Homeಮುಖಪುಟನಾನು ಪೌರವಾಣಿ ಪತ್ರಿಕೆಯ ಸಂಪಾದಕನಾಗಿದ್ದು ಹೇಗೆ? ದೊರೆಸ್ವಾಮಿಯವರ ನೆನಪುಗಳು...

ನಾನು ಪೌರವಾಣಿ ಪತ್ರಿಕೆಯ ಸಂಪಾದಕನಾಗಿದ್ದು ಹೇಗೆ? ದೊರೆಸ್ವಾಮಿಯವರ ನೆನಪುಗಳು…

38 ದಿನಗಳ ಕಳಪೆ ಸಂಪಾದಕ ಎಂದು ದೊರೆಸ್ವಾಮಿಯವರನ್ನು ಹಂಗಿಸಿದ್ದಕ್ಕೆ ಅವರು ಕೊಟ್ಟ ಉತ್ತರ ಇಲ್ಲಿದೆ.

- Advertisement -
- Advertisement -

ಬಾಬು ಕೃಷ್ಣಮೂರ್ತಿಯವರು ಪತ್ರಕರ್ತರು, ಬರಹಗಾರರು, ಒಳ್ಳೆಯ ಚಾರಿತ್ರಿಕ ಪುಸ್ತಕಗಳನ್ನು ಬರೆದಿದ್ದಾರೆ. ನನಗೆ ಅವರಲ್ಲಿ ಇಂದಿಗೂ ಪ್ರೀತಿ ಇದೆ. ಬಾಬು ಕೃಷ್ಣಮೂರ್ತಿಯವರನ್ನು ಅವರು ಮಗುವಾಗಿದ್ದಾಗಿನಿಂದಲು ಬಲ್ಲೆ. ಅವರ ತಾಯಿ ಸೀತಮ್ಮ, ತಂದೆ ಶಾಸ್ತ್ರಿ ಆಯುರ್ವೇದ ಪಂಡಿತರು. ಸೀತಮ್ಮನವರು ನಿಧನರಾಗುವುದಕ್ಕೆ­ ಮೊದಲು ನಾನು ಅವರನ್ನು ಭಾರತಿ ನರ್ಸಿಂಗ್ ಹೋಂಗೆ ಹೋಗಿ ಮಾತನಾಡಿಸಿಕೊಂಡು ಬಂದಿದ್ದೆ.

ಬಾಬು ನನ್ನನ್ನು ಮೊದಲ ಬಾರಿಗೆ ಈಗ ತರಾಟೆಗೆ ತೆಗೆದುಕೊಂಡಿದ್ದಾರೆ. ಗೋಡ್ಸೆ ವಿಚಾರದಲ್ಲಿ ಅವರು ನನ್ನ ಮೇಲೆ ಆಗ್ರಹ ಮಾಡಿರುವುದಕ್ಕೆ ನಾನು ಅವರ ಬಗೆಗೆ ಈ ರೀತಿ ಹೇಳುತ್ತಿಲ್ಲ. ಗೋಡ್ಸೆ ಬೆಂಗಳೂರಿಗೆ ಬಂದಿದ್ದ ವಿಚಾರವನ್ನು ನಾನು ಆನಂತರ ಪ್ರಸ್ತಾಪಿಸುತ್ತೇನೆ.

ಬಾಬು ಕೃಷ್ಣಮೂರ್ತಿ ನನ್ನನ್ನು ಕೆಲಸಕ್ಕೆ ಬಾರದ 38 ದಿನಗಳ ಪತ್ರಿಕಾ ಸಂಪಾದಕ ಎಂದು ಕರೆದು ಹಂಗಿಸಿದ್ದಾರೆ. ಈ ಮಾತು ನನ್ನನ್ನು ಇರಿಯಿತು. ಜೂಲಿಯಸ್ ಸೀಸರ್ ತನ್ನ ಪರಮ ಸ್ನೇಹಿತ ಎಂದುಕೊಂಡಿದ್ದ ಬ್ರೂಟಸ್ ತನ್ನನ್ನು ಇರಿದಾಗ `Yours is the  most unkindest cut of all’  ಎಂದು ಜರಿದ.

