Homeಅಂಕಣಗಳುದಸ್ ಸ್ಪೋಕ್ ಝರತುಷ್ಟ್ರ ನೀಷೆಯ ಕೃತಿ ಹಿಟ್ಲರಿನಿಗೆ ಅರ್ಥವಾಗಿದ್ದು ಹೇಗೆ?

ದಸ್ ಸ್ಪೋಕ್ ಝರತುಷ್ಟ್ರ ನೀಷೆಯ ಕೃತಿ ಹಿಟ್ಲರಿನಿಗೆ ಅರ್ಥವಾಗಿದ್ದು ಹೇಗೆ?

- Advertisement -
- Advertisement -

ದಸ್ ಸ್ಪೋಕ್ ಝರತುಷ್ಟ್ರ ನೀಷೆಯ ಒಂದು ಕೃತಿ. ಅದು ಜರ್ಮನಿಯ ಸರ್ವಾಧಿಕಾರಿ ಹಿಟ್ಲರ್‍ನಂತಹ ಸರ್ವಾಧಿಕಾರಿಗೆ ಅತಿಮಾನವತೆಯ ಪಾಠ ಮಾಡಿತೇ? ಯಾವ ರಣ-ರತಿಗಳಿಗೆ ಅಮಾನವೀಯ ರೌದ್ರವನ್ನು ತುಂಬಿ ಮನುಕುಲದಲ್ಲಿಯೇ ರಕ್ತದಲ್ಲಿ ಕೆಟ್ಟ ಇತಿಹಾಸ ಬರೆದ ನಾಜಿಗಳಿಗೆ ಪುಕ್ಕಟೆಯಾಗಿ ಈ ದಸ್ ಸ್ಪೋಕ್ ಝರತುಷ್ಟ್ರ ಹಂಚುವಷ್ಟು ಕೇಡಿನ ಸಂಚಾಗಿತ್ತೇ ಈ ಕೃತಿ.

ಇಲ್ಲ. “ಮನುಷ್ಯತ್ವ ಎಂಬುವುದು ಪಶುತ್ವ ಮತ್ತು ಅತಿಮಾನವತ್ವದ ನಡುವಿನ ಆಳವಾದ ಕಣಿವೆಯ ಮೇಲೆ ಕಟ್ಟಲ್ಪಟ್ಟಿರುವ ಹಗ್ಗ. ಇದರ ಮೇಲೆ ನಡೆಯುವುದಾಗಲಿ, ದಾಟುವುದಾಗಲಿ, ಹಿಂದಕ್ಕೆ ತಿರುಗಿ ನೋಡುವುದಾಗಲಿ, ಅಲ್ಲಿಯೇ ನಿಂತು ತಳಮಳಗೊಳ್ಳುವುದಾಗಲಿ ಅಪಾಯಕರ. ಮನುಷ್ಯನೆಂದರೆ ಪಶುತ್ವ ಮತ್ತು ಅತಿಮಾನವತ್ವ; ಈ ಎರಡರ ನಡುವಿನ ಸೇತುವೆಯೇ ಹೊರತು, ಮನುಷ್ಯತ್ವವು ಗುರಿಯೇನಲ್ಲ.” ಹಾಗೆಂದು ಝರತುಷ್ಟ್ರನಿಂದ ಹೇಳಿಸುವ ನೀಷೆಗೆ ಮನುಷ್ಯನೆಂದರೆ ಇಷ್ಟ. ಏಕೆಂದರೆ ಅವನು ಹಿಂದಕ್ಕೂ ಸರಿಯಬಲ್ಲ. ಮುಂದಕ್ಕೂ ಸಾಗಬಲ್ಲ.

