Homeಅಂಕಣಗಳುಕೊರೋನೋತ್ತರ ಕಾಲ ಎಷ್ಟು ಭಿನ್ನವಾಗಿರಲಿದೆ?

ಕೊರೋನೋತ್ತರ ಕಾಲ ಎಷ್ಟು ಭಿನ್ನವಾಗಿರಲಿದೆ?

- Advertisement -
- Advertisement -

ಈಗ ಬದುಕಿರುವ ಯಾರ ನೆನಪಿನಲ್ಲೂ ಉಳಿದುಕೊಂಡಿರದ ರೀತಿಯ ವಿದ್ಯಮಾನದಲ್ಲಿ ನಾವೆಲ್ಲರೂ ಭಾಗಿಯಾಗಿದ್ದೇವೆ. ಇಡೀ ದುನಿಯಾ ತನ್ನ ಮಾಮೂಲಿನ ಅಭ್ಯಾಸಗಳನ್ನೆಲ್ಲಾ ಬದಿಗಿಟ್ಟಿದೆ. ಕಣ್ಣಿಗೆ ಕಾಣದ, ಆದರೆ ಇದೆಯೆಂದು ಲಕ್ಷಾಂತರ (ಇಂದಿಗೆ 2 ಲಕ್ಷ 18 ಸಾವಿರ) ಸಾವುಗಳ ಮೂಲಕ ಎಲ್ಲರಿಗೂ ಖಚಿತವಾಗಿಸಿರುವ ವೈರಸ್ ಒಂದು ಇಂತಹ ಬೆಳವಣಿಗೆಗೆ ಕಾರಣವಾಗಿದೆ. ಇದು ಎಲ್ಲೆಡೆ ಆವರಿಸುತ್ತಿದ್ದಂತೆ ಜನರು ಫಿಲಾಸಫಿಕಲ್ ಮಾತುಗಳನ್ನಾಡಲು ಆರಂಭಿಸಿದ್ದರು. ಪ್ರತಿನಿತ್ಯ ಸಾವಿರಾರು ಕಿ.ಮೀ.ಗಳನ್ನು ಪ್ರಯಾಣಿಸುತ್ತಿದ್ದವರು, ಗಿಜಿಗಿಜಿಗುಡುತ್ತಿದ್ದ ಪ್ರದೇಶಗಳಲ್ಲಿ ಕೆಲಸ ಮಾಡುತ್ತಿದ್ದವರು, ವೈಭವೋಪೇತವಾದ ಕಾರ್ಯಕ್ರಮಗಳಲ್ಲಿ ಸಾವಿರಾರು ಜನರನ್ನು ಸೇರಿಸಿ ಔತಣಕೂಟಗಳನ್ನು ಆಯೋಜಿಸುತ್ತಿದ್ದವರು, ಲಕ್ಷ ಲಕ್ಷ ಜನರನ್ನು ಸೇರಿಸಿ ರಾಜಕೀಯ ಕಾರ್ಯಕ್ರಮಗಳನ್ನು ಮಾಡುತ್ತಿದ್ದವರು ಅಥವಾ ಪ್ರತಿಭಟನೆಗಳನ್ನು ಸಂಘಟಿಸುತ್ತಿದ್ದವರು ಎಲ್ಲರೂ ಕೆಲವೇ ಜನರನ್ನು ನೋಡಿಕೊಂಡು ಕಾಲ ಹಾಕಬೇಕು ಮತ್ತು ಕೆಲವು ಕಿ.ಮೀ.ಗಳಾಚೆ ಪ್ರಯಾಣವನ್ನು ಮಾಡಬಾರದು. ಅಂದರೆ ಮನುಷ್ಯರು ಸಾಧಿಸಿದ ವೇಗ, ಬೆಳವಣಿಗೆ, ಗಳಿಸಿದ ಸಂಪತ್ತು ಎಲ್ಲವೂ ನಿರರ್ಥಕವೆನಿಸುವಂತಾಯಿತು.

