Homeನ್ಯಾಯ ಪಥನ್ಯಾಯಮೂರ್ತಿ ಬೊಬ್ಡೆ ಅವಧಿಯಲ್ಲಿ ಸಂವಿಧಾನವನ್ನು ಕಾಯುವ ತನ್ನ ಪಾತ್ರವನ್ನುಸುಪ್ರೀಂ ಯಶಸ್ವಿಯಾಗಿ ನಿರ್ವಹಿಸಿತೇ?

ನ್ಯಾಯಮೂರ್ತಿ ಬೊಬ್ಡೆ ಅವಧಿಯಲ್ಲಿ ಸಂವಿಧಾನವನ್ನು ಕಾಯುವ ತನ್ನ ಪಾತ್ರವನ್ನುಸುಪ್ರೀಂ ಯಶಸ್ವಿಯಾಗಿ ನಿರ್ವಹಿಸಿತೇ?

- Advertisement -
- Advertisement -

ಭಾರತದ ಸುಪ್ರೀಂಕೋರ್ಟಿನ 47ನೇ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ಅವರ ಅಧಿಕಾರಾವಧಿಯು ಹದಿನೇಳು ಪ್ರಕ್ಷುಬ್ಧ ತಿಂಗಳುಗಳನ್ನು ವ್ಯಾಪಿಸಿತ್ತು. ಈ ಅವಧಿಯಲ್ಲಿ ದೇಶವು ತೀವ್ರ ಕೋವಿಡ್ ಬಿಕ್ಕಟ್ಟನಿಂದ ಬಳಲುತ್ತಿತ್ತು ಮತ್ತು ದೇಶಾದ್ಯಂತ ತಮ್ಮ ಅಭಿವ್ಯಕ್ತಿ ಮತ್ತು ಭಾಷಣ ಮಾಡುವ ಹಕ್ಕನ್ನು ಚಲಾಯಿಸಿದ ಸಾವಿರಾರು ಜನರನ್ನು ವಿವೇಚನಾರಹಿತವಾಗಿ ನಿರಾಕಾರಣವಾಗಿ ಬಂಧನಕ್ಕೆ ಒಳಪಡಿಸಲಾಯಿತು. ಈ ಬಿಕ್ಕಟ್ಟಿನ ಸಮಯದಲ್ಲಿ, ಕಾರ್ಯಾಂಗವು ತನ್ನ ಸಾಂವಿಧಾನಿಕ ಜವಾಬ್ದಾರಿಯನ್ನು ಪೂರೈಸಲು ಕಾರ್ಯನಿರ್ವಹಿಸುವಂತೆ ಮಾಡಲು ಮತ್ತು ಕಾರ್ಯಾಂಗದ ಕ್ರಮಗಳು ಸಂವಿಧಾನದ ಮಿತಿಗಳನ್ನು ಉಲ್ಲಂಘಿಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಸುಪ್ರೀಂಕೋರ್ಟ್ ಮೊರೆ ಹೋಗಲಾಯಿತು.

ಬೊಬ್ಡೆ ಅವರ ಅಡಿಯಲ್ಲಿ ನ್ಯಾಯಾಲಯ ಹೇಗೆ ಕಾರ್ಯ ನಿರ್ವಹಿಸಿತು?

