Homeಅಂಕಣಗಳುದಸ್ ಸ್ಪೋಕ್ ಝರತುಷ್ಟ್ರ ನೀಷೆಯ ಕೃತಿ ಹಿಟ್ಲರಿನಿಗೆ ಅರ್ಥವಾಗಿದ್ದು ಹೇಗೆ?

ದಸ್ ಸ್ಪೋಕ್ ಝರತುಷ್ಟ್ರ ನೀಷೆಯ ಕೃತಿ ಹಿಟ್ಲರಿನಿಗೆ ಅರ್ಥವಾಗಿದ್ದು ಹೇಗೆ?

- Advertisement -
- Advertisement -

ದಸ್ ಸ್ಪೋಕ್ ಝರತುಷ್ಟ್ರ ನೀಷೆಯ ಒಂದು ಕೃತಿ. ಅದು ಜರ್ಮನಿಯ ಸರ್ವಾಧಿಕಾರಿ ಹಿಟ್ಲರ್‍ನಂತಹ ಸರ್ವಾಧಿಕಾರಿಗೆ ಅತಿಮಾನವತೆಯ ಪಾಠ ಮಾಡಿತೇ? ಯಾವ ರಣ-ರತಿಗಳಿಗೆ ಅಮಾನವೀಯ ರೌದ್ರವನ್ನು ತುಂಬಿ ಮನುಕುಲದಲ್ಲಿಯೇ ರಕ್ತದಲ್ಲಿ ಕೆಟ್ಟ ಇತಿಹಾಸ ಬರೆದ ನಾಜಿಗಳಿಗೆ ಪುಕ್ಕಟೆಯಾಗಿ ಈ ದಸ್ ಸ್ಪೋಕ್ ಝರತುಷ್ಟ್ರ ಹಂಚುವಷ್ಟು ಕೇಡಿನ ಸಂಚಾಗಿತ್ತೇ ಈ ಕೃತಿ.

ಇಲ್ಲ. “ಮನುಷ್ಯತ್ವ ಎಂಬುವುದು ಪಶುತ್ವ ಮತ್ತು ಅತಿಮಾನವತ್ವದ ನಡುವಿನ ಆಳವಾದ ಕಣಿವೆಯ ಮೇಲೆ ಕಟ್ಟಲ್ಪಟ್ಟಿರುವ ಹಗ್ಗ. ಇದರ ಮೇಲೆ ನಡೆಯುವುದಾಗಲಿ, ದಾಟುವುದಾಗಲಿ, ಹಿಂದಕ್ಕೆ ತಿರುಗಿ ನೋಡುವುದಾಗಲಿ, ಅಲ್ಲಿಯೇ ನಿಂತು ತಳಮಳಗೊಳ್ಳುವುದಾಗಲಿ ಅಪಾಯಕರ. ಮನುಷ್ಯನೆಂದರೆ ಪಶುತ್ವ ಮತ್ತು ಅತಿಮಾನವತ್ವ; ಈ ಎರಡರ ನಡುವಿನ ಸೇತುವೆಯೇ ಹೊರತು, ಮನುಷ್ಯತ್ವವು ಗುರಿಯೇನಲ್ಲ.” ಹಾಗೆಂದು ಝರತುಷ್ಟ್ರನಿಂದ ಹೇಳಿಸುವ ನೀಷೆಗೆ ಮನುಷ್ಯನೆಂದರೆ ಇಷ್ಟ. ಏಕೆಂದರೆ ಅವನು ಹಿಂದಕ್ಕೂ ಸರಿಯಬಲ್ಲ. ಮುಂದಕ್ಕೂ ಸಾಗಬಲ್ಲ.

