Homeಕರ್ನಾಟಕಕರಾವಳಿ: ಬಿಜೆಪಿ ಬೆನ್ನಿಗೇ ಬಂದು ನಿಂತಿದೆ ಕಾಂಗ್ರೆಸ್!

ಕರಾವಳಿ: ಬಿಜೆಪಿ ಬೆನ್ನಿಗೇ ಬಂದು ನಿಂತಿದೆ ಕಾಂಗ್ರೆಸ್!

- Advertisement -
- Advertisement -

ಕರಾವಳಿಯ ತ್ರಿವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮುಗಿದ ಎಂಜಿಪಿ(ಮೆಂಬರ್ ಆಫ್ ಗ್ರಾಮ್ ಪಂಚಾಯತ್) ಚುನಾವಣಾ ರಣಕೇಕೆ ಎಂಪಿ(ಮೆಂಬರ್ ಆಫ್ ಪಾರ್ಲಿಮೆಂಟ್) ಚುನಾವಣೆಗಿಂತ ಒಂದು ಗುಂಜಿ ಹೆಚ್ಚೇ ಇತ್ತೆಂದು ಚುನಾವಣಾ ಪಂಡಿತರು ವಿಶ್ಲೇಷಿಸುತ್ತಿದ್ದಾರೆ. ಗ್ರಾಪಂ ಎಲೆಕ್ಷನ್‌ನಲ್ಲಿ ಪಕ್ಷಗಳ ಸಿಂಬಲ್ ಮೇಲೆ ಪೈಪೋಟಿಗೆ ಅವಕಾಶವಿಲ್ಲ. ಆದರೆ ಬಿಟ್ಟೆನೆಂದರೂ ಬಿಡದು ನಿನ್ನ ಮಾಯೆ ಎಂಬಂತೆ ಹಳ್ಳಿ ಜಿದ್ದಾಜಿದ್ದಿಯಲ್ಲಿ ಪಕ್ಷ ರಾಜಕೀಯದ ಅಮಲು-ಘಮಲಿನ ಅಂಡರ್‌ಕರೆಂಟ್ ಹರಿದಾಡಿತ್ತು! ಬಿಜೆಪಿಯ ಧರ್ಮರಾಜಕಾರಣದ ತಂತ್ರಗಾರಿಕೆ ಜೋರಾಗಿರುವ ಈ ಕಾಲಘಟ್ಟದಲ್ಲಿ ಜರುಗಿದ ಪಂಚಾಯ್ತಿ ಪೈಟಿಂಗ್‌ನಲ್ಲಿ ಕರಾವಳಿಯಲ್ಲಂತೂ ಆ ಪಕ್ಷದ ಅಡ್ಡ ಆಕ್ರಮಣದ ಅನೇಕ ಆಯಾಮಗಳನ್ನು ತೆರೆದು ತೋರಿಸಿದೆ..

