Homeಅಂಕಣಗಳುದಸ್ ಸ್ಪೋಕ್ ಝರತುಷ್ಟ್ರ ನೀಷೆಯ ಕೃತಿ ಹಿಟ್ಲರಿನಿಗೆ ಅರ್ಥವಾಗಿದ್ದು ಹೇಗೆ?

ದಸ್ ಸ್ಪೋಕ್ ಝರತುಷ್ಟ್ರ ನೀಷೆಯ ಕೃತಿ ಹಿಟ್ಲರಿನಿಗೆ ಅರ್ಥವಾಗಿದ್ದು ಹೇಗೆ?

- Advertisement -
- Advertisement -

ದಸ್ ಸ್ಪೋಕ್ ಝರತುಷ್ಟ್ರ ನೀಷೆಯ ಒಂದು ಕೃತಿ. ಅದು ಜರ್ಮನಿಯ ಸರ್ವಾಧಿಕಾರಿ ಹಿಟ್ಲರ್‍ನಂತಹ ಸರ್ವಾಧಿಕಾರಿಗೆ ಅತಿಮಾನವತೆಯ ಪಾಠ ಮಾಡಿತೇ? ಯಾವ ರಣ-ರತಿಗಳಿಗೆ ಅಮಾನವೀಯ ರೌದ್ರವನ್ನು ತುಂಬಿ ಮನುಕುಲದಲ್ಲಿಯೇ ರಕ್ತದಲ್ಲಿ ಕೆಟ್ಟ ಇತಿಹಾಸ ಬರೆದ ನಾಜಿಗಳಿಗೆ ಪುಕ್ಕಟೆಯಾಗಿ ಈ ದಸ್ ಸ್ಪೋಕ್ ಝರತುಷ್ಟ್ರ ಹಂಚುವಷ್ಟು ಕೇಡಿನ ಸಂಚಾಗಿತ್ತೇ ಈ ಕೃತಿ.

ಇಲ್ಲ. “ಮನುಷ್ಯತ್ವ ಎಂಬುವುದು ಪಶುತ್ವ ಮತ್ತು ಅತಿಮಾನವತ್ವದ ನಡುವಿನ ಆಳವಾದ ಕಣಿವೆಯ ಮೇಲೆ ಕಟ್ಟಲ್ಪಟ್ಟಿರುವ ಹಗ್ಗ. ಇದರ ಮೇಲೆ ನಡೆಯುವುದಾಗಲಿ, ದಾಟುವುದಾಗಲಿ, ಹಿಂದಕ್ಕೆ ತಿರುಗಿ ನೋಡುವುದಾಗಲಿ, ಅಲ್ಲಿಯೇ ನಿಂತು ತಳಮಳಗೊಳ್ಳುವುದಾಗಲಿ ಅಪಾಯಕರ. ಮನುಷ್ಯನೆಂದರೆ ಪಶುತ್ವ ಮತ್ತು ಅತಿಮಾನವತ್ವ; ಈ ಎರಡರ ನಡುವಿನ ಸೇತುವೆಯೇ ಹೊರತು, ಮನುಷ್ಯತ್ವವು ಗುರಿಯೇನಲ್ಲ.” ಹಾಗೆಂದು ಝರತುಷ್ಟ್ರನಿಂದ ಹೇಳಿಸುವ ನೀಷೆಗೆ ಮನುಷ್ಯನೆಂದರೆ ಇಷ್ಟ. ಏಕೆಂದರೆ ಅವನು ಹಿಂದಕ್ಕೂ ಸರಿಯಬಲ್ಲ. ಮುಂದಕ್ಕೂ ಸಾಗಬಲ್ಲ.

