Homeಅಂಕಣಗಳುಪುಟಕ್ಕಿಟ್ಟ ಪುಟಗಳುದೇವತಾ ಪ್ರತಿಮೆಗಳು ವಿಕಾಸವಾದುದ್ದು ಹೇಗೆ? ಅದರ ಹಿಂದಿನ ರಾಜಕೀಯವೇನು?

ದೇವತಾ ಪ್ರತಿಮೆಗಳು ವಿಕಾಸವಾದುದ್ದು ಹೇಗೆ? ಅದರ ಹಿಂದಿನ ರಾಜಕೀಯವೇನು?

- Advertisement -
- Advertisement -

ವ್ಯಕ್ತಿಯು ತನ್ನ ಸುಖಸಂತೋಷಗಳಿಗೆ ಸಂಘವನ್ನು ಸಾಧನವನ್ನಾಗಿ ಬಳಸಿಕೊಳ್ಳುವುದು ಸಾಧಾರಣ ನಿಯಮ. ಆದರೆ ಸಂಘ ಒಮ್ಮೆ ಮೈದಳೆದು ನಿಂತಿತೆಂದರೆ ವ್ಯಕ್ತಿಯ ಸ್ವಾತಂತ್ರ ಮೊಟಕಾಗಿಬಿಡುತ್ತದೆ. ವ್ಯಕ್ತಿಗಾಗಿ ಸಂಘವೋ, ಸಂಘಕ್ಕಾಗಿ ವ್ಯಕ್ತಿಯೋ ಹೇಳುವುದು ಕಷ್ಟವಾಗುತ್ತದೆ. ವ್ಯಕ್ತಿಗಿಂತ ಮಿಗಿಲಾದ, ಬೇರೆಯಾದ, ತನ್ನದೇ ಆದ ಇರವನ್ನು ಪಡೆದುಕೊಳ್ಳಲು ಸಂಘ ಹೆಣಗಾಡುತ್ತದೆ; ಹೀಗೆಂದು ಎಸ್ ಕೆ ರಾಮಚಂದ್ರ ರಾವ್ ತಮ್ಮ ಮೂರ್ತಿಶಿಲ್ಪದ ಪುಸ್ತಕದಲ್ಲಿ ವಿಚಾರ ಮಾಡುತ್ತಾರೆ. ಶಿಲ್ಪಗಳ ನೆಲೆ ಹಿನ್ನೆಲೆಗಳನ್ನು ಗುರುತಿಸುವ ಮತ್ತು ಚರ್ಚೆ ಮಾಡುವ ಕಾರಣದಿಂದ ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಮತ್ತು ಆಧ್ಯಾತ್ಮಿಕವಾಗಿರುವ ಎಲ್ಲಾ ವಿಷಯಗಳನ್ನೂ ಈ ಪುಸ್ತಕ ಅವಲೋಕಿಸುತ್ತದೆ.

ದೇವಾನುದೇವತೆಗಳ ಮೂರ್ತಿಗಳು ಮೂರ್ತೀಭವಿಸಿದ ಹಿನ್ನೆಲೆಗಳನ್ನು ಗಮನಿಸುತ್ತಾ ದೇವರುಗಳ ಹುಟ್ಟು, ಬೆಳವಣಿಗೆ, ಅವುಗಳ ಸಾಂಸ್ಕೃತಿಕ  ರಾಜಕಾರಣ, ಸಂಘರ್ಷ ಮತ್ತು ಈ ಹೊತ್ತಿಗೆ ಅವುಗಳ ಪ್ರತಿಮೆಗಳು ನಿರ್ದಿಷ್ಟ ರೂಪಕ್ಕೆ ಬಂದು ನಿಂತಿರುವುದರ ಅಧ್ಯಯನ ಈ ಕೃತಿಯ ಮುಖ್ಯ ಉದ್ದೇಶ.

