Homeಕರ್ನಾಟಕಕರಾವಳಿ: ಬಿಜೆಪಿ ಬೆನ್ನಿಗೇ ಬಂದು ನಿಂತಿದೆ ಕಾಂಗ್ರೆಸ್!

ಕರಾವಳಿ: ಬಿಜೆಪಿ ಬೆನ್ನಿಗೇ ಬಂದು ನಿಂತಿದೆ ಕಾಂಗ್ರೆಸ್!

- Advertisement -
- Advertisement -

ಕರಾವಳಿಯ ತ್ರಿವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮುಗಿದ ಎಂಜಿಪಿ(ಮೆಂಬರ್ ಆಫ್ ಗ್ರಾಮ್ ಪಂಚಾಯತ್) ಚುನಾವಣಾ ರಣಕೇಕೆ ಎಂಪಿ(ಮೆಂಬರ್ ಆಫ್ ಪಾರ್ಲಿಮೆಂಟ್) ಚುನಾವಣೆಗಿಂತ ಒಂದು ಗುಂಜಿ ಹೆಚ್ಚೇ ಇತ್ತೆಂದು ಚುನಾವಣಾ ಪಂಡಿತರು ವಿಶ್ಲೇಷಿಸುತ್ತಿದ್ದಾರೆ. ಗ್ರಾಪಂ ಎಲೆಕ್ಷನ್‌ನಲ್ಲಿ ಪಕ್ಷಗಳ ಸಿಂಬಲ್ ಮೇಲೆ ಪೈಪೋಟಿಗೆ ಅವಕಾಶವಿಲ್ಲ. ಆದರೆ ಬಿಟ್ಟೆನೆಂದರೂ ಬಿಡದು ನಿನ್ನ ಮಾಯೆ ಎಂಬಂತೆ ಹಳ್ಳಿ ಜಿದ್ದಾಜಿದ್ದಿಯಲ್ಲಿ ಪಕ್ಷ ರಾಜಕೀಯದ ಅಮಲು-ಘಮಲಿನ ಅಂಡರ್‌ಕರೆಂಟ್ ಹರಿದಾಡಿತ್ತು! ಬಿಜೆಪಿಯ ಧರ್ಮರಾಜಕಾರಣದ ತಂತ್ರಗಾರಿಕೆ ಜೋರಾಗಿರುವ ಈ ಕಾಲಘಟ್ಟದಲ್ಲಿ ಜರುಗಿದ ಪಂಚಾಯ್ತಿ ಪೈಟಿಂಗ್‌ನಲ್ಲಿ ಕರಾವಳಿಯಲ್ಲಂತೂ ಆ ಪಕ್ಷದ ಅಡ್ಡ ಆಕ್ರಮಣದ ಅನೇಕ ಆಯಾಮಗಳನ್ನು ತೆರೆದು ತೋರಿಸಿದೆ..

