Homeಮುಖಪುಟನಾನು ಪೌರವಾಣಿ ಪತ್ರಿಕೆಯ ಸಂಪಾದಕನಾಗಿದ್ದು ಹೇಗೆ? ದೊರೆಸ್ವಾಮಿಯವರ ನೆನಪುಗಳು...

ನಾನು ಪೌರವಾಣಿ ಪತ್ರಿಕೆಯ ಸಂಪಾದಕನಾಗಿದ್ದು ಹೇಗೆ? ದೊರೆಸ್ವಾಮಿಯವರ ನೆನಪುಗಳು…

38 ದಿನಗಳ ಕಳಪೆ ಸಂಪಾದಕ ಎಂದು ದೊರೆಸ್ವಾಮಿಯವರನ್ನು ಹಂಗಿಸಿದ್ದಕ್ಕೆ ಅವರು ಕೊಟ್ಟ ಉತ್ತರ ಇಲ್ಲಿದೆ.

- Advertisement -
- Advertisement -

ಬಾಬು ಕೃಷ್ಣಮೂರ್ತಿಯವರು ಪತ್ರಕರ್ತರು, ಬರಹಗಾರರು, ಒಳ್ಳೆಯ ಚಾರಿತ್ರಿಕ ಪುಸ್ತಕಗಳನ್ನು ಬರೆದಿದ್ದಾರೆ. ನನಗೆ ಅವರಲ್ಲಿ ಇಂದಿಗೂ ಪ್ರೀತಿ ಇದೆ. ಬಾಬು ಕೃಷ್ಣಮೂರ್ತಿಯವರನ್ನು ಅವರು ಮಗುವಾಗಿದ್ದಾಗಿನಿಂದಲು ಬಲ್ಲೆ. ಅವರ ತಾಯಿ ಸೀತಮ್ಮ, ತಂದೆ ಶಾಸ್ತ್ರಿ ಆಯುರ್ವೇದ ಪಂಡಿತರು. ಸೀತಮ್ಮನವರು ನಿಧನರಾಗುವುದಕ್ಕೆ­ ಮೊದಲು ನಾನು ಅವರನ್ನು ಭಾರತಿ ನರ್ಸಿಂಗ್ ಹೋಂಗೆ ಹೋಗಿ ಮಾತನಾಡಿಸಿಕೊಂಡು ಬಂದಿದ್ದೆ.

ಬಾಬು ನನ್ನನ್ನು ಮೊದಲ ಬಾರಿಗೆ ಈಗ ತರಾಟೆಗೆ ತೆಗೆದುಕೊಂಡಿದ್ದಾರೆ. ಗೋಡ್ಸೆ ವಿಚಾರದಲ್ಲಿ ಅವರು ನನ್ನ ಮೇಲೆ ಆಗ್ರಹ ಮಾಡಿರುವುದಕ್ಕೆ ನಾನು ಅವರ ಬಗೆಗೆ ಈ ರೀತಿ ಹೇಳುತ್ತಿಲ್ಲ. ಗೋಡ್ಸೆ ಬೆಂಗಳೂರಿಗೆ ಬಂದಿದ್ದ ವಿಚಾರವನ್ನು ನಾನು ಆನಂತರ ಪ್ರಸ್ತಾಪಿಸುತ್ತೇನೆ.

ಬಾಬು ಕೃಷ್ಣಮೂರ್ತಿ ನನ್ನನ್ನು ಕೆಲಸಕ್ಕೆ ಬಾರದ 38 ದಿನಗಳ ಪತ್ರಿಕಾ ಸಂಪಾದಕ ಎಂದು ಕರೆದು ಹಂಗಿಸಿದ್ದಾರೆ. ಈ ಮಾತು ನನ್ನನ್ನು ಇರಿಯಿತು. ಜೂಲಿಯಸ್ ಸೀಸರ್ ತನ್ನ ಪರಮ ಸ್ನೇಹಿತ ಎಂದುಕೊಂಡಿದ್ದ ಬ್ರೂಟಸ್ ತನ್ನನ್ನು ಇರಿದಾಗ `Yours is the  most unkindest cut of all’  ಎಂದು ಜರಿದ.

