Homeನ್ಯಾಯ ಪಥನ್ಯಾಯಮೂರ್ತಿ ಬೊಬ್ಡೆ ಅವಧಿಯಲ್ಲಿ ಸಂವಿಧಾನವನ್ನು ಕಾಯುವ ತನ್ನ ಪಾತ್ರವನ್ನುಸುಪ್ರೀಂ ಯಶಸ್ವಿಯಾಗಿ ನಿರ್ವಹಿಸಿತೇ?

ನ್ಯಾಯಮೂರ್ತಿ ಬೊಬ್ಡೆ ಅವಧಿಯಲ್ಲಿ ಸಂವಿಧಾನವನ್ನು ಕಾಯುವ ತನ್ನ ಪಾತ್ರವನ್ನುಸುಪ್ರೀಂ ಯಶಸ್ವಿಯಾಗಿ ನಿರ್ವಹಿಸಿತೇ?

- Advertisement -
- Advertisement -

ಭಾರತದ ಸುಪ್ರೀಂಕೋರ್ಟಿನ 47ನೇ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ಅವರ ಅಧಿಕಾರಾವಧಿಯು ಹದಿನೇಳು ಪ್ರಕ್ಷುಬ್ಧ ತಿಂಗಳುಗಳನ್ನು ವ್ಯಾಪಿಸಿತ್ತು. ಈ ಅವಧಿಯಲ್ಲಿ ದೇಶವು ತೀವ್ರ ಕೋವಿಡ್ ಬಿಕ್ಕಟ್ಟನಿಂದ ಬಳಲುತ್ತಿತ್ತು ಮತ್ತು ದೇಶಾದ್ಯಂತ ತಮ್ಮ ಅಭಿವ್ಯಕ್ತಿ ಮತ್ತು ಭಾಷಣ ಮಾಡುವ ಹಕ್ಕನ್ನು ಚಲಾಯಿಸಿದ ಸಾವಿರಾರು ಜನರನ್ನು ವಿವೇಚನಾರಹಿತವಾಗಿ ನಿರಾಕಾರಣವಾಗಿ ಬಂಧನಕ್ಕೆ ಒಳಪಡಿಸಲಾಯಿತು. ಈ ಬಿಕ್ಕಟ್ಟಿನ ಸಮಯದಲ್ಲಿ, ಕಾರ್ಯಾಂಗವು ತನ್ನ ಸಾಂವಿಧಾನಿಕ ಜವಾಬ್ದಾರಿಯನ್ನು ಪೂರೈಸಲು ಕಾರ್ಯನಿರ್ವಹಿಸುವಂತೆ ಮಾಡಲು ಮತ್ತು ಕಾರ್ಯಾಂಗದ ಕ್ರಮಗಳು ಸಂವಿಧಾನದ ಮಿತಿಗಳನ್ನು ಉಲ್ಲಂಘಿಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಸುಪ್ರೀಂಕೋರ್ಟ್ ಮೊರೆ ಹೋಗಲಾಯಿತು.

ಬೊಬ್ಡೆ ಅವರ ಅಡಿಯಲ್ಲಿ ನ್ಯಾಯಾಲಯ ಹೇಗೆ ಕಾರ್ಯ ನಿರ್ವಹಿಸಿತು?