ಸುಪ್ರೀಂಕೋರ್ಟ್ ಮಾಜಿ ನ್ಯಾಯಮೂರ್ತಿ ಲೋಕೂರ್ ಅವರು ಹೇಳಿದಂತೆ, ತೀವ್ರ ಕಠಿಣ ಮತ್ತು ಯೋಜಿತವಲ್ಲದ ಲಾಕ್‌ಡೌನ್‌ನಿಂದ ಹುಟ್ಟಿದ ಹಿಂದೆಂದೂ ಕಂಡಿರದ ವಲಸೆ ಬಿಕ್ಕಟ್ಟಿಗೆ ಸಮಯೋಚಿತವಾಗಿ ಪ್ರತಿಕ್ರಿಯಿಸಲಾಗದ ಅಸಮರ್ಥತೆಗಾಗಿ ನ್ಯಾಯಾಲಯಕ್ಕೆ ’ಎಫ್ ಗ್ರೇಡ್ ನೀಡಬೇಕು ಎಂದಿದ್ದರು. ನ್ಯಾಯಮೂರ್ತಿ ಗೋಪಾಲ್ ಗೌಡ ಅವರು ವಲಸೆ ಬಿಕ್ಕಟ್ಟಿನ ಬಗ್ಗೆ ಸರ್ಕಾರದ ಪ್ರತಿಕ್ರಿಯೆಯನ್ನು ’ಸರ್ವೋಚ್ಚ ವೈಫಲ್ಯದ ಉದಾಹರಣೆ ಮತ್ತು ಏನೂ ಕ್ರಮ ಕೈಗೊಳ್ಳದ ನ್ಯಾಯಾಲಯದ ನಡೆಯನ್ನು ತುರ್ತು ಪರಿಸ್ಥಿತಿಯ ಸಮಯದಲ್ಲಿ ಸುಪ್ರೀಂಕೋರ್ಟ್‌ನ ವೈಫಲ್ಯಕ್ಕೆ ಹೋಲಿಸಿದ್ದಾರೆ.

ಸಾಂವಿಧಾನಿಕ ಚೌಕಟ್ಟಿಗೆ ಮೂಲಭೂತವಾಗಿ ಸವಾಲೆಸೆದ ಕಾರ್ಯಾಂಗದ ಕ್ರಮಗಳಿಗೆ ಬಂದಾಗ, ಅದು ಧರ್ಮದ ಆಧಾರದ ಮೇಲೆ ತಾರತಮ್ಯ ಮಾಡದ ಸಾಂವಿಧಾನಿಕ ಭರವಸೆಯನ್ನು ಚೂರುಚೂರು ಮಾಡಿದ ಸಿಎಎ ಆಗಿರಬಹುದು, ಅಥವಾ ಅದು ಒಕ್ಕೂಟ ತತ್ವವನ್ನು ತುಳಿದುಹಾಕಿದ 370ನೇ ವಿಧಿಯ ಏಕಪಕ್ಷೀಯ ರದ್ದುಗೊಳಿಸುವಿಕೆಯಿರಬಹುದು, ಇಂತಹ ಸಂದರ್ಭಗಳಲ್ಲಿ ನ್ಯಾಯಾಲಯವು ಮೌನವನ್ನು ಆಯ್ಕೆ ಮಾಡಿಕೊಂಡಿತು.

