Homeಮುಖಪುಟಬೆಳ್ಳಿ ಚುಕ್ಕಿ: ಭೂಮಿ ಸೂರ್ಯನಿಗೆ ಹತ್ತಿರವಿದ್ದಾಗ ನಮಗೆ ಬೇಸಿಗೆ ಕಾಲ ಬರುತ್ತದೆಯೇ?

ಬೆಳ್ಳಿ ಚುಕ್ಕಿ: ಭೂಮಿ ಸೂರ್ಯನಿಗೆ ಹತ್ತಿರವಿದ್ದಾಗ ನಮಗೆ ಬೇಸಿಗೆ ಕಾಲ ಬರುತ್ತದೆಯೇ?

- Advertisement -
- Advertisement -

ಒಂದು ಪ್ರಸಂಗ: ಅಂದು ಶನಿವಾರ. ಕಿರಣ್ ಮತ್ತು ಆರಿಫ್ ಇಬ್ಬರೂ ಅರ್ಧ ದಿನದ ಶಾಲೆ ಮುಗಿಸಿ, ಮನೆ ಕಡೆಗೆ ನಡೆದುಕೊಂಡು ಹೋಗುತ್ತಿರಬೇಕಾದರೆ, ಕಿರಣ್ ಆರಿಫ್‌ಗೆ ಹೀಗಂದ: ’ಲೇ, ಆರಿಫ್ ಏನೋ ಇಷ್ಟೊಂದ್ ಬಿಸಿಲಿದೆ ಇವತ್ತು. ಮೈಯಲ್ಲಾ ಚುರ್ ಚುರ್ ಅಂತಿದೆ’. ಅದಕ್ಕೆ ಆರಿಫ್, ’ಏ ಬೇಸಿಗೆ ಕಾಲದಲ್ಲಿ ಬಿಸಿಲು ಬರ್‌ದಿರಾ ಮಳೆನಾ ಬರತ್ತೆ’ ಅಂದಾ. ಕಿರಣ್: ’ಏ ಅದ್ ನನಗೂ ಗೊತ್ತೋ. ಬೇಸಿಗೆ ಕಾಲ ಇದು ಅಂತ. ಆದರೆ, ಅದೆಂಗೋ ಬೇಸಿಗೆ ಕಾಲದಲ್ಲಿ ಬಿಸ್ಲು, ಮಳೆಗಾಲದಲ್ಲಿ ಮಳೆ, ಚಳಿಗಾಲದಲ್ಲಿ ಚಳಿ ಬರತ್ತೆ? ನಂಗಂತೂ ಇದು ಅರ್ಥಾನೇ ಆಗಿಲ್ಲ. ಆರಿಫ್: ’ಏ ಬಿಡೋ, ನನಗೆ ಈ ವರ್ಷ ಕಾಲಗಳು ಅನ್ನೋ ಪಾಠ ಐತೆ. ಅದನ್ನ ಇನ್ನೂ ಮೇಷ್ಟ್ರು ಪಾಠ ಹೇಳಿಲ್ಲ. ಅವ್ರು ಪಾಠ ಮಾಡಿದ್ಮೇಲೆ ನಾನೇ ನಿನಗೆ ಹೇಳ್ತಿನಿ. ಆದ್ರೇ ಈ ಜೋಸೆಫ್ ಅವ್ನಲ್ಲಾ’. ಕಿರಣ್: ’ಯಾರೇಳು? ಅದೇ ಆ ಪಕ್ದೂರೋನ್ ಅಲ್ವಾ’. ಆರಿಫ್: ’ಹೌದೋ ಅವ್ನೇ, ಅವ್ನು ಒಂದ್ ಕಥೆ ಹೇಳ್ತಿದ್ದಾ.. ಭೂಮಿ ಸೂರ್ಯನ ಸುತ್ತ ಅಂಡಾಕಾರದಲ್ಲಿರುವ ಕಕ್ಷೆಯಲ್ಲಿ ಸುತ್ತುತ್ತಿರಬೇಕಾದ್ರೆ, ಸೂರ್ಯನಿಗೆ ಹತ್ತಿರ ಬಂದಾಗ ಬೇಸಿಗೆ ಕಾಲ, ದೂರ ಹೊದಾಗ ಮಳೆಗಾಲ ಅಂತ. ಅದೆ ಇರಬೇಕೆನೊ!’.

