Homeಮುಖಪುಟಮಹಾರಾಷ್ಟ್ರದಲ್ಲಿ ಬಿಜೆಪಿ 3 ರಾಜ್ಯಸಭಾ ಸ್ಥಾನಗಳನ್ನು ಗೆದ್ದದ್ದು ಹೇಗೆ?

ಮಹಾರಾಷ್ಟ್ರದಲ್ಲಿ ಬಿಜೆಪಿ 3 ರಾಜ್ಯಸಭಾ ಸ್ಥಾನಗಳನ್ನು ಗೆದ್ದದ್ದು ಹೇಗೆ?

- Advertisement -
- Advertisement -

ಮಹಾರಾಷ್ಟ್ರದ ರಾಜ್ಯಸಭಾ ಚುನಾವಣೆಯಲ್ಲಿ ಎಲ್ಲಾ ಮೂವರು ಬಿಜೆಪಿ ಅಭ್ಯರ್ಥಿಗಳು ಅದ್ಭುತ ಗೆಲುವು ಸಾಧಿಸಿದ್ದಾರೆ. ಶಿವಸೇನೆಯ ಶಾಸಕರ ಅನರ್ಹ ಮತವು ಶಿವಸೇನೆಯ ಸಂಜಯ್ ಪವಾರ್ ಅವರ ಸೋಲಿಗೆ ಕಾರಣವಾಯಿತು.

ನಿಯಮಗಳು ಉಲ್ಲಂಘನೆಯಾಗಿವೆ ಎಂದು ಆರೋಪಿಸಿ ಬಿಜೆಪಿ ಮತ್ತು ರಾಜ್ಯದ ಆಡಳಿತಾರೂಢ ಮಹಾ ವಿಕಾಸ್ ಅಘಾಡಿ (ಎಂವಿಎ) ಎರಡೂ ಕೂಡ ಚುನಾವಣಾ ಆಯೋಗಕ್ಕೆ ದೂರು ನೀಡಿದವು. ಮತ ಎಣಿಕೆ ಸ್ಥಗಿತಗೊಂಡಿತು. ಆದರೆ ಮಧ್ಯರಾತ್ರಿಯ ನಂತರ ಆರಂಭವಾದ ಮತಗಳ ಎಣಿಕೆಯಲ್ಲಿ ಎಲ್ಲಾ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ. ಗೆಲ್ಲಲು ಅಗತ್ಯವಿದ್ದ ಮತಗಳಿಗಿಂತ ಹೆಚ್ಚು ಮತಗಳನ್ನು ಬಿಜೆಪಿ ಪಡೆಯಿತು. ಎಂವಿಎಯ ನಾಲ್ಕನೇ ಮತ್ತು ಸೇನೆಯ ಎರಡನೇ ಅಭ್ಯರ್ಥಿಗಳಿಗಿದ್ದ ಅವಕಾಶಗಳನ್ನು ಬಿಜೆಪಿ ಕಡಿಮೆ ಮಾಡಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಹಾರಾಷ್ಟ್ರದಲ್ಲಿ ಅಭ್ಯರ್ಥಿಯೊಬ್ಬರು ಗೆಲ್ಲಲು ಕನಿಷ್ಠ 41 ಮತಗಳ ಅಗತ್ಯವಿದೆ. ಆದರೆ ಬಿಜೆಪಿ ಅಭ್ಯರ್ಥಿಗಳಾದ ಕೇಂದ್ರ ಸಚಿವ ಪಿಯೂಷ್ ಗೋಯಲ್, ಎರಡನೇ ಬಿಜೆಪಿ ಅಭ್ಯರ್ಥಿ ಅನಿಲ್ ಬೋಂಡೆ 48 ಮತಗಳನ್ನು ಪಡೆದರು. ಕಾಂಗ್ರೆಸ್‌ನ ಏಕೈಕ ಅಭ್ಯರ್ಥಿ ಇಮ್ರಾನ್ ಪ್ರತಾಪ್‌ಗರ್ಹಿ 44 ಮತಗಳನ್ನು ಪಡೆದರು. ಎನ್‌ಸಿಪಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಪ್ರಫುಲ್ ಪಟೇಲ್ 43 ಮತಗಳನ್ನು ಪಡೆದರು. ಬಿಜೆಪಿಯ ಮೂರನೇ ಅಭ್ಯರ್ಥಿ ಧನಂಜಯ್ ಮಹಾದಿಕ್ 41 ಮತಗಳನ್ನು ಪಡೆದರು. ಒಟ್ಟು 284 ಮತಗಳು ಮಾನ್ಯವಾದವು.

ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜೈಲಿನಲ್ಲಿರುವ ಇಬ್ಬರು ಎನ್‌ಸಿಪಿ ಶಾಸಕರಾದ ನವಾಬ್ ಮಲಿಕ್ ಮತ್ತು ಅನಿಲ್ ದೇಶಮುಖ್ ಅವರನ್ನು ಮತ ಚಲಾವಣೆಗೆ ಕಳುಹಿಸಲು ಮುಂಬೈ ವಿಶೇಷ ನ್ಯಾಯಾಲಯ ನಿರಾಕರಿಸಿದ್ದರಿಂದ ಆಡಳಿತರೂಢ ಎಂವಿಎಗೆ ಹಿನ್ನಡೆಯಾಯಿತು. ಹೀಗಾಗಿ ಚುನಾವಣೆಯಲ್ಲಿ ಆರು ಸ್ಥಾನಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಎಂವಿಎ ಆಸೆಗೆ ಹಿನ್ನಡೆಯಾಯಿತು.