ಪತ್ರಿಕಾ ಸಂಪಾದಕರಾಗಿದ್ದ ಬಾಬು ಕೃಷ್ಣಮೂರ್ತಿ ನನ್ನನ್ನು 38 ದಿನಗಳ ಕಳಪೆ ಸಂಪಾದಕ ಎಂದು ಹೇಳಿರುವುದನ್ನು ಕುರಿತು ನಾನೂ ಕೂಡ Yours is the most unkindest cut of all’ಎಂದು ಹೇಳಬೇಕಿದೆ. ಸೀಸರ್ ಬ್ರೂಟಸ್‍ನ ಈ ಗೆಯ್ಮೆಯನ್ನುSuperlatives ನಲ್ಲಿ Unkindest ಎಂದು ಮಾತ್ರ ಹೇಳದೆ Most ಎಂಬ ಇನ್ನೊಂದು Superlatives ಕೂಡಾ ಬಳಸಿದ್ದಾನೆ. ಬ್ರೂಟಸ್‍ನ ಈ ಕೃತ್ಯ ಸೀಜರ್‌ನನ್ನು ದಿಗ್ಭ್ರಮೆಗೋಳಿಸಿದೆ. ಬಾಬುಕೃಷ್ಣಮೂರ್ತಿಯವರ ಈ ಮಾತು ನನ್ನನ್ನು ಸೀಜರ್‌ನಷ್ಟೇ ದಿಗ್ಭ್ರಮೆಗೊಳಿಸಿದೆ.

ಪೌರವಾಣಿ ಪತ್ರಿಕೆಯನ್ನು ಆರಂಭಿಸಿದ ನಮಗೆ – ಸ್ವಾತಂತ್ರ್ಯ ಹೋರಾಟಗಾರ ಯುವಕರು – ಸ್ವಾತಂತ್ರ್ಯ ಬೇಗ ದೊರಕಿಸಿಕೊಳ್ಳಬೇಕು ಎಂಬ ತವಕವಿತ್ತು. ನಮ್ಮ ನಾಯಕರನ್ನು ಪ್ರತಿ ಎಂಪಿಸಿಸಿ ಸಭೆಯಲ್ಲೂ ಜವಾಬ್ದಾರಿ ಸರ್ಕಾರ ಪಡೆಯಲು ತಡಮಾಡದೆ ಹೋರಾಟ ಆರಂಭಿಸಬೇಕೆಂದು ಒತ್ತಾಯ ತರುತ್ತಿದ್ದೆವು. ಇದಕ್ಕೆ ಪೂರಕವಾಗಿ ಒಂದು ಪತ್ರಿಕೆಯನ್ನು ಆರಂಭಿಸಲೂ ತೀರ್ಮಾನಿಸಿದೆವು. ಪೌರವಾಣಿ ಬೆಂಗಳೂರಿನಲ್ಲಿ ಜನ್ಮ ತಾಳಿತು. ಬೆಂಗಳೂರು ಜಿಲ್ಲಾ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷರಾಗಿದ್ದ ದೊಡ್ಡಬಳ್ಳಾಪುರದ ರುಮಾಲೆ ಭದ್ರಣ್ಣನವರು ಪೌರವಾಣಿಯ ಮೊದಲ ಸಂಪಾದಕರಾದರು. ಪೌರವಾಣಿ ದಿನಪತ್ರಿಕೆ ಬೆಲೆ 3 ಕಾಸು. ರಾಯಟರ್ಸ್ ಮತ್ತು ಪಿಟಿಐ ಸುದ್ದಿಗಳನ್ನು ತರಿಸಿಕೊಳ್ಳುತ್ತಿದ್ದೆವು.

