Homeಮುಖಪುಟಮಹಾರಾಷ್ಟ್ರ ಕೊರೋನಾ ಪಾಲಿಟಿಕ್ಸ್: ಬಿಜೆಪಿ ಮುಖಂಡರಿಂದ 4.75 ಕೋಟಿ ರೂ. ಮೌಲ್ಯದ ರೆಮ್‌ಡಿಸಿವಿರ್ ಅಕ್ರಮ ಸಂಗ್ರಹ...

ಮಹಾರಾಷ್ಟ್ರ ಕೊರೋನಾ ಪಾಲಿಟಿಕ್ಸ್: ಬಿಜೆಪಿ ಮುಖಂಡರಿಂದ 4.75 ಕೋಟಿ ರೂ. ಮೌಲ್ಯದ ರೆಮ್‌ಡಿಸಿವಿರ್ ಅಕ್ರಮ ಸಂಗ್ರಹ ಆರೋಪ

- Advertisement -
- Advertisement -

ಕೊರೋನಾ ಪೀಡಿತರಿಗೆ ಚಿಕಿತ್ಸೆ ನೀಡುವಾಗ ಬಳಸುವ ರೆಮ್‌ಡಿಸಿವಿರ್ ಔಷಧಿ ಕೊರತೆ ಬಗ್ಗೆ ಎಲ್ಲೆಲ್ಲೂ ದೂರುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಮಹರಾಷ್ಟ್ರ ಬಿಜೆಪಿ ಮುಖಂಡರು 4.75 ಕೋಟಿ ರೂ. ಮೌಲ್ಯದ ರೆಮ್‌ಡಿಸಿವಿರ್ ಅಕ್ರಮ ಸಂಗ್ರಹ ಆರೋಪ ಕೇಳಿಬಂದಿದೆ. ರೆಮ್ಡೆಸಿವಿರ್ ಸುತ್ತ ನಡೆಯುತ್ತಿರುವ ಈ ಗದ್ದಲದಲ್ಲಿ, ಕೊರೋನಾ ವಿಷಯದಲ್ಲೂ ಬಿಜೆಪಿ ರಾಜಕೀಯ ಮಾಡುತ್ತಿದೆಯೇ ಎಂಬ ಪ್ರಶ್ನೆಗಳು ಎದ್ದಿವೆ.

ಶನಿವಾರ ಮುಂಜಾನೆ ಮಹಾರಾಷ್ಟ್ರ ಸಚಿವ ನವಾಬ್ ಮಲೀಕ್ ರಾಜ್ಯಕ್ಕೆ ರೆಮ್‌ಡಿಸಿವಿರ್ ಔಷಧಿಯನ್ನು ಪೂರೈಸಬಾರದು ಎಂದು ಕೇಂದ್ರ ಸರ್ಕಾರ ಮತ್ತು ಬಿಜೆಪಿ ಪೂರೈಕೆದಾರರ ಮೇಲೆ ಒತ್ತಡ ಹಾಕುತ್ತಿದೆ. ಪೂರೈಸಿದರೆ ಲೈಸೆನ್ಸ್ ರದ್ದು ಮಾಡುತ್ತೀವಿ ಎಂದು ಅವರನ್ನು ಬೆದರಿಸಲಾಗುತ್ತಿದೆ’ ಎಂಬ ಗಂಭೀರ ಆರೋಪ ಮಾಡಿದ್ದರು.

ನಂತರ ರೆಮ್‌ಡಿಸಿವಿರ್ ಮಾತ್ರೆಗಳ ಹೆಚ್ಚುವರಿ ಸಂಗ್ರಹವಿದೆ ಎಂದು ಮುಂಬೈ ಪೊಲೀಸರು ಫಾರ್ಮಾ ಕಂಪನಿಯ ನಿರ್ದೇಶಕರೊಬ್ಬರನ್ನು ಪ್ರಶ್ನಿಸಿದಾಗ, ಅಲ್ಲಿಗೆ ಧಾವಿಸಿದ ದೇವೇಂದ್ರ ಫಢ್ನವೀಸ್ ಫಾರ್ಮಾ ಕಂಪನಿ ಪರ ಮಾತಾನಾಡಿ, ನಾವು ಅವನ್ನು ಕೊಳ್ಳಲು ಆರ್ಡರ್ ಕೊಟ್ಟಿ ಎಂದು ಹೇಳಿರುವುದು ಹೊಸ ವಿವಾದ ಹುಟ್ಟುಹಾಕಿದೆ.