ಗ್ರಾಪಂ-ತಾಪಂ-ಜಿಪಂನಂಥ ಸ್ಥಳೀಯ ಸಂಸ್ಥೆ ಚುನಾವಣೆಗಳು ಅಸೆಂಬ್ಲಿ ಪಾರ್ಲಿಮೆಂಟ್ ಮಹಾಯುದ್ಧದ ಗೆಲುವು-ಸೋಲಿನ ಮುನ್ಸೂಚನೆ ಎಂಬ ಅಭಿಪ್ರಾಯವಿದೆ. ಆದರೆ ಕರಾವಳಿಯ ಉತ್ತರಕನ್ನಡ-ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಈ ಸೂತ್ರ ಸಮೀಕರಣದ ಲೆಕ್ಕಾಚಾರ ಪಲ್ಟಿ ಹೊಡೆದದ್ದೇ ಹೆಚ್ಚು! ಹಿಂದುತ್ವದ ಪ್ರಯೋಗ ಶಾಲೆಯಂತಾಗಿರುವ ಅವಿಭಜಿತ ದಕ್ಷಿಣ ಕನ್ನಡದಲ್ಲಿ ಕೇಸರಿ ರಾಜಕಾರಣದ ಬೇರುಗಳು ಕುಗ್ರಾಮದಲ್ಲೂ ಹಬ್ಬಿ ಹೆಚ್ಚುಕಮ್ಮಿ ಎರಡು ದಶಕಗಳೇ ಕಳೆದುಹೋಗಿದೆ. ಬಿಜೆಪಿಯ ಕುರ್ಚಿ ಕಸರತ್ತಿಗೆ ಹಿಂದುತ್ವದ ಸಿದ್ಧಾಂತದಷ್ಟೇ ದೊಡ್ಡ ಅನುಕೂಲ ಕಾಂಗ್ರೆಸ್‌ನ ಒಳ ಜಗಳದಿಂದಲೂ ಆಗಿದೆ. ಉತ್ತರಕನ್ನಡದ ಮಟ್ಟಿಗೆ ಹೇಳಬೇಕೆಂದರೆ ಗ್ರಾಮಗಳಲ್ಲಿ ಬಿಜೆಪಿ ನೆಲೆ ದಕ್ಷಿಣ ಕನ್ನಡದಷ್ಟು ವ್ಯಾಪಕವಾಗಿ ವ್ಯಾಪಿಸಿಲ್ಲ. ಹಿಂದುತ್ವದ ಬೆಂಕಿ ಚೆಂಡಾದ ಅನಂತಕುಮಾರ್ ಹೆಗಡೆಯಂಥವರು ಜನಪರ ಕೆಲಸವೇನೂ ಮಾಡದಿದ್ದರೂ ಮತ್ತೆ ಮತ್ತೆ ಗೆಲ್ಲುತ್ತಿದ್ದಾರೆಂದರೆ ಅದಕ್ಕೆ ಕಾರಣ ಕಾಂಗ್ರೆಸ್‌ನ ಹಿರಿತಲೆಗಳಾದ ದೇಶಪಾಂಡೆ ಮತ್ತು ಮಾರ್ಗರೆಟ್ ಆಳ್ವರ ಬಣದ ಲಾಗಾಯ್ತಿನ ಮನೆಮುರುಕುತನ!

ಈ ಮೂರು ಕೇಸರಿ ಕೋಟೆಯಲ್ಲಿ ಮೊನ್ನೆ ಮುಗಿದ ಗ್ರಾಪಂ ಫಲಿತಾಂಶದ ಮೇಲೊಮ್ಮೆ ಕಣ್ಣು ಹಾಯಿಸಿದರೆ ಬಿಜೆಪಿ ಬೀಗುವಂಥ ಸಾಧನೆಯೇನೂ ಮಾಡಿದಂತೆ ಕಾಣಿಸದು. ಚುಕ್ಕಾಣಿಯೇ ಇಲ್ಲದೆ ದಿಕ್ಕೆಟ್ಟು ಹೊಯ್ದಾಡುತ್ತಿರುವ ಕಾಂಗ್ರೆಸ್ ಎದುರು ಬಿಜೆಪಿ ಕನಿಷ್ಠವೆಂದರೂ ಮುಕ್ಕಾಲು ಪಾಲು ಸ್ಥಾನಗಳನ್ನಾದರೂ ಗೆದ್ದುಕೊಳ್ಳಬೇಕಿತ್ತು. ಬಿಜೆಪಿಯ ನಳಿನ್‌ಕುಮಾರ್ ಕಟೀಲ್, ಅನಂತಕುಮಾರ್ ಹೆಗಡೆ ಮತ್ತು ಶೋಭಾ ಕರಂದ್ಲಾಜೆಯಂಥ ಬೆಂಕಿ ಬ್ರ್ಯಾಂಡಿನವರ ಬಡಾಯಿಯೂ ಜೋರಾಗಿಯೇ ಇತ್ತು. ಆದರೆ ಹೊಂದಾಣಿಕೆ, ಸಂಘಟನೆಯಿಲ್ಲದೆ ಹೋದದ್ದಕ್ಕೆ, ಮೂರೂ ಜಿಲ್ಲೆಗಳಲ್ಲಿಯೂ ದುರ್ಬಲ ಕಾಂಗ್ರೆಸ್ ಬಲಾಢ್ಯ ಬಿಜೆಪಿಯನ್ನು ಅಟ್ಟಾಡಿಸಿಕೊಂಡು ಬಂದು ಈಗ ಅದರ ಬೆನ್ನಿಗೇ ನಿಂತಿದೆ!