ಪತ್ರಿಕಾ ಸಂಪಾದಕರಾಗಿದ್ದ ಬಾಬು ಕೃಷ್ಣಮೂರ್ತಿ ನನ್ನನ್ನು 38 ದಿನಗಳ ಕಳಪೆ ಸಂಪಾದಕ ಎಂದು ಹೇಳಿರುವುದನ್ನು ಕುರಿತು ನಾನೂ ಕೂಡ Yours is the most unkindest cut of all’ಎಂದು ಹೇಳಬೇಕಿದೆ. ಸೀಸರ್ ಬ್ರೂಟಸ್‍ನ ಈ ಗೆಯ್ಮೆಯನ್ನುSuperlatives ನಲ್ಲಿ Unkindest ಎಂದು ಮಾತ್ರ ಹೇಳದೆ Most ಎಂಬ ಇನ್ನೊಂದು Superlatives ಕೂಡಾ ಬಳಸಿದ್ದಾನೆ. ಬ್ರೂಟಸ್‍ನ ಈ ಕೃತ್ಯ ಸೀಜರ್‌ನನ್ನು ದಿಗ್ಭ್ರಮೆಗೋಳಿಸಿದೆ. ಬಾಬುಕೃಷ್ಣಮೂರ್ತಿಯವರ ಈ ಮಾತು ನನ್ನನ್ನು ಸೀಜರ್‌ನಷ್ಟೇ ದಿಗ್ಭ್ರಮೆಗೊಳಿಸಿದೆ.

ಪೌರವಾಣಿ ಪತ್ರಿಕೆಯನ್ನು ಆರಂಭಿಸಿದ ನಮಗೆ – ಸ್ವಾತಂತ್ರ್ಯ ಹೋರಾಟಗಾರ ಯುವಕರು – ಸ್ವಾತಂತ್ರ್ಯ ಬೇಗ ದೊರಕಿಸಿಕೊಳ್ಳಬೇಕು ಎಂಬ ತವಕವಿತ್ತು. ನಮ್ಮ ನಾಯಕರನ್ನು ಪ್ರತಿ ಎಂಪಿಸಿಸಿ ಸಭೆಯಲ್ಲೂ ಜವಾಬ್ದಾರಿ ಸರ್ಕಾರ ಪಡೆಯಲು ತಡಮಾಡದೆ ಹೋರಾಟ ಆರಂಭಿಸಬೇಕೆಂದು ಒತ್ತಾಯ ತರುತ್ತಿದ್ದೆವು. ಇದಕ್ಕೆ ಪೂರಕವಾಗಿ ಒಂದು ಪತ್ರಿಕೆಯನ್ನು ಆರಂಭಿಸಲೂ ತೀರ್ಮಾನಿಸಿದೆವು. ಪೌರವಾಣಿ ಬೆಂಗಳೂರಿನಲ್ಲಿ ಜನ್ಮ ತಾಳಿತು. ಬೆಂಗಳೂರು ಜಿಲ್ಲಾ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷರಾಗಿದ್ದ ದೊಡ್ಡಬಳ್ಳಾಪುರದ ರುಮಾಲೆ ಭದ್ರಣ್ಣನವರು ಪೌರವಾಣಿಯ ಮೊದಲ ಸಂಪಾದಕರಾದರು. ಪೌರವಾಣಿ ದಿನಪತ್ರಿಕೆ ಬೆಲೆ 3 ಕಾಸು. ರಾಯಟರ್ಸ್ ಮತ್ತು ಪಿಟಿಐ ಸುದ್ದಿಗಳನ್ನು ತರಿಸಿಕೊಳ್ಳುತ್ತಿದ್ದೆವು.