ಸುಪ್ರೀಂಕೋರ್ಟ್ ಮಾಜಿ ನ್ಯಾಯಮೂರ್ತಿ ಲೋಕೂರ್ ಅವರು ಹೇಳಿದಂತೆ, ತೀವ್ರ ಕಠಿಣ ಮತ್ತು ಯೋಜಿತವಲ್ಲದ ಲಾಕ್‌ಡೌನ್‌ನಿಂದ ಹುಟ್ಟಿದ ಹಿಂದೆಂದೂ ಕಂಡಿರದ ವಲಸೆ ಬಿಕ್ಕಟ್ಟಿಗೆ ಸಮಯೋಚಿತವಾಗಿ ಪ್ರತಿಕ್ರಿಯಿಸಲಾಗದ ಅಸಮರ್ಥತೆಗಾಗಿ ನ್ಯಾಯಾಲಯಕ್ಕೆ ’ಎಫ್ ಗ್ರೇಡ್ ನೀಡಬೇಕು ಎಂದಿದ್ದರು. ನ್ಯಾಯಮೂರ್ತಿ ಗೋಪಾಲ್ ಗೌಡ ಅವರು ವಲಸೆ ಬಿಕ್ಕಟ್ಟಿನ ಬಗ್ಗೆ ಸರ್ಕಾರದ ಪ್ರತಿಕ್ರಿಯೆಯನ್ನು ’ಸರ್ವೋಚ್ಚ ವೈಫಲ್ಯದ ಉದಾಹರಣೆ ಮತ್ತು ಏನೂ ಕ್ರಮ ಕೈಗೊಳ್ಳದ ನ್ಯಾಯಾಲಯದ ನಡೆಯನ್ನು ತುರ್ತು ಪರಿಸ್ಥಿತಿಯ ಸಮಯದಲ್ಲಿ ಸುಪ್ರೀಂಕೋರ್ಟ್‌ನ ವೈಫಲ್ಯಕ್ಕೆ ಹೋಲಿಸಿದ್ದಾರೆ.

ಸಾಂವಿಧಾನಿಕ ಚೌಕಟ್ಟಿಗೆ ಮೂಲಭೂತವಾಗಿ ಸವಾಲೆಸೆದ ಕಾರ್ಯಾಂಗದ ಕ್ರಮಗಳಿಗೆ ಬಂದಾಗ, ಅದು ಧರ್ಮದ ಆಧಾರದ ಮೇಲೆ ತಾರತಮ್ಯ ಮಾಡದ ಸಾಂವಿಧಾನಿಕ ಭರವಸೆಯನ್ನು ಚೂರುಚೂರು ಮಾಡಿದ ಸಿಎಎ ಆಗಿರಬಹುದು, ಅಥವಾ ಅದು ಒಕ್ಕೂಟ ತತ್ವವನ್ನು ತುಳಿದುಹಾಕಿದ 370ನೇ ವಿಧಿಯ ಏಕಪಕ್ಷೀಯ ರದ್ದುಗೊಳಿಸುವಿಕೆಯಿರಬಹುದು, ಇಂತಹ ಸಂದರ್ಭಗಳಲ್ಲಿ ನ್ಯಾಯಾಲಯವು ಮೌನವನ್ನು ಆಯ್ಕೆ ಮಾಡಿಕೊಂಡಿತು.

