Homeಸಿನಿಮಾಕ್ರೀಡೆಪಾಕ್ ಆಟಗಾರನನ್ನು ಸೋಲಿಸಿ ನಿಮ್ಮ ಮಗ ಚಿನ್ನ ಗೆದ್ದಿದ್ದಕ್ಕೆ ಏನನ್ನಿಸುತ್ತದೆ? ಎಂದು ಪ್ರಶ್ನಿಸಿದ ಪತ್ರಕರ್ತನಿಗೆ ತಕ್ಕ...

ಪಾಕ್ ಆಟಗಾರನನ್ನು ಸೋಲಿಸಿ ನಿಮ್ಮ ಮಗ ಚಿನ್ನ ಗೆದ್ದಿದ್ದಕ್ಕೆ ಏನನ್ನಿಸುತ್ತದೆ? ಎಂದು ಪ್ರಶ್ನಿಸಿದ ಪತ್ರಕರ್ತನಿಗೆ ತಕ್ಕ ಉತ್ತರ ನೀಡಿದ ನೀರಜ್ ಚೋಪ್ರಾ ತಾಯಿ

- Advertisement -
- Advertisement -

ಭಾನುವಾರ ಬುಡಾಪೆಸ್ಟ್‌ನಲ್ಲಿ ನಡೆದ 2023ರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯನಾಗಿರುವ ನೀರಜ್ ಚೋಪ್ರಾ ಐತಿಹಾಸಿಕ ಸಾಧನೆ ಮಾಡಿದ್ದಾರೆ. 25 ವರ್ಷ ವಯಸ್ಸಿನ ಚೋಪ್ರಾ ಫೈನಲ್ ಸುತ್ತಿನಲ್ಲಿ 88.17 ಮೀಟರ್‌ಗಳಷ್ಟು ದೂರ ಜಾವೆಲಿನ್ ಎಸೆದು ಅಸಾಧಾರಣ ಸಾಧನೆಯೊಂದಿಗೆ ವಿಶ್ವ ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ಪಡೆದರು. ಈವೆಂಟ್‌ನಲ್ಲಿ ಪಾಕಿಸ್ತಾನದ ಅರ್ಷದ್ ನದೀಮ್ ಎರಡನೇ ಸ್ಥಾನ ಗಳಿಸಿದ್ದಾರೆ.

ಪಾಕಿಸ್ತಾನದ ಪ್ರತಿಸ್ಪರ್ಧಿ ವಿರುದ್ಧ ಭಾರತೀಯ ಅಥ್ಲೆಟ್‌ವೊಬ್ಬನ ಗೆಲುವನ್ನು ಕೆಲವರು ಪಾಕ್ ವಿರುದ್ಧದ ಯುದ್ಧದ ಗೆಲುವು ಎಂಬಂತೆ ಬಿಂಬಿಸಿದ್ದರು. ಆದರೆ, ಚೋಪ್ರಾ ಅವರ ತಾಯಿ ಸರೋಜ್ ದೇವಿ ಅವರು, ”ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ತನ್ನ ಮಗ ಪಾಕಿಸ್ತಾನಿ ಎದುರಾಳಿಯ ವಿರುದ್ಧ ಗೆದ್ದ ಬಗ್ಗೆ ವರದಿಗಾರ ಕೇಳಿದ ಪ್ರಶ್ನೆಗೆ ನೀಡಿರುವ ಉತ್ತರ ಎಲ್ಲರ ಹೃದಯವನ್ನು ತಟ್ಟಿದೆ.

ನೀರಜ್ ಚೋಪ್ರಾ ಅವರ ತಾಯಿ ತನ್ನ ಮಗನ ಗಮನಾರ್ಹ ಸಾಧನೆಯ ನಂತರ ಮಾಧ್ಯಮಗಳಿಗೆ ನೀಡಿರುವ ಸಂದರ್ಶನದ ವೀಡಿಯೊ ಇದೀಗ ಭಾರೀ ವೈರಲ್ ಆಗಿದೆ.

”ಪಾಕಿಸ್ತಾನದ ಅಥ್ಲೇಟ್ ಅರ್ಷದ್ ವಿರುದ್ಧ ತಮ್ಮ ಮಗನ ವಿಜಯದ ಬಗ್ಗೆ ತಾವೆಷ್ಟು ಭಾವುಕರಾಗಿದ್ದೀರಿ?” ಎಂದು ವರದಿಗಾರ ಕೇಳಿದಾಗ, ”ನೋಡಿ, ಎಲ್ಲರೂ ಮೈದಾನದಲ್ಲಿ ಆಡಲು ಬಂದಿದ್ದಾರೆ. ಒಬ್ಬರು ಅಥವಾ ಇನ್ನೊಬ್ಬರು ಖಂಡಿತವಾಗಿಯೂ ಗೆಲ್ಲುತ್ತಾರೆ. ಹಾಗಾಗಿ ಇಲ್ಲಿ ಪಾಕಿಸ್ತಾನ ಅಥವಾ ಹರ್ಯಾಣದವರು ಎಂಬ ಪ್ರಶ್ನೆಯೇ ಇಲ್ಲ. ಇದು ಬಹಳ ಸಂತೋಷದ ವಿಷಯವಾಗಿದೆ. ಆ ಪಾಕಿಸ್ಥಾನಿ ಗೆದ್ದಿದ್ದರೂ ಬಹಳ ಸಂತೋಷವಾಗುತ್ತಿತ್ತು” ಎಂದು ಸರೋಜ್ ದೇವಿ ಹೇಳಿದ್ದಾರೆ.

”ನೀರಜ್ ಒಬ್ಬ ಪಾಕಿಸ್ತಾನಿ ಅಥ್ಲೇಟ್‌ನನ್ನು ಸೋಲಿಸಿ ಚಿನ್ನ ಗೆದ್ದಿದ್ದಕ್ಕೆ ಏನನ್ನಿಸುತ್ತದೆ?” ಎಂದು ವರದಿಗಾರರು ನೀರಜ್ ಚೋಪ್ರಾ ಅವರ ತಾಯಿ ಬಳಿ ಕೇಳಿದರು. ಅದಕ್ಕೆ ಅವರು,”ಒಬ್ಬ ಆಟಗಾರನು ಆಟಗಾರ ಅಷ್ಟೇ. ಅವನು ಎಲ್ಲಿಂದ ಬಂದಿದ್ದಾನೆ ಎಂಬುದು ಮುಖ್ಯವಲ್ಲ, ಪಾಕಿಸ್ತಾನಿ ಆಟಗಾರ(ನದೀಮ್) ಗೆಲುವು ಸಾಧಿಸಿದ್ದರೂ ನನಗೆ ಸಂತೋಷವಾಗುತ್ತಿತ್ತು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. Its the real sportsmanship. We r really proud of Niraj for his great achievement and extremely proud of his mother’s statement of true sportsmanship attitude. Because of this attitude Niraji is world beater today. Hats off to both of u.Mother India is really grateful to u both .

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...