Homeಮುಖಪುಟಮಹಾರಾಷ್ಟ್ರದಲ್ಲಿ ಬಿಜೆಪಿ 3 ರಾಜ್ಯಸಭಾ ಸ್ಥಾನಗಳನ್ನು ಗೆದ್ದದ್ದು ಹೇಗೆ?

ಮಹಾರಾಷ್ಟ್ರದಲ್ಲಿ ಬಿಜೆಪಿ 3 ರಾಜ್ಯಸಭಾ ಸ್ಥಾನಗಳನ್ನು ಗೆದ್ದದ್ದು ಹೇಗೆ?

- Advertisement -
- Advertisement -

ಮಹಾರಾಷ್ಟ್ರದ ರಾಜ್ಯಸಭಾ ಚುನಾವಣೆಯಲ್ಲಿ ಎಲ್ಲಾ ಮೂವರು ಬಿಜೆಪಿ ಅಭ್ಯರ್ಥಿಗಳು ಅದ್ಭುತ ಗೆಲುವು ಸಾಧಿಸಿದ್ದಾರೆ. ಶಿವಸೇನೆಯ ಶಾಸಕರ ಅನರ್ಹ ಮತವು ಶಿವಸೇನೆಯ ಸಂಜಯ್ ಪವಾರ್ ಅವರ ಸೋಲಿಗೆ ಕಾರಣವಾಯಿತು.

ನಿಯಮಗಳು ಉಲ್ಲಂಘನೆಯಾಗಿವೆ ಎಂದು ಆರೋಪಿಸಿ ಬಿಜೆಪಿ ಮತ್ತು ರಾಜ್ಯದ ಆಡಳಿತಾರೂಢ ಮಹಾ ವಿಕಾಸ್ ಅಘಾಡಿ (ಎಂವಿಎ) ಎರಡೂ ಕೂಡ ಚುನಾವಣಾ ಆಯೋಗಕ್ಕೆ ದೂರು ನೀಡಿದವು. ಮತ ಎಣಿಕೆ ಸ್ಥಗಿತಗೊಂಡಿತು. ಆದರೆ ಮಧ್ಯರಾತ್ರಿಯ ನಂತರ ಆರಂಭವಾದ ಮತಗಳ ಎಣಿಕೆಯಲ್ಲಿ ಎಲ್ಲಾ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ. ಗೆಲ್ಲಲು ಅಗತ್ಯವಿದ್ದ ಮತಗಳಿಗಿಂತ ಹೆಚ್ಚು ಮತಗಳನ್ನು ಬಿಜೆಪಿ ಪಡೆಯಿತು. ಎಂವಿಎಯ ನಾಲ್ಕನೇ ಮತ್ತು ಸೇನೆಯ ಎರಡನೇ ಅಭ್ಯರ್ಥಿಗಳಿಗಿದ್ದ ಅವಕಾಶಗಳನ್ನು ಬಿಜೆಪಿ ಕಡಿಮೆ ಮಾಡಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಹಾರಾಷ್ಟ್ರದಲ್ಲಿ ಅಭ್ಯರ್ಥಿಯೊಬ್ಬರು ಗೆಲ್ಲಲು ಕನಿಷ್ಠ 41 ಮತಗಳ ಅಗತ್ಯವಿದೆ. ಆದರೆ ಬಿಜೆಪಿ ಅಭ್ಯರ್ಥಿಗಳಾದ ಕೇಂದ್ರ ಸಚಿವ ಪಿಯೂಷ್ ಗೋಯಲ್, ಎರಡನೇ ಬಿಜೆಪಿ ಅಭ್ಯರ್ಥಿ ಅನಿಲ್ ಬೋಂಡೆ 48 ಮತಗಳನ್ನು ಪಡೆದರು. ಕಾಂಗ್ರೆಸ್‌ನ ಏಕೈಕ ಅಭ್ಯರ್ಥಿ ಇಮ್ರಾನ್ ಪ್ರತಾಪ್‌ಗರ್ಹಿ 44 ಮತಗಳನ್ನು ಪಡೆದರು. ಎನ್‌ಸಿಪಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಪ್ರಫುಲ್ ಪಟೇಲ್ 43 ಮತಗಳನ್ನು ಪಡೆದರು. ಬಿಜೆಪಿಯ ಮೂರನೇ ಅಭ್ಯರ್ಥಿ ಧನಂಜಯ್ ಮಹಾದಿಕ್ 41 ಮತಗಳನ್ನು ಪಡೆದರು. ಒಟ್ಟು 284 ಮತಗಳು ಮಾನ್ಯವಾದವು.

ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜೈಲಿನಲ್ಲಿರುವ ಇಬ್ಬರು ಎನ್‌ಸಿಪಿ ಶಾಸಕರಾದ ನವಾಬ್ ಮಲಿಕ್ ಮತ್ತು ಅನಿಲ್ ದೇಶಮುಖ್ ಅವರನ್ನು ಮತ ಚಲಾವಣೆಗೆ ಕಳುಹಿಸಲು ಮುಂಬೈ ವಿಶೇಷ ನ್ಯಾಯಾಲಯ ನಿರಾಕರಿಸಿದ್ದರಿಂದ ಆಡಳಿತರೂಢ ಎಂವಿಎಗೆ ಹಿನ್ನಡೆಯಾಯಿತು. ಹೀಗಾಗಿ ಚುನಾವಣೆಯಲ್ಲಿ ಆರು ಸ್ಥಾನಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಎಂವಿಎ ಆಸೆಗೆ ಹಿನ್ನಡೆಯಾಯಿತು.