ಸಂಕ್ಷಿಪ್ತವಾಗಿ ಹೇಳುವುದಾದರೆ, ಮುಖ್ಯ ನ್ಯಾಯಮೂರ್ತಿಯಾಗಿದ್ದ ಬೊಬ್ಡೆ ನೇತೃತ್ವದ ಸುಪ್ರೀಂಕೋರ್ಟ್‌ನ ಪ್ರಮುಖ ಸಮಸ್ಯೆ ಎಂದರೆ, ಸಂವಿಧಾನದ ಮೇಲೆಯೇ ಸವಾರಿ ಮಾಡುವ ಕಾರ್ಯಾಂಗದ ಕ್ರಮಗಳನ್ನು ಪ್ರಶ್ನಿಸಲು ಹೆದರಬೇಕಿಲ್ಲದ ಸುಪ್ರೀಂಕೋರ್ಟ್ ಸಾಂವಿಧಾನಿಕ ನ್ಯಾಯಾಲಯದ ಪಾತ್ರವನ್ನು ನಿರ್ವಹಿಸಲು ಸಂಪೂರ್ಣವಾಗಿ ನಿರಾಕರಿಸಿದ್ದು. ಕಾರ್ಯಾಂಗದ ದುರಹಂಕಾರದ ವಿರುದ್ಧ ನಾಗರಿಕರ ಪರವಾಗಿ ನಿಲ್ಲಲು ಹೆದರದ ದೇಶದ ಸ್ವತಂತ್ರ ಅಂಗವಾಗಿ ಸುಪ್ರೀಂಕೋರ್ಟ್‌ನ ಸಾಂವಿಧಾನಿಕ ಘನತೆ ಮುಖ್ಯ ನ್ಯಾಯಮೂರ್ತಿ ಬೊಬ್ಡೆ ಅವರ ಅಧಿಕಾರಾವಧಿಯಲ್ಲಿ ತೀವ್ರವಾಗಿ ಕುಬ್ಜಗೊಂಡಿತು. ಸಾಂವಿಧಾನಿಕ ತಜ್ಞ ಗೌತಮ್ ಭಾಟಿಯಾ ಅವರು ಈ ಕುರಿತು ತೀವ್ರ ವಿಮರ್ಶೆ ಮಾಡುತ್ತ, ಬೊಬ್ಡೆ ಅವರ ಅಧಿಕಾರಾವಧಿಯನ್ನು ’ಸಿಂಹಾಸನದ ಕೆಳಗಿರುವ ಇಲಿ, ಅದು ಕೆಲವೊಮ್ಮೆ ಕೀರಲು ಧ್ವನಿಯಲ್ಲಿ ಶಬ್ದ ಮಾಡುತ್ತದೆ ಮತ್ತು ರಾಜನಿಗಿಂತಲೂ ಮುಂಚೆ ಬರುವ ಯಾರೊಬ್ಬನ ಕಾಲ್ಬೆರಳುಗಳನ್ನು ಕಚ್ಚಲು ಕೆಲವೊಮ್ಮೆ ಮುಂದಾಗುತ್ತದೆ’ ಎಂದು ಅಭಿಪ್ರಾಯ ಪಟ್ಟಿದ್ದಾರೆ. ದೆಹಲಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ರೇಖಾ ಶರ್ಮಾ ಅವರು, ನ್ಯಾಯಮೂರ್ತಿ ಬೊಬ್ಡೆ ಅವರು ’ಕಾಲದ ಮರಳಿನ ಮೇಲೆ ಹೆಜ್ಜೆ ಗುರುತುಗಳು ಮೂಡದಂತೆ ನಿರ್ಗಮಿಸಿದ್ದಾರೆ’ ಎಂದು ಹೇಳಿದ್ದಾರೆ.

24.04.2021 ರಂದು ಮುಖ್ಯ ನ್ಯಾಯಮೂರ್ತಿ ರಮಣ ಅವರು ಭಾರತದ 48ನೇ ಮುಖ್ಯ ನ್ಯಾಯಮೂರ್ತಿಯಾಗಿ ’ಭಾರತದ ಸಂವಿಧಾನಕ್ಕೆ ನಿಜವಾದ ನಂಬಿಕೆ ಮತ್ತು ನಿಷ್ಠೆಯನ್ನು ಹೊಂದುವುದಾಗಿ’ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ರಮಣ ಅವರು ಸರ್ಕಾರದ ಇತರ ಎರಡು ಶಾಖೆಗಳು ಸಂವಿಧಾನದ ದಿಕ್ಸೂಚಿಯೊಳಗೆ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಹೊಂದಿದ್ದಾರೆ.

