Homeಮುಖಪುಟಮಹಾರಾಷ್ಟ್ರ ಕೊರೋನಾ ಪಾಲಿಟಿಕ್ಸ್: ಬಿಜೆಪಿ ಮುಖಂಡರಿಂದ 4.75 ಕೋಟಿ ರೂ. ಮೌಲ್ಯದ ರೆಮ್‌ಡಿಸಿವಿರ್ ಅಕ್ರಮ ಸಂಗ್ರಹ...

ಮಹಾರಾಷ್ಟ್ರ ಕೊರೋನಾ ಪಾಲಿಟಿಕ್ಸ್: ಬಿಜೆಪಿ ಮುಖಂಡರಿಂದ 4.75 ಕೋಟಿ ರೂ. ಮೌಲ್ಯದ ರೆಮ್‌ಡಿಸಿವಿರ್ ಅಕ್ರಮ ಸಂಗ್ರಹ ಆರೋಪ

- Advertisement -
- Advertisement -

ಕೊರೋನಾ ಪೀಡಿತರಿಗೆ ಚಿಕಿತ್ಸೆ ನೀಡುವಾಗ ಬಳಸುವ ರೆಮ್‌ಡಿಸಿವಿರ್ ಔಷಧಿ ಕೊರತೆ ಬಗ್ಗೆ ಎಲ್ಲೆಲ್ಲೂ ದೂರುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಮಹರಾಷ್ಟ್ರ ಬಿಜೆಪಿ ಮುಖಂಡರು 4.75 ಕೋಟಿ ರೂ. ಮೌಲ್ಯದ ರೆಮ್‌ಡಿಸಿವಿರ್ ಅಕ್ರಮ ಸಂಗ್ರಹ ಆರೋಪ ಕೇಳಿಬಂದಿದೆ. ರೆಮ್ಡೆಸಿವಿರ್ ಸುತ್ತ ನಡೆಯುತ್ತಿರುವ ಈ ಗದ್ದಲದಲ್ಲಿ, ಕೊರೋನಾ ವಿಷಯದಲ್ಲೂ ಬಿಜೆಪಿ ರಾಜಕೀಯ ಮಾಡುತ್ತಿದೆಯೇ ಎಂಬ ಪ್ರಶ್ನೆಗಳು ಎದ್ದಿವೆ.

ಶನಿವಾರ ಮುಂಜಾನೆ ಮಹಾರಾಷ್ಟ್ರ ಸಚಿವ ನವಾಬ್ ಮಲೀಕ್ ರಾಜ್ಯಕ್ಕೆ ರೆಮ್‌ಡಿಸಿವಿರ್ ಔಷಧಿಯನ್ನು ಪೂರೈಸಬಾರದು ಎಂದು ಕೇಂದ್ರ ಸರ್ಕಾರ ಮತ್ತು ಬಿಜೆಪಿ ಪೂರೈಕೆದಾರರ ಮೇಲೆ ಒತ್ತಡ ಹಾಕುತ್ತಿದೆ. ಪೂರೈಸಿದರೆ ಲೈಸೆನ್ಸ್ ರದ್ದು ಮಾಡುತ್ತೀವಿ ಎಂದು ಅವರನ್ನು ಬೆದರಿಸಲಾಗುತ್ತಿದೆ’ ಎಂಬ ಗಂಭೀರ ಆರೋಪ ಮಾಡಿದ್ದರು.

ನಂತರ ರೆಮ್‌ಡಿಸಿವಿರ್ ಮಾತ್ರೆಗಳ ಹೆಚ್ಚುವರಿ ಸಂಗ್ರಹವಿದೆ ಎಂದು ಮುಂಬೈ ಪೊಲೀಸರು ಫಾರ್ಮಾ ಕಂಪನಿಯ ನಿರ್ದೇಶಕರೊಬ್ಬರನ್ನು ಪ್ರಶ್ನಿಸಿದಾಗ, ಅಲ್ಲಿಗೆ ಧಾವಿಸಿದ ದೇವೇಂದ್ರ ಫಢ್ನವೀಸ್ ಫಾರ್ಮಾ ಕಂಪನಿ ಪರ ಮಾತಾನಾಡಿ, ನಾವು ಅವನ್ನು ಕೊಳ್ಳಲು ಆರ್ಡರ್ ಕೊಟ್ಟಿ ಎಂದು ಹೇಳಿರುವುದು ಹೊಸ ವಿವಾದ ಹುಟ್ಟುಹಾಕಿದೆ.