ವ್ಯಕ್ತಿ ಮತ್ತು ಸಮಾಜ: ಈ ಎರಡರ ನಡುವಿನ ಸಂಘರ್ಷಕ್ಕೆ ಕಾರಣ ಮಾತ್ರ ವಿಚಿತ್ರ ಮತ್ತು ವಿಸ್ಮಯ. ಆದರೆ ಈ ಸಂಘದ ಕೈ ಬಲಪಡಿಸುವ ಅಗತ್ಯ ವ್ಯಕ್ತಿಗಿದೆ. ಆದರೆ ಇದು ಅವನನ್ನೇ ಬಂಧಿಸುತ್ತದೆ. ನುಂಗುವುದಕ್ಕೂ ಆಗದ, ಉಗಳುವುದಕ್ಕೂ ಆಗದಂತೆ ತಾನೇ ಸಮಾಜದ ಬಲೆಯಲ್ಲಿ ಬಂಧಿತನಾಗುತ್ತಾನೆ. ಈ ಬಲೆಯ ಹರವಿನಲ್ಲಿ ನಮ್ಮ ಎಲ್ಲಾ ವ್ಯವಹಾರಗಳೂ ನಡೆಯಬೇಕು. ಅದಕ್ಕಾಗಿ ಅವನು ಸಂಕೇತಗಳನ್ನು ಸೃಷ್ಟಿಸಬೇಕು. ಸಂಕೇತಗಳನ್ನು ಸೃಷ್ಟಿ ಮಾಡುವ, ಕಲಿಯುವ, ಕಲಿಸುವ ಮತ್ತು ಅದರಲ್ಲಿ ವ್ಯವಹರಿಸುವ ಕೌಶಲ್ಯ ಮಾನವನಿಗೆ ನಿಸರ್ಗದತ್ತವಾಗಿಯೇ ಬಂದಿದೆ. ಅವನ ಬುದ್ಧಿಶಕ್ತಿ ಮತ್ತು ಭಾವನಾ ಪ್ರೌಢಿಮೆಯು ಈ ಕೌಶಲ್ಯಕ್ಕೆ ಮೂಲ ಸಾಮಗ್ರಿಗಳು. ಭಾಷೆ, ಮದುವೆ, ನಾಣ್ಯ, ವಿದ್ಯಾಭ್ಯಾಸ, ನ್ಯಾಯ, ಧರ್ಮ, ಸರಕಾರ, ವಿಜ್ಞಾನ, ಸಾಹಿತ್ಯ ಎಲ್ಲವೂ ಸಂಕೇತದ ಬಲೆಯ ವಿವರಗಳೇ ಎನ್ನುವ ರಾವ್ ಸಂಪ್ರದಾಯಗಳ ಬಗ್ಗೆಯೂ ವಿಶ್ಲೇಷಿಸುತ್ತಾರೆ.

ಹೊಸ ಉಪಾಯ ಹುಡುಕದ ಸೋಮಾರಿಗೆ ಸಂಪ್ರದಾಯಗಳು ಬೇಕಾಗುತ್ತವೆ. ಸಿದ್ಧವಾದ, ಜನರು ಬಳಸಿ ಉಪಯೋಗಕಂಡ ಉಪಾಯಗಳನ್ನು ಮಾತ್ರ ಅನುಸರಿಸುವ ಈ ಮಂದಿಯು ಸಾರ್ವಜನಿಕ ಅಭಿಪ್ರಾಯಕ್ಕಾಗಿ ಕೆಲಸ ಮಾಡುತ್ತಾರೆ. ಅವು ಒಂದು ರೀತಿ ಸೋಶಿಯಲ್ ಕಂಟ್ರೋಲ್ ಅಥವಾ ಸಾಮಾಜಿಕ ಅಂಕೆಯಾಗಿಯೂ ಕೆಲಸ ಮಾಡುತ್ತವೆ. ಈ ಸಾಮಾಜಿಕ ಅಂಕೆಯಿಂದ ಪ್ರಾರಂಭಿಸುವ ರಾವ್ ಕುಲದೈವ (ಟೊಟಮ್) ಮತ್ತು ವಿಧಿ ನಿಷೇಧ (ಟಾಬು)ಗಳ ಕಡೆಗೆ ಹೊರಳಿ ಬುಡಕಟ್ಟುಗಳು, ಜನಾಂಗಗಳು ತಮ್ಮ ತಮ್ಮ ಸಂಕೇತಗಳನ್ನು ತಮ್ಮ ಸಂಘದ ಶಕ್ತಿಯನ್ನಾಗಿಸಿಕೊಂಡು ವ್ಯಕ್ತಿಗಳನ್ನು ನಿಗ್ರಹಿಸುವ, ಸಮುದಾಯಗಳನ್ನು ರಕ್ಷಿಸುವ ಕೆಲಸಗಳನ್ನು ಮಾಡುವ ಅಗತ್ಯತೆಯನ್ನು ಗುರುತಿಸುತ್ತಾರೆ.

