Homeಮುಖಪುಟಮಹಾರಾಷ್ಟ್ರದಲ್ಲಿ ಬಿಜೆಪಿ 3 ರಾಜ್ಯಸಭಾ ಸ್ಥಾನಗಳನ್ನು ಗೆದ್ದದ್ದು ಹೇಗೆ?

ಮಹಾರಾಷ್ಟ್ರದಲ್ಲಿ ಬಿಜೆಪಿ 3 ರಾಜ್ಯಸಭಾ ಸ್ಥಾನಗಳನ್ನು ಗೆದ್ದದ್ದು ಹೇಗೆ?

- Advertisement -
- Advertisement -

ಮಹಾರಾಷ್ಟ್ರದ ರಾಜ್ಯಸಭಾ ಚುನಾವಣೆಯಲ್ಲಿ ಎಲ್ಲಾ ಮೂವರು ಬಿಜೆಪಿ ಅಭ್ಯರ್ಥಿಗಳು ಅದ್ಭುತ ಗೆಲುವು ಸಾಧಿಸಿದ್ದಾರೆ. ಶಿವಸೇನೆಯ ಶಾಸಕರ ಅನರ್ಹ ಮತವು ಶಿವಸೇನೆಯ ಸಂಜಯ್ ಪವಾರ್ ಅವರ ಸೋಲಿಗೆ ಕಾರಣವಾಯಿತು.

ನಿಯಮಗಳು ಉಲ್ಲಂಘನೆಯಾಗಿವೆ ಎಂದು ಆರೋಪಿಸಿ ಬಿಜೆಪಿ ಮತ್ತು ರಾಜ್ಯದ ಆಡಳಿತಾರೂಢ ಮಹಾ ವಿಕಾಸ್ ಅಘಾಡಿ (ಎಂವಿಎ) ಎರಡೂ ಕೂಡ ಚುನಾವಣಾ ಆಯೋಗಕ್ಕೆ ದೂರು ನೀಡಿದವು. ಮತ ಎಣಿಕೆ ಸ್ಥಗಿತಗೊಂಡಿತು. ಆದರೆ ಮಧ್ಯರಾತ್ರಿಯ ನಂತರ ಆರಂಭವಾದ ಮತಗಳ ಎಣಿಕೆಯಲ್ಲಿ ಎಲ್ಲಾ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ. ಗೆಲ್ಲಲು ಅಗತ್ಯವಿದ್ದ ಮತಗಳಿಗಿಂತ ಹೆಚ್ಚು ಮತಗಳನ್ನು ಬಿಜೆಪಿ ಪಡೆಯಿತು. ಎಂವಿಎಯ ನಾಲ್ಕನೇ ಮತ್ತು ಸೇನೆಯ ಎರಡನೇ ಅಭ್ಯರ್ಥಿಗಳಿಗಿದ್ದ ಅವಕಾಶಗಳನ್ನು ಬಿಜೆಪಿ ಕಡಿಮೆ ಮಾಡಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಹಾರಾಷ್ಟ್ರದಲ್ಲಿ ಅಭ್ಯರ್ಥಿಯೊಬ್ಬರು ಗೆಲ್ಲಲು ಕನಿಷ್ಠ 41 ಮತಗಳ ಅಗತ್ಯವಿದೆ. ಆದರೆ ಬಿಜೆಪಿ ಅಭ್ಯರ್ಥಿಗಳಾದ ಕೇಂದ್ರ ಸಚಿವ ಪಿಯೂಷ್ ಗೋಯಲ್, ಎರಡನೇ ಬಿಜೆಪಿ ಅಭ್ಯರ್ಥಿ ಅನಿಲ್ ಬೋಂಡೆ 48 ಮತಗಳನ್ನು ಪಡೆದರು. ಕಾಂಗ್ರೆಸ್‌ನ ಏಕೈಕ ಅಭ್ಯರ್ಥಿ ಇಮ್ರಾನ್ ಪ್ರತಾಪ್‌ಗರ್ಹಿ 44 ಮತಗಳನ್ನು ಪಡೆದರು. ಎನ್‌ಸಿಪಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಪ್ರಫುಲ್ ಪಟೇಲ್ 43 ಮತಗಳನ್ನು ಪಡೆದರು. ಬಿಜೆಪಿಯ ಮೂರನೇ ಅಭ್ಯರ್ಥಿ ಧನಂಜಯ್ ಮಹಾದಿಕ್ 41 ಮತಗಳನ್ನು ಪಡೆದರು. ಒಟ್ಟು 284 ಮತಗಳು ಮಾನ್ಯವಾದವು.

ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜೈಲಿನಲ್ಲಿರುವ ಇಬ್ಬರು ಎನ್‌ಸಿಪಿ ಶಾಸಕರಾದ ನವಾಬ್ ಮಲಿಕ್ ಮತ್ತು ಅನಿಲ್ ದೇಶಮುಖ್ ಅವರನ್ನು ಮತ ಚಲಾವಣೆಗೆ ಕಳುಹಿಸಲು ಮುಂಬೈ ವಿಶೇಷ ನ್ಯಾಯಾಲಯ ನಿರಾಕರಿಸಿದ್ದರಿಂದ ಆಡಳಿತರೂಢ ಎಂವಿಎಗೆ ಹಿನ್ನಡೆಯಾಯಿತು. ಹೀಗಾಗಿ ಚುನಾವಣೆಯಲ್ಲಿ ಆರು ಸ್ಥಾನಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಎಂವಿಎ ಆಸೆಗೆ ಹಿನ್ನಡೆಯಾಯಿತು.