“ನಾಲ್ಕು ದಿನಗಳ ಹಿಂದೆ ನಾವು ರೆಮ್‌ಡಿಸಿವಿರ್ ಪೂರೈಸುವಂತೆ ಬ್ರಕ್ ಫಾರ್ಮಾಗೆ ವಿನಂತಿಸಿದ್ದೆವು. ಆದರೆ ಅನುಮತಿ ನೀಡುವವರೆಗೂ ಅವರಿಗೆ ಔಷಧಿ ಪೂರೈಸಲು ಸಾಧ್ಯವಾಗಲಿಲ್ಲ. ನಾನು ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರೊಂದಿಗೆ ಮಾತನಾಡಿದ ನಂತರ ಅನುಮತಿ ಸಿಕ್ಕಿತು” ಎಂದು ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ. ಅಲ್ಲದೆ ರೆಮ್‌ಡಿಸಿವಿರ್ ಪೂರೈಕೆದಾರರಿಗೆ ಮಹಾರಾಷ್ಟ್ರ ಸರ್ಕಾರ ಕಿರುಕುಳ ಕೊಡುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಕುರಿತಾಗಿ ಆರ್‌ಟಿಐ ಕಾರ್ಯಕರ್ತ ಮತ್ತು ಸಾಮಾಜಿಕ ಹೋರಾಟಗಾರ ಸಾಕೇತ್ ಗೋಖಲೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. “ಕಳೆದ ರಾತ್ರಿ ಮುಂಬೈನ ವೈಲ್ ಪಾರ್ಲೆ ಪೊಲೀಸರು ಗುಜರಾತ್ ಫಾರ್ಮಾ ಕಂಪನಿ ಅಕ್ರಮವಾಗಿ ಸಂಗ್ರಹಿಸಿದ್ದ 4.75 ಕೋಟಿ ರೂ. ಮೌಲ್ಯದ ರೆಮ್‌ಡಿಸಿವಿರ್ ಮಾತ್ರೆಗಳನ್ನು ವಶಪಡಿಸಿಕೊಂಡರು. ಥಟ್ಟನೆ ನಟ್ಟನಡುರಾತ್ರಿ ವೈಲ್ ಪಾರ್ಲೆ ಪೊಲೀಸ್ ಸ್ಟೇಷನ್‌ನಲ್ಲಿ ಪ್ರತ್ಯಕ್ಷರಾದ ಮಾಜಿ ಸಿಎಂ ದೇವೇಂದ್ರ ಫಢ್ನವೀಸ್, ‘ಬಿಜೆಪಿ ಈ ಔಷಧಿಗಳನ್ನು ಆರ್ಡರ್ ಮಾಡಿ ದಮನ್ ಮತ್ತು ಗುಜರಾತ್‌ನಿಂದ ತರಿಸಿಕೊಂಡಿದೆ’ ಎನ್ನುತ್ತಾರೆ. ನಂತರವರು ಜನರಿಗೆ ವಿತರಿಸಲು ಆ ಸ್ಟಾಕ್ ಅನ್ನು ಬಿಜೆಪಿ ತರಿಸಿಕೊಂಡಿದೆ ಎಂದು ಸಮರ್ಥಿಸಿಕೊಂಡಿದ್ದಾರೆ” ಎಂದು ಗೋಖಲೆ ಟ್ವೀಟ್ ಮಾಡಿದ್ದಾರೆ.