ಸ್ವಾರಸ್ಯಕರವಾದ ಸಂಪ್ರದಾಯಗಳನ್ನು ಗುರುತಿಸುವ ರಾವ್ ವಿಶ್ವದ ತುಂಬಾ ಅಪರೂಪವಾದ ಬುಡಕಟ್ಟುಗಳ ವಿಧಿಗಳನ್ನು ದಾಖಲಿಸುತ್ತಾರೆ. ಬೋರ್ನಿಯೋ ಮತ್ತು ಮೆಲನೀಶಯದ ಬುಡಕಟ್ಟುಗಳಲ್ಲಿ ಹುಟ್ಟಿದ ಮಗುವಿಗೆ ಹೆಸರಿಡಬೇಕಾದರೆ ಮಗುವಿಗೆ ಯಾವ ಹೆಸರಿಡುತ್ತಾರೋ ಆ ಹೆಸರಿನ ವ್ಯಕ್ತಿಯನ್ನು ಕೊಂದು, ತಲೆ ಕಡಿದು, ಅವನ ಬುರುಡೆಯಲ್ಲಿರುವ ಮಿದುಳನ್ನು ಅಡುಗೆ ಮಾಡಿ ತಂದೆ ತಿಂದ ಮೇಲೆಯೇ ಮಗುವಿಗೆ ಹೆಸರಿಡುತ್ತಿದ್ದುದು. ನಂತರ ಬರಿದಾದ ಬುರುಡೆಯನ್ನು ಪವಿತ್ರವೆಂದು ತಮ್ಮ ಮನೆಯಲ್ಲಿ ಜತನ ಮಾಡುತ್ತಿದ್ದರು.
ಹವಾಯ್ ದ್ವೀಪದ ಸಮರದೇವತೆ, ಆಫ್ರಿಕಾಖಂಡದ ಧಾನ್ಯದೇವತೆ, ಈಜಿಪ್ಟ್ ದೇಶದ ಬೇಸ್ ಎಂಬ ಯಕ್ಷ, ಸಿರಿಯಾದ ಎಲ್ ದೇವತೆಗಳನ್ನೆಲ್ಲಾ ಉಲ್ಲೇಖಿಸುವ ರಾವ್ ಭಾರತದ ಪ್ರಚಲಿತ ದೇವರುಗಳ ಪ್ರತಿಮೆಗಳ ಕಡೆಗೆ ಹೊರಳುತ್ತಾರೆ.