“ನಾಲ್ಕು ದಿನಗಳ ಹಿಂದೆ ನಾವು ರೆಮ್‌ಡಿಸಿವಿರ್ ಪೂರೈಸುವಂತೆ ಬ್ರಕ್ ಫಾರ್ಮಾಗೆ ವಿನಂತಿಸಿದ್ದೆವು. ಆದರೆ ಅನುಮತಿ ನೀಡುವವರೆಗೂ ಅವರಿಗೆ ಔಷಧಿ ಪೂರೈಸಲು ಸಾಧ್ಯವಾಗಲಿಲ್ಲ. ನಾನು ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರೊಂದಿಗೆ ಮಾತನಾಡಿದ ನಂತರ ಅನುಮತಿ ಸಿಕ್ಕಿತು” ಎಂದು ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ. ಅಲ್ಲದೆ ರೆಮ್‌ಡಿಸಿವಿರ್ ಪೂರೈಕೆದಾರರಿಗೆ ಮಹಾರಾಷ್ಟ್ರ ಸರ್ಕಾರ ಕಿರುಕುಳ ಕೊಡುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಕುರಿತಾಗಿ ಆರ್‌ಟಿಐ ಕಾರ್ಯಕರ್ತ ಮತ್ತು ಸಾಮಾಜಿಕ ಹೋರಾಟಗಾರ ಸಾಕೇತ್ ಗೋಖಲೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. “ಕಳೆದ ರಾತ್ರಿ ಮುಂಬೈನ ವೈಲ್ ಪಾರ್ಲೆ ಪೊಲೀಸರು ಗುಜರಾತ್ ಫಾರ್ಮಾ ಕಂಪನಿ ಅಕ್ರಮವಾಗಿ ಸಂಗ್ರಹಿಸಿದ್ದ 4.75 ಕೋಟಿ ರೂ. ಮೌಲ್ಯದ ರೆಮ್‌ಡಿಸಿವಿರ್ ಮಾತ್ರೆಗಳನ್ನು ವಶಪಡಿಸಿಕೊಂಡರು. ಥಟ್ಟನೆ ನಟ್ಟನಡುರಾತ್ರಿ ವೈಲ್ ಪಾರ್ಲೆ ಪೊಲೀಸ್ ಸ್ಟೇಷನ್‌ನಲ್ಲಿ ಪ್ರತ್ಯಕ್ಷರಾದ ಮಾಜಿ ಸಿಎಂ ದೇವೇಂದ್ರ ಫಢ್ನವೀಸ್, ‘ಬಿಜೆಪಿ ಈ ಔಷಧಿಗಳನ್ನು ಆರ್ಡರ್ ಮಾಡಿ ದಮನ್ ಮತ್ತು ಗುಜರಾತ್‌ನಿಂದ ತರಿಸಿಕೊಂಡಿದೆ’ ಎನ್ನುತ್ತಾರೆ. ನಂತರವರು ಜನರಿಗೆ ವಿತರಿಸಲು ಆ ಸ್ಟಾಕ್ ಅನ್ನು ಬಿಜೆಪಿ ತರಿಸಿಕೊಂಡಿದೆ ಎಂದು ಸಮರ್ಥಿಸಿಕೊಂಡಿದ್ದಾರೆ” ಎಂದು ಗೋಖಲೆ ಟ್ವೀಟ್ ಮಾಡಿದ್ದಾರೆ.