ಸಂಕ್ಷಿಪ್ತವಾಗಿ ಹೇಳುವುದಾದರೆ, ಮುಖ್ಯ ನ್ಯಾಯಮೂರ್ತಿಯಾಗಿದ್ದ ಬೊಬ್ಡೆ ನೇತೃತ್ವದ ಸುಪ್ರೀಂಕೋರ್ಟ್‌ನ ಪ್ರಮುಖ ಸಮಸ್ಯೆ ಎಂದರೆ, ಸಂವಿಧಾನದ ಮೇಲೆಯೇ ಸವಾರಿ ಮಾಡುವ ಕಾರ್ಯಾಂಗದ ಕ್ರಮಗಳನ್ನು ಪ್ರಶ್ನಿಸಲು ಹೆದರಬೇಕಿಲ್ಲದ ಸುಪ್ರೀಂಕೋರ್ಟ್ ಸಾಂವಿಧಾನಿಕ ನ್ಯಾಯಾಲಯದ ಪಾತ್ರವನ್ನು ನಿರ್ವಹಿಸಲು ಸಂಪೂರ್ಣವಾಗಿ ನಿರಾಕರಿಸಿದ್ದು. ಕಾರ್ಯಾಂಗದ ದುರಹಂಕಾರದ ವಿರುದ್ಧ ನಾಗರಿಕರ ಪರವಾಗಿ ನಿಲ್ಲಲು ಹೆದರದ ದೇಶದ ಸ್ವತಂತ್ರ ಅಂಗವಾಗಿ ಸುಪ್ರೀಂಕೋರ್ಟ್‌ನ ಸಾಂವಿಧಾನಿಕ ಘನತೆ ಮುಖ್ಯ ನ್ಯಾಯಮೂರ್ತಿ ಬೊಬ್ಡೆ ಅವರ ಅಧಿಕಾರಾವಧಿಯಲ್ಲಿ ತೀವ್ರವಾಗಿ ಕುಬ್ಜಗೊಂಡಿತು. ಸಾಂವಿಧಾನಿಕ ತಜ್ಞ ಗೌತಮ್ ಭಾಟಿಯಾ ಅವರು ಈ ಕುರಿತು ತೀವ್ರ ವಿಮರ್ಶೆ ಮಾಡುತ್ತ, ಬೊಬ್ಡೆ ಅವರ ಅಧಿಕಾರಾವಧಿಯನ್ನು ’ಸಿಂಹಾಸನದ ಕೆಳಗಿರುವ ಇಲಿ, ಅದು ಕೆಲವೊಮ್ಮೆ ಕೀರಲು ಧ್ವನಿಯಲ್ಲಿ ಶಬ್ದ ಮಾಡುತ್ತದೆ ಮತ್ತು ರಾಜನಿಗಿಂತಲೂ ಮುಂಚೆ ಬರುವ ಯಾರೊಬ್ಬನ ಕಾಲ್ಬೆರಳುಗಳನ್ನು ಕಚ್ಚಲು ಕೆಲವೊಮ್ಮೆ ಮುಂದಾಗುತ್ತದೆ’ ಎಂದು ಅಭಿಪ್ರಾಯ ಪಟ್ಟಿದ್ದಾರೆ. ದೆಹಲಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ರೇಖಾ ಶರ್ಮಾ ಅವರು, ನ್ಯಾಯಮೂರ್ತಿ ಬೊಬ್ಡೆ ಅವರು ’ಕಾಲದ ಮರಳಿನ ಮೇಲೆ ಹೆಜ್ಜೆ ಗುರುತುಗಳು ಮೂಡದಂತೆ ನಿರ್ಗಮಿಸಿದ್ದಾರೆ’ ಎಂದು ಹೇಳಿದ್ದಾರೆ.

24.04.2021 ರಂದು ಮುಖ್ಯ ನ್ಯಾಯಮೂರ್ತಿ ರಮಣ ಅವರು ಭಾರತದ 48ನೇ ಮುಖ್ಯ ನ್ಯಾಯಮೂರ್ತಿಯಾಗಿ ’ಭಾರತದ ಸಂವಿಧಾನಕ್ಕೆ ನಿಜವಾದ ನಂಬಿಕೆ ಮತ್ತು ನಿಷ್ಠೆಯನ್ನು ಹೊಂದುವುದಾಗಿ’ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ರಮಣ ಅವರು ಸರ್ಕಾರದ ಇತರ ಎರಡು ಶಾಖೆಗಳು ಸಂವಿಧಾನದ ದಿಕ್ಸೂಚಿಯೊಳಗೆ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಹೊಂದಿದ್ದಾರೆ.