ತೂಗಾಡುವ ಲೋಲಕದಂತಿರುವ ಡೋಲಾಯಮಾನದ ಸ್ಥಿತಿಯಲ್ಲಿರುವ ಮನಸ್ಸಿನ ಒಂದೊಂದು ಅತಿ ಸಣ್ಣ ಚಲನೆಯ ಸ್ಥಿತಿಯನ್ನು ಒಪ್ಪುವ ಅಥವಾ ಮೆಚ್ಚುವ ಝರತುಷ್ಟ್ರ ನೀಷೆಯ ಮನಸ್ಸಿನ ತಾತ್ವಿಕ ತಾಕಲಾಟಗಳೇ ಆಗಿವೆ. ಅವನು ಒಳಿತು ಕೆಡಕುಗಳ ಆಚೆಗೆ ಸಾಗುವ ಚೈತನ್ಯ. ಚೈತನ್ಯವು ಇದು ಸಮ್ಮತ, ಇದು ತಿರಸ್ಕೃತವೆಂದು ನೋಡದು. ಇದು ಒಳ್ಳೆಯದು ಅಥವಾ ಕೆಟ್ಟದು ಎಂದು ನಿರ್ಧರಿಸದು. ಇದು ತಮ್ಮವರು, ಅವರು ಪರಕೀಯರೆಂದು ಪಕ್ಷಪಾತ ಮಾಡದು.

ದೇವರು ಸತ್ತ ಎಂದು ತಾನು ಸ್ಪಷ್ಟವಾಗಿ ಅರಿತವನಂತೆ ಘೋಷಿಸುತ್ತಾ ಕ್ರೈಸ್ತ ಧರ್ಮಕ್ಕೆ ವಿರೋಧದ ದಾರಿಯಲ್ಲಿ ನಡೆದವನಂತೆ ಕಾಣುತ್ತಾನೆ. ಆದರೆ, “ಕೆಳಕ್ಕೆ ಬಿದ್ದಿರುವವರನ್ನು ನಾನು ಪ್ರೀತಿಸುತ್ತೇನೆ. ಏಕೆಂದರೆ ಆಚೆಯ ತೀರಕ್ಕಾಗಿ ಹಾತೊರೆಯುತ್ತಿರುವ ಅವರು ಗೌರವಕ್ಕೆ ಪಾತ್ರರಾಗುತ್ತಾರೆ. ಸ್ವರ್ಗಗಳಿಗಾಗಿ ಬೀಳಲು ಸಿದ್ಧವಿರುವ, ತ್ಯಾಗಗಳನ್ನು ಮಾಡುವವರನ್ನು ನಾನು ಮೆಚ್ಚುವುದಿಲ್ಲ” ಎಂದು ಯೇಸುವಿನ ದನಿಯನ್ನು ಪುನರುಚ್ಚರಿಸುತ್ತಾನೆ.

ಜೂಜಾಡುವಾಗ ದಾಳಗಳು ತನ್ನ ಅನುಕೂಲಕ್ಕೆ ಬಿದ್ದರೆ ನಾನು ಮೋಸಗಾರನೇ ಎಂದು ನಾಚುವವನನ್ನು ಮೆಚ್ಚುವ ನೀಷೆಯಲ್ಲಿ ಅಪರಾಧ ಪ್ರಜ್ಞೆಯೂ ಇರುತ್ತದೆ. ಅದನ್ನು ಅಪರಾಧವೆಂದು ಹೇಳಲು ಸಿದ್ಧವಿಲ್ಲದೇ ಅಸ್ತಿತ್ವದಲ್ಲಿ ಘಟಿಸುತ್ತಿರುವ ಒಂದು ವಿದ್ಯಮಾನದಂತೆ ಮೆಚ್ಚುವ ಮನಸ್ಥಿತಿಯೂ ಇದೆ.

