Homeಮುಖಪುಟಮಹಾರಾಷ್ಟ್ರದಲ್ಲಿ ಬಿಜೆಪಿ 3 ರಾಜ್ಯಸಭಾ ಸ್ಥಾನಗಳನ್ನು ಗೆದ್ದದ್ದು ಹೇಗೆ?

ಮಹಾರಾಷ್ಟ್ರದಲ್ಲಿ ಬಿಜೆಪಿ 3 ರಾಜ್ಯಸಭಾ ಸ್ಥಾನಗಳನ್ನು ಗೆದ್ದದ್ದು ಹೇಗೆ?

- Advertisement -
- Advertisement -

ಮಹಾರಾಷ್ಟ್ರದ ರಾಜ್ಯಸಭಾ ಚುನಾವಣೆಯಲ್ಲಿ ಎಲ್ಲಾ ಮೂವರು ಬಿಜೆಪಿ ಅಭ್ಯರ್ಥಿಗಳು ಅದ್ಭುತ ಗೆಲುವು ಸಾಧಿಸಿದ್ದಾರೆ. ಶಿವಸೇನೆಯ ಶಾಸಕರ ಅನರ್ಹ ಮತವು ಶಿವಸೇನೆಯ ಸಂಜಯ್ ಪವಾರ್ ಅವರ ಸೋಲಿಗೆ ಕಾರಣವಾಯಿತು.

ನಿಯಮಗಳು ಉಲ್ಲಂಘನೆಯಾಗಿವೆ ಎಂದು ಆರೋಪಿಸಿ ಬಿಜೆಪಿ ಮತ್ತು ರಾಜ್ಯದ ಆಡಳಿತಾರೂಢ ಮಹಾ ವಿಕಾಸ್ ಅಘಾಡಿ (ಎಂವಿಎ) ಎರಡೂ ಕೂಡ ಚುನಾವಣಾ ಆಯೋಗಕ್ಕೆ ದೂರು ನೀಡಿದವು. ಮತ ಎಣಿಕೆ ಸ್ಥಗಿತಗೊಂಡಿತು. ಆದರೆ ಮಧ್ಯರಾತ್ರಿಯ ನಂತರ ಆರಂಭವಾದ ಮತಗಳ ಎಣಿಕೆಯಲ್ಲಿ ಎಲ್ಲಾ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ. ಗೆಲ್ಲಲು ಅಗತ್ಯವಿದ್ದ ಮತಗಳಿಗಿಂತ ಹೆಚ್ಚು ಮತಗಳನ್ನು ಬಿಜೆಪಿ ಪಡೆಯಿತು. ಎಂವಿಎಯ ನಾಲ್ಕನೇ ಮತ್ತು ಸೇನೆಯ ಎರಡನೇ ಅಭ್ಯರ್ಥಿಗಳಿಗಿದ್ದ ಅವಕಾಶಗಳನ್ನು ಬಿಜೆಪಿ ಕಡಿಮೆ ಮಾಡಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಹಾರಾಷ್ಟ್ರದಲ್ಲಿ ಅಭ್ಯರ್ಥಿಯೊಬ್ಬರು ಗೆಲ್ಲಲು ಕನಿಷ್ಠ 41 ಮತಗಳ ಅಗತ್ಯವಿದೆ. ಆದರೆ ಬಿಜೆಪಿ ಅಭ್ಯರ್ಥಿಗಳಾದ ಕೇಂದ್ರ ಸಚಿವ ಪಿಯೂಷ್ ಗೋಯಲ್, ಎರಡನೇ ಬಿಜೆಪಿ ಅಭ್ಯರ್ಥಿ ಅನಿಲ್ ಬೋಂಡೆ 48 ಮತಗಳನ್ನು ಪಡೆದರು. ಕಾಂಗ್ರೆಸ್‌ನ ಏಕೈಕ ಅಭ್ಯರ್ಥಿ ಇಮ್ರಾನ್ ಪ್ರತಾಪ್‌ಗರ್ಹಿ 44 ಮತಗಳನ್ನು ಪಡೆದರು. ಎನ್‌ಸಿಪಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಪ್ರಫುಲ್ ಪಟೇಲ್ 43 ಮತಗಳನ್ನು ಪಡೆದರು. ಬಿಜೆಪಿಯ ಮೂರನೇ ಅಭ್ಯರ್ಥಿ ಧನಂಜಯ್ ಮಹಾದಿಕ್ 41 ಮತಗಳನ್ನು ಪಡೆದರು. ಒಟ್ಟು 284 ಮತಗಳು ಮಾನ್ಯವಾದವು.

ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜೈಲಿನಲ್ಲಿರುವ ಇಬ್ಬರು ಎನ್‌ಸಿಪಿ ಶಾಸಕರಾದ ನವಾಬ್ ಮಲಿಕ್ ಮತ್ತು ಅನಿಲ್ ದೇಶಮುಖ್ ಅವರನ್ನು ಮತ ಚಲಾವಣೆಗೆ ಕಳುಹಿಸಲು ಮುಂಬೈ ವಿಶೇಷ ನ್ಯಾಯಾಲಯ ನಿರಾಕರಿಸಿದ್ದರಿಂದ ಆಡಳಿತರೂಢ ಎಂವಿಎಗೆ ಹಿನ್ನಡೆಯಾಯಿತು. ಹೀಗಾಗಿ ಚುನಾವಣೆಯಲ್ಲಿ ಆರು ಸ್ಥಾನಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಎಂವಿಎ ಆಸೆಗೆ ಹಿನ್ನಡೆಯಾಯಿತು.