ಬರಿಯ ಶ್ರದ್ಧಾಭಕ್ತಿಯ ಸಾಂಪ್ರದಾಯಿಕ ಭಾವುಕತೆಯಲ್ಲಿ ಬಂಧಿತರಾಗಿರುವವರಿಗೆ ಈ ಪುಸ್ತಕದಲ್ಲಿ ಚರ್ಚಿಸಿರುವ ದೇವತೆಗಳ ಪ್ರತಿಮೆಗಳ ವಿಕಾಸವನ್ನು ಅರಿತರೇ ಎಷ್ಟೋ ಭ್ರಮೆಗಳು ಹರಿಯುವ ಸಾಧ್ಯತೆ ಇದೆ. ಗಣಪತಿಯ ಹುಟ್ಟು ಅವನ ಆದಿ ಪೂಜಿತನೆಂಬ ಕಲ್ಪನೆಯನ್ನು ಒಡೆದು ಹಾಕಿದರೆ, ಶಿವನ ಸ್ವಾರಸ್ಯ ಅರಣ್ಯಕರ ಅವಲೋಕನವನ್ನು ಮಾಡಲಾಗಿದೆ. ಇನ್ನು ವಿಷ್ಣುವಿನ ವಿಶಿಷ್ಟ ಭಾಗವತಪಂಥದ ಹಂತಗಳನ್ನು ವಿವೇಚಿಸಲಾಗಿದೆ. ಗ್ರಾಮದೇವತೆಗಳು ಹೇಗೆ ಹುಟ್ಟಿದರು, ಅವರು ಸರ್ವಶಕ್ತಿಗಳೆಂತು ಆದರು ಎಂಬುದು ಕೂಡಾ ಇವರ ಅಧ್ಯಯನದಿಂದ ತಪ್ಪಿಸಿಕೊಳ್ಳುವುದಿಲ್ಲ. ಸುಬ್ರಹ್ಮಣ್ಯ ಅಥವಾ ಸ್ಕಂದ, ಶಾಸ್ತ ಅಥವಾ ಅಯ್ಯಪ್ಪ, ಮಲ್ಲಾರಿ – ಖಂಡೋಬರAತಹ ಪಾರ್ಶ್ವ ದೇವತೆಗಳು ಸ್ವಯಂಪ್ರಧಾನ ದೇವತೆಗಳಾಗುವ ಬಗೆ, ಕಳಿಯಾಟ್ಟದ ತೆಯ್ಯಕೋಲಗಳು, ತುಳುನಾಡಿನ ದೈವಗಳು, ಕೃಷ್ಣನ ಕಲ್ಪನೆ; ಇವುಗಳ ಚಾರಿತ್ರಿಕ ಅಧ್ಯಯನವೂ ಇಲ್ಲಿದೆ. ವಿವಿಧ ಕಾಲಘಟ್ಟಗಳಲ್ಲಿ ಆದಂತಹ ಸಾಂಸ್ಕೃತಿಕ ಪಲ್ಲಟಗಳಿಗೆ ಅಷ್ಟು ಕಾರಣಗಳನ್ನು ರಾವ್ ಹೇಳದಿದ್ದರೂ, ಪ್ರತಿಮೆಗಳು ತಮ್ಮ ರೂಪಗಳನ್ನು ಬದಲಾಯಿಸಿಕೊಳ್ಳುತ್ತಾ ಬಂದ ಬಗೆಗಳನ್ನು ವಿವರಿಸುತ್ತಾ ಹೋಗುತ್ತಾರೆ. ಇದು ಬಹಳ ಮಹತ್ವದ್ದಾಗಿದೆ.

ಈ ಕಾಲಕ್ಕೆ ಇಂತಹ ವಿಷಯಗಳು ಸಾಮಾನ್ಯ ತಿಳಿವಳಿಕೆಗಳಾಗಿದ್ದು ಯಾವುದೋ ಅಧ್ಯಯನ ಸಂಪನ್ಮೂಲವಾಗುವಂತಹ ಹೊತ್ತಿಗೆಯಲ್ಲಿ ಮಾತ್ರವೇ ಇರಬೇಕಾದ ವಿಷಯಗಳಾಗಬಾರದಿತ್ತು. ಏಕೆಂದರೆ, ಕಾಲಪ್ರವಾಹದಲ್ಲಿ ಹೊಸಹೊಸ ಸವಾಲುಗಳು, ಸಮಸ್ಯೆಗಳು ಮತ್ತು ಸಂಘರ್ಷಗಳನ್ನು ಎದುರಿಸುತ್ತಿರುತ್ತೇವೆ. ಅವುಗಳನ್ನು ಎದುರಿಸುವ ಕೌಶಲ್ಯ ಮತ್ತು ಶಕ್ತಿ ಸಾಂಪ್ರದಾಯಿಕ ಮನಸ್ಥಿತಿಗಳಿಗೆ ಸಾಧ್ಯವಾಗದೇ, ತಾವು ಗೊಂದಲಕ್ಕೀಡಾಗುವುದು ಮಾತ್ರವಲ್ಲದೇ ತಾವು ಸದಸ್ಯರಾಗಿರುವ ಸಾಮಾಜಿಕ ಸಂಘದಲ್ಲಿಯೂ ಕೂಡ ಗೊಂದಲವನ್ನುಂಟುಮಾಡುತ್ತಾರೆ. ಇವು ಬಹಳ ಆತಂಕದ ಸಂಗತಿಗಳು. ವೈಜ್ಞಾನಿಕ ಆವಿಷ್ಕಾರಗಳು ಮತ್ತು ಸಂಶೋಧನೆಗಳು ಮುಂದುವರೆದಂತೆ ಹಳೆಯ ಪರಿಕರಗಳನ್ನು ಹಿಂದಕ್ಕೆ, ವಸ್ತುಸಂಗ್ರಹಾಲಯದ ದಾಖಲೆಗೆ ಸರಿಸಿ, ಸಾಂಸ್ಕೃತಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ಹೊಸ ಸಂಶೋಧನೆಗಳನ್ನು ಬಳಸುವಂತೆ ಸಂಶೋಧಕರು ಮತ್ತು ವಿಚಾರವಂತರಿಗೆ ಸಾಧ್ಯವಾಗದಿರುವುದೇಕೆ ಎಂಬುದು ಮಿಲಿಯನ್ ಡಾಲರ್ ಪ್ರಶ್ನೆ ಏನಲ್ಲ.