ಇಂಥಾ ದ್ವಂದ್ವ ಮನಸ್ಥಿತಿಯನ್ನು ಪ್ರಾಮಾಣಿಕವಾಗಿಯೇ ಹೊಂದಿದ್ದ ನೀಷೆ ಹುಚ್ಚಾಸ್ಪತ್ರೆಯಲ್ಲಿ ದಿನಗಳನ್ನು ಕಳೆಯಬೇಕಾಯಿತು. ಹೊರಗಿದ್ದ ಲೋಕವನ್ನೂ ಮತ್ತು ತಾನು ಕಂಡುಕೊಂಡಿದ್ದ ಲೋಕವನ್ನೂ ಏಕಕಾಲದಲ್ಲಿ ಲೋಲಕದಂತೆ ಡೋಲಾಯಮಾನದ ಸ್ಥಿತಿಯಲ್ಲಿ ನೋಡುತ್ತಿದ್ದ. ಪಕ್ಷಪಾತಗಳಿಲ್ಲದೇ ನೋಡುತ್ತಿದ್ದ. ಒಳಿತು ಕೆಡಕುಗಳ ಭಾವಗಳಿಲ್ಲದೇ ನೋಡುತ್ತಿದ್ದ. ಪಕ್ಷವಹಿಸದ ಕಾರಣ ಅವನ ಮುಕ್ತ ಚೈತನ್ಯವಾಗಿದ್ದ. ಮುಕ್ತವಾದ ಹೃದಯವನ್ನು ಹೊಂದಿದ್ದ. ಸಂಘರ್ಷಪ್ರಿಯ ಸಮಾಜದಲ್ಲಿ ಯಾವುದಾದರೂ ಪಕ್ಷವನ್ನು ವಹಿಸದಿದ್ದರೆ ಅವನನ್ನು ಬೆಂಬಲಿಸಲು ಯಾವ ಪಕ್ಷದವರೂ ಬರುವುದಿಲ್ಲ. ಗಾಯವಾದರೆ ಆಗಲಿ ಎನ್ನುತ್ತಾನೆ. ಹುಚ್ಚನಲ್ಲವೇ ಅವನು? ಗಾಯಗಳನ್ನು ಸಹಿಸಿಕೊಳ್ಳುತ್ತಾ ತನ್ನ ಆಂತರ್ಯವನ್ನು ಕಾಪಾಡಿಕೊಳ್ಳುವವನು ಹೆಚ್ಚಲ್ಲವೇ ಅವನು?

ಖಲೀಲ್ ಗಿಬ್ರಾನನ ಅಲ್‍ಮುಸ್ತಾಫನಂತೆ ಝರತುಷ್ಟ್ರ ಯೌವನದ ಪ್ರೌಡಿಮೆಯ ವಯಸ್ಸಿನಲ್ಲಿ ಮನೆಯನ್ನು ಬಿಟ್ಟು ಬೆಟ್ಟಗುಡ್ಡಗಳ ಕಡೆ ತೆರಳಿ ಏಕಾಂತದಲ್ಲಿ ಹತ್ತು ವರ್ಷಗಳನ್ನು ಕಳೆದ. ಮಿಂಚನ್ನು ಕಂಡುಕೊಂಡ. ಆನಂದದಿಂದಲೇ ಹೊತ್ತುಹೊತ್ತನ್ನೂ ಕಳೆದ. ಕೊನೆಗೊಂದು ದಿನ ತಾನು ಏನನ್ನು ಕಂಡುಕೊಂಡಿದ್ದಾನೆಯೋ, ಅದನ್ನು ಜನರೊಂದಿಗೆ ಹಂಚಿಕೊಳ್ಳಬೇಕೆಂದು ಬಯಸಿದ. ಏಕೆಂದರೆ, “ಅತಿಯಾಗಿ ಮಧುವನ್ನು ಹೀರಿದ ದುಂಬಿಯು ಆಯಾಸಗೊಂಡಿರುವಂತೆ ನಾನು ಪಡೆದಿರುವ ಅರಿವಿನಿಂದ ನಾನು ಬಳಲಿದ್ದೇನೆ. ಈಗ ಈ ಮಧುಕರ ವೃತ್ತಿಯನ್ನು ಮಾಡಬೇಕು. ಸೂರ್ಯನು ಪಡುವಣದಲ್ಲಿ ಸಂಜೆ ಇಳಿಯುವಂತೆ ಈ ಪ್ರವಾದಿಯೂ, ದಾರ್ಶನಿಕನೂ, ಮಿಂಚನ್ನು ಕಂಡುಕೊಂಡಿರುವ ಅತಿಮಾನವನೂ, ಆನಂದದ ಪ್ರತಿಮೆಯಾಗಿರುವವನೂ ಇಳಿಯಬೇಕಿದೆ. ಏಕೆಂದರೆ, ಇಳಿಯದೇ ಹೋದರೆ ಕೆಳಗಿರುವ ಜನರಿಗೆ ನಾವು ಪಡೆದಿರುವುದನ್ನು ನೀಡಲಾಗುವುದಿಲ್ಲ. ಏರುತ್ತಲೇ ಹೋದರೆ ಏರಲಾಗದವರಿಗೆ ಅತಿಮಾನವನ ಚೈತನ್ಯವನ್ನು ತಗುಲಿಸುವುದಾದರೂ ಹೇಗೆ?” ಎನ್ನುತ್ತಾ ಸೂರ್ಯನನ್ನು ಸಮಾನತೆಯ ಕಣ್ಣು ಎಂದು ಕರೆಯುತ್ತಾನೆ.