ಪತ್ರಿಕೆ ಬಹಳ ಬೇಗ ಜನಾದರಣೆ ಗಳಿಸಿತು. ಭದ್ರಣ್ಣನವರು ನಾಯಿ ಕಚ್ಚಿ ಹೈಡ್ರೋಫೋಬಿಯಾ ಎಂಬ ರೋಗಕ್ಕೆ ಬಲಿಯಾದರು. ಅವರು ಸಾಯುವ ಮೊದಲು ನಮ್ಮ ಯುವಬಳಗವೆಲ್ಲ ಆಸ್ಪತ್ರೆಗೆ ಹೋಗಿ ಅವರನ್ನು ಕಂಡೆವು. ಅವರು ನಮ್ಮೆಲ್ಲರನ್ನು ಕುರಿತು “ಭಾರತಕ್ಕೆ ಸ್ವಾತಂತ್ರ್ಯ ಬಂತು. ಆದರೆ ಮೈಸೂರಿನ ಪ್ರಜೆಗಳಿಗೆ ಸ್ವಾತಂತ್ರ್ಯ ಬಂದಿಲ್ಲ. ಮಹಾರಾಜರು Accession  ಒಪ್ಪುತ್ತಿಲ್ಲ. ಅವರನ್ನು ಒಪ್ಪಿಸುವುದಕ್ಕಾಗಿ ಹೋರಾಟ ಮಾಡಬೇಕಾಗಿದೆ. ಪೌರವಾಣಿ ಪತ್ರಿಕೆ ಈ ಹೋರಾಟಕ್ಕೆ ಹೊಯ್‍ಕೈಯಾಗಿಸಿಲ್ಲ ಬೆಂಬಲಿಸಿದೆ. ಪೌರವಾಣಿ ಪತ್ರಿಕೆ ಈಗ ಜನಪ್ರಿಯವಾಗಿದೆ ನೀವು ಈ ಪತ್ರಿಕೆಯನ್ನು ಅಂತಿಮ ಗುರಿ ಮುಟ್ಟುವವರೆಗೂ ನಡೆಸಿಕೊಂಡು ಹೋಗಬೇಕು” ಎಂದು ಕೈಮುಗಿದು ಕೇಳಿಕೊಂಡರು.

ಕೆಲಹೊತ್ತಿನಲ್ಲಿ ಅವರ ಪ್ರಾಣಪಕ್ಷಿ ಹಾರಿಹೋಯಿತು. ಭದ್ರಣ್ಣನವರ ನೆಂಟರು, ನಾವೂ ಸೇರಿ ಅವರ ಅಂತ್ಯಕ್ರಿಯೆ ಮುಗಿಸಿದೆವು. ರಾತ್ರಿ ಪೌರವಾಣಿ ಕಚೇರಿಯಲ್ಲಿ ಸೇರಿದ್ದ ನಾವೆಲ್ಲ ಮುಂದೆ ಯಾರು ಸಂಪಾದಕರಾಗಬೇಕೆಂದು ಚರ್ಚಿಸಿದೆವು. ಕೊನೆಗೆ ನನ್ನನ್ನು ಸಂಪಾದಕನಾಗುವಂತೆ ಒತ್ತಾಯಿಸಿದರು. ನಾನು ಆಗ ಮೈಸೂರಿನಲ್ಲಿ ಸಾಹಿತ್ಯ ಮಂದಿರ ಎಂಬ ಪುಸ್ತಕದಂಗಡಿ ಮತ್ತು ಪ್ರಕಾಶನ ಸಂಸ್ಥೆ ನಡೆಸುತ್ತಿದ್ದೆ. ನಾನು ಪುಸ್ತಕದಂಗಡಿ ಮುಚ್ಚಿ ಇದ್ದ ಪುಸ್ತಕದ ದಾಸ್ತಾನನೆಲ್ಲ ಕಾಂಗ್ರೆಸ್ ಮುಖಂಡ ಎಂ.ಎನ್.ಜೋಯಿಸರ ಮನೆಯಲ್ಲಿಟ್ಟು, ಬೆಂಗಳೂರಿಗೆ ಬಂದು ಪೌರವಾಣಿ ಪತ್ರಿಕೆ ಸಂಪಾದಕನಾಗಿ ನೋಂದಾಯಿಸಿಕೊಂಡೆ. ಮೈಸೂರು ಕಾಂಗ್ರೆಸ್ ಕಮಿಟಿ ಆಗ `ಮೈಸೂರ್ ಚಲೋ’ ಕೊನೆಯ ಚಳವಳಿಯನ್ನು ಆರಂಭಿಸುವ ವಿಚಾರ ಮಾಡುತ್ತಿತ್ತು.