ಪತ್ರಿಕೆ ಬಹಳ ಬೇಗ ಜನಾದರಣೆ ಗಳಿಸಿತು. ಭದ್ರಣ್ಣನವರು ನಾಯಿ ಕಚ್ಚಿ ಹೈಡ್ರೋಫೋಬಿಯಾ ಎಂಬ ರೋಗಕ್ಕೆ ಬಲಿಯಾದರು. ಅವರು ಸಾಯುವ ಮೊದಲು ನಮ್ಮ ಯುವಬಳಗವೆಲ್ಲ ಆಸ್ಪತ್ರೆಗೆ ಹೋಗಿ ಅವರನ್ನು ಕಂಡೆವು. ಅವರು ನಮ್ಮೆಲ್ಲರನ್ನು ಕುರಿತು “ಭಾರತಕ್ಕೆ ಸ್ವಾತಂತ್ರ್ಯ ಬಂತು. ಆದರೆ ಮೈಸೂರಿನ ಪ್ರಜೆಗಳಿಗೆ ಸ್ವಾತಂತ್ರ್ಯ ಬಂದಿಲ್ಲ. ಮಹಾರಾಜರು Accession  ಒಪ್ಪುತ್ತಿಲ್ಲ. ಅವರನ್ನು ಒಪ್ಪಿಸುವುದಕ್ಕಾಗಿ ಹೋರಾಟ ಮಾಡಬೇಕಾಗಿದೆ. ಪೌರವಾಣಿ ಪತ್ರಿಕೆ ಈ ಹೋರಾಟಕ್ಕೆ ಹೊಯ್‍ಕೈಯಾಗಿಸಿಲ್ಲ ಬೆಂಬಲಿಸಿದೆ. ಪೌರವಾಣಿ ಪತ್ರಿಕೆ ಈಗ ಜನಪ್ರಿಯವಾಗಿದೆ ನೀವು ಈ ಪತ್ರಿಕೆಯನ್ನು ಅಂತಿಮ ಗುರಿ ಮುಟ್ಟುವವರೆಗೂ ನಡೆಸಿಕೊಂಡು ಹೋಗಬೇಕು” ಎಂದು ಕೈಮುಗಿದು ಕೇಳಿಕೊಂಡರು.

ಕೆಲಹೊತ್ತಿನಲ್ಲಿ ಅವರ ಪ್ರಾಣಪಕ್ಷಿ ಹಾರಿಹೋಯಿತು. ಭದ್ರಣ್ಣನವರ ನೆಂಟರು, ನಾವೂ ಸೇರಿ ಅವರ ಅಂತ್ಯಕ್ರಿಯೆ ಮುಗಿಸಿದೆವು. ರಾತ್ರಿ ಪೌರವಾಣಿ ಕಚೇರಿಯಲ್ಲಿ ಸೇರಿದ್ದ ನಾವೆಲ್ಲ ಮುಂದೆ ಯಾರು ಸಂಪಾದಕರಾಗಬೇಕೆಂದು ಚರ್ಚಿಸಿದೆವು. ಕೊನೆಗೆ ನನ್ನನ್ನು ಸಂಪಾದಕನಾಗುವಂತೆ ಒತ್ತಾಯಿಸಿದರು. ನಾನು ಆಗ ಮೈಸೂರಿನಲ್ಲಿ ಸಾಹಿತ್ಯ ಮಂದಿರ ಎಂಬ ಪುಸ್ತಕದಂಗಡಿ ಮತ್ತು ಪ್ರಕಾಶನ ಸಂಸ್ಥೆ ನಡೆಸುತ್ತಿದ್ದೆ. ನಾನು ಪುಸ್ತಕದಂಗಡಿ ಮುಚ್ಚಿ ಇದ್ದ ಪುಸ್ತಕದ ದಾಸ್ತಾನನೆಲ್ಲ ಕಾಂಗ್ರೆಸ್ ಮುಖಂಡ ಎಂ.ಎನ್.ಜೋಯಿಸರ ಮನೆಯಲ್ಲಿಟ್ಟು, ಬೆಂಗಳೂರಿಗೆ ಬಂದು ಪೌರವಾಣಿ ಪತ್ರಿಕೆ ಸಂಪಾದಕನಾಗಿ ನೋಂದಾಯಿಸಿಕೊಂಡೆ. ಮೈಸೂರು ಕಾಂಗ್ರೆಸ್ ಕಮಿಟಿ ಆಗ `ಮೈಸೂರ್ ಚಲೋ’ ಕೊನೆಯ ಚಳವಳಿಯನ್ನು ಆರಂಭಿಸುವ ವಿಚಾರ ಮಾಡುತ್ತಿತ್ತು.

