Homeಅಂಕಣಗಳುಕೊರೋನೋತ್ತರ ಕಾಲ ಎಷ್ಟು ಭಿನ್ನವಾಗಿರಲಿದೆ?

ಕೊರೋನೋತ್ತರ ಕಾಲ ಎಷ್ಟು ಭಿನ್ನವಾಗಿರಲಿದೆ?

- Advertisement -
- Advertisement -

ಈಗ ಬದುಕಿರುವ ಯಾರ ನೆನಪಿನಲ್ಲೂ ಉಳಿದುಕೊಂಡಿರದ ರೀತಿಯ ವಿದ್ಯಮಾನದಲ್ಲಿ ನಾವೆಲ್ಲರೂ ಭಾಗಿಯಾಗಿದ್ದೇವೆ. ಇಡೀ ದುನಿಯಾ ತನ್ನ ಮಾಮೂಲಿನ ಅಭ್ಯಾಸಗಳನ್ನೆಲ್ಲಾ ಬದಿಗಿಟ್ಟಿದೆ. ಕಣ್ಣಿಗೆ ಕಾಣದ, ಆದರೆ ಇದೆಯೆಂದು ಲಕ್ಷಾಂತರ (ಇಂದಿಗೆ 2 ಲಕ್ಷ 18 ಸಾವಿರ) ಸಾವುಗಳ ಮೂಲಕ ಎಲ್ಲರಿಗೂ ಖಚಿತವಾಗಿಸಿರುವ ವೈರಸ್ ಒಂದು ಇಂತಹ ಬೆಳವಣಿಗೆಗೆ ಕಾರಣವಾಗಿದೆ. ಇದು ಎಲ್ಲೆಡೆ ಆವರಿಸುತ್ತಿದ್ದಂತೆ ಜನರು ಫಿಲಾಸಫಿಕಲ್ ಮಾತುಗಳನ್ನಾಡಲು ಆರಂಭಿಸಿದ್ದರು. ಪ್ರತಿನಿತ್ಯ ಸಾವಿರಾರು ಕಿ.ಮೀ.ಗಳನ್ನು ಪ್ರಯಾಣಿಸುತ್ತಿದ್ದವರು, ಗಿಜಿಗಿಜಿಗುಡುತ್ತಿದ್ದ ಪ್ರದೇಶಗಳಲ್ಲಿ ಕೆಲಸ ಮಾಡುತ್ತಿದ್ದವರು, ವೈಭವೋಪೇತವಾದ ಕಾರ್ಯಕ್ರಮಗಳಲ್ಲಿ ಸಾವಿರಾರು ಜನರನ್ನು ಸೇರಿಸಿ ಔತಣಕೂಟಗಳನ್ನು ಆಯೋಜಿಸುತ್ತಿದ್ದವರು, ಲಕ್ಷ ಲಕ್ಷ ಜನರನ್ನು ಸೇರಿಸಿ ರಾಜಕೀಯ ಕಾರ್ಯಕ್ರಮಗಳನ್ನು ಮಾಡುತ್ತಿದ್ದವರು ಅಥವಾ ಪ್ರತಿಭಟನೆಗಳನ್ನು ಸಂಘಟಿಸುತ್ತಿದ್ದವರು ಎಲ್ಲರೂ ಕೆಲವೇ ಜನರನ್ನು ನೋಡಿಕೊಂಡು ಕಾಲ ಹಾಕಬೇಕು ಮತ್ತು ಕೆಲವು ಕಿ.ಮೀ.ಗಳಾಚೆ ಪ್ರಯಾಣವನ್ನು ಮಾಡಬಾರದು. ಅಂದರೆ ಮನುಷ್ಯರು ಸಾಧಿಸಿದ ವೇಗ, ಬೆಳವಣಿಗೆ, ಗಳಿಸಿದ ಸಂಪತ್ತು ಎಲ್ಲವೂ ನಿರರ್ಥಕವೆನಿಸುವಂತಾಯಿತು.