ಪೌರವಾಣಿ ಪತ್ರಿಕೆಯಲ್ಲಿ ಮೈಸೂರು ಮಹಾರಾಜರ ಆಡಳಿತ ವೈಖರಿ ಕುರಿತು ವಿಶ್ವ ಕರ್ನಾಟಕ ಸಂಪಾದಕರಾಗಿದ್ದ ತಿರುಮಲ ತಾತಾಚಾರ್ಯ ಶರ್ಮರು 8 ಲೇಖನಗಳನ್ನು ಬರೆದುಕೊಟ್ಟರು. ಆರು ಲೇಖನಗಳನ್ನು ಪ್ರಕಟಿಸಿ ಆಗಿತ್ತು. ಆಗ ಚೀಫ್ ಸೆಕ್ರೆಟರಿಯವರು ನಮಗೊಂದು ನೋಟಿಸ್ ನೀಡಿ ಇನ್ನು ಮೇಲೆ ಯಾವುದೇ ಲೇಖನಗಳನ್ನು ಮತ್ತು ಅಗ್ರ ಲೇಖನಗಳನ್ನು ಪ್ರಕಟಿಸುವ ಮುನ್ನ ನಮಗೆ ಅದನ್ನು ಕಳುಹಿಸಿ, ಸರ್ಕಾರಕ್ಕೆ ಒಪ್ಪಿಗೆಯಾಗುವ ಲೇಖನಗಳನ್ನು ಮಾತ್ರ ಪ್ರಕಟಿಸತಕ್ಕದ್ದು. ಈ ಆಜ್ಞೆಯನ್ನು ಮಿರಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು.

ಸರ್ಕಾರಕ್ಕೆ ಉಳಿದ ಲೇಖನಗಳನ್ನು ಕಳಿಸದೆಯೇ 7 ಮತ್ತು 8ನೇ ಕಂತಿನ ಲೇಖನಗಳನ್ನು ಅಚ್ಚುಮಾಡಿ ಅದರ ಜೊತೆಗೆ ಒಂದು Box news ಅನ್ನು ಹಾಕಿದೆವು. ಸರ್ಕಾರ ನಮ್ಮ ಮೇಲೆ ಪ್ರತಿಬಂಧಕಗಳನ್ನು ಹೇರಲು ತೊಡಗಿದೆ. ಸರ್ಕಾರದ ಈ ಬೆದರಿಕೆಗೆ ಸೊಪ್ಪು ಹಾಕದೆ 7 ಮತ್ತು 8ನೇ ಕಂತಿನ ಲೇಖನಗಳನ್ನು ಸರ್ಕಾರಕ್ಕೆ ಕಳಿಸದೆ ಪ್ರಕಟಿಸುತ್ತಿದ್ದೇವೆ. ಸರ್ಕಾರದ ಧೋರಣೆಯನ್ನು ಒಪ್ಪದೆ ಪ್ರತಿಭಟನಾರ್ಥವಾಗಿ ನಾಳೆಯಿಂದ ಪತ್ರಿಕೆಯನ್ನು ನಿಲ್ಲಿಸಿದ್ದೇವೆ ಎಂದು ಅಚ್ಚು ಮಾಡಲಾಯಿತು. ಮೂರು ದಿನದ ನಂತರ ಪೊಲೀಸರು ಬಂದು ಪತ್ರಿಕಾಲಯಕ್ಕೆ ಬೀಗ ಹಾಕಿದರು.