ಪೌರವಾಣಿ ಪತ್ರಿಕೆಯಲ್ಲಿ ಮೈಸೂರು ಮಹಾರಾಜರ ಆಡಳಿತ ವೈಖರಿ ಕುರಿತು ವಿಶ್ವ ಕರ್ನಾಟಕ ಸಂಪಾದಕರಾಗಿದ್ದ ತಿರುಮಲ ತಾತಾಚಾರ್ಯ ಶರ್ಮರು 8 ಲೇಖನಗಳನ್ನು ಬರೆದುಕೊಟ್ಟರು. ಆರು ಲೇಖನಗಳನ್ನು ಪ್ರಕಟಿಸಿ ಆಗಿತ್ತು. ಆಗ ಚೀಫ್ ಸೆಕ್ರೆಟರಿಯವರು ನಮಗೊಂದು ನೋಟಿಸ್ ನೀಡಿ ಇನ್ನು ಮೇಲೆ ಯಾವುದೇ ಲೇಖನಗಳನ್ನು ಮತ್ತು ಅಗ್ರ ಲೇಖನಗಳನ್ನು ಪ್ರಕಟಿಸುವ ಮುನ್ನ ನಮಗೆ ಅದನ್ನು ಕಳುಹಿಸಿ, ಸರ್ಕಾರಕ್ಕೆ ಒಪ್ಪಿಗೆಯಾಗುವ ಲೇಖನಗಳನ್ನು ಮಾತ್ರ ಪ್ರಕಟಿಸತಕ್ಕದ್ದು. ಈ ಆಜ್ಞೆಯನ್ನು ಮಿರಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು.

ಸರ್ಕಾರಕ್ಕೆ ಉಳಿದ ಲೇಖನಗಳನ್ನು ಕಳಿಸದೆಯೇ 7 ಮತ್ತು 8ನೇ ಕಂತಿನ ಲೇಖನಗಳನ್ನು ಅಚ್ಚುಮಾಡಿ ಅದರ ಜೊತೆಗೆ ಒಂದು Box news ಅನ್ನು ಹಾಕಿದೆವು. ಸರ್ಕಾರ ನಮ್ಮ ಮೇಲೆ ಪ್ರತಿಬಂಧಕಗಳನ್ನು ಹೇರಲು ತೊಡಗಿದೆ. ಸರ್ಕಾರದ ಈ ಬೆದರಿಕೆಗೆ ಸೊಪ್ಪು ಹಾಕದೆ 7 ಮತ್ತು 8ನೇ ಕಂತಿನ ಲೇಖನಗಳನ್ನು ಸರ್ಕಾರಕ್ಕೆ ಕಳಿಸದೆ ಪ್ರಕಟಿಸುತ್ತಿದ್ದೇವೆ. ಸರ್ಕಾರದ ಧೋರಣೆಯನ್ನು ಒಪ್ಪದೆ ಪ್ರತಿಭಟನಾರ್ಥವಾಗಿ ನಾಳೆಯಿಂದ ಪತ್ರಿಕೆಯನ್ನು ನಿಲ್ಲಿಸಿದ್ದೇವೆ ಎಂದು ಅಚ್ಚು ಮಾಡಲಾಯಿತು. ಮೂರು ದಿನದ ನಂತರ ಪೊಲೀಸರು ಬಂದು ಪತ್ರಿಕಾಲಯಕ್ಕೆ ಬೀಗ ಹಾಕಿದರು.