ರಾತ್ರಿ ಸುಖವಾದ ನಿದ್ರೆ ಮಾಡಲು ಇಡೀ ದಿನ ಎಚ್ಚರವಾಗಿರಬೇಕು ಎಂಬ ಅರ್ಥದಲ್ಲಿ ನ್ಶೆತಿಕತೆಯನ್ನು ಬೋಧಿಸುವ ಪಂಡಿತರನ್ನು ಕಂಡು ಕಂಡು ಇವನಿಗೆ ನಗುಬರುತ್ತದೆ. ಬದುಕಿನ ಕೊನೆಯಲ್ಲಿ ಶಾಂತಿಗಾಣಲು ಇಡೀ ಬದುಕು ಸದ್ಗುಣಗಳನ್ನು ಪಾಲಿಸುವುದು, ಒಳ್ಳೆಯವನಾಗಿರುವುದಕ್ಕೆ ಹೆಣಗಾಡುವುದು ನಗೆ ತರುವುದು ನೀಷೆಗೆ. ಇಂತಹ ಆಷಾಢಭೂತಿಗಿಂತ ಪ್ರಾಮಾಣಿಕ ವ್ಯಕ್ತಿಯಾಗಿ ಹುಚ್ಚನ್ನು ಹೊಂದಿರುವುದು ಒಂದು ಅನುಗ್ರಹವೆನ್ನುತ್ತಾನೆ ನೀಷೆ.

“ಯಾರೂ ತಿಳಿಯದ ಅನೇಕಾನೇಕ ಬಗೆಯ ಅಂತರಂಗಗಳು ಈ ಲೋಕದಲ್ಲಿವೆ. ಸರಿ, ಇದನ್ನು ತಿಳಿಯಬೇಕೆಂದರೆ ಮೊದಲು ತನ್ನದೇ ಅಂತರಂಗವನ್ನು ರೂಪಿಸಿಕೊಳ್ಳಬೇಕು. ಆಮೇಲೆ ತಿಳಿದುಕೊಳ್ಳಬೇಕು” ಎನ್ನುವ ಝರತುಷ್ಟ್ರ ವ್ಯಕ್ತಿವಾದಿಯಂತೆ ಕಾಣುತ್ತಾನೆ. ಆದರೆ, ಝರತುಷ್ಟ್ರ ಭೇಟಿ ಮಾಡುವ ಯುವಕನಾಗಲಿ, ಇತರರಾಗಲಿ ಒಬ್ಬೊಬ್ಬರೂ ಒಂದೊಂದು ಅರಿಮೆಗಳಿಂದ, ವ್ಯಸನಗಳಿಂದ, ಗೀಳುಗಳಿಂದ; ಒಟ್ಟಾರೆ ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವರು. ಆದರೆ ಝರತುಷ್ಟ್ರ ಅವನ್ನು ಸಮಸ್ಯೆ ಎನ್ನುವುದಿಲ್ಲ. ವಾಸ್ತವ ಎನ್ನುತ್ತಾನೆ. ಆದರೆ ಸಂವಾದಗಳಿಂದ ಸಮಾಲೋಚನೆ ಮಾಡಿ ಅವುಗಳಿಂದ ಹೊರತಾಗಲು ನೆರವಾಗುತ್ತಾನೆ.