ಹತ್ರಾಸ್ ಪ್ರಕರಣದಲ್ಲಿ ಜಾಮೀನಿನ ಬಗ್ಗೆ ವರದಿ ಮಾಡಲು ಪ್ರಯತ್ನಿಸಿದ ಧೈರ್ಯದ ಕೆಲಸಕ್ಕಾಗಿ ಸಿದ್ದಿಕಿ ಕಪ್ಪನ್ ಅವರನ್ನು ಬಂಧಿಸಿದ ಮತ್ತು ಹಿಂಸಿಸಿದಂತಹ ಪ್ರಕರಣಗಳು ಮತ್ತು ಕಾರ್ಯಾಂಗದ ಇತರ ಅತಿರೇಕದ ಉಲ್ಲಂಘನೆಗಳ ಬಗ್ಗೆ ನ್ಯಾಯಾಂಗ ಗಮನ ಹರಿಸಿ, ತಮ್ಮ ಹೃದಯ ಸಂವಿಧಾನಕ್ಕಾಗಿ ಮಿಡಿಯುತ್ತದೆ ಎಂದು ಮುಖ್ಯ ನ್ಯಾಯಮೂರ್ತಿಗಳು ತೋರಿಸಬೇಕಿದೆ. ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಹದಿನಾರು ಆರೋಪಿಗಳ ವಿರುದ್ಧದ ಸಾಕ್ಷ್ಯವನ್ನು, ಆರೋಪಿಗಳಲ್ಲಿ ಒಬ್ಬರಾದ ರೋನಾ ವಿಲ್ಸನ್ ಅವರ ಕಂಪ್ಯೂಟರ್‌ಗೆ ಅಕ್ರಮವಾಗಿ ಸೇರಿಸಲಾಗಿದೆ ಎಂಬ ಇತ್ತೀಚಿನ ತನಿಖಾ ವರದಿಗಳನ್ನು ಈ ಪ್ರಕರಣವನ್ನು ಆಲಿಸುತ್ತಿರುವ ನ್ಯಾಯಪೀಠ ಗಮನಿಸುವಂತೆ ’ಮಾಸ್ಟರ್ ಆಫ್ ದಿ ರೋಸ್ಟರ್’ ಆಗಿರುವ ಮುಖ್ಯ ನ್ಯಾಯಮೂರ್ತಿಗಳು ಖಚಿತಪಡಿಸಬೇಕು. ಸಾವಿರಾರು ಆರೋಪಿಗಳು ಜಾಮೀನು ಇಲ್ಲದೆ ಮತ್ತು ವಿಚಾರಣೆಯ ನಿರೀಕ್ಷೆಯಿಲ್ಲದೆ ಯುಎಪಿಎ ಅಡಿಯಲ್ಲಿ ಬಂಧಿಸಲ್ಪಟ್ಟಿರುವ ತೀವ್ರ ಅನ್ಯಾಯದ ಸನ್ನಿವೇಶಕ್ಕೆ ಭೀಮಾ ಕೋರೆಗಾಂವ್ ಪ್ರಕರಣವು ಸಾಂಕೇತಿಕವಾಗಿದೆ.