ಇನ್ನು ಇಲ್ಲಿದ್ದರೆ ಬಂಧಿಸಲಿದ್ದಾರೆ, ಬೇರೆ ಪ್ರಾಂತಕ್ಕೆ ಹೋಗಿ ಪೌರವಾಣಿಯನ್ನು ಅಲ್ಲಿ ಅಚ್ಚು ಮಾಡಿಸಿ, ಮೈಸೂರು ಸಂಸ್ಥಾನದ ಊರುಗಳಿಗೆ ಏಕೆ ಕಳುಹಿಸಬಾರದು ಎಂದು ಆಲೋಚಿಸಿದೆ. ನಾನು ಮತ್ತು ನನ್ನ ಸ್ನೇಹಿತ ಶ್ರೀಧರಮೂರ್ತಿ ಪಕ್ಕದ ಹಿಂದೂಪುರಕ್ಕೆ ಹೋದೆವು ಸುದರ್ಶನ ಪ್ರೆಸ್‍ನಲ್ಲಿ ಪತ್ರಿಕೆಯನ್ನು ಅಚ್ಚುಮಾಡಿ ಕೊಡಲು ಮಾಲಿಕರಲ್ಲೊಬ್ಬರಾದ ಆದಯ್ಯ ಶೆಟ್ಟರು ಒಪ್ಪಿಕೊಂಡರು. ನಾನು ಪೌರವಾಣಿ, ಪೌರವೀರ ಪೌರಮಾರ್ತಾಂಡ, ಪೌರಭಾಸ್ಕರ ಈ ಹೆಸರುಗಳಲ್ಲಿ ಪತ್ರಿಕೆಯನ್ನು ನೋಂದಾಯಿಸಿಕೊಂಡೆ. ಮೈಸೂರು ಸಂಸ್ಥಾನದೊಳಕ್ಕೆ ಹೋಗುವ ಪೌರವಾಣಿ ಪತ್ರಿಕೆಯನ್ನು ಸರ್ಕಾರ ತಡೆಹಿಡಿದರೆ ಮತ್ತೊಂದು ಹೆಸರಿನಲ್ಲಿ ಪತ್ರಿಕೆಯನ್ನು ಕಳುಹಿಸಬಹುದಲ್ಲಾ ಎಂಬ ದೂರದೃಷ್ಟಿಯಿಂದ 5 ಹೆಸರಿನ ಪತ್ರಿಕೆಗಳನ್ನು ನೋಂದಾಯಿಸಿಕೊಂಡಿದ್ದೆ. ಕೆಲದಿನಗಳ ಮೇಲೆ ನಮ್ಮ ನಿರೀಕ್ಷೆಯಂತೆಯೇ ಪೌರವಾಣಿ ಪತ್ರಿಕೆ ಮೈಸೂರು ಸಂಸ್ಥಾನದೊಳಕ್ಕೆ ಬರದಂತೆ ತಡೆದರು. ನಾವು ಪೌರವೀರ ಹೆಸರಿನಲ್ಲಿ ಪತ್ರಿಕೆಯನ್ನು ಅಲ್ಲಿಂದಾಚೆಗೆ ಕಳುಹಿಸಿದೆವು.

ಮೈಸೂರು ಚಲೋ ಸತ್ಯಾಗ್ರಹ ನಡೆದ 38 ದಿನಗಳೂ ಪತ್ರಿಕೆ ಮೈಸೂರಿನ ಎಲ್ಲ ಕಡೆಗೆ ತಲುಪಿತು. ಬೆಂಗಳೂರಿಗೆ ದಿನಕ್ಕೊಬ್ಬ ಸತ್ಯಾಗ್ರಹಿಯ ಕೈಯಲ್ಲಿ ಪತ್ರಿಕೆಯನ್ನು ಕಳುಹಿಸುತ್ತಿದ್ದರು. ಪತ್ರಿಕೆ ಹೊರತರುವುದಕ್ಕೆ ಸಹಾಯಕರಾಗಿರುವ ರುಮಾಲೆ ಚನ್ನಬಸವಣ್ಣ, ಮೈಸೂರಿನ ಸುಬ್ಬರಾಯರು, ತಿರುಮಲ ಶ್ರೀರಂಗಾಚಾರ್ ಮುಂತಾದವರಿದ್ದರು.

