Homeಅಂಕಣಗಳುಕೊರೋನೋತ್ತರ ಕಾಲ ಎಷ್ಟು ಭಿನ್ನವಾಗಿರಲಿದೆ?

ಕೊರೋನೋತ್ತರ ಕಾಲ ಎಷ್ಟು ಭಿನ್ನವಾಗಿರಲಿದೆ?

- Advertisement -
- Advertisement -

ಈಗ ಬದುಕಿರುವ ಯಾರ ನೆನಪಿನಲ್ಲೂ ಉಳಿದುಕೊಂಡಿರದ ರೀತಿಯ ವಿದ್ಯಮಾನದಲ್ಲಿ ನಾವೆಲ್ಲರೂ ಭಾಗಿಯಾಗಿದ್ದೇವೆ. ಇಡೀ ದುನಿಯಾ ತನ್ನ ಮಾಮೂಲಿನ ಅಭ್ಯಾಸಗಳನ್ನೆಲ್ಲಾ ಬದಿಗಿಟ್ಟಿದೆ. ಕಣ್ಣಿಗೆ ಕಾಣದ, ಆದರೆ ಇದೆಯೆಂದು ಲಕ್ಷಾಂತರ (ಇಂದಿಗೆ 2 ಲಕ್ಷ 18 ಸಾವಿರ) ಸಾವುಗಳ ಮೂಲಕ ಎಲ್ಲರಿಗೂ ಖಚಿತವಾಗಿಸಿರುವ ವೈರಸ್ ಒಂದು ಇಂತಹ ಬೆಳವಣಿಗೆಗೆ ಕಾರಣವಾಗಿದೆ. ಇದು ಎಲ್ಲೆಡೆ ಆವರಿಸುತ್ತಿದ್ದಂತೆ ಜನರು ಫಿಲಾಸಫಿಕಲ್ ಮಾತುಗಳನ್ನಾಡಲು ಆರಂಭಿಸಿದ್ದರು. ಪ್ರತಿನಿತ್ಯ ಸಾವಿರಾರು ಕಿ.ಮೀ.ಗಳನ್ನು ಪ್ರಯಾಣಿಸುತ್ತಿದ್ದವರು, ಗಿಜಿಗಿಜಿಗುಡುತ್ತಿದ್ದ ಪ್ರದೇಶಗಳಲ್ಲಿ ಕೆಲಸ ಮಾಡುತ್ತಿದ್ದವರು, ವೈಭವೋಪೇತವಾದ ಕಾರ್ಯಕ್ರಮಗಳಲ್ಲಿ ಸಾವಿರಾರು ಜನರನ್ನು ಸೇರಿಸಿ ಔತಣಕೂಟಗಳನ್ನು ಆಯೋಜಿಸುತ್ತಿದ್ದವರು, ಲಕ್ಷ ಲಕ್ಷ ಜನರನ್ನು ಸೇರಿಸಿ ರಾಜಕೀಯ ಕಾರ್ಯಕ್ರಮಗಳನ್ನು ಮಾಡುತ್ತಿದ್ದವರು ಅಥವಾ ಪ್ರತಿಭಟನೆಗಳನ್ನು ಸಂಘಟಿಸುತ್ತಿದ್ದವರು ಎಲ್ಲರೂ ಕೆಲವೇ ಜನರನ್ನು ನೋಡಿಕೊಂಡು ಕಾಲ ಹಾಕಬೇಕು ಮತ್ತು ಕೆಲವು ಕಿ.ಮೀ.ಗಳಾಚೆ ಪ್ರಯಾಣವನ್ನು ಮಾಡಬಾರದು. ಅಂದರೆ ಮನುಷ್ಯರು ಸಾಧಿಸಿದ ವೇಗ, ಬೆಳವಣಿಗೆ, ಗಳಿಸಿದ ಸಂಪತ್ತು ಎಲ್ಲವೂ ನಿರರ್ಥಕವೆನಿಸುವಂತಾಯಿತು.