ತೂಗಾಡುವ ಲೋಲಕದಂತಿರುವ ಡೋಲಾಯಮಾನದ ಸ್ಥಿತಿಯಲ್ಲಿರುವ ಮನಸ್ಸಿನ ಒಂದೊಂದು ಅತಿ ಸಣ್ಣ ಚಲನೆಯ ಸ್ಥಿತಿಯನ್ನು ಒಪ್ಪುವ ಅಥವಾ ಮೆಚ್ಚುವ ಝರತುಷ್ಟ್ರ ನೀಷೆಯ ಮನಸ್ಸಿನ ತಾತ್ವಿಕ ತಾಕಲಾಟಗಳೇ ಆಗಿವೆ. ಅವನು ಒಳಿತು ಕೆಡಕುಗಳ ಆಚೆಗೆ ಸಾಗುವ ಚೈತನ್ಯ. ಚೈತನ್ಯವು ಇದು ಸಮ್ಮತ, ಇದು ತಿರಸ್ಕೃತವೆಂದು ನೋಡದು. ಇದು ಒಳ್ಳೆಯದು ಅಥವಾ ಕೆಟ್ಟದು ಎಂದು ನಿರ್ಧರಿಸದು. ಇದು ತಮ್ಮವರು, ಅವರು ಪರಕೀಯರೆಂದು ಪಕ್ಷಪಾತ ಮಾಡದು.

ದೇವರು ಸತ್ತ ಎಂದು ತಾನು ಸ್ಪಷ್ಟವಾಗಿ ಅರಿತವನಂತೆ ಘೋಷಿಸುತ್ತಾ ಕ್ರೈಸ್ತ ಧರ್ಮಕ್ಕೆ ವಿರೋಧದ ದಾರಿಯಲ್ಲಿ ನಡೆದವನಂತೆ ಕಾಣುತ್ತಾನೆ. ಆದರೆ, “ಕೆಳಕ್ಕೆ ಬಿದ್ದಿರುವವರನ್ನು ನಾನು ಪ್ರೀತಿಸುತ್ತೇನೆ. ಏಕೆಂದರೆ ಆಚೆಯ ತೀರಕ್ಕಾಗಿ ಹಾತೊರೆಯುತ್ತಿರುವ ಅವರು ಗೌರವಕ್ಕೆ ಪಾತ್ರರಾಗುತ್ತಾರೆ. ಸ್ವರ್ಗಗಳಿಗಾಗಿ ಬೀಳಲು ಸಿದ್ಧವಿರುವ, ತ್ಯಾಗಗಳನ್ನು ಮಾಡುವವರನ್ನು ನಾನು ಮೆಚ್ಚುವುದಿಲ್ಲ” ಎಂದು ಯೇಸುವಿನ ದನಿಯನ್ನು ಪುನರುಚ್ಚರಿಸುತ್ತಾನೆ.

ಜೂಜಾಡುವಾಗ ದಾಳಗಳು ತನ್ನ ಅನುಕೂಲಕ್ಕೆ ಬಿದ್ದರೆ ನಾನು ಮೋಸಗಾರನೇ ಎಂದು ನಾಚುವವನನ್ನು ಮೆಚ್ಚುವ ನೀಷೆಯಲ್ಲಿ ಅಪರಾಧ ಪ್ರಜ್ಞೆಯೂ ಇರುತ್ತದೆ. ಅದನ್ನು ಅಪರಾಧವೆಂದು ಹೇಳಲು ಸಿದ್ಧವಿಲ್ಲದೇ ಅಸ್ತಿತ್ವದಲ್ಲಿ ಘಟಿಸುತ್ತಿರುವ ಒಂದು ವಿದ್ಯಮಾನದಂತೆ ಮೆಚ್ಚುವ ಮನಸ್ಥಿತಿಯೂ ಇದೆ.