ಇನ್ನು ಇಲ್ಲಿದ್ದರೆ ಬಂಧಿಸಲಿದ್ದಾರೆ, ಬೇರೆ ಪ್ರಾಂತಕ್ಕೆ ಹೋಗಿ ಪೌರವಾಣಿಯನ್ನು ಅಲ್ಲಿ ಅಚ್ಚು ಮಾಡಿಸಿ, ಮೈಸೂರು ಸಂಸ್ಥಾನದ ಊರುಗಳಿಗೆ ಏಕೆ ಕಳುಹಿಸಬಾರದು ಎಂದು ಆಲೋಚಿಸಿದೆ. ನಾನು ಮತ್ತು ನನ್ನ ಸ್ನೇಹಿತ ಶ್ರೀಧರಮೂರ್ತಿ ಪಕ್ಕದ ಹಿಂದೂಪುರಕ್ಕೆ ಹೋದೆವು ಸುದರ್ಶನ ಪ್ರೆಸ್‍ನಲ್ಲಿ ಪತ್ರಿಕೆಯನ್ನು ಅಚ್ಚುಮಾಡಿ ಕೊಡಲು ಮಾಲಿಕರಲ್ಲೊಬ್ಬರಾದ ಆದಯ್ಯ ಶೆಟ್ಟರು ಒಪ್ಪಿಕೊಂಡರು. ನಾನು ಪೌರವಾಣಿ, ಪೌರವೀರ ಪೌರಮಾರ್ತಾಂಡ, ಪೌರಭಾಸ್ಕರ ಈ ಹೆಸರುಗಳಲ್ಲಿ ಪತ್ರಿಕೆಯನ್ನು ನೋಂದಾಯಿಸಿಕೊಂಡೆ. ಮೈಸೂರು ಸಂಸ್ಥಾನದೊಳಕ್ಕೆ ಹೋಗುವ ಪೌರವಾಣಿ ಪತ್ರಿಕೆಯನ್ನು ಸರ್ಕಾರ ತಡೆಹಿಡಿದರೆ ಮತ್ತೊಂದು ಹೆಸರಿನಲ್ಲಿ ಪತ್ರಿಕೆಯನ್ನು ಕಳುಹಿಸಬಹುದಲ್ಲಾ ಎಂಬ ದೂರದೃಷ್ಟಿಯಿಂದ 5 ಹೆಸರಿನ ಪತ್ರಿಕೆಗಳನ್ನು ನೋಂದಾಯಿಸಿಕೊಂಡಿದ್ದೆ. ಕೆಲದಿನಗಳ ಮೇಲೆ ನಮ್ಮ ನಿರೀಕ್ಷೆಯಂತೆಯೇ ಪೌರವಾಣಿ ಪತ್ರಿಕೆ ಮೈಸೂರು ಸಂಸ್ಥಾನದೊಳಕ್ಕೆ ಬರದಂತೆ ತಡೆದರು. ನಾವು ಪೌರವೀರ ಹೆಸರಿನಲ್ಲಿ ಪತ್ರಿಕೆಯನ್ನು ಅಲ್ಲಿಂದಾಚೆಗೆ ಕಳುಹಿಸಿದೆವು.

ಮೈಸೂರು ಚಲೋ ಸತ್ಯಾಗ್ರಹ ನಡೆದ 38 ದಿನಗಳೂ ಪತ್ರಿಕೆ ಮೈಸೂರಿನ ಎಲ್ಲ ಕಡೆಗೆ ತಲುಪಿತು. ಬೆಂಗಳೂರಿಗೆ ದಿನಕ್ಕೊಬ್ಬ ಸತ್ಯಾಗ್ರಹಿಯ ಕೈಯಲ್ಲಿ ಪತ್ರಿಕೆಯನ್ನು ಕಳುಹಿಸುತ್ತಿದ್ದರು. ಪತ್ರಿಕೆ ಹೊರತರುವುದಕ್ಕೆ ಸಹಾಯಕರಾಗಿರುವ ರುಮಾಲೆ ಚನ್ನಬಸವಣ್ಣ, ಮೈಸೂರಿನ ಸುಬ್ಬರಾಯರು, ತಿರುಮಲ ಶ್ರೀರಂಗಾಚಾರ್ ಮುಂತಾದವರಿದ್ದರು.