ಈ ಪ್ರಸಂಗದಲ್ಲಿ ಆರಿಫ್ ಹೇಳಿದ ಉತ್ತರ ನಿಮಗೆ ಸರಿ ಅನ್ನಿಸತ್ತಾ? ಭೂಮಿ ಸೂರ್ಯನಿಗೆ ಹತ್ತಿರವಿದ್ದಾಗ ಭೂಮಿಗೆ ಶಾಖವು ಹೆಚ್ಚಿರುತ್ತದೆ ಹಾಗಾಗಿ ಬೇಸಿಗೆ ಕಾಲ ಬರುತ್ತದೆ ಎಂಬ ಈ ವಿವರಣೆ ಸರಿಯೇ? ಅಥವಾ ತಪ್ಪೇ? ನಿಮಗೂ ಕೂತಹಲ ಹೆಚ್ಚುತ್ತಿರಬೇಕಲ್ಲವಾ?

ನಮಗೆಲ್ಲರಿಗೂ ತಿಳಿದಿರುವಹಾಗೆ ಭೂಮಿ ಸೂರ್ಯನ ಸುತ್ತ ಗೋಳಾಕಾರದಲ್ಲಿ ಸುತ್ತುತ್ತಿದೆ. ಅಲ್ಲದೇ, ಆ ಗೋಳಾಕಾರಕ್ಕೆ ಎರಡು ಕೇಂದ್ರ ಬಿಂದು ಇದ್ದು, ಸೂರ್ಯನು ಒಂದು ಕೇಂದ್ರ ಬಿಂದುವಿನಲ್ಲಿದ್ದಾನೆ ಎಂಬುದು ತಿಳಿದಿದೆ. ಹಾಗಿದ್ದಾಗ, ಭೂಮಿಯು ಸೂರ್ಯನ ಸುತ್ತ ಸುತ್ತವಾಗ, ವರ್ಷದ ಕೆಲವು ತಿಂಗಳು ಸೂರ್ಯನಿಂದ ದೂರ ಮತ್ತು ಕೆಲವು ತಿಂಗಳು ಸೂರ್ಯನ ಹತ್ತಿರ ಬರುವುದು ಸಹಜ. ಆದರೆ, ಭೂಮಿಯು ಸೂರ್ಯನಿಂದ ದೂರವಿದ್ದಾಗಿನ ಅಂತರ ಮತ್ತು ಹತ್ತಿರವಿದ್ದಾಗಿನ ಅಂತರವನ್ನು ತೆಗೆದುಕೊಂಡು ಅದರ ವ್ಯತ್ಯಾಸ ನೋಡಿದರೆ, ಕೇವಲ ಶೇ.2ರಷ್ಟು ಮಾತ್ರ ಬದಲಾಗುತ್ತದೆ. ಅಂದರೆ, ಖಗೋಳ ವಿಜ್ಞಾನದ ಮಾಪನದಲ್ಲಿ ಶೇ.೨ರಷ್ಟು ವ್ಯತ್ಯಾಸ ಅತೀ ಕಡಿಮೆಯದ್ದು. ಇದು ಭೂಮಿಗೆ ಭೌತಿಕವಾಗಿ ಅಥವಾ ಭೂಮಿಯ ವಾತಾವರಣಕ್ಕೆ ಯಾವ ಬದಲಾವಣೆಯನ್ನು ತರುವುದಿಲ್ಲ. ಈ ಅಂತರವು ಭೂಮಿಯಲ್ಲಿ ಬೇಸಿಗೆ ಕಾಲ, ಚಳಿ ಕಾಲ ಮತ್ತು ಮಳೆ ಕಾಲ ಎಂಬ ಯಾವ ಋತು ಬದಲಾವಣೆಯನ್ನು ಉಂಟುಮಾಡುವುದಿಲ್ಲ. ಹಾಗಾದರೆ, ಭೂಮಿಯ ಮೇಲೆ ಕಾಲಗಳು (seasons) ಹೇಗೆ ಉಂಟಾಗುತ್ತವೆ?