38 ದಿನಗಳು ಪೌರವಾಣಿ ನಡೆದದ್ದು ಬೆಂಗಳೂರಿನಲ್ಲಲ್ಲ. ಪೌರವಾಣಿ ಪತ್ರಿಕೆಯನ್ನು ಮೈಸೂರು ಸಂಸ್ಥಾನದಲ್ಲಿ ಮುಟ್ಟುಗೋಲು ಹಾಕಿಕೊಂಡ ನಂತರ ನಾವು ಮಾಡಿದ ಈ ಸಾಹಸದ ನಮ್ಮ ಕೆಲಸವನ್ನು ಅರಿಯದ ಬಾಬು ಕೃಷ್ಣಮೂರ್ತಿ ನನ್ನನ್ನು ಮೂರು ಕಾಸಿಗೆ ಹರಾಜು ಹಾಕಿದ್ದಾರೆ.

ಬಾಬು ಕೃಷ್ಣಮೂರ್ತಿಯವರ ಮೂದಲಿಕೆ ಮಾತನ್ನ ಕೇಳಿದಮೇಲೆ ಈ ಸುಳ್ಳನ್ನು, ಉತ್ಪ್ರೇಕ್ಷೆಯ ಮಾತನಾಡಲು ಯಾರು ಇವರಿಗೆ ಪ್ರೇರಣೆ ನೀಡಿರಬಹುದೆಂದು ಯೋಚನೆ ಮಾಡಿದೆ. ಆರ್‌ಎಸ್‍ಎಸ್‍ನಲ್ಲಿ ಇದ್ದುಹೋದ ಕೃಷ್ಣಮೂರ್ತಿಗೆ ಬಹುಕಾಲ ಧರ್ಮಾಂಧತೆಯ ವಿಷವುಣಿಸಲಾಗಿದೆ. ಅದು ಈ ರೀತಿ ನನ್ನ ಮೇಲೆ ಎಂದೂ ಇಲ್ಲದಷ್ಟು ಹರಿಹಾಯಲು ಪ್ರೇರಣೆ ನೀಡಿರಬಹುದು ಅಥವಾ ಆರ್‌ಎಸ್‍ಎಸ್ ಮುಖ್ಯರ ಆಜ್ಞಾನುಸಾರ ಕೃಷ್ಣಮೂರ್ತಿ ನಡೆದುಕೊಂಡಿರಬಹುದು.

ನನಗೆ ಪತ್ರಿಕೆ ಅಕಾಡೆಮಿ ಅವಾರ್ಡ್ ಬಂದಿದೆ. ನಾನು 5 ವರ್ಷಕಾಲ ಪೌರವಾಣಿಯ ಸಂಪಾದಕನಾಗಿದ್ದೆ, 38 ದಿನಗಳಲ್ಲ. Freelance Journalist ಆಗಿ ಪತ್ರಿಕೆಗಳಿಗೆ ಲೇಖನಗಳನ್ನೂ ಬರೆಯುತ್ತೇನೆ. ಮೈಸೂರು ಸಂಸ್ಥಾನದ ಪತ್ರಿಕಾಸಂಘ ನನ್ನ ಸಕ್ರಿಯ ಪತ್ರಿಕೋದ್ಯಮವನ್ನು ಗುರುತಿಸಿ ನನಗೆ ಆ ಸಂಘದ ಅಧ್ಯಕ್ಷತೆಯನ್ನು ನೀಡಿ ಗೌರವಿಸಿದೆ ಎಂಬುದನ್ನು ಬಾಬುಕೃಷ್ಣಮೂರ್ತಿ ತಿಳಿಯಬೇಕು.

ಬಾಬುಕೃಷ್ಣಮೂರ್ತಿಯವರು ಗೋಡ್ಸೆ ಬೆಂಗಳೂರಿಗೆ ಬಂದಿದ್ದ ವಿಚಾರ ಪ್ರಸ್ತಾಪಿಸಿದ್ದಾರೆ. ಅದರ ಪ್ರಸ್ತಾಪ ಮುಂದಿನ ಸಂಚಿಕೆಯಲ್ಲಿ…..

– ಎಚ್.ಎಸ್.ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...