Homeಮುಖಪುಟಮಹಾರಾಷ್ಟ್ರ ಕೊರೋನಾ ಪಾಲಿಟಿಕ್ಸ್: ಬಿಜೆಪಿ ಮುಖಂಡರಿಂದ 4.75 ಕೋಟಿ ರೂ. ಮೌಲ್ಯದ ರೆಮ್‌ಡಿಸಿವಿರ್ ಅಕ್ರಮ ಸಂಗ್ರಹ...

ಮಹಾರಾಷ್ಟ್ರ ಕೊರೋನಾ ಪಾಲಿಟಿಕ್ಸ್: ಬಿಜೆಪಿ ಮುಖಂಡರಿಂದ 4.75 ಕೋಟಿ ರೂ. ಮೌಲ್ಯದ ರೆಮ್‌ಡಿಸಿವಿರ್ ಅಕ್ರಮ ಸಂಗ್ರಹ ಆರೋಪ

- Advertisement -
- Advertisement -

ಕೊರೋನಾ ಪೀಡಿತರಿಗೆ ಚಿಕಿತ್ಸೆ ನೀಡುವಾಗ ಬಳಸುವ ರೆಮ್‌ಡಿಸಿವಿರ್ ಔಷಧಿ ಕೊರತೆ ಬಗ್ಗೆ ಎಲ್ಲೆಲ್ಲೂ ದೂರುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಮಹರಾಷ್ಟ್ರ ಬಿಜೆಪಿ ಮುಖಂಡರು 4.75 ಕೋಟಿ ರೂ. ಮೌಲ್ಯದ ರೆಮ್‌ಡಿಸಿವಿರ್ ಅಕ್ರಮ ಸಂಗ್ರಹ ಆರೋಪ ಕೇಳಿಬಂದಿದೆ. ರೆಮ್ಡೆಸಿವಿರ್ ಸುತ್ತ ನಡೆಯುತ್ತಿರುವ ಈ ಗದ್ದಲದಲ್ಲಿ, ಕೊರೋನಾ ವಿಷಯದಲ್ಲೂ ಬಿಜೆಪಿ ರಾಜಕೀಯ ಮಾಡುತ್ತಿದೆಯೇ ಎಂಬ ಪ್ರಶ್ನೆಗಳು ಎದ್ದಿವೆ.

ಶನಿವಾರ ಮುಂಜಾನೆ ಮಹಾರಾಷ್ಟ್ರ ಸಚಿವ ನವಾಬ್ ಮಲೀಕ್ ರಾಜ್ಯಕ್ಕೆ ರೆಮ್‌ಡಿಸಿವಿರ್ ಔಷಧಿಯನ್ನು ಪೂರೈಸಬಾರದು ಎಂದು ಕೇಂದ್ರ ಸರ್ಕಾರ ಮತ್ತು ಬಿಜೆಪಿ ಪೂರೈಕೆದಾರರ ಮೇಲೆ ಒತ್ತಡ ಹಾಕುತ್ತಿದೆ. ಪೂರೈಸಿದರೆ ಲೈಸೆನ್ಸ್ ರದ್ದು ಮಾಡುತ್ತೀವಿ ಎಂದು ಅವರನ್ನು ಬೆದರಿಸಲಾಗುತ್ತಿದೆ’ ಎಂಬ ಗಂಭೀರ ಆರೋಪ ಮಾಡಿದ್ದರು.

ನಂತರ ರೆಮ್‌ಡಿಸಿವಿರ್ ಮಾತ್ರೆಗಳ ಹೆಚ್ಚುವರಿ ಸಂಗ್ರಹವಿದೆ ಎಂದು ಮುಂಬೈ ಪೊಲೀಸರು ಫಾರ್ಮಾ ಕಂಪನಿಯ ನಿರ್ದೇಶಕರೊಬ್ಬರನ್ನು ಪ್ರಶ್ನಿಸಿದಾಗ, ಅಲ್ಲಿಗೆ ಧಾವಿಸಿದ ದೇವೇಂದ್ರ ಫಢ್ನವೀಸ್ ಫಾರ್ಮಾ ಕಂಪನಿ ಪರ ಮಾತಾನಾಡಿ, ನಾವು ಅವನ್ನು ಕೊಳ್ಳಲು ಆರ್ಡರ್ ಕೊಟ್ಟಿ ಎಂದು ಹೇಳಿರುವುದು ಹೊಸ ವಿವಾದ ಹುಟ್ಟುಹಾಕಿದೆ.