ಗ್ರಾಪಂ-ತಾಪಂ-ಜಿಪಂನಂಥ ಸ್ಥಳೀಯ ಸಂಸ್ಥೆ ಚುನಾವಣೆಗಳು ಅಸೆಂಬ್ಲಿ ಪಾರ್ಲಿಮೆಂಟ್ ಮಹಾಯುದ್ಧದ ಗೆಲುವು-ಸೋಲಿನ ಮುನ್ಸೂಚನೆ ಎಂಬ ಅಭಿಪ್ರಾಯವಿದೆ. ಆದರೆ ಕರಾವಳಿಯ ಉತ್ತರಕನ್ನಡ-ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಈ ಸೂತ್ರ ಸಮೀಕರಣದ ಲೆಕ್ಕಾಚಾರ ಪಲ್ಟಿ ಹೊಡೆದದ್ದೇ ಹೆಚ್ಚು! ಹಿಂದುತ್ವದ ಪ್ರಯೋಗ ಶಾಲೆಯಂತಾಗಿರುವ ಅವಿಭಜಿತ ದಕ್ಷಿಣ ಕನ್ನಡದಲ್ಲಿ ಕೇಸರಿ ರಾಜಕಾರಣದ ಬೇರುಗಳು ಕುಗ್ರಾಮದಲ್ಲೂ ಹಬ್ಬಿ ಹೆಚ್ಚುಕಮ್ಮಿ ಎರಡು ದಶಕಗಳೇ ಕಳೆದುಹೋಗಿದೆ. ಬಿಜೆಪಿಯ ಕುರ್ಚಿ ಕಸರತ್ತಿಗೆ ಹಿಂದುತ್ವದ ಸಿದ್ಧಾಂತದಷ್ಟೇ ದೊಡ್ಡ ಅನುಕೂಲ ಕಾಂಗ್ರೆಸ್‌ನ ಒಳ ಜಗಳದಿಂದಲೂ ಆಗಿದೆ. ಉತ್ತರಕನ್ನಡದ ಮಟ್ಟಿಗೆ ಹೇಳಬೇಕೆಂದರೆ ಗ್ರಾಮಗಳಲ್ಲಿ ಬಿಜೆಪಿ ನೆಲೆ ದಕ್ಷಿಣ ಕನ್ನಡದಷ್ಟು ವ್ಯಾಪಕವಾಗಿ ವ್ಯಾಪಿಸಿಲ್ಲ. ಹಿಂದುತ್ವದ ಬೆಂಕಿ ಚೆಂಡಾದ ಅನಂತಕುಮಾರ್ ಹೆಗಡೆಯಂಥವರು ಜನಪರ ಕೆಲಸವೇನೂ ಮಾಡದಿದ್ದರೂ ಮತ್ತೆ ಮತ್ತೆ ಗೆಲ್ಲುತ್ತಿದ್ದಾರೆಂದರೆ ಅದಕ್ಕೆ ಕಾರಣ ಕಾಂಗ್ರೆಸ್‌ನ ಹಿರಿತಲೆಗಳಾದ ದೇಶಪಾಂಡೆ ಮತ್ತು ಮಾರ್ಗರೆಟ್ ಆಳ್ವರ ಬಣದ ಲಾಗಾಯ್ತಿನ ಮನೆಮುರುಕುತನ!

ಈ ಮೂರು ಕೇಸರಿ ಕೋಟೆಯಲ್ಲಿ ಮೊನ್ನೆ ಮುಗಿದ ಗ್ರಾಪಂ ಫಲಿತಾಂಶದ ಮೇಲೊಮ್ಮೆ ಕಣ್ಣು ಹಾಯಿಸಿದರೆ ಬಿಜೆಪಿ ಬೀಗುವಂಥ ಸಾಧನೆಯೇನೂ ಮಾಡಿದಂತೆ ಕಾಣಿಸದು. ಚುಕ್ಕಾಣಿಯೇ ಇಲ್ಲದೆ ದಿಕ್ಕೆಟ್ಟು ಹೊಯ್ದಾಡುತ್ತಿರುವ ಕಾಂಗ್ರೆಸ್ ಎದುರು ಬಿಜೆಪಿ ಕನಿಷ್ಠವೆಂದರೂ ಮುಕ್ಕಾಲು ಪಾಲು ಸ್ಥಾನಗಳನ್ನಾದರೂ ಗೆದ್ದುಕೊಳ್ಳಬೇಕಿತ್ತು. ಬಿಜೆಪಿಯ ನಳಿನ್‌ಕುಮಾರ್ ಕಟೀಲ್, ಅನಂತಕುಮಾರ್ ಹೆಗಡೆ ಮತ್ತು ಶೋಭಾ ಕರಂದ್ಲಾಜೆಯಂಥ ಬೆಂಕಿ ಬ್ರ್ಯಾಂಡಿನವರ ಬಡಾಯಿಯೂ ಜೋರಾಗಿಯೇ ಇತ್ತು. ಆದರೆ ಹೊಂದಾಣಿಕೆ, ಸಂಘಟನೆಯಿಲ್ಲದೆ ಹೋದದ್ದಕ್ಕೆ, ಮೂರೂ ಜಿಲ್ಲೆಗಳಲ್ಲಿಯೂ ದುರ್ಬಲ ಕಾಂಗ್ರೆಸ್ ಬಲಾಢ್ಯ ಬಿಜೆಪಿಯನ್ನು ಅಟ್ಟಾಡಿಸಿಕೊಂಡು ಬಂದು ಈಗ ಅದರ ಬೆನ್ನಿಗೇ ನಿಂತಿದೆ!

