಾಡುತ್ತಿದೆ ಎಂದಿದ್ದಾರೆ. ಆದರೆ ಫಡ್ನವೀಸರ ಬಿಜೆಪಿ ಪಕ್ಷ ಜನರಿಗೆ ವಿತರಿಸಲು ರೆಮ್‌ಡಿಸಿವಿರ್ ಸ್ಟಾಕ್ ಮಾಡಿಕೊಂಡಿದೆ. ಇದು ಪಕ್ಕಾ ಬಿಜೆಪಿ ಪಾಲಿಟಿಕ್ಸ್ ಎಂದಿರುವ ಸಾಕೇತ್ ಗೋಖಲೆ, ಸಂಕಷ್ಟದ ಸಮತದಲ್ಲೂ ಬೇಳೆ ಬೇಯಿಸಿಕೊಳ್ಳುವ ಬಿಜೆಪಿ ರಾಜಕಾರಣವನ್ನು ಟೀಕಿಸಿದ್ದಾರೆ,
ಈ ಬಗ್ಗೆ ಸರಿಯಾದ ತನಿಖೆ ಮಾಡುವಂತೆ ಅವರು ಮಹಾರಾಷ್ಟ್ರ ಗೃಹ ಸಚಿವ, ಆರೋಗ್ಯ ಸಚಿವರಿಗೆ ಪತ್ರ ಬರೆಯಲಿದ್ದಾರೆ.


ಇದನ್ನೂ ಓದಿ: ಮಹಾರಾಷ್ಟ್ರಕ್ಕೆ ರೆಮ್‌ಡಿಸಿವಿರ್ ನೀಡಿದರೆ ಲೈಸನ್ಸ್‌ ರದ್ದು ಮಾಡುತ್ತೇವೆಂದು ಕಂಪನಿಗಳಿಗೆ ಕೇಂದ್ರ ಬೆದರಿಕೆ’: ಮಹಾಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...