ಖಂಡಾಂತರಗಳನ್ನು ದಾಟಿ ಹಬ್ಬಿದ ಸೋಂಕು ಮನುಷ್ಯರನ್ನು ಜನಾಂಗ, ಪ್ರದೇಶ, ಜಾತಿ, ಧರ್ಮ, ಲಿಂಗ ಯಾವುದನ್ನೂ ಪ್ರತ್ಯೇಕ ಮಾಡಿ ನೋಡಲಿಲ್ಲ. ಪರಸ್ಪರ ಎದುರಾಳಿಗಳಾಗಿ ನಿಂತಿರುವ ಚೀನಾ ಮತ್ತು ಅಮೆರಿಕಾಗಳೆರಡನ್ನೂ ದೊಡ್ಡ ಮಟ್ಟದಲ್ಲಿ ಬಾಧಿಸಿತು. ಮೊದಮೊದಲು ವಿಮಾನಗಳಲ್ಲಿ ಓಡಾಡಿದವರಿಗೆ ಮತ್ತು ಅವರ ಬಂಧುಬಾಂಧವರಿಗೆ ಹೆಚ್ಚು ಹತ್ತಿಕೊಂಡಿತಾದರೂ, ಅದೀಗ ಧಾರಾವಿಯಂತಹ ಸ್ಲಂಗಳನ್ನು ಆವರಿಸುತ್ತಿದೆ. ಶ್ರೀಮಂತರು ತಂದ ರೋಗವೆಂದು ಹಂಗಿಸಬಹುದಾದರೂ, ಕಿಷ್ಕಿಂಧೆಗಳಲ್ಲಿ ಬದುಕಬೇಕಾದ ಅನಿವಾರ್ಯತೆಯಿರುವವರನ್ನೇ ಹೆಚ್ಚು ಬಲಿ ತೆಗೆದುಕೊಳ್ಳಬಹುದೇ ಎಂಬ ಆತಂಕ ಕಾಡುತ್ತಿದೆ.

ಇದು ನಮ್ಮ ಇಂದಿನ ಬದುಕುವ ರೀತಿ, ಉಳ್ಳವರು ಅಭ್ಯಾಸ ಮಾಡಿಸಿದ ಬದುಕಿನ ನೀತಿಗಳ ಕಾರಣಕ್ಕೇ ಆವರಿಸುತ್ತಿದೆ ಎಂದು ಹೇಳಲು ಕಾರಣಗಳಿದ್ದವು. ಪಟ್ಟಣಗಳು, ಬೃಹತ್ ನಗರಗಳು, ಶ್ರೀಮಂತ ದೇಶಗಳನ್ನೇ ಇದುವರೆಗೆ ಹೆಚ್ಚು ಬಾಧಿಸಿವೆ. ಹಳ್ಳಿಗಳು, ಗುಡ್ಡಗಾಡುಗಳು ಈಗಲೂ ಅಷ್ಟು ತೊಂದರೆಗೊಳಗಾಗಿಲ್ಲ. ಹೀಗಾಗಿ ಮನುಷ್ಯರ ಲೋಭ, ಮೋಹ, ತೀರದ ದಾಹಗಳ ಕುರಿತಾಗಿ ಇವು ಪ್ರಶ್ನೆಗಳನ್ನೆತ್ತಬಹುದು; ವಿಶ್ವಮಾನವ ಪ್ರಜ್ಞೆಯೊಂದಿಗೆ ಸ್ಥಳೀಯವಾಗಿಯೇ ಬದುಕುವ ಉತ್ತರಗಳನ್ನೂ ಈಯಬಹುದು ಎಂದು ಭಾವಿಸುವ ರೀತಿಯಲ್ಲಿ ವಿಶ್ವವ್ಯಾಪಕವಾದ ಕೊರೊನಾ ಸೋಂಕು ಮೆದುಳಿಗೆ ಕೈ ಹಾಕಿತ್ತು.

ಆದರೆ, ನೋಡನೋಡುತ್ತಿದ್ದಂತೆ ಕೊರೋನಾ ಪೂರ್ವದಲ್ಲಿ ನಮ್ಮೊಳಗಿದ್ದ ಎಲ್ಲಾ ಹುಳುಕು-ಕೆಡುಕುಗಳು ಭುಗಿಲೆದ್ದವು. ಚೀನಾ ವಿರೋಧಕ್ಕೆ ಬಳಸಿಕೊಂಡಿದ್ದು, ಮುಸ್ಲಿಂ ದೂಷಣೆ ಮಾಡಿದ್ದು, ಬಡವರ ಬದುಕನ್ನು ನಿಕೃಷ್ಟವಾಗಿಸಿದ್ದು, ಮನೆಯಲ್ಲಿ ದುಡಿವ ಹೆಣ್ಣುಮಕ್ಕಳ ಬದುಕನ್ನು ಮತ್ತಷ್ಟು ಕಟುವಾಗಿಸಿದ್ದು, ಹಿಂದುಳಿದ ಪ್ರದೇಶಗಳು, ರಾಜ್ಯಗಳು ನಿರ್ಲಕ್ಷ್ಯಕ್ಕೊಳಗಾಗಿದ್ದು, ಹಳ್ಳಿಯಿಂದ ರೈಲು ಹತ್ತಿ ನಗರಮುಖಿಗಳಾಗಿದ್ದ ಶೋಷಿತ ಸಮುದಾಯಗಳು ಕಾಲ್ನಡಿಗೆಯಲ್ಲಿ ದಾರಿ ಸವೆಸಬೇಕಾಗಿದ್ದು ಎಲ್ಲವೂ ಕೊರೋನಾ ಪೂರ್ವದ ಸಮಾಜದ ನೀತಿಗನುಗುಣವಾಗಿಯೇ ಇದೆ. ಸೂಪರ್ ಪವರ್‍ಗಳು ಮತ್ತು ಸೂಪರ್ ಪವರ್‍ಗಳಾಗಬಯಸುವವರು ತಮ್ಮ ತಮ್ಮ ದಾಳಗಳನ್ನು ಉರುಳಿಸಿಯೇ ಬಿಟ್ಟರು; ತನ್ನ ಜನರನ್ನು ಸರ್ವಾಧಿಕಾರದ ಬಿಗಿಮುಷ್ಟಿಯಲ್ಲಿಟ್ಟಿರುವ ಚೀನಾ ಈಗಲೂ ಪ್ರಪಂಚದೆಲ್ಲೆಡೆ ತನ್ನ ಪಾರಮ್ಯ ಮೆರೆಯಲು ಪ್ರಯತ್ನಿಸುತ್ತಿದ್ದಂತಿದೆ; ಕಾಲ್ನಡಿಗೆಯಲ್ಲಿ ನೂರಾರು ಕಿ.ಮೀ. ನಡೆಯುತ್ತಿರುವವರ ಅಣ್ಣ ತಮ್ಮಂದಿರೇ ಮೋದಿಯೇ ವಿಶ್ವಗುರು ಎಂದು ಅಬ್ಬರಿಸುತ್ತಿದ್ದಾರೆ.