ಹತ್ರಾಸ್ ಪ್ರಕರಣದಲ್ಲಿ ಜಾಮೀನಿನ ಬಗ್ಗೆ ವರದಿ ಮಾಡಲು ಪ್ರಯತ್ನಿಸಿದ ಧೈರ್ಯದ ಕೆಲಸಕ್ಕಾಗಿ ಸಿದ್ದಿಕಿ ಕಪ್ಪನ್ ಅವರನ್ನು ಬಂಧಿಸಿದ ಮತ್ತು ಹಿಂಸಿಸಿದಂತಹ ಪ್ರಕರಣಗಳು ಮತ್ತು ಕಾರ್ಯಾಂಗದ ಇತರ ಅತಿರೇಕದ ಉಲ್ಲಂಘನೆಗಳ ಬಗ್ಗೆ ನ್ಯಾಯಾಂಗ ಗಮನ ಹರಿಸಿ, ತಮ್ಮ ಹೃದಯ ಸಂವಿಧಾನಕ್ಕಾಗಿ ಮಿಡಿಯುತ್ತದೆ ಎಂದು ಮುಖ್ಯ ನ್ಯಾಯಮೂರ್ತಿಗಳು ತೋರಿಸಬೇಕಿದೆ. ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಹದಿನಾರು ಆರೋಪಿಗಳ ವಿರುದ್ಧದ ಸಾಕ್ಷ್ಯವನ್ನು, ಆರೋಪಿಗಳಲ್ಲಿ ಒಬ್ಬರಾದ ರೋನಾ ವಿಲ್ಸನ್ ಅವರ ಕಂಪ್ಯೂಟರ್‌ಗೆ ಅಕ್ರಮವಾಗಿ ಸೇರಿಸಲಾಗಿದೆ ಎಂಬ ಇತ್ತೀಚಿನ ತನಿಖಾ ವರದಿಗಳನ್ನು ಈ ಪ್ರಕರಣವನ್ನು ಆಲಿಸುತ್ತಿರುವ ನ್ಯಾಯಪೀಠ ಗಮನಿಸುವಂತೆ ’ಮಾಸ್ಟರ್ ಆಫ್ ದಿ ರೋಸ್ಟರ್’ ಆಗಿರುವ ಮುಖ್ಯ ನ್ಯಾಯಮೂರ್ತಿಗಳು ಖಚಿತಪಡಿಸಬೇಕು. ಸಾವಿರಾರು ಆರೋಪಿಗಳು ಜಾಮೀನು ಇಲ್ಲದೆ ಮತ್ತು ವಿಚಾರಣೆಯ ನಿರೀಕ್ಷೆಯಿಲ್ಲದೆ ಯುಎಪಿಎ ಅಡಿಯಲ್ಲಿ ಬಂಧಿಸಲ್ಪಟ್ಟಿರುವ ತೀವ್ರ ಅನ್ಯಾಯದ ಸನ್ನಿವೇಶಕ್ಕೆ ಭೀಮಾ ಕೋರೆಗಾಂವ್ ಪ್ರಕರಣವು ಸಾಂಕೇತಿಕವಾಗಿದೆ.