ತೂಗಾಡುವ ಲೋಲಕದಂತಿರುವ ಡೋಲಾಯಮಾನದ ಸ್ಥಿತಿಯಲ್ಲಿರುವ ಮನಸ್ಸಿನ ಒಂದೊಂದು ಅತಿ ಸಣ್ಣ ಚಲನೆಯ ಸ್ಥಿತಿಯನ್ನು ಒಪ್ಪುವ ಅಥವಾ ಮೆಚ್ಚುವ ಝರತುಷ್ಟ್ರ ನೀಷೆಯ ಮನಸ್ಸಿನ ತಾತ್ವಿಕ ತಾಕಲಾಟಗಳೇ ಆಗಿವೆ. ಅವನು ಒಳಿತು ಕೆಡಕುಗಳ ಆಚೆಗೆ ಸಾಗುವ ಚೈತನ್ಯ. ಚೈತನ್ಯವು ಇದು ಸಮ್ಮತ, ಇದು ತಿರಸ್ಕೃತವೆಂದು ನೋಡದು. ಇದು ಒಳ್ಳೆಯದು ಅಥವಾ ಕೆಟ್ಟದು ಎಂದು ನಿರ್ಧರಿಸದು. ಇದು ತಮ್ಮವರು, ಅವರು ಪರಕೀಯರೆಂದು ಪಕ್ಷಪಾತ ಮಾಡದು.

ದೇವರು ಸತ್ತ ಎಂದು ತಾನು ಸ್ಪಷ್ಟವಾಗಿ ಅರಿತವನಂತೆ ಘೋಷಿಸುತ್ತಾ ಕ್ರೈಸ್ತ ಧರ್ಮಕ್ಕೆ ವಿರೋಧದ ದಾರಿಯಲ್ಲಿ ನಡೆದವನಂತೆ ಕಾಣುತ್ತಾನೆ. ಆದರೆ, “ಕೆಳಕ್ಕೆ ಬಿದ್ದಿರುವವರನ್ನು ನಾನು ಪ್ರೀತಿಸುತ್ತೇನೆ. ಏಕೆಂದರೆ ಆಚೆಯ ತೀರಕ್ಕಾಗಿ ಹಾತೊರೆಯುತ್ತಿರುವ ಅವರು ಗೌರವಕ್ಕೆ ಪಾತ್ರರಾಗುತ್ತಾರೆ. ಸ್ವರ್ಗಗಳಿಗಾಗಿ ಬೀಳಲು ಸಿದ್ಧವಿರುವ, ತ್ಯಾಗಗಳನ್ನು ಮಾಡುವವರನ್ನು ನಾನು ಮೆಚ್ಚುವುದಿಲ್ಲ” ಎಂದು ಯೇಸುವಿನ ದನಿಯನ್ನು ಪುನರುಚ್ಚರಿಸುತ್ತಾನೆ.

ಜೂಜಾಡುವಾಗ ದಾಳಗಳು ತನ್ನ ಅನುಕೂಲಕ್ಕೆ ಬಿದ್ದರೆ ನಾನು ಮೋಸಗಾರನೇ ಎಂದು ನಾಚುವವನನ್ನು ಮೆಚ್ಚುವ ನೀಷೆಯಲ್ಲಿ ಅಪರಾಧ ಪ್ರಜ್ಞೆಯೂ ಇರುತ್ತದೆ. ಅದನ್ನು ಅಪರಾಧವೆಂದು ಹೇಳಲು ಸಿದ್ಧವಿಲ್ಲದೇ ಅಸ್ತಿತ್ವದಲ್ಲಿ ಘಟಿಸುತ್ತಿರುವ ಒಂದು ವಿದ್ಯಮಾನದಂತೆ ಮೆಚ್ಚುವ ಮನಸ್ಥಿತಿಯೂ ಇದೆ.