2005ರಲ್ಲಿ ನಡೆದ ಗ್ರಾಪಂ ಸಮರದ ಸಂದರ್ಭದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ನ ಸಿದ್ದರಾಮಯ್ಯನವರ ಸರ್ಕಾರವಿತ್ತು. ಆಗ ಅವಿಭಜಿತ ದಕ್ಷಿಣಕನ್ನಡದಲ್ಲಿ ಬಿಜೆಪಿಯೇ ಮೇಲುಗೈ ಸಾಧಿಸಿತ್ತು. ಅಂದರೆ ದಕ್ಷಿಣಕನ್ನಡ ಮತ್ತು ಉಡುಪಿ ಹುಸಿ ಹಿಂದುತ್ವಕ್ಕೆ ಮರುಳಾಗುವ ಮಾಮೂಲಿ ’ಸಂಪ್ರದಾಯ’ಕ್ಕೆ ಶರಣಾಗಿತ್ತು. ಈ ಬಾರಿಯೂ ಅದೇ ಪರಂಪರೆ ಪುನರಾವರ್ತನೆಯಾಗಿದೆಯಷ್ಟೆ. ಹಾಗಂತ ಗತಿ-ಗೋತ್ರವಿಲ್ಲದ ಕಾಂಗ್ರೆಸ್ ಅಂಥ ಹೀನಾಯ ಪ್ರದರ್ಶನವೇನೂ ತೋರಿಸಿಲ್ಲ. ಮೂಡಬಿದರೆ, ಉಳ್ಳಾಲ, ಬಂಟ್ವಾಳ, ಬೈಂದೂರುಗಳಲ್ಲಿ ಕಾಂಗ್ರೆಸ್ ಬಿಜೆಪಿಯನ್ನು ಹಿಂದೆ ಹಾಕಿದೆಯೆಂಬ ಚರ್ಚೆಗಳು ನಡೆದಿದೆ. ಹಲವೆಡೆ ಬಿಜೆಪಿ ತನ್ನ ಸುಪರ್ದಿಯಲ್ಲಿದ್ದ ಪಂಚಾಯ್ತಿಗಳನ್ನು ಬಿಟ್ಟುಕೊಡಬೇಕಾಗಿದೆ. ಹೇಗಾದರೂ ಮಾಡಿ ಕರಾವಳಿ ಮೇಲಿನ ಹಿಡಿತ ಬಿಗಿಗೊಳಿಸಿಕೊಳ್ಳವ ಹಠಕ್ಕೆ ಬಿದ್ದಿದ್ದ ಬಿಜೆಪಿ ಹಣ ಹಾಗೂ ಆಡಳಿತ ಯಂತ್ರದ ಬಲ ಬಳಸಿದೆ. ಇಷ್ಟಾದರೂ ಕೇಸರಿ ಪಡೆ ನಿರೀಕ್ಷಿಸಿದ್ದ ಭರ್ಜರಿ ದಿಗ್ವಿಜಯ ಸಾಧ್ಯವಾಗಿಲ್ಲ! ಕಾಂಗ್ರೆಸ್ ’ಕಲಿ’ಗಳು ಪರಸ್ಪರ ಕಾಲೆಳೆವ ಕಸರತ್ತು ಬಿಟ್ಟು ಒಂದಾದರೆ ಬಿಜೆಪಿಯನ್ನು ಹಿಮ್ಮೆಟ್ಟಿಸುವುದೇನೂ ಕಷ್ಟವಲ್ಲವೆಂಬ ಸಂದೇಶವನ್ನಂತೂ ಗ್ರಾಪಂ ಚುನಾವಣೆ ನೀಡಿದೆ.