ಖಂಡಾಂತರಗಳನ್ನು ದಾಟಿ ಹಬ್ಬಿದ ಸೋಂಕು ಮನುಷ್ಯರನ್ನು ಜನಾಂಗ, ಪ್ರದೇಶ, ಜಾತಿ, ಧರ್ಮ, ಲಿಂಗ ಯಾವುದನ್ನೂ ಪ್ರತ್ಯೇಕ ಮಾಡಿ ನೋಡಲಿಲ್ಲ. ಪರಸ್ಪರ ಎದುರಾಳಿಗಳಾಗಿ ನಿಂತಿರುವ ಚೀನಾ ಮತ್ತು ಅಮೆರಿಕಾಗಳೆರಡನ್ನೂ ದೊಡ್ಡ ಮಟ್ಟದಲ್ಲಿ ಬಾಧಿಸಿತು. ಮೊದಮೊದಲು ವಿಮಾನಗಳಲ್ಲಿ ಓಡಾಡಿದವರಿಗೆ ಮತ್ತು ಅವರ ಬಂಧುಬಾಂಧವರಿಗೆ ಹೆಚ್ಚು ಹತ್ತಿಕೊಂಡಿತಾದರೂ, ಅದೀಗ ಧಾರಾವಿಯಂತಹ ಸ್ಲಂಗಳನ್ನು ಆವರಿಸುತ್ತಿದೆ. ಶ್ರೀಮಂತರು ತಂದ ರೋಗವೆಂದು ಹಂಗಿಸಬಹುದಾದರೂ, ಕಿಷ್ಕಿಂಧೆಗಳಲ್ಲಿ ಬದುಕಬೇಕಾದ ಅನಿವಾರ್ಯತೆಯಿರುವವರನ್ನೇ ಹೆಚ್ಚು ಬಲಿ ತೆಗೆದುಕೊಳ್ಳಬಹುದೇ ಎಂಬ ಆತಂಕ ಕಾಡುತ್ತಿದೆ.

ಇದು ನಮ್ಮ ಇಂದಿನ ಬದುಕುವ ರೀತಿ, ಉಳ್ಳವರು ಅಭ್ಯಾಸ ಮಾಡಿಸಿದ ಬದುಕಿನ ನೀತಿಗಳ ಕಾರಣಕ್ಕೇ ಆವರಿಸುತ್ತಿದೆ ಎಂದು ಹೇಳಲು ಕಾರಣಗಳಿದ್ದವು. ಪಟ್ಟಣಗಳು, ಬೃಹತ್ ನಗರಗಳು, ಶ್ರೀಮಂತ ದೇಶಗಳನ್ನೇ ಇದುವರೆಗೆ ಹೆಚ್ಚು ಬಾಧಿಸಿವೆ. ಹಳ್ಳಿಗಳು, ಗುಡ್ಡಗಾಡುಗಳು ಈಗಲೂ ಅಷ್ಟು ತೊಂದರೆಗೊಳಗಾಗಿಲ್ಲ. ಹೀಗಾಗಿ ಮನುಷ್ಯರ ಲೋಭ, ಮೋಹ, ತೀರದ ದಾಹಗಳ ಕುರಿತಾಗಿ ಇವು ಪ್ರಶ್ನೆಗಳನ್ನೆತ್ತಬಹುದು; ವಿಶ್ವಮಾನವ ಪ್ರಜ್ಞೆಯೊಂದಿಗೆ ಸ್ಥಳೀಯವಾಗಿಯೇ ಬದುಕುವ ಉತ್ತರಗಳನ್ನೂ ಈಯಬಹುದು ಎಂದು ಭಾವಿಸುವ ರೀತಿಯಲ್ಲಿ ವಿಶ್ವವ್ಯಾಪಕವಾದ ಕೊರೊನಾ ಸೋಂಕು ಮೆದುಳಿಗೆ ಕೈ ಹಾಕಿತ್ತು.

ಆದರೆ, ನೋಡನೋಡುತ್ತಿದ್ದಂತೆ ಕೊರೋನಾ ಪೂರ್ವದಲ್ಲಿ ನಮ್ಮೊಳಗಿದ್ದ ಎಲ್ಲಾ ಹುಳುಕು-ಕೆಡುಕುಗಳು ಭುಗಿಲೆದ್ದವು. ಚೀನಾ ವಿರೋಧಕ್ಕೆ ಬಳಸಿಕೊಂಡಿದ್ದು, ಮುಸ್ಲಿಂ ದೂಷಣೆ ಮಾಡಿದ್ದು, ಬಡವರ ಬದುಕನ್ನು ನಿಕೃಷ್ಟವಾಗಿಸಿದ್ದು, ಮನೆಯಲ್ಲಿ ದುಡಿವ ಹೆಣ್ಣುಮಕ್ಕಳ ಬದುಕನ್ನು ಮತ್ತಷ್ಟು ಕಟುವಾಗಿಸಿದ್ದು, ಹಿಂದುಳಿದ ಪ್ರದೇಶಗಳು, ರಾಜ್ಯಗಳು ನಿರ್ಲಕ್ಷ್ಯಕ್ಕೊಳಗಾಗಿದ್ದು, ಹಳ್ಳಿಯಿಂದ ರೈಲು ಹತ್ತಿ ನಗರಮುಖಿಗಳಾಗಿದ್ದ ಶೋಷಿತ ಸಮುದಾಯಗಳು ಕಾಲ್ನಡಿಗೆಯಲ್ಲಿ ದಾರಿ ಸವೆಸಬೇಕಾಗಿದ್ದು ಎಲ್ಲವೂ ಕೊರೋನಾ ಪೂರ್ವದ ಸಮಾಜದ ನೀತಿಗನುಗುಣವಾಗಿಯೇ ಇದೆ. ಸೂಪರ್ ಪವರ್‍ಗಳು ಮತ್ತು ಸೂಪರ್ ಪವರ್‍ಗಳಾಗಬಯಸುವವರು ತಮ್ಮ ತಮ್ಮ ದಾಳಗಳನ್ನು ಉರುಳಿಸಿಯೇ ಬಿಟ್ಟರು; ತನ್ನ ಜನರನ್ನು ಸರ್ವಾಧಿಕಾರದ ಬಿಗಿಮುಷ್ಟಿಯಲ್ಲಿಟ್ಟಿರುವ ಚೀನಾ ಈಗಲೂ ಪ್ರಪಂಚದೆಲ್ಲೆಡೆ ತನ್ನ ಪಾರಮ್ಯ ಮೆರೆಯಲು ಪ್ರಯತ್ನಿಸುತ್ತಿದ್ದಂತಿದೆ; ಕಾಲ್ನಡಿಗೆಯಲ್ಲಿ ನೂರಾರು ಕಿ.ಮೀ. ನಡೆಯುತ್ತಿರುವವರ ಅಣ್ಣ ತಮ್ಮಂದಿರೇ ಮೋದಿಯೇ ವಿಶ್ವಗುರು ಎಂದು ಅಬ್ಬರಿಸುತ್ತಿದ್ದಾರೆ.