ಆಡಳಿತಾರೂಢ ಪಕ್ಷಗಳ ಶಾಸಕರು ಹಾಕಿದ ಮತಗಳನ್ನು ಪ್ರಶ್ನಿಸಿ ಬಿಜೆಪಿ ಚುನಾವಣಾ ಆಯೋಗದ ಮೊರೆ ಹೋಯಿತು. ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ನೇತೃತ್ವದ ಬಿಜೆಪಿ ನಿಯೋಗ ಶುಕ್ರವಾರ ಮಧ್ಯಾಹ್ನ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿ, “ಎನ್‌ಸಿಪಿ ಶಾಸಕ ಜಿತೇಂದ್ರ ಅವ್ಹಾದ್, ಕಾಂಗ್ರೆಸ್‌ನ ಯಶೋಮತಿ ಠಾಕೂರ್ ಮತ್ತು ಶಿವಸೇನಾ ಶಾಸಕ ಸುಹಾಸ್ ಖಾಂಡೆ ಅವರ ಮತಪತ್ರಗಳನ್ನು ತಿರಸ್ಕರಿಸಬೇಕು. ಯಾಕೆಂದರೆ ಇವರು ಮತಪತ್ರಗಳನ್ನು ಅನಧಿಕೃತ ಪಕ್ಷದ ನಾಯಕರಿಗೆ ತೋರಿಸಿದ್ದಾರೆ” ಎಂದು ಬಿಜೆಪಿ ದೂರಿತು.

ಚುನಾವಣಾ ಆಯೋಗದ ನಿಯಮದ ಪ್ರಕಾರ, ಒಬ್ಬ ಶಾಸಕ ತನ್ನ ಮತಪತ್ರವನ್ನು ಪಕ್ಷದ ಪೋಲಿಂಗ್ ಏಜೆಂಟ್‌ಗೆ ಮಾತ್ರ ತೋರಿಸಬಹುದು.

ಇದನ್ನೂ ಓದಿರಿ: ರಾಜ್ಯಸಭೆ ಚುನಾವಣೆ: ಕಾಂಗ್ರೆಸ್‌, ಜೆಡಿಎಸ್‌ ಕಿತ್ತಾಟದಲ್ಲಿ ಬಿಜೆಪಿಗೆ ಲಾಭ

ಎಂವಿಎ ಕೂಡ ದೂರು ಸಲ್ಲಿಸಿತು. ಸ್ವತಂತ್ರ ಶಾಸಕ ರವಿ ರಾಣಾ ಮತ್ತು ಬಿಜೆಪಿ ಶಾಸಕ ಸುಧೀರ್ ಮುಂಗಂತಿವಾರ್ ಅವರು ಚಲಾಯಿಸಿದ ಮತಗಳನ್ನು ಇದೇ ಆಧಾರದ ಮೇಲೆ ರದ್ದುಗೊಳಿಸಬೇಕು ಎಂದು ಒತ್ತಾಯಿಸಿತು. ಸ್ವತಂತ್ರ ಲೋಕಸಭಾ ಸಂಸದೆ ನವನೀತ್ ರಾಣಾ ಅವರ ಪತಿ ರಾಣಾ ಅವರು ಹನುಮಾನ್ ಚಾಲೀಸಾವನ್ನು ತೋರಿಸಿದ್ದಾರೆ ಎಂದು ಎಂವಿಎ ಮುಖಂಡರು ಆರೋಪಿಸಿದರು.

ಈ ವಿವಾದದ ನಂತರ ಚುನಾವಣಾ ಆಯೋಗವು ಖಾಂಡೆ ಚಲಾಯಿಸಿದ ಮತವನ್ನು ರದ್ದುಗೊಳಿಸಿತು. ಇದು ಎಂವಿಎ ಅಭ್ಯರ್ಥಿಗಳ ಅವಕಾಶಗಳನ್ನು ಇನ್ನಷ್ಟು ಕುಗ್ಗಿಸಿತು.

“ಚುನಾವಣಾ ಆಯೋಗ ನಮ್ಮ ಒಂದು ಮತವನ್ನು ಅಸಿಂಧುಗೊಳಿಸಿದೆ. ನಾವು ಎರಡು ಮತಗಳಿಗೆ ಆಕ್ಷೇಪಣೆ ಸಲ್ಲಿಸಿದ್ದೇವೆ. ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ. ಚುನಾವಣಾ ಆಯೋಗವು ಅವರಿಗೆ ಒಲವು ತೋರಿತು” ಎಂದು ಫಲಿತಾಂಶಗಳು ಪ್ರಕಟವಾದ ನಂತರ ಶಿವಸೇನೆಯ ಸಂಜಯ್ ರಾವತ್ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...