ಇಂಥಾ ದ್ವಂದ್ವ ಮನಸ್ಥಿತಿಯನ್ನು ಪ್ರಾಮಾಣಿಕವಾಗಿಯೇ ಹೊಂದಿದ್ದ ನೀಷೆ ಹುಚ್ಚಾಸ್ಪತ್ರೆಯಲ್ಲಿ ದಿನಗಳನ್ನು ಕಳೆಯಬೇಕಾಯಿತು. ಹೊರಗಿದ್ದ ಲೋಕವನ್ನೂ ಮತ್ತು ತಾನು ಕಂಡುಕೊಂಡಿದ್ದ ಲೋಕವನ್ನೂ ಏಕಕಾಲದಲ್ಲಿ ಲೋಲಕದಂತೆ ಡೋಲಾಯಮಾನದ ಸ್ಥಿತಿಯಲ್ಲಿ ನೋಡುತ್ತಿದ್ದ. ಪಕ್ಷಪಾತಗಳಿಲ್ಲದೇ ನೋಡುತ್ತಿದ್ದ. ಒಳಿತು ಕೆಡಕುಗಳ ಭಾವಗಳಿಲ್ಲದೇ ನೋಡುತ್ತಿದ್ದ. ಪಕ್ಷವಹಿಸದ ಕಾರಣ ಅವನ ಮುಕ್ತ ಚೈತನ್ಯವಾಗಿದ್ದ. ಮುಕ್ತವಾದ ಹೃದಯವನ್ನು ಹೊಂದಿದ್ದ. ಸಂಘರ್ಷಪ್ರಿಯ ಸಮಾಜದಲ್ಲಿ ಯಾವುದಾದರೂ ಪಕ್ಷವನ್ನು ವಹಿಸದಿದ್ದರೆ ಅವನನ್ನು ಬೆಂಬಲಿಸಲು ಯಾವ ಪಕ್ಷದವರೂ ಬರುವುದಿಲ್ಲ. ಗಾಯವಾದರೆ ಆಗಲಿ ಎನ್ನುತ್ತಾನೆ. ಹುಚ್ಚನಲ್ಲವೇ ಅವನು? ಗಾಯಗಳನ್ನು ಸಹಿಸಿಕೊಳ್ಳುತ್ತಾ ತನ್ನ ಆಂತರ್ಯವನ್ನು ಕಾಪಾಡಿಕೊಳ್ಳುವವನು ಹೆಚ್ಚಲ್ಲವೇ ಅವನು?

ಖಲೀಲ್ ಗಿಬ್ರಾನನ ಅಲ್‍ಮುಸ್ತಾಫನಂತೆ ಝರತುಷ್ಟ್ರ ಯೌವನದ ಪ್ರೌಡಿಮೆಯ ವಯಸ್ಸಿನಲ್ಲಿ ಮನೆಯನ್ನು ಬಿಟ್ಟು ಬೆಟ್ಟಗುಡ್ಡಗಳ ಕಡೆ ತೆರಳಿ ಏಕಾಂತದಲ್ಲಿ ಹತ್ತು ವರ್ಷಗಳನ್ನು ಕಳೆದ. ಮಿಂಚನ್ನು ಕಂಡುಕೊಂಡ. ಆನಂದದಿಂದಲೇ ಹೊತ್ತುಹೊತ್ತನ್ನೂ ಕಳೆದ. ಕೊನೆಗೊಂದು ದಿನ ತಾನು ಏನನ್ನು ಕಂಡುಕೊಂಡಿದ್ದಾನೆಯೋ, ಅದನ್ನು ಜನರೊಂದಿಗೆ ಹಂಚಿಕೊಳ್ಳಬೇಕೆಂದು ಬಯಸಿದ. ಏಕೆಂದರೆ, “ಅತಿಯಾಗಿ ಮಧುವನ್ನು ಹೀರಿದ ದುಂಬಿಯು ಆಯಾಸಗೊಂಡಿರುವಂತೆ ನಾನು ಪಡೆದಿರುವ ಅರಿವಿನಿಂದ ನಾನು ಬಳಲಿದ್ದೇನೆ. ಈಗ ಈ ಮಧುಕರ ವೃತ್ತಿಯನ್ನು ಮಾಡಬೇಕು. ಸೂರ್ಯನು ಪಡುವಣದಲ್ಲಿ ಸಂಜೆ ಇಳಿಯುವಂತೆ ಈ ಪ್ರವಾದಿಯೂ, ದಾರ್ಶನಿಕನೂ, ಮಿಂಚನ್ನು ಕಂಡುಕೊಂಡಿರುವ ಅತಿಮಾನವನೂ, ಆನಂದದ ಪ್ರತಿಮೆಯಾಗಿರುವವನೂ ಇಳಿಯಬೇಕಿದೆ. ಏಕೆಂದರೆ, ಇಳಿಯದೇ ಹೋದರೆ ಕೆಳಗಿರುವ ಜನರಿಗೆ ನಾವು ಪಡೆದಿರುವುದನ್ನು ನೀಡಲಾಗುವುದಿಲ್ಲ. ಏರುತ್ತಲೇ ಹೋದರೆ ಏರಲಾಗದವರಿಗೆ ಅತಿಮಾನವನ ಚೈತನ್ಯವನ್ನು ತಗುಲಿಸುವುದಾದರೂ ಹೇಗೆ?” ಎನ್ನುತ್ತಾ ಸೂರ್ಯನನ್ನು ಸಮಾನತೆಯ ಕಣ್ಣು ಎಂದು ಕರೆಯುತ್ತಾನೆ.