ಯೂನಿಯನ್ ಆಫ್ ಇಂಡಿಯಾ ವರ್ಸಸ್ ಕೆ.ಎ. ನಜೀಬ್ ಪ್ರಕರಣದಲ್ಲಿ ಮೂವರು ನ್ಯಾಯಾಧೀಶರ ನ್ಯಾಯಪೀಠವು (ಇದರಲ್ಲಿ ನ್ಯಾಯಮೂರ್ತಿ ರಮಣ ಕೂಡ ಇದ್ದರು) ಯುಎಪಿಎ ಅಡಿಯಲ್ಲಿ ಗಂಭೀರವಾದ ಆರೋಪ/ಅಪರಾಧಗಳನ್ನು ದಾಖಲಿಸಿದ್ದರು ಸಹ, ’ಸಮಂಜಸವಾದ ಸಮಯದೊಳಗೆ ವಿಚಾರಣೆ ಪೂರ್ಣಗೊಳ್ಳುವ ಸಾಧ್ಯತೆ ಇಲ್ಲದಿದ್ದರೆ ಮತ್ತು ಅದಕ್ಕೆ ನೀಡಲಾಗುವ ಶಿಕ್ಷೆಯ ಅವಧಿಯ ಬಹುಭಾಗವನ್ನು ಈಗಾಗಲೇ ಜೈಲುವಾಸದಲ್ಲಿ ಕಳೆದಿದ್ದರೆ’ ಜಾಮೀನು ನೀಡಬಹುದು ಎಂದು ತೀರ್ಪು ನೀಡಿತ್ತು. ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಬರೆದಿರುವ ಈ ತೀರ್ಪಿನಲ್ಲಿ, (ನ್ಯಾಯಮೂರ್ತಿ ರಮಣ ಅವರು ನ್ಯಾಯಪೀಠದಲ್ಲಿದ್ದರು), ಕೇವಲ ಅಭಿವ್ಯಕ್ತಿ ಸಾತಂತ್ರ್ಯದಡಿ ಮಾತನಾಡಿದ್ದಕ್ಕೆ ವಿಚಾರಣೆಯಿಲ್ಲದೆ, ಅಸಂವಿಧಾನಿಕ ಬಂಧನಗಳನ್ನು ಮಾಡುವ ಕಾರ್ಯಾಂಗದ ನೀತಿಯನ್ನು ನ್ಯಾಯಾಲಯವು ಪರಾಮರ್ಶಿಸಲಿದೆ ಎಂದದ್ದು ಭರವಸೆಯ ಹೊಳಪನ್ನು ಮೂಡಿಸಿತ್ತು ಮತ್ತು ಹೊಸ ನ್ಯಾಯದಾನ ವ್ಯವಸ್ಥೆಯನ್ನು ಉಚ್ಚರಿಸಲು ಪ್ರಾರಂಭವಾಗಿತ್ತು. ಮತ್ತು ಈಗ ಮುಖ್ಯ ನ್ಯಾಯಮೂರ್ತಿ ರಮಣ ಅವರ ಪ್ರಮಾಣವಚನದ ಪ್ರಕಾರ, ’ಸಂವಿಧಾನಕ್ಕೆ ನಿಜವಾದ ನಂಬಿಕೆ ಮತ್ತು ನಿಷ್ಠೆ’ಯನ್ನು ಒಳಗೊಳ್ಳುವುದಕ್ಕೆ ಪ್ರಾರಂಭವಾಗಿದೆ.

ಅಂತೆಯೇ, ಸುಪ್ರೀಂಕೋರ್ಟ್ ಗಂಭೀರ ಸಾಂವಿಧಾನಿಕ ಪ್ರಾಮುಖ್ಯತೆಯ ಇತರ ವಿಷಯಗಳ (ಅದು ಸಿಎಎ, ಆರ್ಟಿಕಲ್ 370 ಅಥವಾ ಹಲವಾರು ಬಾಕಿ ಉಳಿದಿರುವ ಹೇಬಿಯಸ್ ಕಾರ್ಪಸ್ ಅರ್ಜಿಗಳು ಮತ್ತು ಜಾಮೀನು ಅರ್ಜಿಗಳು ಆಗಿರಬಹುದು) ವಿಚಾರಣೆ ನಡೆಸುವ ಮೂಲಕ ಮತ್ತು ಕಾರ್ಯಾಂಗದ ಬೆದರಿಕೆಗಳ ಮತ್ತು ಬೆಣ್ಣೆಸವರುವುದರ ವಿರುದ್ಧ ’ಸಂವಿಧಾನದ ರಕ್ಷಕ’ ಪಾತ್ರವನ್ನು ಗಟ್ಟಿಯಾಗಿ ಪ್ರತಿಪಾದಿಸುವುದಕ್ಕೆ ಸುಪ್ರೀಂಕೋರ್ಟ್ ಮತ್ತೆ ಪ್ರಾರಂಭಿಸುತ್ತದೆ ಎಂದು ಆಶಿಸೋಣ.