ಇಂಥಾ ದ್ವಂದ್ವ ಮನಸ್ಥಿತಿಯನ್ನು ಪ್ರಾಮಾಣಿಕವಾಗಿಯೇ ಹೊಂದಿದ್ದ ನೀಷೆ ಹುಚ್ಚಾಸ್ಪತ್ರೆಯಲ್ಲಿ ದಿನಗಳನ್ನು ಕಳೆಯಬೇಕಾಯಿತು. ಹೊರಗಿದ್ದ ಲೋಕವನ್ನೂ ಮತ್ತು ತಾನು ಕಂಡುಕೊಂಡಿದ್ದ ಲೋಕವನ್ನೂ ಏಕಕಾಲದಲ್ಲಿ ಲೋಲಕದಂತೆ ಡೋಲಾಯಮಾನದ ಸ್ಥಿತಿಯಲ್ಲಿ ನೋಡುತ್ತಿದ್ದ. ಪಕ್ಷಪಾತಗಳಿಲ್ಲದೇ ನೋಡುತ್ತಿದ್ದ. ಒಳಿತು ಕೆಡಕುಗಳ ಭಾವಗಳಿಲ್ಲದೇ ನೋಡುತ್ತಿದ್ದ. ಪಕ್ಷವಹಿಸದ ಕಾರಣ ಅವನ ಮುಕ್ತ ಚೈತನ್ಯವಾಗಿದ್ದ. ಮುಕ್ತವಾದ ಹೃದಯವನ್ನು ಹೊಂದಿದ್ದ. ಸಂಘರ್ಷಪ್ರಿಯ ಸಮಾಜದಲ್ಲಿ ಯಾವುದಾದರೂ ಪಕ್ಷವನ್ನು ವಹಿಸದಿದ್ದರೆ ಅವನನ್ನು ಬೆಂಬಲಿಸಲು ಯಾವ ಪಕ್ಷದವರೂ ಬರುವುದಿಲ್ಲ. ಗಾಯವಾದರೆ ಆಗಲಿ ಎನ್ನುತ್ತಾನೆ. ಹುಚ್ಚನಲ್ಲವೇ ಅವನು? ಗಾಯಗಳನ್ನು ಸಹಿಸಿಕೊಳ್ಳುತ್ತಾ ತನ್ನ ಆಂತರ್ಯವನ್ನು ಕಾಪಾಡಿಕೊಳ್ಳುವವನು ಹೆಚ್ಚಲ್ಲವೇ ಅವನು?

ಖಲೀಲ್ ಗಿಬ್ರಾನನ ಅಲ್‍ಮುಸ್ತಾಫನಂತೆ ಝರತುಷ್ಟ್ರ ಯೌವನದ ಪ್ರೌಡಿಮೆಯ ವಯಸ್ಸಿನಲ್ಲಿ ಮನೆಯನ್ನು ಬಿಟ್ಟು ಬೆಟ್ಟಗುಡ್ಡಗಳ ಕಡೆ ತೆರಳಿ ಏಕಾಂತದಲ್ಲಿ ಹತ್ತು ವರ್ಷಗಳನ್ನು ಕಳೆದ. ಮಿಂಚನ್ನು ಕಂಡುಕೊಂಡ. ಆನಂದದಿಂದಲೇ ಹೊತ್ತುಹೊತ್ತನ್ನೂ ಕಳೆದ. ಕೊನೆಗೊಂದು ದಿನ ತಾನು ಏನನ್ನು ಕಂಡುಕೊಂಡಿದ್ದಾನೆಯೋ, ಅದನ್ನು ಜನರೊಂದಿಗೆ ಹಂಚಿಕೊಳ್ಳಬೇಕೆಂದು ಬಯಸಿದ. ಏಕೆಂದರೆ, “ಅತಿಯಾಗಿ ಮಧುವನ್ನು ಹೀರಿದ ದುಂಬಿಯು ಆಯಾಸಗೊಂಡಿರುವಂತೆ ನಾನು ಪಡೆದಿರುವ ಅರಿವಿನಿಂದ ನಾನು ಬಳಲಿದ್ದೇನೆ. ಈಗ ಈ ಮಧುಕರ ವೃತ್ತಿಯನ್ನು ಮಾಡಬೇಕು. ಸೂರ್ಯನು ಪಡುವಣದಲ್ಲಿ ಸಂಜೆ ಇಳಿಯುವಂತೆ ಈ ಪ್ರವಾದಿಯೂ, ದಾರ್ಶನಿಕನೂ, ಮಿಂಚನ್ನು ಕಂಡುಕೊಂಡಿರುವ ಅತಿಮಾನವನೂ, ಆನಂದದ ಪ್ರತಿಮೆಯಾಗಿರುವವನೂ ಇಳಿಯಬೇಕಿದೆ. ಏಕೆಂದರೆ, ಇಳಿಯದೇ ಹೋದರೆ ಕೆಳಗಿರುವ ಜನರಿಗೆ ನಾವು ಪಡೆದಿರುವುದನ್ನು ನೀಡಲಾಗುವುದಿಲ್ಲ. ಏರುತ್ತಲೇ ಹೋದರೆ ಏರಲಾಗದವರಿಗೆ ಅತಿಮಾನವನ ಚೈತನ್ಯವನ್ನು ತಗುಲಿಸುವುದಾದರೂ ಹೇಗೆ?” ಎನ್ನುತ್ತಾ ಸೂರ್ಯನನ್ನು ಸಮಾನತೆಯ ಕಣ್ಣು ಎಂದು ಕರೆಯುತ್ತಾನೆ.