ಖಂಡಾಂತರಗಳನ್ನು ದಾಟಿ ಹಬ್ಬಿದ ಸೋಂಕು ಮನುಷ್ಯರನ್ನು ಜನಾಂಗ, ಪ್ರದೇಶ, ಜಾತಿ, ಧರ್ಮ, ಲಿಂಗ ಯಾವುದನ್ನೂ ಪ್ರತ್ಯೇಕ ಮಾಡಿ ನೋಡಲಿಲ್ಲ. ಪರಸ್ಪರ ಎದುರಾಳಿಗಳಾಗಿ ನಿಂತಿರುವ ಚೀನಾ ಮತ್ತು ಅಮೆರಿಕಾಗಳೆರಡನ್ನೂ ದೊಡ್ಡ ಮಟ್ಟದಲ್ಲಿ ಬಾಧಿಸಿತು. ಮೊದಮೊದಲು ವಿಮಾನಗಳಲ್ಲಿ ಓಡಾಡಿದವರಿಗೆ ಮತ್ತು ಅವರ ಬಂಧುಬಾಂಧವರಿಗೆ ಹೆಚ್ಚು ಹತ್ತಿಕೊಂಡಿತಾದರೂ, ಅದೀಗ ಧಾರಾವಿಯಂತಹ ಸ್ಲಂಗಳನ್ನು ಆವರಿಸುತ್ತಿದೆ. ಶ್ರೀಮಂತರು ತಂದ ರೋಗವೆಂದು ಹಂಗಿಸಬಹುದಾದರೂ, ಕಿಷ್ಕಿಂಧೆಗಳಲ್ಲಿ ಬದುಕಬೇಕಾದ ಅನಿವಾರ್ಯತೆಯಿರುವವರನ್ನೇ ಹೆಚ್ಚು ಬಲಿ ತೆಗೆದುಕೊಳ್ಳಬಹುದೇ ಎಂಬ ಆತಂಕ ಕಾಡುತ್ತಿದೆ.

ಇದು ನಮ್ಮ ಇಂದಿನ ಬದುಕುವ ರೀತಿ, ಉಳ್ಳವರು ಅಭ್ಯಾಸ ಮಾಡಿಸಿದ ಬದುಕಿನ ನೀತಿಗಳ ಕಾರಣಕ್ಕೇ ಆವರಿಸುತ್ತಿದೆ ಎಂದು ಹೇಳಲು ಕಾರಣಗಳಿದ್ದವು. ಪಟ್ಟಣಗಳು, ಬೃಹತ್ ನಗರಗಳು, ಶ್ರೀಮಂತ ದೇಶಗಳನ್ನೇ ಇದುವರೆಗೆ ಹೆಚ್ಚು ಬಾಧಿಸಿವೆ. ಹಳ್ಳಿಗಳು, ಗುಡ್ಡಗಾಡುಗಳು ಈಗಲೂ ಅಷ್ಟು ತೊಂದರೆಗೊಳಗಾಗಿಲ್ಲ. ಹೀಗಾಗಿ ಮನುಷ್ಯರ ಲೋಭ, ಮೋಹ, ತೀರದ ದಾಹಗಳ ಕುರಿತಾಗಿ ಇವು ಪ್ರಶ್ನೆಗಳನ್ನೆತ್ತಬಹುದು; ವಿಶ್ವಮಾನವ ಪ್ರಜ್ಞೆಯೊಂದಿಗೆ ಸ್ಥಳೀಯವಾಗಿಯೇ ಬದುಕುವ ಉತ್ತರಗಳನ್ನೂ ಈಯಬಹುದು ಎಂದು ಭಾವಿಸುವ ರೀತಿಯಲ್ಲಿ ವಿಶ್ವವ್ಯಾಪಕವಾದ ಕೊರೊನಾ ಸೋಂಕು ಮೆದುಳಿಗೆ ಕೈ ಹಾಕಿತ್ತು.

ಆದರೆ, ನೋಡನೋಡುತ್ತಿದ್ದಂತೆ ಕೊರೋನಾ ಪೂರ್ವದಲ್ಲಿ ನಮ್ಮೊಳಗಿದ್ದ ಎಲ್ಲಾ ಹುಳುಕು-ಕೆಡುಕುಗಳು ಭುಗಿಲೆದ್ದವು. ಚೀನಾ ವಿರೋಧಕ್ಕೆ ಬಳಸಿಕೊಂಡಿದ್ದು, ಮುಸ್ಲಿಂ ದೂಷಣೆ ಮಾಡಿದ್ದು, ಬಡವರ ಬದುಕನ್ನು ನಿಕೃಷ್ಟವಾಗಿಸಿದ್ದು, ಮನೆಯಲ್ಲಿ ದುಡಿವ ಹೆಣ್ಣುಮಕ್ಕಳ ಬದುಕನ್ನು ಮತ್ತಷ್ಟು ಕಟುವಾಗಿಸಿದ್ದು, ಹಿಂದುಳಿದ ಪ್ರದೇಶಗಳು, ರಾಜ್ಯಗಳು ನಿರ್ಲಕ್ಷ್ಯಕ್ಕೊಳಗಾಗಿದ್ದು, ಹಳ್ಳಿಯಿಂದ ರೈಲು ಹತ್ತಿ ನಗರಮುಖಿಗಳಾಗಿದ್ದ ಶೋಷಿತ ಸಮುದಾಯಗಳು ಕಾಲ್ನಡಿಗೆಯಲ್ಲಿ ದಾರಿ ಸವೆಸಬೇಕಾಗಿದ್ದು ಎಲ್ಲವೂ ಕೊರೋನಾ ಪೂರ್ವದ ಸಮಾಜದ ನೀತಿಗನುಗುಣವಾಗಿಯೇ ಇದೆ. ಸೂಪರ್ ಪವರ್‍ಗಳು ಮತ್ತು ಸೂಪರ್ ಪವರ್‍ಗಳಾಗಬಯಸುವವರು ತಮ್ಮ ತಮ್ಮ ದಾಳಗಳನ್ನು ಉರುಳಿಸಿಯೇ ಬಿಟ್ಟರು; ತನ್ನ ಜನರನ್ನು ಸರ್ವಾಧಿಕಾರದ ಬಿಗಿಮುಷ್ಟಿಯಲ್ಲಿಟ್ಟಿರುವ ಚೀನಾ ಈಗಲೂ ಪ್ರಪಂಚದೆಲ್ಲೆಡೆ ತನ್ನ ಪಾರಮ್ಯ ಮೆರೆಯಲು ಪ್ರಯತ್ನಿಸುತ್ತಿದ್ದಂತಿದೆ; ಕಾಲ್ನಡಿಗೆಯಲ್ಲಿ ನೂರಾರು ಕಿ.ಮೀ. ನಡೆಯುತ್ತಿರುವವರ ಅಣ್ಣ ತಮ್ಮಂದಿರೇ ಮೋದಿಯೇ ವಿಶ್ವಗುರು ಎಂದು ಅಬ್ಬರಿಸುತ್ತಿದ್ದಾರೆ.

