Homeಅಂಕಣಗಳುಕೊರೋನೋತ್ತರ ಕಾಲ ಎಷ್ಟು ಭಿನ್ನವಾಗಿರಲಿದೆ?

ಕೊರೋನೋತ್ತರ ಕಾಲ ಎಷ್ಟು ಭಿನ್ನವಾಗಿರಲಿದೆ?

- Advertisement -
- Advertisement -

ಈಗ ಬದುಕಿರುವ ಯಾರ ನೆನಪಿನಲ್ಲೂ ಉಳಿದುಕೊಂಡಿರದ ರೀತಿಯ ವಿದ್ಯಮಾನದಲ್ಲಿ ನಾವೆಲ್ಲರೂ ಭಾಗಿಯಾಗಿದ್ದೇವೆ. ಇಡೀ ದುನಿಯಾ ತನ್ನ ಮಾಮೂಲಿನ ಅಭ್ಯಾಸಗಳನ್ನೆಲ್ಲಾ ಬದಿಗಿಟ್ಟಿದೆ. ಕಣ್ಣಿಗೆ ಕಾಣದ, ಆದರೆ ಇದೆಯೆಂದು ಲಕ್ಷಾಂತರ (ಇಂದಿಗೆ 2 ಲಕ್ಷ 18 ಸಾವಿರ) ಸಾವುಗಳ ಮೂಲಕ ಎಲ್ಲರಿಗೂ ಖಚಿತವಾಗಿಸಿರುವ ವೈರಸ್ ಒಂದು ಇಂತಹ ಬೆಳವಣಿಗೆಗೆ ಕಾರಣವಾಗಿದೆ. ಇದು ಎಲ್ಲೆಡೆ ಆವರಿಸುತ್ತಿದ್ದಂತೆ ಜನರು ಫಿಲಾಸಫಿಕಲ್ ಮಾತುಗಳನ್ನಾಡಲು ಆರಂಭಿಸಿದ್ದರು. ಪ್ರತಿನಿತ್ಯ ಸಾವಿರಾರು ಕಿ.ಮೀ.ಗಳನ್ನು ಪ್ರಯಾಣಿಸುತ್ತಿದ್ದವರು, ಗಿಜಿಗಿಜಿಗುಡುತ್ತಿದ್ದ ಪ್ರದೇಶಗಳಲ್ಲಿ ಕೆಲಸ ಮಾಡುತ್ತಿದ್ದವರು, ವೈಭವೋಪೇತವಾದ ಕಾರ್ಯಕ್ರಮಗಳಲ್ಲಿ ಸಾವಿರಾರು ಜನರನ್ನು ಸೇರಿಸಿ ಔತಣಕೂಟಗಳನ್ನು ಆಯೋಜಿಸುತ್ತಿದ್ದವರು, ಲಕ್ಷ ಲಕ್ಷ ಜನರನ್ನು ಸೇರಿಸಿ ರಾಜಕೀಯ ಕಾರ್ಯಕ್ರಮಗಳನ್ನು ಮಾಡುತ್ತಿದ್ದವರು ಅಥವಾ ಪ್ರತಿಭಟನೆಗಳನ್ನು ಸಂಘಟಿಸುತ್ತಿದ್ದವರು ಎಲ್ಲರೂ ಕೆಲವೇ ಜನರನ್ನು ನೋಡಿಕೊಂಡು ಕಾಲ ಹಾಕಬೇಕು ಮತ್ತು ಕೆಲವು ಕಿ.ಮೀ.ಗಳಾಚೆ ಪ್ರಯಾಣವನ್ನು ಮಾಡಬಾರದು. ಅಂದರೆ ಮನುಷ್ಯರು ಸಾಧಿಸಿದ ವೇಗ, ಬೆಳವಣಿಗೆ, ಗಳಿಸಿದ ಸಂಪತ್ತು ಎಲ್ಲವೂ ನಿರರ್ಥಕವೆನಿಸುವಂತಾಯಿತು.