ದೇಶದ ಸಂಸ್ಕೃತಿಯನ್ನು ಧರ್ಮ ಮತ್ತು ಕಲೆಗಳ ದೃಷ್ಟಿಯಿಂದ ಅಧ್ಯಯನ ಮಾಡುವ ಕಾರ್ಯಫಲವು ಜನಸಾಮಾನ್ಯರಿಗೆ ಮುಟ್ಟಿದ್ದರೆ ಸಮಾಜದ ಮನೋಧರ್ಮವು ಎಂದಿಗೋ ಮೌಢ್ಯದಿಂದ ಬಿಡುಗಡೆಯಾಗಿರುತ್ತಿತ್ತು.

ಸಾಂಪ್ರದಾಯಿಕ ಧೋರಣೆಯ ಸೋಮಾರಿಗಳು ಈ ಮೂರ್ತಿಶಿಲ್ಪದ ಕೃತಿಯನ್ನು ಒಮ್ಮೆ ಅಧ್ಯಯನ ಮಾಡಬೇಕು. ಧರ್ಮ, ದರ್ಶನ, ಮನೋವಿಜ್ಞಾನ, ಸಮಾಜಶಾಸ್ತ್ರ ಮಾನವಶಾಸ್ತ್ರ, ಪ್ರಾಕ್ತನ-ಪ್ರಾಚ್ಯ ಸಂಶೋಧನೆಗಳ ವಿವರಗಳೆಲ್ಲವೂ ಇದರಲ್ಲಿದೆ.
ಈ ಪುಸ್ತಕದ ಅಧ್ಯಯನ ವ್ಯಾಪ್ತಿ ದೊಡ್ಡದು. ಇದರಲ್ಲಿ ಅಡಕವಾಗಿರುವ ಸಂಗತಿಗಳು ಮೂಲಭೂತವಾದವು.

ಸಂಶೋಧನೆ, ವಿಮರ್ಶೆ, ಪರಿಶೀಲನೆ- ಇವು ಕೂಡಿಬಂದಿರುವ ಕೃತಿ ಮೂರ್ತಿಶಿಲ್ಪ ಎಂದು ಎಚ್ ನರಸಿಂಹಯ್ಯ ತಮ್ಮ ಮುನ್ನುಡಿಯಲ್ಲಿ ಉಲ್ಲೇಖಿಸಿರುವುದು ವಿಶೇಷ.

  • ಯೋಗೇಶ್ ಮಾಸ್ಟರ್, ರಂಗಭೂಮಿ ಕಲಾವಿದರು, ಬರಹಗಾರರು.

ಇದನ್ನೂ ಓದಿ: ಶಾಸ್ತ್ರೀಯ – 2: ವೀರ ಗತಕಾಲದ ನೋವಿನ ಕಥನ ಸಾರುವ ವೀರಗಲ್ಲುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...