“ನಾಲ್ಕು ದಿನಗಳ ಹಿಂದೆ ನಾವು ರೆಮ್‌ಡಿಸಿವಿರ್ ಪೂರೈಸುವಂತೆ ಬ್ರಕ್ ಫಾರ್ಮಾಗೆ ವಿನಂತಿಸಿದ್ದೆವು. ಆದರೆ ಅನುಮತಿ ನೀಡುವವರೆಗೂ ಅವರಿಗೆ ಔಷಧಿ ಪೂರೈಸಲು ಸಾಧ್ಯವಾಗಲಿಲ್ಲ. ನಾನು ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರೊಂದಿಗೆ ಮಾತನಾಡಿದ ನಂತರ ಅನುಮತಿ ಸಿಕ್ಕಿತು” ಎಂದು ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ. ಅಲ್ಲದೆ ರೆಮ್‌ಡಿಸಿವಿರ್ ಪೂರೈಕೆದಾರರಿಗೆ ಮಹಾರಾಷ್ಟ್ರ ಸರ್ಕಾರ ಕಿರುಕುಳ ಕೊಡುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಕುರಿತಾಗಿ ಆರ್‌ಟಿಐ ಕಾರ್ಯಕರ್ತ ಮತ್ತು ಸಾಮಾಜಿಕ ಹೋರಾಟಗಾರ ಸಾಕೇತ್ ಗೋಖಲೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. “ಕಳೆದ ರಾತ್ರಿ ಮುಂಬೈನ ವೈಲ್ ಪಾರ್ಲೆ ಪೊಲೀಸರು ಗುಜರಾತ್ ಫಾರ್ಮಾ ಕಂಪನಿ ಅಕ್ರಮವಾಗಿ ಸಂಗ್ರಹಿಸಿದ್ದ 4.75 ಕೋಟಿ ರೂ. ಮೌಲ್ಯದ ರೆಮ್‌ಡಿಸಿವಿರ್ ಮಾತ್ರೆಗಳನ್ನು ವಶಪಡಿಸಿಕೊಂಡರು. ಥಟ್ಟನೆ ನಟ್ಟನಡುರಾತ್ರಿ ವೈಲ್ ಪಾರ್ಲೆ ಪೊಲೀಸ್ ಸ್ಟೇಷನ್‌ನಲ್ಲಿ ಪ್ರತ್ಯಕ್ಷರಾದ ಮಾಜಿ ಸಿಎಂ ದೇವೇಂದ್ರ ಫಢ್ನವೀಸ್, ‘ಬಿಜೆಪಿ ಈ ಔಷಧಿಗಳನ್ನು ಆರ್ಡರ್ ಮಾಡಿ ದಮನ್ ಮತ್ತು ಗುಜರಾತ್‌ನಿಂದ ತರಿಸಿಕೊಂಡಿದೆ’ ಎನ್ನುತ್ತಾರೆ. ನಂತರವರು ಜನರಿಗೆ ವಿತರಿಸಲು ಆ ಸ್ಟಾಕ್ ಅನ್ನು ಬಿಜೆಪಿ ತರಿಸಿಕೊಂಡಿದೆ ಎಂದು ಸಮರ್ಥಿಸಿಕೊಂಡಿದ್ದಾರೆ” ಎಂದು ಗೋಖಲೆ ಟ್ವೀಟ್ ಮಾಡಿದ್ದಾರೆ.