ದಸ್ ಸ್ಪೋಕ್ ಝರತುಷ್ಟ್ರ ಜಗತ್ತಿನ ಮಾನವ ಮನಸ್ಥಿತಿಯ ಡೋಲಾಯಮಾನದ ಸ್ಥಿತಿಗತಿಗಳನ್ನು ಒಳಿತು ಕೆಡಕುಗಳಿಂದಾಚೆಗೆ ಮೆಚ್ಚುತ್ತಾ ಬೆತ್ತಲೆಯಾಗಿರುವ ಚೈತನ್ಯವಾಗಿ ನಿಲ್ಲುತ್ತದೆ. ಅದೊಂದು ವಿದ್ಯುತ್ಚಕ್ತಿಯಂತೆ ಬರಿಯ ಚೈತನ್ಯ. ಯಾರು ಯಾವುದಕ್ಕೆ ಬಳಸಿಕೊಳ್ಳುವರೋ ಅವರವರ ವಿವೇಚನೆ ಮತ್ತು ಗ್ರಹಿಕೆಗೆ ಬಿಟ್ಟದ್ದು. ಮೂಲದ್ರವ್ಯದಂತೆ ಒದಗುವ ಯಾವುದೇ ಚೈತ್ಯನ್ಯದ ಜಾಯಮಾನ ಅದೇ ಆಗಿರುತ್ತದೆ.

ಭಗವತ್ಗೀತೆಯನ್ನು ಗೋಡ್ಸೆಯೂ ಓದುತ್ತಿದ್ದ, ಗಾಂಧಿಯೂ ಓದುತ್ತಿದ್ದರು. ಬಾಲ ಗಂಗಾಧರ ತಿಲಕ್ ಓದಿ ರಚಿಸಿದ ಭಾರತೀಯರ ತಾತ್ವಿಕತೆಯು ಡಿ ಡಿ ಕೋಸಾಂಬಿಯವರು ಗೀತೆಯಿಂದ ಗ್ರಹಿಸಿದ್ದಕ್ಕಿಂತ ಭಿನ್ನ. ಆದರೆ ಅವರವರ ಪ್ರಾಮಾಣಿಕ ಬದ್ಧತೆಯಿಂದ ಅವರು ಗ್ರಹಿಸಿದ ತಾತ್ವಿಕತೆಯು ಅವರವರ ನಡೆನುಡಿಗಳಲ್ಲಿ ಪುಟಕಿಟ್ಟುಕೊಳ್ಳುತ್ತದೆ.

ಹಿಟ್ಲರನಿಗೆ ಅರ್ಥವಾದ ನೀಷೆಯ ಅತಿಮಾನವತ್ವವಾದವು ಬೇರೊಬ್ಬರ ಗ್ರಹಿಕೆಯಲ್ಲಿ ಮನುಷ್ಯತ್ವ ಮತ್ತು ಪಶುತ್ವಗಳನ್ನು ಮೀರಿದ ಬಯಲಲ್ಲಿ ಕರುಣೆಯ ಕಣ್ಣ ಮಿಂಚಾದರೆ, ಪಡೆದ ಸಮಭಾವದ ಆನಂದವಾದರೆ ಆಶ್ಚರ್ಯವೇನಿಲ್ಲ. ಏಕೆಂದರೆ ‘ಝರತುಷ್ಟ್ರ ಹಾಗೆಂದದ್ದು’ ಮೂಲದ್ರವ್ಯಗಳನ್ನೇ ಹೊರತು ಸಿದ್ಧವಿಷಯಗಳನ್ನಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...