ಭೂಮಿಯ ಮೇಲೆ ವಿವಿಧ ಕಾಲಗಳು ಉಂಟಾಗಲು ಕಾರಣ ಭೂಮಿ ಸೂರ್ಯನಿಂದ ಹತ್ತಿರ ಮತ್ತು ದೂರ ಹೋಗುವುದರಿಂದಲ್ಲ ಬದಲಾಗಿ, ಭೂಮಿಯು ಸೂರ್ಯನ ಸುತ್ತ ತಿರುಗುತ್ತಿರುವ ಕಕ್ಷೆಯ ಲಂಭಕ್ಕೆ, ಭೂಮಿಯ ಅಕ್ಷವು 23.5 ಡಿಗ್ರಿ ಕೋನದಲ್ಲಿ ಬಾಗಿರುವುದರಿಂದ ಮತ್ತು ಭೂಮಿ ಸೂರ್ಯನ ಸುತ್ತು ಸುತ್ತುತ್ತಿದ್ದರೂ ಈ ಕೋನವು ಒಂದೇ ದಿಕ್ಕನಲ್ಲಿ ಮುಖ ಮಾಡಿರುತ್ತದೆ. ಈ ಕೋನದಿಂಲೇ, ಭೂಮಿಯ ಮೇಲೆ ಕಾಲಗಳು (seasons) ಬದಲಾಗುವುದು.

ಮತ್ತೊಂದು ವಿಸ್ಮಯದ ವಿಚಾರವೇಂದರೆ, ಉತ್ತರ ಗೋಳದಲ್ಲಿ ಬೇಸಿಗೆ ಕಾಲ ಇರುವಾಗ ಅಂದರೆ ನಮಗೆ ಬೇಸಿಗೆ ಕಾಲ ಇರುವಾಗ, ಭೂಮಿಯು ಸೂರ್ಯನಿಂದ ದೂರದಲ್ಲಿರುತ್ತಾನೆ! ಆದರೂ ನಮಗೆ ಬೇಸಿಗೆ ಕಾಲವಿರುತ್ತದೆ. ಏಕೆಂದರೆ, ಈ 23.5 ಡಿಗ್ರಿ ಕೋನವು ಆ ಸ್ಥಾನದಲ್ಲಿ ಸೂರ್ಯವಿರುವ ದಿಕ್ಕೆಗೆ ಬಾಗಿದ್ದು, ಉತ್ತರ ಗೋಳದಲ್ಲಿ ಸೂರ್ಯನ ಕಿರಣ ನೇರವಾಗಿ ಬೀಳುತ್ತಿರುತ್ತದೆ, ದಕ್ಷಿಣ ಗೋಳದಲ್ಲಿ ನೇರವಾಗಿ ಬೀಳದೆ, ಸೂರ್ಯನ ವಿರುದ್ಧ ದಿಕ್ಕಿನಲ್ಲಿ ಬಾಗಿರುತ್ತದೆ. ಆದುದರಿಂದ, ಉತ್ತರ ಗೋಳದಲ್ಲಿ ಬೇಸಿಗೆ ಕಾಲ, ದಕ್ಷಿಣ ಗೋಳದಲ್ಲಿ ಚಳಿಗಾಲ! ಹಾಗಾಗಿ, ಯಾವುದೇ ಸಂದರ್ಭದಲ್ಲಿ, ಭೂಮಿಯ 23.5 ಡಿಗ್ರಿ ಭಾಗುವಿಕೆಯ ಕಾರಣದಿಂದಾಗಿ, ಭೂಮಿಯ ಉತ್ತರ ಗೋಳದಲ್ಲಿ ಯಾವ ಕಾಲವಿರುವುದೋ, ದಕ್ಷಿಣ ಗೋಳದಲ್ಲಿ ಅದರ ವಿರುದ್ಧ ಕಾಲವಿರುತ್ತದೆ.


ಇದನ್ನೂ ಓದಿ: ಬೆಳ್ಳಿಚುಕ್ಕಿ: ಪಶ್ಚಿಮದಲ್ಲಿ ಹುಟ್ಟುವ ಸೂರ್ಯ ಮತ್ತು ಒಂದು ವರ್ಷಕ್ಕೂ ದೀರ್ಘವಾದ ಒಂದು ದಿನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...