ಭಾರತದ ಪ್ರಜೆಗಳಾಗಿ ನಮ್ಮಲ್ಲಿ ಉಳಿದಿರುವುದು ಭರವಸೆಯೊಂದೇ. ಕಾಶ್ಮೀರದಲ್ಲಿ ಅಂತರ್ಜಾಲ ಮತ್ತು ಸಂಪರ್ಕಗಳನ್ನು ಸ್ಥಗಿತಗೊಳಿಸಿದ ಪ್ರಕರಣದ ತೀರ್ಪನ್ನು ಅಂದಿನ ನ್ಯಾಯಮೂರ್ತಿ ರಮಣ ಅವರೇ ಬರೆದಿದ್ದರು ಎಂಬುದನ್ನು ಮರೆಯುವಂತಿಲ್ಲ. ’ರಾಷ್ಟ್ರೀಯ ಭದ್ರತೆ’ ಹೆಸರಲ್ಲಿ ಇಡೀ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ಅಂತರ್ಜಾಲವನ್ನು ಸ್ಥಗಿತಗೊಳಿಸಿದ್ದು ಒಂದು ’ಅಸಮಾನ’ ಪ್ರತಿಕ್ರಿಯೆಯಾಗಿತ್ತು ಎಂದು ಆ ತೀರ್ಪು ಹೇಳಿದರೂ ಯಾವುದೇ ಪರಿಹಾರವನ್ನು ನೀಡಲಿಲ್ಲ. ನ್ಯಾಯಾಲಯವು ಅಂತರ್ಜಾಲ ಅಮಾನತು ಆದೇಶಗಳನ್ನು ಪರಿಶೀಲಿಸುವ ಕಾರ್ಯವನ್ನು ಸರ್ಕಾರಿ ಅಧಿಕಾರಿಗಳಿಗೆ ಹೊರಗುತ್ತಿಗೆ ನೀಡಿತು. ಆ ಮೂಲಕ ಸಂವಿಧಾನದ ಮಿತಿಯಲ್ಲಿ ಕಾರ್ಯಾಂಗದ ಕಾರ್ಯಗಳು ನಡೆಯುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ನ್ಯಾಯಾಲಯ ತ್ಯಜಿಸಿತ್ತು.

ಅದೇನೇ ಇದ್ದರೂ, 48ನೇ ಮುಖ್ಯ ನ್ಯಾಯಮೂರ್ತಿಗಳಲ್ಲಿ ನಾವು ಹೊಂದಿರುವ ಆಶಯವೆಂದರೆ, ಅವರು ’ಭಾರತದ ಸಂವಿಧಾನಕ್ಕೆ ನಿಜವಾದ ನಂಬಿಕೆ ಮತ್ತು ನಿಷ್ಠೆಯನ್ನು ಹೊಂದುವುದು’ ಎಂಬ ತಮ್ಮ ಪ್ರಮಾಣವಚನಕ್ಕೆ ಬದ್ಧರಾಗಿರುತ್ತಾರೆ ಎಂಬುದು. ಮುಖ್ಯ ನ್ಯಾಯಮೂರ್ತಿ ರಮಣ ಅವರಿಂದ ಇದಕ್ಕಿಂತ ಹೆಚ್ಚಿನದೇನನ್ನೂ ಅಥವಾ ಕಡಿಮೆಯದ್ದೇನನ್ನೂ ನಾವು ನಿರೀಕ್ಷೆ ಮಾಡುತ್ತಿಲ್ಲ.

ಅರವಿಂದ್ ನಾರಾಯಣ್
ಸಂವಿಧಾನ ತಜ್ಞರು, ಪರ್ಯಾಯ ಕಾನೂನು ವೇದಿಕೆ (ಎಎಲ್‌ಎಫ್‌ನ) ಸ್ಥಾಪಕ ಸದಸ್ಯರು
(ಕನ್ನಡಕ್ಕೆ: ಪಿ.ಕೆ. ಮಲ್ಲನಗೌಡರ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...