ಆಡಳಿತಾರೂಢ ಪಕ್ಷಗಳ ಶಾಸಕರು ಹಾಕಿದ ಮತಗಳನ್ನು ಪ್ರಶ್ನಿಸಿ ಬಿಜೆಪಿ ಚುನಾವಣಾ ಆಯೋಗದ ಮೊರೆ ಹೋಯಿತು. ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ನೇತೃತ್ವದ ಬಿಜೆಪಿ ನಿಯೋಗ ಶುಕ್ರವಾರ ಮಧ್ಯಾಹ್ನ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿ, “ಎನ್‌ಸಿಪಿ ಶಾಸಕ ಜಿತೇಂದ್ರ ಅವ್ಹಾದ್, ಕಾಂಗ್ರೆಸ್‌ನ ಯಶೋಮತಿ ಠಾಕೂರ್ ಮತ್ತು ಶಿವಸೇನಾ ಶಾಸಕ ಸುಹಾಸ್ ಖಾಂಡೆ ಅವರ ಮತಪತ್ರಗಳನ್ನು ತಿರಸ್ಕರಿಸಬೇಕು. ಯಾಕೆಂದರೆ ಇವರು ಮತಪತ್ರಗಳನ್ನು ಅನಧಿಕೃತ ಪಕ್ಷದ ನಾಯಕರಿಗೆ ತೋರಿಸಿದ್ದಾರೆ” ಎಂದು ಬಿಜೆಪಿ ದೂರಿತು.

ಚುನಾವಣಾ ಆಯೋಗದ ನಿಯಮದ ಪ್ರಕಾರ, ಒಬ್ಬ ಶಾಸಕ ತನ್ನ ಮತಪತ್ರವನ್ನು ಪಕ್ಷದ ಪೋಲಿಂಗ್ ಏಜೆಂಟ್‌ಗೆ ಮಾತ್ರ ತೋರಿಸಬಹುದು.

ಇದನ್ನೂ ಓದಿರಿ: ರಾಜ್ಯಸಭೆ ಚುನಾವಣೆ: ಕಾಂಗ್ರೆಸ್‌, ಜೆಡಿಎಸ್‌ ಕಿತ್ತಾಟದಲ್ಲಿ ಬಿಜೆಪಿಗೆ ಲಾಭ

ಎಂವಿಎ ಕೂಡ ದೂರು ಸಲ್ಲಿಸಿತು. ಸ್ವತಂತ್ರ ಶಾಸಕ ರವಿ ರಾಣಾ ಮತ್ತು ಬಿಜೆಪಿ ಶಾಸಕ ಸುಧೀರ್ ಮುಂಗಂತಿವಾರ್ ಅವರು ಚಲಾಯಿಸಿದ ಮತಗಳನ್ನು ಇದೇ ಆಧಾರದ ಮೇಲೆ ರದ್ದುಗೊಳಿಸಬೇಕು ಎಂದು ಒತ್ತಾಯಿಸಿತು. ಸ್ವತಂತ್ರ ಲೋಕಸಭಾ ಸಂಸದೆ ನವನೀತ್ ರಾಣಾ ಅವರ ಪತಿ ರಾಣಾ ಅವರು ಹನುಮಾನ್ ಚಾಲೀಸಾವನ್ನು ತೋರಿಸಿದ್ದಾರೆ ಎಂದು ಎಂವಿಎ ಮುಖಂಡರು ಆರೋಪಿಸಿದರು.

ಈ ವಿವಾದದ ನಂತರ ಚುನಾವಣಾ ಆಯೋಗವು ಖಾಂಡೆ ಚಲಾಯಿಸಿದ ಮತವನ್ನು ರದ್ದುಗೊಳಿಸಿತು. ಇದು ಎಂವಿಎ ಅಭ್ಯರ್ಥಿಗಳ ಅವಕಾಶಗಳನ್ನು ಇನ್ನಷ್ಟು ಕುಗ್ಗಿಸಿತು.

“ಚುನಾವಣಾ ಆಯೋಗ ನಮ್ಮ ಒಂದು ಮತವನ್ನು ಅಸಿಂಧುಗೊಳಿಸಿದೆ. ನಾವು ಎರಡು ಮತಗಳಿಗೆ ಆಕ್ಷೇಪಣೆ ಸಲ್ಲಿಸಿದ್ದೇವೆ. ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ. ಚುನಾವಣಾ ಆಯೋಗವು ಅವರಿಗೆ ಒಲವು ತೋರಿತು” ಎಂದು ಫಲಿತಾಂಶಗಳು ಪ್ರಕಟವಾದ ನಂತರ ಶಿವಸೇನೆಯ ಸಂಜಯ್ ರಾವತ್ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...