ರಾತ್ರಿ ಸುಖವಾದ ನಿದ್ರೆ ಮಾಡಲು ಇಡೀ ದಿನ ಎಚ್ಚರವಾಗಿರಬೇಕು ಎಂಬ ಅರ್ಥದಲ್ಲಿ ನ್ಶೆತಿಕತೆಯನ್ನು ಬೋಧಿಸುವ ಪಂಡಿತರನ್ನು ಕಂಡು ಕಂಡು ಇವನಿಗೆ ನಗುಬರುತ್ತದೆ. ಬದುಕಿನ ಕೊನೆಯಲ್ಲಿ ಶಾಂತಿಗಾಣಲು ಇಡೀ ಬದುಕು ಸದ್ಗುಣಗಳನ್ನು ಪಾಲಿಸುವುದು, ಒಳ್ಳೆಯವನಾಗಿರುವುದಕ್ಕೆ ಹೆಣಗಾಡುವುದು ನಗೆ ತರುವುದು ನೀಷೆಗೆ. ಇಂತಹ ಆಷಾಢಭೂತಿಗಿಂತ ಪ್ರಾಮಾಣಿಕ ವ್ಯಕ್ತಿಯಾಗಿ ಹುಚ್ಚನ್ನು ಹೊಂದಿರುವುದು ಒಂದು ಅನುಗ್ರಹವೆನ್ನುತ್ತಾನೆ ನೀಷೆ.

“ಯಾರೂ ತಿಳಿಯದ ಅನೇಕಾನೇಕ ಬಗೆಯ ಅಂತರಂಗಗಳು ಈ ಲೋಕದಲ್ಲಿವೆ. ಸರಿ, ಇದನ್ನು ತಿಳಿಯಬೇಕೆಂದರೆ ಮೊದಲು ತನ್ನದೇ ಅಂತರಂಗವನ್ನು ರೂಪಿಸಿಕೊಳ್ಳಬೇಕು. ಆಮೇಲೆ ತಿಳಿದುಕೊಳ್ಳಬೇಕು” ಎನ್ನುವ ಝರತುಷ್ಟ್ರ ವ್ಯಕ್ತಿವಾದಿಯಂತೆ ಕಾಣುತ್ತಾನೆ. ಆದರೆ, ಝರತುಷ್ಟ್ರ ಭೇಟಿ ಮಾಡುವ ಯುವಕನಾಗಲಿ, ಇತರರಾಗಲಿ ಒಬ್ಬೊಬ್ಬರೂ ಒಂದೊಂದು ಅರಿಮೆಗಳಿಂದ, ವ್ಯಸನಗಳಿಂದ, ಗೀಳುಗಳಿಂದ; ಒಟ್ಟಾರೆ ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವರು. ಆದರೆ ಝರತುಷ್ಟ್ರ ಅವನ್ನು ಸಮಸ್ಯೆ ಎನ್ನುವುದಿಲ್ಲ. ವಾಸ್ತವ ಎನ್ನುತ್ತಾನೆ. ಆದರೆ ಸಂವಾದಗಳಿಂದ ಸಮಾಲೋಚನೆ ಮಾಡಿ ಅವುಗಳಿಂದ ಹೊರತಾಗಲು ನೆರವಾಗುತ್ತಾನೆ.