ಹಾಗಂತ ಉತ್ತರ ಕನ್ನಡದಲ್ಲಿರುವುದು ಹಿಂದುತ್ವದ ಅಮಲಲ್ಲ. ಅದು ಬಿಜೆಪಿ ಎಂಎಲ್‌ಎಗಳು ತಮ್ಮ ಅಸ್ತಿತ್ವಕ್ಕಾಗಿ ಅಧಿಕಾರ, ಶಕ್ತಿ ಪ್ರಯೋಗಿಸಿ ದಕ್ಕಿಸಿಕೊಂಡ ಜಯ. ಹಳ್ಳಿಗಳಲ್ಲಿ ಬಿಜೆಪಿ ನಾಯಕರು ಅಂದುಕೊಂಡಷ್ಟು ಆಳಕ್ಕೆ ಆ ಪಕ್ಷದ ಬೇರುಗಳಿನ್ನೂ ಇಳಿದಿಲ್ಲ ಎಂಬುದನ್ನು ಈ ಫಲಿತಾಂಶ ಪಕ್ಕಾ ಮಾಡಿದೆ. ಕುಮಟಾದ ಬಿಜೆಪಿ ಶಾಸಕ ದಿನಕರ ಶೆಟ್ಟಿ, ಭಟ್ಕಳ ಹೊನ್ನಾವರದ ಸುನಿಲ್ ನಾಯ್ಕ್, ಶಿರಸಿ ಸಿದ್ದಾಪುರದ ಕಾಗೇರಿ (ಸ್ಪೀಕರ್) ಹಗಲಿರುಳು ಬೆವರಿಳಿಸಿದರೂ ಕಾಂಗ್ರೆಸನ್ನು ಸಂಪೂರ್ಣವಾಗಿ ಸೋಲಿಸಲಾಗಿಲ್ಲ. ಹಾಲಿ ಶಾಸಕರಾಗಿರುವುದರಿಂದ ಸಣ್ಣ ಅಂತರದಿಂದ ಗೆಲುವು ಬೀರಿ ಮುಖ ಉಳಿಸಿಕೊಂಡರೂ ವಿರೋಚಿತ ಗೆಲವು ಪಡೆಯಲಾಗಿಲ್ಲ. ಭಟ್ಕಳದಲ್ಲಿ ಮಾಜಿ ಶಾಸಕ ಮಂಕಾಳ ವೈದ್ಯ, ಶಿರಸಿ ಸಿದ್ದಾಪುರದಲ್ಲಿ ಬೀಮಣ್ಣ, ವಸಂತ್ ನಾಯ್ಕ್, ಸಶ್ಮಾರೆಡ್ಡಿ(ಹೊನ್ನಾವರ) ಬಳಗ, ಹಳಿಯಾಳ ಕ್ಷೇತ್ರದಲ್ಲಿ ದೇಶಪಾಂಡೆ, ಘೋಟನೇಕರ್ ತಂಡ ಬಿಜೆಪಿ ಬಲಾಢ್ಯರಿಗೆ ಬೆಚ್ಚಿ ಬೀಳಿಸಿದೆ!

ಎಂಎಲ್‌ಎ ದೀಕ್ಷೆ ನೀಡಿದ್ದ ಪೂರ್ವಾಶ್ರಮದ ಕಾಂಗ್ರೆಸನ್ನು ನಿರ್ನಾಮ ಮಾಡುವ ವೀರಾವೇಷದ ಆಟ ಆಡಿದ್ದ ಮಂತ್ರಿ ಶಿವರಾಮ ಹೆಬ್ಬಾರ್‌ನ ಹಲವು ಭ್ರಮೆಗಳನ್ನು ಗ್ರಾಪಂ ಎಲೆಕ್ಷನ್ ಇಳಿಸಿದೆ. ಆತ ಯಲ್ಲಾಪುರ, ಮುಂಡಗೋಡಲ್ಲಿ ತನ್ನ ನಿಷ್ಠರಿಗೆ ಮಣೆಹಾಕಿ ಬಿಜೆಪಿಯನ್ನೇ ಮುಗಿಸಿದ್ದಾರೆಂದು ಮೂಲ ಬಿಜೆಪಿಗರು ಗೊಣಗಾಡುತ್ತಿದ್ದಾರೆ. ಸ್ವಜಾತಿಯ ಹವ್ಯಕರು ಹೆಚ್ಚಿರುವ ಯಲ್ಲಾಪುರದಲ್ಲಿ ಹೆಚ್ಚು ಹಿಂಬಾಲಕರನ್ನು ಗೆಲ್ಲಿಸಿಕೊಂಡಿರುವ ಹೆಬ್ಬಾರ್ ಮುಂಡಗೋಡಿನಲ್ಲಿ ಮುಗ್ಗರಿಸಿದ್ದಾರೆ! ಮಾಜಿ ಮಂತ್ರಿ ಪಕ್ಕದ ಕಲಘಟಗಿಯ ಮಾಜಿ ಶಾಸಕ ಸಂತೋಷ್ ಲಾಡ್ ಕಾಂಗ್ರೆಸ್‌ನ ಎಲೆಕ್ಷನ್ ಉಸ್ತುವಾರಿಯಾಗಿ ಹೆಬ್ಬಾರ್‌ಗೆ ಸೆಡ್ಡುಹೊಡೆದು ನಿಂತಿದ್ದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಂತೋಷ್ ಲಾಡ್ ಹೆಬ್ಬಾರ್ ವಿರುದ್ಧ ಕಾಂಗ್ರೆಸ್ ಕ್ಯಾಂಡಿಡೇಟಾಗುವ ಸುದ್ದಿಗಳಿಗೀಗ ರೆಕ್ಕೆಪುಕ್ಕ ಬಂದುಬಿಟ್ಟಿದೆ. ಹಂಗೇನಾದರೂ ಆದರೆ ಗಣಿಧಣಿಗಳ ನಡುವೆ ’ಹಣಾ’ಹಣಿಯೇ ಏರ್ಪಡಲಿದೆ. ಪಾರ್ಟಿ ಕಟ್ಟುವುದು ಬಿಟ್ಟು ಸ್ವ ಸಾಮ್ರಾಜ್ಯ ವಿಸ್ತರಣೆಗೆ ಹವಣಿಸುತ್ತಿರುವ ಹೆಬ್ಬಾರ್ ಬಿಜೆಪಿಗೆ ಮಗ್ಗಲು ಮುಳ್ಳಾಗಿರುವುದಂತೂ ಖರೆ.