ಖಂಡಾಂತರಗಳನ್ನು ದಾಟಿ ಹಬ್ಬಿದ ಸೋಂಕು ಮನುಷ್ಯರನ್ನು ಜನಾಂಗ, ಪ್ರದೇಶ, ಜಾತಿ, ಧರ್ಮ, ಲಿಂಗ ಯಾವುದನ್ನೂ ಪ್ರತ್ಯೇಕ ಮಾಡಿ ನೋಡಲಿಲ್ಲ. ಪರಸ್ಪರ ಎದುರಾಳಿಗಳಾಗಿ ನಿಂತಿರುವ ಚೀನಾ ಮತ್ತು ಅಮೆರಿಕಾಗಳೆರಡನ್ನೂ ದೊಡ್ಡ ಮಟ್ಟದಲ್ಲಿ ಬಾಧಿಸಿತು. ಮೊದಮೊದಲು ವಿಮಾನಗಳಲ್ಲಿ ಓಡಾಡಿದವರಿಗೆ ಮತ್ತು ಅವರ ಬಂಧುಬಾಂಧವರಿಗೆ ಹೆಚ್ಚು ಹತ್ತಿಕೊಂಡಿತಾದರೂ, ಅದೀಗ ಧಾರಾವಿಯಂತಹ ಸ್ಲಂಗಳನ್ನು ಆವರಿಸುತ್ತಿದೆ. ಶ್ರೀಮಂತರು ತಂದ ರೋಗವೆಂದು ಹಂಗಿಸಬಹುದಾದರೂ, ಕಿಷ್ಕಿಂಧೆಗಳಲ್ಲಿ ಬದುಕಬೇಕಾದ ಅನಿವಾರ್ಯತೆಯಿರುವವರನ್ನೇ ಹೆಚ್ಚು ಬಲಿ ತೆಗೆದುಕೊಳ್ಳಬಹುದೇ ಎಂಬ ಆತಂಕ ಕಾಡುತ್ತಿದೆ.

ಇದು ನಮ್ಮ ಇಂದಿನ ಬದುಕುವ ರೀತಿ, ಉಳ್ಳವರು ಅಭ್ಯಾಸ ಮಾಡಿಸಿದ ಬದುಕಿನ ನೀತಿಗಳ ಕಾರಣಕ್ಕೇ ಆವರಿಸುತ್ತಿದೆ ಎಂದು ಹೇಳಲು ಕಾರಣಗಳಿದ್ದವು. ಪಟ್ಟಣಗಳು, ಬೃಹತ್ ನಗರಗಳು, ಶ್ರೀಮಂತ ದೇಶಗಳನ್ನೇ ಇದುವರೆಗೆ ಹೆಚ್ಚು ಬಾಧಿಸಿವೆ. ಹಳ್ಳಿಗಳು, ಗುಡ್ಡಗಾಡುಗಳು ಈಗಲೂ ಅಷ್ಟು ತೊಂದರೆಗೊಳಗಾಗಿಲ್ಲ. ಹೀಗಾಗಿ ಮನುಷ್ಯರ ಲೋಭ, ಮೋಹ, ತೀರದ ದಾಹಗಳ ಕುರಿತಾಗಿ ಇವು ಪ್ರಶ್ನೆಗಳನ್ನೆತ್ತಬಹುದು; ವಿಶ್ವಮಾನವ ಪ್ರಜ್ಞೆಯೊಂದಿಗೆ ಸ್ಥಳೀಯವಾಗಿಯೇ ಬದುಕುವ ಉತ್ತರಗಳನ್ನೂ ಈಯಬಹುದು ಎಂದು ಭಾವಿಸುವ ರೀತಿಯಲ್ಲಿ ವಿಶ್ವವ್ಯಾಪಕವಾದ ಕೊರೊನಾ ಸೋಂಕು ಮೆದುಳಿಗೆ ಕೈ ಹಾಕಿತ್ತು.

ಆದರೆ, ನೋಡನೋಡುತ್ತಿದ್ದಂತೆ ಕೊರೋನಾ ಪೂರ್ವದಲ್ಲಿ ನಮ್ಮೊಳಗಿದ್ದ ಎಲ್ಲಾ ಹುಳುಕು-ಕೆಡುಕುಗಳು ಭುಗಿಲೆದ್ದವು. ಚೀನಾ ವಿರೋಧಕ್ಕೆ ಬಳಸಿಕೊಂಡಿದ್ದು, ಮುಸ್ಲಿಂ ದೂಷಣೆ ಮಾಡಿದ್ದು, ಬಡವರ ಬದುಕನ್ನು ನಿಕೃಷ್ಟವಾಗಿಸಿದ್ದು, ಮನೆಯಲ್ಲಿ ದುಡಿವ ಹೆಣ್ಣುಮಕ್ಕಳ ಬದುಕನ್ನು ಮತ್ತಷ್ಟು ಕಟುವಾಗಿಸಿದ್ದು, ಹಿಂದುಳಿದ ಪ್ರದೇಶಗಳು, ರಾಜ್ಯಗಳು ನಿರ್ಲಕ್ಷ್ಯಕ್ಕೊಳಗಾಗಿದ್ದು, ಹಳ್ಳಿಯಿಂದ ರೈಲು ಹತ್ತಿ ನಗರಮುಖಿಗಳಾಗಿದ್ದ ಶೋಷಿತ ಸಮುದಾಯಗಳು ಕಾಲ್ನಡಿಗೆಯಲ್ಲಿ ದಾರಿ ಸವೆಸಬೇಕಾಗಿದ್ದು ಎಲ್ಲವೂ ಕೊರೋನಾ ಪೂರ್ವದ ಸಮಾಜದ ನೀತಿಗನುಗುಣವಾಗಿಯೇ ಇದೆ. ಸೂಪರ್ ಪವರ್‍ಗಳು ಮತ್ತು ಸೂಪರ್ ಪವರ್‍ಗಳಾಗಬಯಸುವವರು ತಮ್ಮ ತಮ್ಮ ದಾಳಗಳನ್ನು ಉರುಳಿಸಿಯೇ ಬಿಟ್ಟರು; ತನ್ನ ಜನರನ್ನು ಸರ್ವಾಧಿಕಾರದ ಬಿಗಿಮುಷ್ಟಿಯಲ್ಲಿಟ್ಟಿರುವ ಚೀನಾ ಈಗಲೂ ಪ್ರಪಂಚದೆಲ್ಲೆಡೆ ತನ್ನ ಪಾರಮ್ಯ ಮೆರೆಯಲು ಪ್ರಯತ್ನಿಸುತ್ತಿದ್ದಂತಿದೆ; ಕಾಲ್ನಡಿಗೆಯಲ್ಲಿ ನೂರಾರು ಕಿ.ಮೀ. ನಡೆಯುತ್ತಿರುವವರ ಅಣ್ಣ ತಮ್ಮಂದಿರೇ ಮೋದಿಯೇ ವಿಶ್ವಗುರು ಎಂದು ಅಬ್ಬರಿಸುತ್ತಿದ್ದಾರೆ.