2005ರಲ್ಲಿ ನಡೆದ ಗ್ರಾಪಂ ಸಮರದ ಸಂದರ್ಭದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ನ ಸಿದ್ದರಾಮಯ್ಯನವರ ಸರ್ಕಾರವಿತ್ತು. ಆಗ ಅವಿಭಜಿತ ದಕ್ಷಿಣಕನ್ನಡದಲ್ಲಿ ಬಿಜೆಪಿಯೇ ಮೇಲುಗೈ ಸಾಧಿಸಿತ್ತು. ಅಂದರೆ ದಕ್ಷಿಣಕನ್ನಡ ಮತ್ತು ಉಡುಪಿ ಹುಸಿ ಹಿಂದುತ್ವಕ್ಕೆ ಮರುಳಾಗುವ ಮಾಮೂಲಿ ’ಸಂಪ್ರದಾಯ’ಕ್ಕೆ ಶರಣಾಗಿತ್ತು. ಈ ಬಾರಿಯೂ ಅದೇ ಪರಂಪರೆ ಪುನರಾವರ್ತನೆಯಾಗಿದೆಯಷ್ಟೆ. ಹಾಗಂತ ಗತಿ-ಗೋತ್ರವಿಲ್ಲದ ಕಾಂಗ್ರೆಸ್ ಅಂಥ ಹೀನಾಯ ಪ್ರದರ್ಶನವೇನೂ ತೋರಿಸಿಲ್ಲ. ಮೂಡಬಿದರೆ, ಉಳ್ಳಾಲ, ಬಂಟ್ವಾಳ, ಬೈಂದೂರುಗಳಲ್ಲಿ ಕಾಂಗ್ರೆಸ್ ಬಿಜೆಪಿಯನ್ನು ಹಿಂದೆ ಹಾಕಿದೆಯೆಂಬ ಚರ್ಚೆಗಳು ನಡೆದಿದೆ. ಹಲವೆಡೆ ಬಿಜೆಪಿ ತನ್ನ ಸುಪರ್ದಿಯಲ್ಲಿದ್ದ ಪಂಚಾಯ್ತಿಗಳನ್ನು ಬಿಟ್ಟುಕೊಡಬೇಕಾಗಿದೆ. ಹೇಗಾದರೂ ಮಾಡಿ ಕರಾವಳಿ ಮೇಲಿನ ಹಿಡಿತ ಬಿಗಿಗೊಳಿಸಿಕೊಳ್ಳವ ಹಠಕ್ಕೆ ಬಿದ್ದಿದ್ದ ಬಿಜೆಪಿ ಹಣ ಹಾಗೂ ಆಡಳಿತ ಯಂತ್ರದ ಬಲ ಬಳಸಿದೆ. ಇಷ್ಟಾದರೂ ಕೇಸರಿ ಪಡೆ ನಿರೀಕ್ಷಿಸಿದ್ದ ಭರ್ಜರಿ ದಿಗ್ವಿಜಯ ಸಾಧ್ಯವಾಗಿಲ್ಲ! ಕಾಂಗ್ರೆಸ್ ’ಕಲಿ’ಗಳು ಪರಸ್ಪರ ಕಾಲೆಳೆವ ಕಸರತ್ತು ಬಿಟ್ಟು ಒಂದಾದರೆ ಬಿಜೆಪಿಯನ್ನು ಹಿಮ್ಮೆಟ್ಟಿಸುವುದೇನೂ ಕಷ್ಟವಲ್ಲವೆಂಬ ಸಂದೇಶವನ್ನಂತೂ ಗ್ರಾಪಂ ಚುನಾವಣೆ ನೀಡಿದೆ.