1. ಸರ್ಕಾರಗಳಿಗಷ್ಟೇ ಮಾರಬೇಕಾದ ರೆಮ್‌ಡಿಸಿವಿರ್ ಅನ್ನು ಫಡ್ನವೀಸ್ ಅವರಂತಹ ಖಾಸಗಿ ವ್ಯಕ್ತಿ, ಗುಜರಾತ್‌ನಿಂದ ಹೇಗೆ ತರಿಸಿಕೊಳ್ಳುತ್ತಾರೆ?
2. ಪೂರೈಕೆದಾರರ ಕುರಿತು ಫಡ್ನವೀಸ್ ರಾಜ್ಯ ಸರ್ಕಾರಕ್ಕೆ ತಿಳಿಸಿ, ಅಧಿಕೃತ ಮಾರ್ಗದಲ್ಲೇ ರಾಜ್ಯ ಸರ್ಕಾರ ಅವನ್ನು ಖರೀದಿಸಲು ಅವಕಾಶವನ್ನೇಕೆ ಮಾಡಿಕೊಡಲಿಲ್ಲ?
3. ತೀವ್ರ ಕೊರತೆ ಇರುವ ಈ ಸಂದರ್ಭದಲ್ಲಿ ಬಿಜೆಪಿ ರೆಮ್‌ಡಿಸಿವಿರ್ ಅನ್ನು ತನ್ನ ಪಾರ್ಟಿ ಆಫೀಸ್‌ನಲ್ಲಿ (ಗುಜರಾತ್‌ನಲ್ಲೂ ಹೀಗೇ ಆಗಿದೆ) ಸ್ಟಾಕ್ ಮಾಡಿದ್ದು ಏಕೆ?
ರಾಜ್ಯ ಸಚಿವ ನವಾಬ್ ಮಲೀಕ್ ನಿನ್ನೆಯಷ್ಟೇ, ರೆಮ್‌ಡಿಸಿವಿರ್ ಪಡೆಯಲು ಕೇಂದ್ರ ಸರ್ಕಾರ ಅಡ್ಡಿ ಮಾಡುತ್ತಿದೆ ಎಂದಿದ್ದಾರೆ. ಆದರೆ ಫಡ್ನವೀಸರ ಬಿಜೆಪಿ ಪಕ್ಷ ಜನರಿಗೆ ವಿತರಿಸಲು ರೆಮ್‌ಡಿಸಿವಿರ್ ಸ್ಟಾಕ್ ಮಾಡಿಕೊಂಡಿದೆ. ಇದು ಪಕ್ಕಾ ಬಿಜೆಪಿ ಪಾಲಿಟಿಕ್ಸ್ ಎಂದಿರುವ ಸಾಕೇತ್ ಗೋಖಲೆ, ಸಂಕಷ್ಟದ ಸಮತದಲ್ಲೂ ಬೇಳೆ ಬೇಯಿಸಿಕೊಳ್ಳುವ ಬಿಜೆಪಿ ರಾಜಕಾರಣವನ್ನು ಟೀಕಿಸಿದ್ದಾರೆ,
ಈ ಬಗ್ಗೆ ಸರಿಯಾದ ತನಿಖೆ ಮಾಡುವಂತೆ ಅವರು ಮಹಾರಾಷ್ಟ್ರ ಗೃಹ ಸಚಿವ, ಆರೋಗ್ಯ ಸಚಿವರಿಗೆ ಪತ್ರ ಬರೆಯಲಿದ್ದಾರೆ.


ಇದನ್ನೂ ಓದಿ: ಮಹಾರಾಷ್ಟ್ರಕ್ಕೆ ರೆಮ್‌ಡಿಸಿವಿರ್ ನೀಡಿದರೆ ಲೈಸನ್ಸ್‌ ರದ್ದು ಮಾಡುತ್ತೇವೆಂದು ಕಂಪನಿಗಳಿಗೆ ಕೇಂದ್ರ ಬೆದರಿಕೆ’: ಮಹಾಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...