ಸುಳ್ಳು-ಅಪಪ್ರಚಾರಗಳು, ಸರ್ಕಾರದ ಸಾಂಕೇತಿಕ ಹೊಂದಾಣಿಕೆಗಳು, ದುಷ್ಟವಾಹಿನಿ ಮಾಧ್ಯಮಗಳ ಹಸೀ ಅವಾಂತರಗಳೆಲ್ಲವೂ ಇನ್ನಷ್ಟು ಬಲಪಡೆದುಕೊಂಡಿವೆ.

ಇದರ ಮಧ್ಯೆಯೇ ಅದೆಷ್ಟೋ ಜನರು ನೊಂದವರಿಗೆ ಸಹಾಯ ಮಾಡಲೂ ಮುಂದಾಗುತ್ತಿದ್ದಾರೆ. ಈ ಹೊತ್ತು ಯಾವ ರೀತಿ ಆಂದೋಲನ ಕಟ್ಟಬಹುದು ಗೊತ್ತಾಗದೇ ಎಲ್ಲಾ ಹೋರಾಟಗಾರರು ಸಾಂಕೇತಿಕ ಕಾರ್ಯಕ್ರಮಗಳನ್ನು ಆನ್‍ಲೈನ್‍ನಲ್ಲಿ ಮಾಡಿಕೊಂಡು ಬಹಳ ಬ್ಯುಸಿಯಾಗಿದ್ದಂತಿದೆ.

ಇವೆಲ್ಲದರ ಮಧ್ಯೆ ಹೊಸತನ, ಹೊಸ ನೀತಿ, ಹೊಸ ಮೌಲ್ಯಗಳು ಚಿಗುರಬಹುದೇ? ಕೊರೋನೋತ್ತರ ಜಗತ್ತಿನಲ್ಲಿ ಏನೇ ಪರಿಮಾಣಾತ್ಮಕ ಬದಲಾವಣೆ ಬಂದರೂ ಹಳೆಯ ಜೀವ ವಿರೋಧಿ ಮೌಲ್ಯಗಳು ಕೊಳೆತು ನಾಶವಾಗಬಲ್ಲುದೇ? ಇಲ್ಲಿಯವರೆಗಿನ ಬೆಳವಣಿಗೆಗಳು ಅಂತಹ ಭರವಸೆಯನ್ನೇನೂ ಮೂಡಿಸುತ್ತಿಲ್ಲ. ಹೊಸದೇ ಆದ ಶಕ್ತಿಯೊಂದು ಇದರ ಮಧ್ಯೆಯೇ ಉದ್ಭವಿಸಿ, ತಲ್ಲಣ ತರದ ಹೊರತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Demonetisation ಆದಾಗ, ಕೆಲಸ ಕಳೆದುಕೊಂಡ ಹೆಚ್ಚಿನ ಮಂದಿ ಇಂದು ನಡೆದು ತಮ್ಮೂರತ್ತ ತೆರಳುತ್ತಿದ್ದಾರೆ.ಇದಕ್ಕೆ ಎಡೆಮಾಡಿದ ಮೋದಿ ವಿ.ಗುರು!
    ಹಿಂದೆ ಆಳ್ವಿಕೆ ಮಾಡಿದವರು ಹೇಗೆ ಮಂದಿಯನ್ನು ಕಂಗೆಡಿಸಿರಬಹುದು‌.
    ಇದಕ್ಕೆಲ್ಲಾ ಮೀಡಿಯಾಗಳನ್ನು ಗುರಿಮಾಡಬೇಕಾ!!!

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...