ಹಾಗಂತ ಉತ್ತರ ಕನ್ನಡದಲ್ಲಿರುವುದು ಹಿಂದುತ್ವದ ಅಮಲಲ್ಲ. ಅದು ಬಿಜೆಪಿ ಎಂಎಲ್‌ಎಗಳು ತಮ್ಮ ಅಸ್ತಿತ್ವಕ್ಕಾಗಿ ಅಧಿಕಾರ, ಶಕ್ತಿ ಪ್ರಯೋಗಿಸಿ ದಕ್ಕಿಸಿಕೊಂಡ ಜಯ. ಹಳ್ಳಿಗಳಲ್ಲಿ ಬಿಜೆಪಿ ನಾಯಕರು ಅಂದುಕೊಂಡಷ್ಟು ಆಳಕ್ಕೆ ಆ ಪಕ್ಷದ ಬೇರುಗಳಿನ್ನೂ ಇಳಿದಿಲ್ಲ ಎಂಬುದನ್ನು ಈ ಫಲಿತಾಂಶ ಪಕ್ಕಾ ಮಾಡಿದೆ. ಕುಮಟಾದ ಬಿಜೆಪಿ ಶಾಸಕ ದಿನಕರ ಶೆಟ್ಟಿ, ಭಟ್ಕಳ ಹೊನ್ನಾವರದ ಸುನಿಲ್ ನಾಯ್ಕ್, ಶಿರಸಿ ಸಿದ್ದಾಪುರದ ಕಾಗೇರಿ (ಸ್ಪೀಕರ್) ಹಗಲಿರುಳು ಬೆವರಿಳಿಸಿದರೂ ಕಾಂಗ್ರೆಸನ್ನು ಸಂಪೂರ್ಣವಾಗಿ ಸೋಲಿಸಲಾಗಿಲ್ಲ. ಹಾಲಿ ಶಾಸಕರಾಗಿರುವುದರಿಂದ ಸಣ್ಣ ಅಂತರದಿಂದ ಗೆಲುವು ಬೀರಿ ಮುಖ ಉಳಿಸಿಕೊಂಡರೂ ವಿರೋಚಿತ ಗೆಲವು ಪಡೆಯಲಾಗಿಲ್ಲ. ಭಟ್ಕಳದಲ್ಲಿ ಮಾಜಿ ಶಾಸಕ ಮಂಕಾಳ ವೈದ್ಯ, ಶಿರಸಿ ಸಿದ್ದಾಪುರದಲ್ಲಿ ಬೀಮಣ್ಣ, ವಸಂತ್ ನಾಯ್ಕ್, ಸಶ್ಮಾರೆಡ್ಡಿ(ಹೊನ್ನಾವರ) ಬಳಗ, ಹಳಿಯಾಳ ಕ್ಷೇತ್ರದಲ್ಲಿ ದೇಶಪಾಂಡೆ, ಘೋಟನೇಕರ್ ತಂಡ ಬಿಜೆಪಿ ಬಲಾಢ್ಯರಿಗೆ ಬೆಚ್ಚಿ ಬೀಳಿಸಿದೆ!

ಎಂಎಲ್‌ಎ ದೀಕ್ಷೆ ನೀಡಿದ್ದ ಪೂರ್ವಾಶ್ರಮದ ಕಾಂಗ್ರೆಸನ್ನು ನಿರ್ನಾಮ ಮಾಡುವ ವೀರಾವೇಷದ ಆಟ ಆಡಿದ್ದ ಮಂತ್ರಿ ಶಿವರಾಮ ಹೆಬ್ಬಾರ್‌ನ ಹಲವು ಭ್ರಮೆಗಳನ್ನು ಗ್ರಾಪಂ ಎಲೆಕ್ಷನ್ ಇಳಿಸಿದೆ. ಆತ ಯಲ್ಲಾಪುರ, ಮುಂಡಗೋಡಲ್ಲಿ ತನ್ನ ನಿಷ್ಠರಿಗೆ ಮಣೆಹಾಕಿ ಬಿಜೆಪಿಯನ್ನೇ ಮುಗಿಸಿದ್ದಾರೆಂದು ಮೂಲ ಬಿಜೆಪಿಗರು ಗೊಣಗಾಡುತ್ತಿದ್ದಾರೆ. ಸ್ವಜಾತಿಯ ಹವ್ಯಕರು ಹೆಚ್ಚಿರುವ ಯಲ್ಲಾಪುರದಲ್ಲಿ ಹೆಚ್ಚು ಹಿಂಬಾಲಕರನ್ನು ಗೆಲ್ಲಿಸಿಕೊಂಡಿರುವ ಹೆಬ್ಬಾರ್ ಮುಂಡಗೋಡಿನಲ್ಲಿ ಮುಗ್ಗರಿಸಿದ್ದಾರೆ! ಮಾಜಿ ಮಂತ್ರಿ ಪಕ್ಕದ ಕಲಘಟಗಿಯ ಮಾಜಿ ಶಾಸಕ ಸಂತೋಷ್ ಲಾಡ್ ಕಾಂಗ್ರೆಸ್‌ನ ಎಲೆಕ್ಷನ್ ಉಸ್ತುವಾರಿಯಾಗಿ ಹೆಬ್ಬಾರ್‌ಗೆ ಸೆಡ್ಡುಹೊಡೆದು ನಿಂತಿದ್ದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಂತೋಷ್ ಲಾಡ್ ಹೆಬ್ಬಾರ್ ವಿರುದ್ಧ ಕಾಂಗ್ರೆಸ್ ಕ್ಯಾಂಡಿಡೇಟಾಗುವ ಸುದ್ದಿಗಳಿಗೀಗ ರೆಕ್ಕೆಪುಕ್ಕ ಬಂದುಬಿಟ್ಟಿದೆ. ಹಂಗೇನಾದರೂ ಆದರೆ ಗಣಿಧಣಿಗಳ ನಡುವೆ ’ಹಣಾ’ಹಣಿಯೇ ಏರ್ಪಡಲಿದೆ. ಪಾರ್ಟಿ ಕಟ್ಟುವುದು ಬಿಟ್ಟು ಸ್ವ ಸಾಮ್ರಾಜ್ಯ ವಿಸ್ತರಣೆಗೆ ಹವಣಿಸುತ್ತಿರುವ ಹೆಬ್ಬಾರ್ ಬಿಜೆಪಿಗೆ ಮಗ್ಗಲು ಮುಳ್ಳಾಗಿರುವುದಂತೂ ಖರೆ.

