Homeಸಿನಿಮಾಕ್ರೀಡೆಪಾಕ್ ಆಟಗಾರನನ್ನು ಸೋಲಿಸಿ ನಿಮ್ಮ ಮಗ ಚಿನ್ನ ಗೆದ್ದಿದ್ದಕ್ಕೆ ಏನನ್ನಿಸುತ್ತದೆ? ಎಂದು ಪ್ರಶ್ನಿಸಿದ ಪತ್ರಕರ್ತನಿಗೆ ತಕ್ಕ...

ಪಾಕ್ ಆಟಗಾರನನ್ನು ಸೋಲಿಸಿ ನಿಮ್ಮ ಮಗ ಚಿನ್ನ ಗೆದ್ದಿದ್ದಕ್ಕೆ ಏನನ್ನಿಸುತ್ತದೆ? ಎಂದು ಪ್ರಶ್ನಿಸಿದ ಪತ್ರಕರ್ತನಿಗೆ ತಕ್ಕ ಉತ್ತರ ನೀಡಿದ ನೀರಜ್ ಚೋಪ್ರಾ ತಾಯಿ

- Advertisement -
- Advertisement -

ಭಾನುವಾರ ಬುಡಾಪೆಸ್ಟ್‌ನಲ್ಲಿ ನಡೆದ 2023ರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯನಾಗಿರುವ ನೀರಜ್ ಚೋಪ್ರಾ ಐತಿಹಾಸಿಕ ಸಾಧನೆ ಮಾಡಿದ್ದಾರೆ. 25 ವರ್ಷ ವಯಸ್ಸಿನ ಚೋಪ್ರಾ ಫೈನಲ್ ಸುತ್ತಿನಲ್ಲಿ 88.17 ಮೀಟರ್‌ಗಳಷ್ಟು ದೂರ ಜಾವೆಲಿನ್ ಎಸೆದು ಅಸಾಧಾರಣ ಸಾಧನೆಯೊಂದಿಗೆ ವಿಶ್ವ ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ಪಡೆದರು. ಈವೆಂಟ್‌ನಲ್ಲಿ ಪಾಕಿಸ್ತಾನದ ಅರ್ಷದ್ ನದೀಮ್ ಎರಡನೇ ಸ್ಥಾನ ಗಳಿಸಿದ್ದಾರೆ.

ಪಾಕಿಸ್ತಾನದ ಪ್ರತಿಸ್ಪರ್ಧಿ ವಿರುದ್ಧ ಭಾರತೀಯ ಅಥ್ಲೆಟ್‌ವೊಬ್ಬನ ಗೆಲುವನ್ನು ಕೆಲವರು ಪಾಕ್ ವಿರುದ್ಧದ ಯುದ್ಧದ ಗೆಲುವು ಎಂಬಂತೆ ಬಿಂಬಿಸಿದ್ದರು. ಆದರೆ, ಚೋಪ್ರಾ ಅವರ ತಾಯಿ ಸರೋಜ್ ದೇವಿ ಅವರು, ”ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ತನ್ನ ಮಗ ಪಾಕಿಸ್ತಾನಿ ಎದುರಾಳಿಯ ವಿರುದ್ಧ ಗೆದ್ದ ಬಗ್ಗೆ ವರದಿಗಾರ ಕೇಳಿದ ಪ್ರಶ್ನೆಗೆ ನೀಡಿರುವ ಉತ್ತರ ಎಲ್ಲರ ಹೃದಯವನ್ನು ತಟ್ಟಿದೆ.

ನೀರಜ್ ಚೋಪ್ರಾ ಅವರ ತಾಯಿ ತನ್ನ ಮಗನ ಗಮನಾರ್ಹ ಸಾಧನೆಯ ನಂತರ ಮಾಧ್ಯಮಗಳಿಗೆ ನೀಡಿರುವ ಸಂದರ್ಶನದ ವೀಡಿಯೊ ಇದೀಗ ಭಾರೀ ವೈರಲ್ ಆಗಿದೆ.

”ಪಾಕಿಸ್ತಾನದ ಅಥ್ಲೇಟ್ ಅರ್ಷದ್ ವಿರುದ್ಧ ತಮ್ಮ ಮಗನ ವಿಜಯದ ಬಗ್ಗೆ ತಾವೆಷ್ಟು ಭಾವುಕರಾಗಿದ್ದೀರಿ?” ಎಂದು ವರದಿಗಾರ ಕೇಳಿದಾಗ, ”ನೋಡಿ, ಎಲ್ಲರೂ ಮೈದಾನದಲ್ಲಿ ಆಡಲು ಬಂದಿದ್ದಾರೆ. ಒಬ್ಬರು ಅಥವಾ ಇನ್ನೊಬ್ಬರು ಖಂಡಿತವಾಗಿಯೂ ಗೆಲ್ಲುತ್ತಾರೆ. ಹಾಗಾಗಿ ಇಲ್ಲಿ ಪಾಕಿಸ್ತಾನ ಅಥವಾ ಹರ್ಯಾಣದವರು ಎಂಬ ಪ್ರಶ್ನೆಯೇ ಇಲ್ಲ. ಇದು ಬಹಳ ಸಂತೋಷದ ವಿಷಯವಾಗಿದೆ. ಆ ಪಾಕಿಸ್ಥಾನಿ ಗೆದ್ದಿದ್ದರೂ ಬಹಳ ಸಂತೋಷವಾಗುತ್ತಿತ್ತು” ಎಂದು ಸರೋಜ್ ದೇವಿ ಹೇಳಿದ್ದಾರೆ.

”ನೀರಜ್ ಒಬ್ಬ ಪಾಕಿಸ್ತಾನಿ ಅಥ್ಲೇಟ್‌ನನ್ನು ಸೋಲಿಸಿ ಚಿನ್ನ ಗೆದ್ದಿದ್ದಕ್ಕೆ ಏನನ್ನಿಸುತ್ತದೆ?” ಎಂದು ವರದಿಗಾರರು ನೀರಜ್ ಚೋಪ್ರಾ ಅವರ ತಾಯಿ ಬಳಿ ಕೇಳಿದರು. ಅದಕ್ಕೆ ಅವರು,”ಒಬ್ಬ ಆಟಗಾರನು ಆಟಗಾರ ಅಷ್ಟೇ. ಅವನು ಎಲ್ಲಿಂದ ಬಂದಿದ್ದಾನೆ ಎಂಬುದು ಮುಖ್ಯವಲ್ಲ, ಪಾಕಿಸ್ತಾನಿ ಆಟಗಾರ(ನದೀಮ್) ಗೆಲುವು ಸಾಧಿಸಿದ್ದರೂ ನನಗೆ ಸಂತೋಷವಾಗುತ್ತಿತ್ತು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. Its the real sportsmanship. We r really proud of Niraj for his great achievement and extremely proud of his mother’s statement of true sportsmanship attitude. Because of this attitude Niraji is world beater today. Hats off to both of u.Mother India is really grateful to u both .

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...