ಪತ್ರಿಕೆಗಳಿಗೆ ಪ್ರತಿದಿನ ಲಕ್ಷಾಂತರ ರೂ ಜಾಹೀರಾತು ಕೊಡುತ್ತ ಕಾರವಾರ, ಅಂಕೋಲಾದಲ್ಲಿ ’ಜಾಹೀರಾತು ರಾಣಿ’ ಎಂದೇ ಹೆಸರುವಾಸಿಯಾಗಿರುವ ಶಾಸಕಿ ರೂಪಾಲಿ ನಾಯ್ಕ್ ನೆಲೆ ಗಟ್ಟಿಗೊಳಿಸಿಕೊಂಡಿದ್ದಾರೆ. 24/7 ಎಲೆಕ್ಷನ್ ರಾಜಕಾರಣ ಮಾಡಿದ ಅವರು ಕ್ಷೇತ್ರದಲ್ಲಿನ ತಮ್ಮ ಸಾಧನೆ, ಬಿಜೆಪಿ ಹೈಕಮಾಂಡ್‌ನ ಕಣ್ಣು ಕೋರೈಸಿದರೆ ಮಂತ್ರಿಗಿರಿ ಕರುಣಿಸಬಹುದೆಂದು ಭಾವಿಸಿದ್ದಾರೆ.

ಹಿಂದೆಂದಿಗಿಂತ ಈಗ ಗ್ರಾಪಂ ಅಧಿಕಾರ ಆಕರ್ಷಣೆ ಜೋರಾಗಿರುವುದರಿಂದ ಹಳ್ಳಿ ಸರ್ಕಾರ ರಚನೆ ರಾಜಕಾರಣ ದಿನಕ್ಕೊಂದು ಆಯಾಮ ಪಡೆಯುತ್ತಿದೆ. ಎಂಜಿಪಿಯಾಗಲಿಕ್ಕೇ ಕಷ್ಟಪಟ್ಟ ಈ ರಾಜಕಾರಣಿಗಳು ಅಧ್ಯಕ್ಷ, ಉಪಾಧ್ಯಕ್ಷ ಆಗುವ ಅವಕಾಶ ಸಿಕ್ಕರೆ ಬಿಡುವರಾ?! ಗ್ರಾಪಂಗಳ ಚಹರೆ ಬದಲಾಗುವ ಸೂಚನೆಗಳಂತೂ ಗೋಚರಿಸಲಾರಂಭಿಸಿದೆ.


ಇದನ್ನೂ ಓದಿ: ರಾಜ್ಯ ಬಿಜೆಪಿಯಲ್ಲಿ ಬಿರುಕು: ಯತ್ನಾಳ್ ವಿರುದ್ಧ ರಾಷ್ಟ್ರ ನಾಯಕರಿಗೆ ದೂರು ನೀಡಿದ ಸಿಎಂ ಬೆಂಬಲಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...