ಸುಳ್ಳು-ಅಪಪ್ರಚಾರಗಳು, ಸರ್ಕಾರದ ಸಾಂಕೇತಿಕ ಹೊಂದಾಣಿಕೆಗಳು, ದುಷ್ಟವಾಹಿನಿ ಮಾಧ್ಯಮಗಳ ಹಸೀ ಅವಾಂತರಗಳೆಲ್ಲವೂ ಇನ್ನಷ್ಟು ಬಲಪಡೆದುಕೊಂಡಿವೆ.

ಇದರ ಮಧ್ಯೆಯೇ ಅದೆಷ್ಟೋ ಜನರು ನೊಂದವರಿಗೆ ಸಹಾಯ ಮಾಡಲೂ ಮುಂದಾಗುತ್ತಿದ್ದಾರೆ. ಈ ಹೊತ್ತು ಯಾವ ರೀತಿ ಆಂದೋಲನ ಕಟ್ಟಬಹುದು ಗೊತ್ತಾಗದೇ ಎಲ್ಲಾ ಹೋರಾಟಗಾರರು ಸಾಂಕೇತಿಕ ಕಾರ್ಯಕ್ರಮಗಳನ್ನು ಆನ್‍ಲೈನ್‍ನಲ್ಲಿ ಮಾಡಿಕೊಂಡು ಬಹಳ ಬ್ಯುಸಿಯಾಗಿದ್ದಂತಿದೆ.

ಇವೆಲ್ಲದರ ಮಧ್ಯೆ ಹೊಸತನ, ಹೊಸ ನೀತಿ, ಹೊಸ ಮೌಲ್ಯಗಳು ಚಿಗುರಬಹುದೇ? ಕೊರೋನೋತ್ತರ ಜಗತ್ತಿನಲ್ಲಿ ಏನೇ ಪರಿಮಾಣಾತ್ಮಕ ಬದಲಾವಣೆ ಬಂದರೂ ಹಳೆಯ ಜೀವ ವಿರೋಧಿ ಮೌಲ್ಯಗಳು ಕೊಳೆತು ನಾಶವಾಗಬಲ್ಲುದೇ? ಇಲ್ಲಿಯವರೆಗಿನ ಬೆಳವಣಿಗೆಗಳು ಅಂತಹ ಭರವಸೆಯನ್ನೇನೂ ಮೂಡಿಸುತ್ತಿಲ್ಲ. ಹೊಸದೇ ಆದ ಶಕ್ತಿಯೊಂದು ಇದರ ಮಧ್ಯೆಯೇ ಉದ್ಭವಿಸಿ, ತಲ್ಲಣ ತರದ ಹೊರತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Demonetisation ಆದಾಗ, ಕೆಲಸ ಕಳೆದುಕೊಂಡ ಹೆಚ್ಚಿನ ಮಂದಿ ಇಂದು ನಡೆದು ತಮ್ಮೂರತ್ತ ತೆರಳುತ್ತಿದ್ದಾರೆ.ಇದಕ್ಕೆ ಎಡೆಮಾಡಿದ ಮೋದಿ ವಿ.ಗುರು!
    ಹಿಂದೆ ಆಳ್ವಿಕೆ ಮಾಡಿದವರು ಹೇಗೆ ಮಂದಿಯನ್ನು ಕಂಗೆಡಿಸಿರಬಹುದು‌.
    ಇದಕ್ಕೆಲ್ಲಾ ಮೀಡಿಯಾಗಳನ್ನು ಗುರಿಮಾಡಬೇಕಾ!!!

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...