ಯೂನಿಯನ್ ಆಫ್ ಇಂಡಿಯಾ ವರ್ಸಸ್ ಕೆ.ಎ. ನಜೀಬ್ ಪ್ರಕರಣದಲ್ಲಿ ಮೂವರು ನ್ಯಾಯಾಧೀಶರ ನ್ಯಾಯಪೀಠವು (ಇದರಲ್ಲಿ ನ್ಯಾಯಮೂರ್ತಿ ರಮಣ ಕೂಡ ಇದ್ದರು) ಯುಎಪಿಎ ಅಡಿಯಲ್ಲಿ ಗಂಭೀರವಾದ ಆರೋಪ/ಅಪರಾಧಗಳನ್ನು ದಾಖಲಿಸಿದ್ದರು ಸಹ, ’ಸಮಂಜಸವಾದ ಸಮಯದೊಳಗೆ ವಿಚಾರಣೆ ಪೂರ್ಣಗೊಳ್ಳುವ ಸಾಧ್ಯತೆ ಇಲ್ಲದಿದ್ದರೆ ಮತ್ತು ಅದಕ್ಕೆ ನೀಡಲಾಗುವ ಶಿಕ್ಷೆಯ ಅವಧಿಯ ಬಹುಭಾಗವನ್ನು ಈಗಾಗಲೇ ಜೈಲುವಾಸದಲ್ಲಿ ಕಳೆದಿದ್ದರೆ’ ಜಾಮೀನು ನೀಡಬಹುದು ಎಂದು ತೀರ್ಪು ನೀಡಿತ್ತು. ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಬರೆದಿರುವ ಈ ತೀರ್ಪಿನಲ್ಲಿ, (ನ್ಯಾಯಮೂರ್ತಿ ರಮಣ ಅವರು ನ್ಯಾಯಪೀಠದಲ್ಲಿದ್ದರು), ಕೇವಲ ಅಭಿವ್ಯಕ್ತಿ ಸಾತಂತ್ರ್ಯದಡಿ ಮಾತನಾಡಿದ್ದಕ್ಕೆ ವಿಚಾರಣೆಯಿಲ್ಲದೆ, ಅಸಂವಿಧಾನಿಕ ಬಂಧನಗಳನ್ನು ಮಾಡುವ ಕಾರ್ಯಾಂಗದ ನೀತಿಯನ್ನು ನ್ಯಾಯಾಲಯವು ಪರಾಮರ್ಶಿಸಲಿದೆ ಎಂದದ್ದು ಭರವಸೆಯ ಹೊಳಪನ್ನು ಮೂಡಿಸಿತ್ತು ಮತ್ತು ಹೊಸ ನ್ಯಾಯದಾನ ವ್ಯವಸ್ಥೆಯನ್ನು ಉಚ್ಚರಿಸಲು ಪ್ರಾರಂಭವಾಗಿತ್ತು. ಮತ್ತು ಈಗ ಮುಖ್ಯ ನ್ಯಾಯಮೂರ್ತಿ ರಮಣ ಅವರ ಪ್ರಮಾಣವಚನದ ಪ್ರಕಾರ, ’ಸಂವಿಧಾನಕ್ಕೆ ನಿಜವಾದ ನಂಬಿಕೆ ಮತ್ತು ನಿಷ್ಠೆ’ಯನ್ನು ಒಳಗೊಳ್ಳುವುದಕ್ಕೆ ಪ್ರಾರಂಭವಾಗಿದೆ.

ಅಂತೆಯೇ, ಸುಪ್ರೀಂಕೋರ್ಟ್ ಗಂಭೀರ ಸಾಂವಿಧಾನಿಕ ಪ್ರಾಮುಖ್ಯತೆಯ ಇತರ ವಿಷಯಗಳ (ಅದು ಸಿಎಎ, ಆರ್ಟಿಕಲ್ 370 ಅಥವಾ ಹಲವಾರು ಬಾಕಿ ಉಳಿದಿರುವ ಹೇಬಿಯಸ್ ಕಾರ್ಪಸ್ ಅರ್ಜಿಗಳು ಮತ್ತು ಜಾಮೀನು ಅರ್ಜಿಗಳು ಆಗಿರಬಹುದು) ವಿಚಾರಣೆ ನಡೆಸುವ ಮೂಲಕ ಮತ್ತು ಕಾರ್ಯಾಂಗದ ಬೆದರಿಕೆಗಳ ಮತ್ತು ಬೆಣ್ಣೆಸವರುವುದರ ವಿರುದ್ಧ ’ಸಂವಿಧಾನದ ರಕ್ಷಕ’ ಪಾತ್ರವನ್ನು ಗಟ್ಟಿಯಾಗಿ ಪ್ರತಿಪಾದಿಸುವುದಕ್ಕೆ ಸುಪ್ರೀಂಕೋರ್ಟ್ ಮತ್ತೆ ಪ್ರಾರಂಭಿಸುತ್ತದೆ ಎಂದು ಆಶಿಸೋಣ.