1. ಸರ್ಕಾರಗಳಿಗಷ್ಟೇ ಮಾರಬೇಕಾದ ರೆಮ್‌ಡಿಸಿವಿರ್ ಅನ್ನು ಫಡ್ನವೀಸ್ ಅವರಂತಹ ಖಾಸಗಿ ವ್ಯಕ್ತಿ, ಗುಜರಾತ್‌ನಿಂದ ಹೇಗೆ ತರಿಸಿಕೊಳ್ಳುತ್ತಾರೆ?
2. ಪೂರೈಕೆದಾರರ ಕುರಿತು ಫಡ್ನವೀಸ್ ರಾಜ್ಯ ಸರ್ಕಾರಕ್ಕೆ ತಿಳಿಸಿ, ಅಧಿಕೃತ ಮಾರ್ಗದಲ್ಲೇ ರಾಜ್ಯ ಸರ್ಕಾರ ಅವನ್ನು ಖರೀದಿಸಲು ಅವಕಾಶವನ್ನೇಕೆ ಮಾಡಿಕೊಡಲಿಲ್ಲ?
3. ತೀವ್ರ ಕೊರತೆ ಇರುವ ಈ ಸಂದರ್ಭದಲ್ಲಿ ಬಿಜೆಪಿ ರೆಮ್‌ಡಿಸಿವಿರ್ ಅನ್ನು ತನ್ನ ಪಾರ್ಟಿ ಆಫೀಸ್‌ನಲ್ಲಿ (ಗುಜರಾತ್‌ನಲ್ಲೂ ಹೀಗೇ ಆಗಿದೆ) ಸ್ಟಾಕ್ ಮಾಡಿದ್ದು ಏಕೆ?
ರಾಜ್ಯ ಸಚಿವ ನವಾಬ್ ಮಲೀಕ್ ನಿನ್ನೆಯಷ್ಟೇ, ರೆಮ್‌ಡಿಸಿವಿರ್ ಪಡೆಯಲು ಕೇಂದ್ರ ಸರ್ಕಾರ ಅಡ್ಡಿ ಮಾಡುತ್ತಿದೆ ಎಂದಿದ್ದಾರೆ. ಆದರೆ ಫಡ್ನವೀಸರ ಬಿಜೆಪಿ ಪಕ್ಷ ಜನರಿಗೆ ವಿತರಿಸಲು ರೆಮ್‌ಡಿಸಿವಿರ್ ಸ್ಟಾಕ್ ಮಾಡಿಕೊಂಡಿದೆ. ಇದು ಪಕ್ಕಾ ಬಿಜೆಪಿ ಪಾಲಿಟಿಕ್ಸ್ ಎಂದಿರುವ ಸಾಕೇತ್ ಗೋಖಲೆ, ಸಂಕಷ್ಟದ ಸಮತದಲ್ಲೂ ಬೇಳೆ ಬೇಯಿಸಿಕೊಳ್ಳುವ ಬಿಜೆಪಿ ರಾಜಕಾರಣವನ್ನು ಟೀಕಿಸಿದ್ದಾರೆ,
ಈ ಬಗ್ಗೆ ಸರಿಯಾದ ತನಿಖೆ ಮಾಡುವಂತೆ ಅವರು ಮಹಾರಾಷ್ಟ್ರ ಗೃಹ ಸಚಿವ, ಆರೋಗ್ಯ ಸಚಿವರಿಗೆ ಪತ್ರ ಬರೆಯಲಿದ್ದಾರೆ.


ಇದನ್ನೂ ಓದಿ: ಮಹಾರಾಷ್ಟ್ರಕ್ಕೆ ರೆಮ್‌ಡಿಸಿವಿರ್ ನೀಡಿದರೆ ಲೈಸನ್ಸ್‌ ರದ್ದು ಮಾಡುತ್ತೇವೆಂದು ಕಂಪನಿಗಳಿಗೆ ಕೇಂದ್ರ ಬೆದರಿಕೆ’: ಮಹಾಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...