ರಾತ್ರಿ ಸುಖವಾದ ನಿದ್ರೆ ಮಾಡಲು ಇಡೀ ದಿನ ಎಚ್ಚರವಾಗಿರಬೇಕು ಎಂಬ ಅರ್ಥದಲ್ಲಿ ನ್ಶೆತಿಕತೆಯನ್ನು ಬೋಧಿಸುವ ಪಂಡಿತರನ್ನು ಕಂಡು ಕಂಡು ಇವನಿಗೆ ನಗುಬರುತ್ತದೆ. ಬದುಕಿನ ಕೊನೆಯಲ್ಲಿ ಶಾಂತಿಗಾಣಲು ಇಡೀ ಬದುಕು ಸದ್ಗುಣಗಳನ್ನು ಪಾಲಿಸುವುದು, ಒಳ್ಳೆಯವನಾಗಿರುವುದಕ್ಕೆ ಹೆಣಗಾಡುವುದು ನಗೆ ತರುವುದು ನೀಷೆಗೆ. ಇಂತಹ ಆಷಾಢಭೂತಿಗಿಂತ ಪ್ರಾಮಾಣಿಕ ವ್ಯಕ್ತಿಯಾಗಿ ಹುಚ್ಚನ್ನು ಹೊಂದಿರುವುದು ಒಂದು ಅನುಗ್ರಹವೆನ್ನುತ್ತಾನೆ ನೀಷೆ.

“ಯಾರೂ ತಿಳಿಯದ ಅನೇಕಾನೇಕ ಬಗೆಯ ಅಂತರಂಗಗಳು ಈ ಲೋಕದಲ್ಲಿವೆ. ಸರಿ, ಇದನ್ನು ತಿಳಿಯಬೇಕೆಂದರೆ ಮೊದಲು ತನ್ನದೇ ಅಂತರಂಗವನ್ನು ರೂಪಿಸಿಕೊಳ್ಳಬೇಕು. ಆಮೇಲೆ ತಿಳಿದುಕೊಳ್ಳಬೇಕು” ಎನ್ನುವ ಝರತುಷ್ಟ್ರ ವ್ಯಕ್ತಿವಾದಿಯಂತೆ ಕಾಣುತ್ತಾನೆ. ಆದರೆ, ಝರತುಷ್ಟ್ರ ಭೇಟಿ ಮಾಡುವ ಯುವಕನಾಗಲಿ, ಇತರರಾಗಲಿ ಒಬ್ಬೊಬ್ಬರೂ ಒಂದೊಂದು ಅರಿಮೆಗಳಿಂದ, ವ್ಯಸನಗಳಿಂದ, ಗೀಳುಗಳಿಂದ; ಒಟ್ಟಾರೆ ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವರು. ಆದರೆ ಝರತುಷ್ಟ್ರ ಅವನ್ನು ಸಮಸ್ಯೆ ಎನ್ನುವುದಿಲ್ಲ. ವಾಸ್ತವ ಎನ್ನುತ್ತಾನೆ. ಆದರೆ ಸಂವಾದಗಳಿಂದ ಸಮಾಲೋಚನೆ ಮಾಡಿ ಅವುಗಳಿಂದ ಹೊರತಾಗಲು ನೆರವಾಗುತ್ತಾನೆ.