ಪತ್ರಿಕೆಗಳಿಗೆ ಪ್ರತಿದಿನ ಲಕ್ಷಾಂತರ ರೂ ಜಾಹೀರಾತು ಕೊಡುತ್ತ ಕಾರವಾರ, ಅಂಕೋಲಾದಲ್ಲಿ ’ಜಾಹೀರಾತು ರಾಣಿ’ ಎಂದೇ ಹೆಸರುವಾಸಿಯಾಗಿರುವ ಶಾಸಕಿ ರೂಪಾಲಿ ನಾಯ್ಕ್ ನೆಲೆ ಗಟ್ಟಿಗೊಳಿಸಿಕೊಂಡಿದ್ದಾರೆ. 24/7 ಎಲೆಕ್ಷನ್ ರಾಜಕಾರಣ ಮಾಡಿದ ಅವರು ಕ್ಷೇತ್ರದಲ್ಲಿನ ತಮ್ಮ ಸಾಧನೆ, ಬಿಜೆಪಿ ಹೈಕಮಾಂಡ್‌ನ ಕಣ್ಣು ಕೋರೈಸಿದರೆ ಮಂತ್ರಿಗಿರಿ ಕರುಣಿಸಬಹುದೆಂದು ಭಾವಿಸಿದ್ದಾರೆ.

ಹಿಂದೆಂದಿಗಿಂತ ಈಗ ಗ್ರಾಪಂ ಅಧಿಕಾರ ಆಕರ್ಷಣೆ ಜೋರಾಗಿರುವುದರಿಂದ ಹಳ್ಳಿ ಸರ್ಕಾರ ರಚನೆ ರಾಜಕಾರಣ ದಿನಕ್ಕೊಂದು ಆಯಾಮ ಪಡೆಯುತ್ತಿದೆ. ಎಂಜಿಪಿಯಾಗಲಿಕ್ಕೇ ಕಷ್ಟಪಟ್ಟ ಈ ರಾಜಕಾರಣಿಗಳು ಅಧ್ಯಕ್ಷ, ಉಪಾಧ್ಯಕ್ಷ ಆಗುವ ಅವಕಾಶ ಸಿಕ್ಕರೆ ಬಿಡುವರಾ?! ಗ್ರಾಪಂಗಳ ಚಹರೆ ಬದಲಾಗುವ ಸೂಚನೆಗಳಂತೂ ಗೋಚರಿಸಲಾರಂಭಿಸಿದೆ.


ಇದನ್ನೂ ಓದಿ: ರಾಜ್ಯ ಬಿಜೆಪಿಯಲ್ಲಿ ಬಿರುಕು: ಯತ್ನಾಳ್ ವಿರುದ್ಧ ರಾಷ್ಟ್ರ ನಾಯಕರಿಗೆ ದೂರು ನೀಡಿದ ಸಿಎಂ ಬೆಂಬಲಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...