ಆಡಳಿತಾರೂಢ ಪಕ್ಷಗಳ ಶಾಸಕರು ಹಾಕಿದ ಮತಗಳನ್ನು ಪ್ರಶ್ನಿಸಿ ಬಿಜೆಪಿ ಚುನಾವಣಾ ಆಯೋಗದ ಮೊರೆ ಹೋಯಿತು. ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ನೇತೃತ್ವದ ಬಿಜೆಪಿ ನಿಯೋಗ ಶುಕ್ರವಾರ ಮಧ್ಯಾಹ್ನ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿ, “ಎನ್‌ಸಿಪಿ ಶಾಸಕ ಜಿತೇಂದ್ರ ಅವ್ಹಾದ್, ಕಾಂಗ್ರೆಸ್‌ನ ಯಶೋಮತಿ ಠಾಕೂರ್ ಮತ್ತು ಶಿವಸೇನಾ ಶಾಸಕ ಸುಹಾಸ್ ಖಾಂಡೆ ಅವರ ಮತಪತ್ರಗಳನ್ನು ತಿರಸ್ಕರಿಸಬೇಕು. ಯಾಕೆಂದರೆ ಇವರು ಮತಪತ್ರಗಳನ್ನು ಅನಧಿಕೃತ ಪಕ್ಷದ ನಾಯಕರಿಗೆ ತೋರಿಸಿದ್ದಾರೆ” ಎಂದು ಬಿಜೆಪಿ ದೂರಿತು.

ಚುನಾವಣಾ ಆಯೋಗದ ನಿಯಮದ ಪ್ರಕಾರ, ಒಬ್ಬ ಶಾಸಕ ತನ್ನ ಮತಪತ್ರವನ್ನು ಪಕ್ಷದ ಪೋಲಿಂಗ್ ಏಜೆಂಟ್‌ಗೆ ಮಾತ್ರ ತೋರಿಸಬಹುದು.

ಇದನ್ನೂ ಓದಿರಿ: ರಾಜ್ಯಸಭೆ ಚುನಾವಣೆ: ಕಾಂಗ್ರೆಸ್‌, ಜೆಡಿಎಸ್‌ ಕಿತ್ತಾಟದಲ್ಲಿ ಬಿಜೆಪಿಗೆ ಲಾಭ

ಎಂವಿಎ ಕೂಡ ದೂರು ಸಲ್ಲಿಸಿತು. ಸ್ವತಂತ್ರ ಶಾಸಕ ರವಿ ರಾಣಾ ಮತ್ತು ಬಿಜೆಪಿ ಶಾಸಕ ಸುಧೀರ್ ಮುಂಗಂತಿವಾರ್ ಅವರು ಚಲಾಯಿಸಿದ ಮತಗಳನ್ನು ಇದೇ ಆಧಾರದ ಮೇಲೆ ರದ್ದುಗೊಳಿಸಬೇಕು ಎಂದು ಒತ್ತಾಯಿಸಿತು. ಸ್ವತಂತ್ರ ಲೋಕಸಭಾ ಸಂಸದೆ ನವನೀತ್ ರಾಣಾ ಅವರ ಪತಿ ರಾಣಾ ಅವರು ಹನುಮಾನ್ ಚಾಲೀಸಾವನ್ನು ತೋರಿಸಿದ್ದಾರೆ ಎಂದು ಎಂವಿಎ ಮುಖಂಡರು ಆರೋಪಿಸಿದರು.

ಈ ವಿವಾದದ ನಂತರ ಚುನಾವಣಾ ಆಯೋಗವು ಖಾಂಡೆ ಚಲಾಯಿಸಿದ ಮತವನ್ನು ರದ್ದುಗೊಳಿಸಿತು. ಇದು ಎಂವಿಎ ಅಭ್ಯರ್ಥಿಗಳ ಅವಕಾಶಗಳನ್ನು ಇನ್ನಷ್ಟು ಕುಗ್ಗಿಸಿತು.

“ಚುನಾವಣಾ ಆಯೋಗ ನಮ್ಮ ಒಂದು ಮತವನ್ನು ಅಸಿಂಧುಗೊಳಿಸಿದೆ. ನಾವು ಎರಡು ಮತಗಳಿಗೆ ಆಕ್ಷೇಪಣೆ ಸಲ್ಲಿಸಿದ್ದೇವೆ. ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ. ಚುನಾವಣಾ ಆಯೋಗವು ಅವರಿಗೆ ಒಲವು ತೋರಿತು” ಎಂದು ಫಲಿತಾಂಶಗಳು ಪ್ರಕಟವಾದ ನಂತರ ಶಿವಸೇನೆಯ ಸಂಜಯ್ ರಾವತ್ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...