ದಸ್ ಸ್ಪೋಕ್ ಝರತುಷ್ಟ್ರ ಜಗತ್ತಿನ ಮಾನವ ಮನಸ್ಥಿತಿಯ ಡೋಲಾಯಮಾನದ ಸ್ಥಿತಿಗತಿಗಳನ್ನು ಒಳಿತು ಕೆಡಕುಗಳಿಂದಾಚೆಗೆ ಮೆಚ್ಚುತ್ತಾ ಬೆತ್ತಲೆಯಾಗಿರುವ ಚೈತನ್ಯವಾಗಿ ನಿಲ್ಲುತ್ತದೆ. ಅದೊಂದು ವಿದ್ಯುತ್ಚಕ್ತಿಯಂತೆ ಬರಿಯ ಚೈತನ್ಯ. ಯಾರು ಯಾವುದಕ್ಕೆ ಬಳಸಿಕೊಳ್ಳುವರೋ ಅವರವರ ವಿವೇಚನೆ ಮತ್ತು ಗ್ರಹಿಕೆಗೆ ಬಿಟ್ಟದ್ದು. ಮೂಲದ್ರವ್ಯದಂತೆ ಒದಗುವ ಯಾವುದೇ ಚೈತ್ಯನ್ಯದ ಜಾಯಮಾನ ಅದೇ ಆಗಿರುತ್ತದೆ.

ಭಗವತ್ಗೀತೆಯನ್ನು ಗೋಡ್ಸೆಯೂ ಓದುತ್ತಿದ್ದ, ಗಾಂಧಿಯೂ ಓದುತ್ತಿದ್ದರು. ಬಾಲ ಗಂಗಾಧರ ತಿಲಕ್ ಓದಿ ರಚಿಸಿದ ಭಾರತೀಯರ ತಾತ್ವಿಕತೆಯು ಡಿ ಡಿ ಕೋಸಾಂಬಿಯವರು ಗೀತೆಯಿಂದ ಗ್ರಹಿಸಿದ್ದಕ್ಕಿಂತ ಭಿನ್ನ. ಆದರೆ ಅವರವರ ಪ್ರಾಮಾಣಿಕ ಬದ್ಧತೆಯಿಂದ ಅವರು ಗ್ರಹಿಸಿದ ತಾತ್ವಿಕತೆಯು ಅವರವರ ನಡೆನುಡಿಗಳಲ್ಲಿ ಪುಟಕಿಟ್ಟುಕೊಳ್ಳುತ್ತದೆ.

ಹಿಟ್ಲರನಿಗೆ ಅರ್ಥವಾದ ನೀಷೆಯ ಅತಿಮಾನವತ್ವವಾದವು ಬೇರೊಬ್ಬರ ಗ್ರಹಿಕೆಯಲ್ಲಿ ಮನುಷ್ಯತ್ವ ಮತ್ತು ಪಶುತ್ವಗಳನ್ನು ಮೀರಿದ ಬಯಲಲ್ಲಿ ಕರುಣೆಯ ಕಣ್ಣ ಮಿಂಚಾದರೆ, ಪಡೆದ ಸಮಭಾವದ ಆನಂದವಾದರೆ ಆಶ್ಚರ್ಯವೇನಿಲ್ಲ. ಏಕೆಂದರೆ ‘ಝರತುಷ್ಟ್ರ ಹಾಗೆಂದದ್ದು’ ಮೂಲದ್ರವ್ಯಗಳನ್ನೇ ಹೊರತು ಸಿದ್ಧವಿಷಯಗಳನ್ನಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...