ಭಾರತದ ಪ್ರಜೆಗಳಾಗಿ ನಮ್ಮಲ್ಲಿ ಉಳಿದಿರುವುದು ಭರವಸೆಯೊಂದೇ. ಕಾಶ್ಮೀರದಲ್ಲಿ ಅಂತರ್ಜಾಲ ಮತ್ತು ಸಂಪರ್ಕಗಳನ್ನು ಸ್ಥಗಿತಗೊಳಿಸಿದ ಪ್ರಕರಣದ ತೀರ್ಪನ್ನು ಅಂದಿನ ನ್ಯಾಯಮೂರ್ತಿ ರಮಣ ಅವರೇ ಬರೆದಿದ್ದರು ಎಂಬುದನ್ನು ಮರೆಯುವಂತಿಲ್ಲ. ’ರಾಷ್ಟ್ರೀಯ ಭದ್ರತೆ’ ಹೆಸರಲ್ಲಿ ಇಡೀ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ಅಂತರ್ಜಾಲವನ್ನು ಸ್ಥಗಿತಗೊಳಿಸಿದ್ದು ಒಂದು ’ಅಸಮಾನ’ ಪ್ರತಿಕ್ರಿಯೆಯಾಗಿತ್ತು ಎಂದು ಆ ತೀರ್ಪು ಹೇಳಿದರೂ ಯಾವುದೇ ಪರಿಹಾರವನ್ನು ನೀಡಲಿಲ್ಲ. ನ್ಯಾಯಾಲಯವು ಅಂತರ್ಜಾಲ ಅಮಾನತು ಆದೇಶಗಳನ್ನು ಪರಿಶೀಲಿಸುವ ಕಾರ್ಯವನ್ನು ಸರ್ಕಾರಿ ಅಧಿಕಾರಿಗಳಿಗೆ ಹೊರಗುತ್ತಿಗೆ ನೀಡಿತು. ಆ ಮೂಲಕ ಸಂವಿಧಾನದ ಮಿತಿಯಲ್ಲಿ ಕಾರ್ಯಾಂಗದ ಕಾರ್ಯಗಳು ನಡೆಯುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ನ್ಯಾಯಾಲಯ ತ್ಯಜಿಸಿತ್ತು.

ಅದೇನೇ ಇದ್ದರೂ, 48ನೇ ಮುಖ್ಯ ನ್ಯಾಯಮೂರ್ತಿಗಳಲ್ಲಿ ನಾವು ಹೊಂದಿರುವ ಆಶಯವೆಂದರೆ, ಅವರು ’ಭಾರತದ ಸಂವಿಧಾನಕ್ಕೆ ನಿಜವಾದ ನಂಬಿಕೆ ಮತ್ತು ನಿಷ್ಠೆಯನ್ನು ಹೊಂದುವುದು’ ಎಂಬ ತಮ್ಮ ಪ್ರಮಾಣವಚನಕ್ಕೆ ಬದ್ಧರಾಗಿರುತ್ತಾರೆ ಎಂಬುದು. ಮುಖ್ಯ ನ್ಯಾಯಮೂರ್ತಿ ರಮಣ ಅವರಿಂದ ಇದಕ್ಕಿಂತ ಹೆಚ್ಚಿನದೇನನ್ನೂ ಅಥವಾ ಕಡಿಮೆಯದ್ದೇನನ್ನೂ ನಾವು ನಿರೀಕ್ಷೆ ಮಾಡುತ್ತಿಲ್ಲ.

ಅರವಿಂದ್ ನಾರಾಯಣ್
ಸಂವಿಧಾನ ತಜ್ಞರು, ಪರ್ಯಾಯ ಕಾನೂನು ವೇದಿಕೆ (ಎಎಲ್‌ಎಫ್‌ನ) ಸ್ಥಾಪಕ ಸದಸ್ಯರು
(ಕನ್ನಡಕ್ಕೆ: ಪಿ.ಕೆ. ಮಲ್ಲನಗೌಡರ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...