ಆಡಳಿತಾರೂಢ ಪಕ್ಷಗಳ ಶಾಸಕರು ಹಾಕಿದ ಮತಗಳನ್ನು ಪ್ರಶ್ನಿಸಿ ಬಿಜೆಪಿ ಚುನಾವಣಾ ಆಯೋಗದ ಮೊರೆ ಹೋಯಿತು. ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ನೇತೃತ್ವದ ಬಿಜೆಪಿ ನಿಯೋಗ ಶುಕ್ರವಾರ ಮಧ್ಯಾಹ್ನ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿ, “ಎನ್‌ಸಿಪಿ ಶಾಸಕ ಜಿತೇಂದ್ರ ಅವ್ಹಾದ್, ಕಾಂಗ್ರೆಸ್‌ನ ಯಶೋಮತಿ ಠಾಕೂರ್ ಮತ್ತು ಶಿವಸೇನಾ ಶಾಸಕ ಸುಹಾಸ್ ಖಾಂಡೆ ಅವರ ಮತಪತ್ರಗಳನ್ನು ತಿರಸ್ಕರಿಸಬೇಕು. ಯಾಕೆಂದರೆ ಇವರು ಮತಪತ್ರಗಳನ್ನು ಅನಧಿಕೃತ ಪಕ್ಷದ ನಾಯಕರಿಗೆ ತೋರಿಸಿದ್ದಾರೆ” ಎಂದು ಬಿಜೆಪಿ ದೂರಿತು.

ಚುನಾವಣಾ ಆಯೋಗದ ನಿಯಮದ ಪ್ರಕಾರ, ಒಬ್ಬ ಶಾಸಕ ತನ್ನ ಮತಪತ್ರವನ್ನು ಪಕ್ಷದ ಪೋಲಿಂಗ್ ಏಜೆಂಟ್‌ಗೆ ಮಾತ್ರ ತೋರಿಸಬಹುದು.

ಇದನ್ನೂ ಓದಿರಿ: ರಾಜ್ಯಸಭೆ ಚುನಾವಣೆ: ಕಾಂಗ್ರೆಸ್‌, ಜೆಡಿಎಸ್‌ ಕಿತ್ತಾಟದಲ್ಲಿ ಬಿಜೆಪಿಗೆ ಲಾಭ

ಎಂವಿಎ ಕೂಡ ದೂರು ಸಲ್ಲಿಸಿತು. ಸ್ವತಂತ್ರ ಶಾಸಕ ರವಿ ರಾಣಾ ಮತ್ತು ಬಿಜೆಪಿ ಶಾಸಕ ಸುಧೀರ್ ಮುಂಗಂತಿವಾರ್ ಅವರು ಚಲಾಯಿಸಿದ ಮತಗಳನ್ನು ಇದೇ ಆಧಾರದ ಮೇಲೆ ರದ್ದುಗೊಳಿಸಬೇಕು ಎಂದು ಒತ್ತಾಯಿಸಿತು. ಸ್ವತಂತ್ರ ಲೋಕಸಭಾ ಸಂಸದೆ ನವನೀತ್ ರಾಣಾ ಅವರ ಪತಿ ರಾಣಾ ಅವರು ಹನುಮಾನ್ ಚಾಲೀಸಾವನ್ನು ತೋರಿಸಿದ್ದಾರೆ ಎಂದು ಎಂವಿಎ ಮುಖಂಡರು ಆರೋಪಿಸಿದರು.

ಈ ವಿವಾದದ ನಂತರ ಚುನಾವಣಾ ಆಯೋಗವು ಖಾಂಡೆ ಚಲಾಯಿಸಿದ ಮತವನ್ನು ರದ್ದುಗೊಳಿಸಿತು. ಇದು ಎಂವಿಎ ಅಭ್ಯರ್ಥಿಗಳ ಅವಕಾಶಗಳನ್ನು ಇನ್ನಷ್ಟು ಕುಗ್ಗಿಸಿತು.

“ಚುನಾವಣಾ ಆಯೋಗ ನಮ್ಮ ಒಂದು ಮತವನ್ನು ಅಸಿಂಧುಗೊಳಿಸಿದೆ. ನಾವು ಎರಡು ಮತಗಳಿಗೆ ಆಕ್ಷೇಪಣೆ ಸಲ್ಲಿಸಿದ್ದೇವೆ. ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ. ಚುನಾವಣಾ ಆಯೋಗವು ಅವರಿಗೆ ಒಲವು ತೋರಿತು” ಎಂದು ಫಲಿತಾಂಶಗಳು ಪ್ರಕಟವಾದ ನಂತರ ಶಿವಸೇನೆಯ ಸಂಜಯ್ ರಾವತ್ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....