ಸುಳ್ಳು-ಅಪಪ್ರಚಾರಗಳು, ಸರ್ಕಾರದ ಸಾಂಕೇತಿಕ ಹೊಂದಾಣಿಕೆಗಳು, ದುಷ್ಟವಾಹಿನಿ ಮಾಧ್ಯಮಗಳ ಹಸೀ ಅವಾಂತರಗಳೆಲ್ಲವೂ ಇನ್ನಷ್ಟು ಬಲಪಡೆದುಕೊಂಡಿವೆ.

ಇದರ ಮಧ್ಯೆಯೇ ಅದೆಷ್ಟೋ ಜನರು ನೊಂದವರಿಗೆ ಸಹಾಯ ಮಾಡಲೂ ಮುಂದಾಗುತ್ತಿದ್ದಾರೆ. ಈ ಹೊತ್ತು ಯಾವ ರೀತಿ ಆಂದೋಲನ ಕಟ್ಟಬಹುದು ಗೊತ್ತಾಗದೇ ಎಲ್ಲಾ ಹೋರಾಟಗಾರರು ಸಾಂಕೇತಿಕ ಕಾರ್ಯಕ್ರಮಗಳನ್ನು ಆನ್‍ಲೈನ್‍ನಲ್ಲಿ ಮಾಡಿಕೊಂಡು ಬಹಳ ಬ್ಯುಸಿಯಾಗಿದ್ದಂತಿದೆ.

ಇವೆಲ್ಲದರ ಮಧ್ಯೆ ಹೊಸತನ, ಹೊಸ ನೀತಿ, ಹೊಸ ಮೌಲ್ಯಗಳು ಚಿಗುರಬಹುದೇ? ಕೊರೋನೋತ್ತರ ಜಗತ್ತಿನಲ್ಲಿ ಏನೇ ಪರಿಮಾಣಾತ್ಮಕ ಬದಲಾವಣೆ ಬಂದರೂ ಹಳೆಯ ಜೀವ ವಿರೋಧಿ ಮೌಲ್ಯಗಳು ಕೊಳೆತು ನಾಶವಾಗಬಲ್ಲುದೇ? ಇಲ್ಲಿಯವರೆಗಿನ ಬೆಳವಣಿಗೆಗಳು ಅಂತಹ ಭರವಸೆಯನ್ನೇನೂ ಮೂಡಿಸುತ್ತಿಲ್ಲ. ಹೊಸದೇ ಆದ ಶಕ್ತಿಯೊಂದು ಇದರ ಮಧ್ಯೆಯೇ ಉದ್ಭವಿಸಿ, ತಲ್ಲಣ ತರದ ಹೊರತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Demonetisation ಆದಾಗ, ಕೆಲಸ ಕಳೆದುಕೊಂಡ ಹೆಚ್ಚಿನ ಮಂದಿ ಇಂದು ನಡೆದು ತಮ್ಮೂರತ್ತ ತೆರಳುತ್ತಿದ್ದಾರೆ.ಇದಕ್ಕೆ ಎಡೆಮಾಡಿದ ಮೋದಿ ವಿ.ಗುರು!
    ಹಿಂದೆ ಆಳ್ವಿಕೆ ಮಾಡಿದವರು ಹೇಗೆ ಮಂದಿಯನ್ನು ಕಂಗೆಡಿಸಿರಬಹುದು‌.
    ಇದಕ್ಕೆಲ್ಲಾ ಮೀಡಿಯಾಗಳನ್ನು ಗುರಿಮಾಡಬೇಕಾ!!!

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...