ದಸ್ ಸ್ಪೋಕ್ ಝರತುಷ್ಟ್ರ ಜಗತ್ತಿನ ಮಾನವ ಮನಸ್ಥಿತಿಯ ಡೋಲಾಯಮಾನದ ಸ್ಥಿತಿಗತಿಗಳನ್ನು ಒಳಿತು ಕೆಡಕುಗಳಿಂದಾಚೆಗೆ ಮೆಚ್ಚುತ್ತಾ ಬೆತ್ತಲೆಯಾಗಿರುವ ಚೈತನ್ಯವಾಗಿ ನಿಲ್ಲುತ್ತದೆ. ಅದೊಂದು ವಿದ್ಯುತ್ಚಕ್ತಿಯಂತೆ ಬರಿಯ ಚೈತನ್ಯ. ಯಾರು ಯಾವುದಕ್ಕೆ ಬಳಸಿಕೊಳ್ಳುವರೋ ಅವರವರ ವಿವೇಚನೆ ಮತ್ತು ಗ್ರಹಿಕೆಗೆ ಬಿಟ್ಟದ್ದು. ಮೂಲದ್ರವ್ಯದಂತೆ ಒದಗುವ ಯಾವುದೇ ಚೈತ್ಯನ್ಯದ ಜಾಯಮಾನ ಅದೇ ಆಗಿರುತ್ತದೆ.

ಭಗವತ್ಗೀತೆಯನ್ನು ಗೋಡ್ಸೆಯೂ ಓದುತ್ತಿದ್ದ, ಗಾಂಧಿಯೂ ಓದುತ್ತಿದ್ದರು. ಬಾಲ ಗಂಗಾಧರ ತಿಲಕ್ ಓದಿ ರಚಿಸಿದ ಭಾರತೀಯರ ತಾತ್ವಿಕತೆಯು ಡಿ ಡಿ ಕೋಸಾಂಬಿಯವರು ಗೀತೆಯಿಂದ ಗ್ರಹಿಸಿದ್ದಕ್ಕಿಂತ ಭಿನ್ನ. ಆದರೆ ಅವರವರ ಪ್ರಾಮಾಣಿಕ ಬದ್ಧತೆಯಿಂದ ಅವರು ಗ್ರಹಿಸಿದ ತಾತ್ವಿಕತೆಯು ಅವರವರ ನಡೆನುಡಿಗಳಲ್ಲಿ ಪುಟಕಿಟ್ಟುಕೊಳ್ಳುತ್ತದೆ.

ಹಿಟ್ಲರನಿಗೆ ಅರ್ಥವಾದ ನೀಷೆಯ ಅತಿಮಾನವತ್ವವಾದವು ಬೇರೊಬ್ಬರ ಗ್ರಹಿಕೆಯಲ್ಲಿ ಮನುಷ್ಯತ್ವ ಮತ್ತು ಪಶುತ್ವಗಳನ್ನು ಮೀರಿದ ಬಯಲಲ್ಲಿ ಕರುಣೆಯ ಕಣ್ಣ ಮಿಂಚಾದರೆ, ಪಡೆದ ಸಮಭಾವದ ಆನಂದವಾದರೆ ಆಶ್ಚರ್ಯವೇನಿಲ್ಲ. ಏಕೆಂದರೆ ‘ಝರತುಷ್ಟ್ರ ಹಾಗೆಂದದ್ದು’ ಮೂಲದ್ರವ್ಯಗಳನ್ನೇ ಹೊರತು ಸಿದ್ಧವಿಷಯಗಳನ್ನಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...