1. ಸರ್ಕಾರಗಳಿಗಷ್ಟೇ ಮಾರಬೇಕಾದ ರೆಮ್‌ಡಿಸಿವಿರ್ ಅನ್ನು ಫಡ್ನವೀಸ್ ಅವರಂತಹ ಖಾಸಗಿ ವ್ಯಕ್ತಿ, ಗುಜರಾತ್‌ನಿಂದ ಹೇಗೆ ತರಿಸಿಕೊಳ್ಳುತ್ತಾರೆ?
2. ಪೂರೈಕೆದಾರರ ಕುರಿತು ಫಡ್ನವೀಸ್ ರಾಜ್ಯ ಸರ್ಕಾರಕ್ಕೆ ತಿಳಿಸಿ, ಅಧಿಕೃತ ಮಾರ್ಗದಲ್ಲೇ ರಾಜ್ಯ ಸರ್ಕಾರ ಅವನ್ನು ಖರೀದಿಸಲು ಅವಕಾಶವನ್ನೇಕೆ ಮಾಡಿಕೊಡಲಿಲ್ಲ?
3. ತೀವ್ರ ಕೊರತೆ ಇರುವ ಈ ಸಂದರ್ಭದಲ್ಲಿ ಬಿಜೆಪಿ ರೆಮ್‌ಡಿಸಿವಿರ್ ಅನ್ನು ತನ್ನ ಪಾರ್ಟಿ ಆಫೀಸ್‌ನಲ್ಲಿ (ಗುಜರಾತ್‌ನಲ್ಲೂ ಹೀಗೇ ಆಗಿದೆ) ಸ್ಟಾಕ್ ಮಾಡಿದ್ದು ಏಕೆ?
ರಾಜ್ಯ ಸಚಿವ ನವಾಬ್ ಮಲೀಕ್ ನಿನ್ನೆಯಷ್ಟೇ, ರೆಮ್‌ಡಿಸಿವಿರ್ ಪಡೆಯಲು ಕೇಂದ್ರ ಸರ್ಕಾರ ಅಡ್ಡಿ ಮಾಡುತ್ತಿದೆ ಎಂದಿದ್ದಾರೆ. ಆದರೆ ಫಡ್ನವೀಸರ ಬಿಜೆಪಿ ಪಕ್ಷ ಜನರಿಗೆ ವಿತರಿಸಲು ರೆಮ್‌ಡಿಸಿವಿರ್ ಸ್ಟಾಕ್ ಮಾಡಿಕೊಂಡಿದೆ. ಇದು ಪಕ್ಕಾ ಬಿಜೆಪಿ ಪಾಲಿಟಿಕ್ಸ್ ಎಂದಿರುವ ಸಾಕೇತ್ ಗೋಖಲೆ, ಸಂಕಷ್ಟದ ಸಮತದಲ್ಲೂ ಬೇಳೆ ಬೇಯಿಸಿಕೊಳ್ಳುವ ಬಿಜೆಪಿ ರಾಜಕಾರಣವನ್ನು ಟೀಕಿಸಿದ್ದಾರೆ,
ಈ ಬಗ್ಗೆ ಸರಿಯಾದ ತನಿಖೆ ಮಾಡುವಂತೆ ಅವರು ಮಹಾರಾಷ್ಟ್ರ ಗೃಹ ಸಚಿವ, ಆರೋಗ್ಯ ಸಚಿವರಿಗೆ ಪತ್ರ ಬರೆಯಲಿದ್ದಾರೆ.


ಇದನ್ನೂ ಓದಿ: ಮಹಾರಾಷ್ಟ್ರಕ್ಕೆ ರೆಮ್‌ಡಿಸಿವಿರ್ ನೀಡಿದರೆ ಲೈಸನ್ಸ್‌ ರದ್ದು ಮಾಡುತ್ತೇವೆಂದು ಕಂಪನಿಗಳಿಗೆ ಕೇಂದ್ರ ಬೆದರಿಕೆ’: ಮಹಾಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...