ಸುಳ್ಳು-ಅಪಪ್ರಚಾರಗಳು, ಸರ್ಕಾರದ ಸಾಂಕೇತಿಕ ಹೊಂದಾಣಿಕೆಗಳು, ದುಷ್ಟವಾಹಿನಿ ಮಾಧ್ಯಮಗಳ ಹಸೀ ಅವಾಂತರಗಳೆಲ್ಲವೂ ಇನ್ನಷ್ಟು ಬಲಪಡೆದುಕೊಂಡಿವೆ.

ಇದರ ಮಧ್ಯೆಯೇ ಅದೆಷ್ಟೋ ಜನರು ನೊಂದವರಿಗೆ ಸಹಾಯ ಮಾಡಲೂ ಮುಂದಾಗುತ್ತಿದ್ದಾರೆ. ಈ ಹೊತ್ತು ಯಾವ ರೀತಿ ಆಂದೋಲನ ಕಟ್ಟಬಹುದು ಗೊತ್ತಾಗದೇ ಎಲ್ಲಾ ಹೋರಾಟಗಾರರು ಸಾಂಕೇತಿಕ ಕಾರ್ಯಕ್ರಮಗಳನ್ನು ಆನ್‍ಲೈನ್‍ನಲ್ಲಿ ಮಾಡಿಕೊಂಡು ಬಹಳ ಬ್ಯುಸಿಯಾಗಿದ್ದಂತಿದೆ.

ಇವೆಲ್ಲದರ ಮಧ್ಯೆ ಹೊಸತನ, ಹೊಸ ನೀತಿ, ಹೊಸ ಮೌಲ್ಯಗಳು ಚಿಗುರಬಹುದೇ? ಕೊರೋನೋತ್ತರ ಜಗತ್ತಿನಲ್ಲಿ ಏನೇ ಪರಿಮಾಣಾತ್ಮಕ ಬದಲಾವಣೆ ಬಂದರೂ ಹಳೆಯ ಜೀವ ವಿರೋಧಿ ಮೌಲ್ಯಗಳು ಕೊಳೆತು ನಾಶವಾಗಬಲ್ಲುದೇ? ಇಲ್ಲಿಯವರೆಗಿನ ಬೆಳವಣಿಗೆಗಳು ಅಂತಹ ಭರವಸೆಯನ್ನೇನೂ ಮೂಡಿಸುತ್ತಿಲ್ಲ. ಹೊಸದೇ ಆದ ಶಕ್ತಿಯೊಂದು ಇದರ ಮಧ್ಯೆಯೇ ಉದ್ಭವಿಸಿ, ತಲ್ಲಣ ತರದ ಹೊರತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Demonetisation ಆದಾಗ, ಕೆಲಸ ಕಳೆದುಕೊಂಡ ಹೆಚ್ಚಿನ ಮಂದಿ ಇಂದು ನಡೆದು ತಮ್ಮೂರತ್ತ ತೆರಳುತ್ತಿದ್ದಾರೆ.ಇದಕ್ಕೆ ಎಡೆಮಾಡಿದ ಮೋದಿ ವಿ.ಗುರು!
    ಹಿಂದೆ ಆಳ್ವಿಕೆ ಮಾಡಿದವರು ಹೇಗೆ ಮಂದಿಯನ್ನು ಕಂಗೆಡಿಸಿರಬಹುದು‌.
    ಇದಕ್ಕೆಲ್ಲಾ ಮೀಡಿಯಾಗಳನ್ನು ಗುರಿಮಾಡಬೇಕಾ!!!

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...