38 ದಿನಗಳು ಪೌರವಾಣಿ ನಡೆದದ್ದು ಬೆಂಗಳೂರಿನಲ್ಲಲ್ಲ. ಪೌರವಾಣಿ ಪತ್ರಿಕೆಯನ್ನು ಮೈಸೂರು ಸಂಸ್ಥಾನದಲ್ಲಿ ಮುಟ್ಟುಗೋಲು ಹಾಕಿಕೊಂಡ ನಂತರ ನಾವು ಮಾಡಿದ ಈ ಸಾಹಸದ ನಮ್ಮ ಕೆಲಸವನ್ನು ಅರಿಯದ ಬಾಬು ಕೃಷ್ಣಮೂರ್ತಿ ನನ್ನನ್ನು ಮೂರು ಕಾಸಿಗೆ ಹರಾಜು ಹಾಕಿದ್ದಾರೆ.

ಬಾಬು ಕೃಷ್ಣಮೂರ್ತಿಯವರ ಮೂದಲಿಕೆ ಮಾತನ್ನ ಕೇಳಿದಮೇಲೆ ಈ ಸುಳ್ಳನ್ನು, ಉತ್ಪ್ರೇಕ್ಷೆಯ ಮಾತನಾಡಲು ಯಾರು ಇವರಿಗೆ ಪ್ರೇರಣೆ ನೀಡಿರಬಹುದೆಂದು ಯೋಚನೆ ಮಾಡಿದೆ. ಆರ್‌ಎಸ್‍ಎಸ್‍ನಲ್ಲಿ ಇದ್ದುಹೋದ ಕೃಷ್ಣಮೂರ್ತಿಗೆ ಬಹುಕಾಲ ಧರ್ಮಾಂಧತೆಯ ವಿಷವುಣಿಸಲಾಗಿದೆ. ಅದು ಈ ರೀತಿ ನನ್ನ ಮೇಲೆ ಎಂದೂ ಇಲ್ಲದಷ್ಟು ಹರಿಹಾಯಲು ಪ್ರೇರಣೆ ನೀಡಿರಬಹುದು ಅಥವಾ ಆರ್‌ಎಸ್‍ಎಸ್ ಮುಖ್ಯರ ಆಜ್ಞಾನುಸಾರ ಕೃಷ್ಣಮೂರ್ತಿ ನಡೆದುಕೊಂಡಿರಬಹುದು.

ನನಗೆ ಪತ್ರಿಕೆ ಅಕಾಡೆಮಿ ಅವಾರ್ಡ್ ಬಂದಿದೆ. ನಾನು 5 ವರ್ಷಕಾಲ ಪೌರವಾಣಿಯ ಸಂಪಾದಕನಾಗಿದ್ದೆ, 38 ದಿನಗಳಲ್ಲ. Freelance Journalist ಆಗಿ ಪತ್ರಿಕೆಗಳಿಗೆ ಲೇಖನಗಳನ್ನೂ ಬರೆಯುತ್ತೇನೆ. ಮೈಸೂರು ಸಂಸ್ಥಾನದ ಪತ್ರಿಕಾಸಂಘ ನನ್ನ ಸಕ್ರಿಯ ಪತ್ರಿಕೋದ್ಯಮವನ್ನು ಗುರುತಿಸಿ ನನಗೆ ಆ ಸಂಘದ ಅಧ್ಯಕ್ಷತೆಯನ್ನು ನೀಡಿ ಗೌರವಿಸಿದೆ ಎಂಬುದನ್ನು ಬಾಬುಕೃಷ್ಣಮೂರ್ತಿ ತಿಳಿಯಬೇಕು.

ಬಾಬುಕೃಷ್ಣಮೂರ್ತಿಯವರು ಗೋಡ್ಸೆ ಬೆಂಗಳೂರಿಗೆ ಬಂದಿದ್ದ ವಿಚಾರ ಪ್ರಸ್ತಾಪಿಸಿದ್ದಾರೆ. ಅದರ ಪ್ರಸ್ತಾಪ ಮುಂದಿನ ಸಂಚಿಕೆಯಲ್ಲಿ…..

– ಎಚ್.ಎಸ್.ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...