Homeಮುಖಪುಟಬೆಳ್ಳಿ ಚುಕ್ಕಿ: ಭೂಮಿ ಸೂರ್ಯನಿಗೆ ಹತ್ತಿರವಿದ್ದಾಗ ನಮಗೆ ಬೇಸಿಗೆ ಕಾಲ ಬರುತ್ತದೆಯೇ?

ಬೆಳ್ಳಿ ಚುಕ್ಕಿ: ಭೂಮಿ ಸೂರ್ಯನಿಗೆ ಹತ್ತಿರವಿದ್ದಾಗ ನಮಗೆ ಬೇಸಿಗೆ ಕಾಲ ಬರುತ್ತದೆಯೇ?

- Advertisement -
- Advertisement -

ಒಂದು ಪ್ರಸಂಗ: ಅಂದು ಶನಿವಾರ. ಕಿರಣ್ ಮತ್ತು ಆರಿಫ್ ಇಬ್ಬರೂ ಅರ್ಧ ದಿನದ ಶಾಲೆ ಮುಗಿಸಿ, ಮನೆ ಕಡೆಗೆ ನಡೆದುಕೊಂಡು ಹೋಗುತ್ತಿರಬೇಕಾದರೆ, ಕಿರಣ್ ಆರಿಫ್‌ಗೆ ಹೀಗಂದ: ’ಲೇ, ಆರಿಫ್ ಏನೋ ಇಷ್ಟೊಂದ್ ಬಿಸಿಲಿದೆ ಇವತ್ತು. ಮೈಯಲ್ಲಾ ಚುರ್ ಚುರ್ ಅಂತಿದೆ’. ಅದಕ್ಕೆ ಆರಿಫ್, ’ಏ ಬೇಸಿಗೆ ಕಾಲದಲ್ಲಿ ಬಿಸಿಲು ಬರ್‌ದಿರಾ ಮಳೆನಾ ಬರತ್ತೆ’ ಅಂದಾ. ಕಿರಣ್: ’ಏ ಅದ್ ನನಗೂ ಗೊತ್ತೋ. ಬೇಸಿಗೆ ಕಾಲ ಇದು ಅಂತ. ಆದರೆ, ಅದೆಂಗೋ ಬೇಸಿಗೆ ಕಾಲದಲ್ಲಿ ಬಿಸ್ಲು, ಮಳೆಗಾಲದಲ್ಲಿ ಮಳೆ, ಚಳಿಗಾಲದಲ್ಲಿ ಚಳಿ ಬರತ್ತೆ? ನಂಗಂತೂ ಇದು ಅರ್ಥಾನೇ ಆಗಿಲ್ಲ. ಆರಿಫ್: ’ಏ ಬಿಡೋ, ನನಗೆ ಈ ವರ್ಷ ಕಾಲಗಳು ಅನ್ನೋ ಪಾಠ ಐತೆ. ಅದನ್ನ ಇನ್ನೂ ಮೇಷ್ಟ್ರು ಪಾಠ ಹೇಳಿಲ್ಲ. ಅವ್ರು ಪಾಠ ಮಾಡಿದ್ಮೇಲೆ ನಾನೇ ನಿನಗೆ ಹೇಳ್ತಿನಿ. ಆದ್ರೇ ಈ ಜೋಸೆಫ್ ಅವ್ನಲ್ಲಾ’. ಕಿರಣ್: ’ಯಾರೇಳು? ಅದೇ ಆ ಪಕ್ದೂರೋನ್ ಅಲ್ವಾ’. ಆರಿಫ್: ’ಹೌದೋ ಅವ್ನೇ, ಅವ್ನು ಒಂದ್ ಕಥೆ ಹೇಳ್ತಿದ್ದಾ.. ಭೂಮಿ ಸೂರ್ಯನ ಸುತ್ತ ಅಂಡಾಕಾರದಲ್ಲಿರುವ ಕಕ್ಷೆಯಲ್ಲಿ ಸುತ್ತುತ್ತಿರಬೇಕಾದ್ರೆ, ಸೂರ್ಯನಿಗೆ ಹತ್ತಿರ ಬಂದಾಗ ಬೇಸಿಗೆ ಕಾಲ, ದೂರ ಹೊದಾಗ ಮಳೆಗಾಲ ಅಂತ. ಅದೆ ಇರಬೇಕೆನೊ!’.

ಈ ಪ್ರಸಂಗದಲ್ಲಿ ಆರಿಫ್ ಹೇಳಿದ ಉತ್ತರ ನಿಮಗೆ ಸರಿ ಅನ್ನಿಸತ್ತಾ? ಭೂಮಿ ಸೂರ್ಯನಿಗೆ ಹತ್ತಿರವಿದ್ದಾಗ ಭೂಮಿಗೆ ಶಾಖವು ಹೆಚ್ಚಿರುತ್ತದೆ ಹಾಗಾಗಿ ಬೇಸಿಗೆ ಕಾಲ ಬರುತ್ತದೆ ಎಂಬ ಈ ವಿವರಣೆ ಸರಿಯೇ? ಅಥವಾ ತಪ್ಪೇ? ನಿಮಗೂ ಕೂತಹಲ ಹೆಚ್ಚುತ್ತಿರಬೇಕಲ್ಲವಾ?

ನಮಗೆಲ್ಲರಿಗೂ ತಿಳಿದಿರುವಹಾಗೆ ಭೂಮಿ ಸೂರ್ಯನ ಸುತ್ತ ಗೋಳಾಕಾರದಲ್ಲಿ ಸುತ್ತುತ್ತಿದೆ. ಅಲ್ಲದೇ, ಆ ಗೋಳಾಕಾರಕ್ಕೆ ಎರಡು ಕೇಂದ್ರ ಬಿಂದು ಇದ್ದು, ಸೂರ್ಯನು ಒಂದು ಕೇಂದ್ರ ಬಿಂದುವಿನಲ್ಲಿದ್ದಾನೆ ಎಂಬುದು ತಿಳಿದಿದೆ. ಹಾಗಿದ್ದಾಗ, ಭೂಮಿಯು ಸೂರ್ಯನ ಸುತ್ತ ಸುತ್ತವಾಗ, ವರ್ಷದ ಕೆಲವು ತಿಂಗಳು ಸೂರ್ಯನಿಂದ ದೂರ ಮತ್ತು ಕೆಲವು ತಿಂಗಳು ಸೂರ್ಯನ ಹತ್ತಿರ ಬರುವುದು ಸಹಜ. ಆದರೆ, ಭೂಮಿಯು ಸೂರ್ಯನಿಂದ ದೂರವಿದ್ದಾಗಿನ ಅಂತರ ಮತ್ತು ಹತ್ತಿರವಿದ್ದಾಗಿನ ಅಂತರವನ್ನು ತೆಗೆದುಕೊಂಡು ಅದರ ವ್ಯತ್ಯಾಸ ನೋಡಿದರೆ, ಕೇವಲ ಶೇ.2ರಷ್ಟು ಮಾತ್ರ ಬದಲಾಗುತ್ತದೆ. ಅಂದರೆ, ಖಗೋಳ ವಿಜ್ಞಾನದ ಮಾಪನದಲ್ಲಿ ಶೇ.೨ರಷ್ಟು ವ್ಯತ್ಯಾಸ ಅತೀ ಕಡಿಮೆಯದ್ದು. ಇದು ಭೂಮಿಗೆ ಭೌತಿಕವಾಗಿ ಅಥವಾ ಭೂಮಿಯ ವಾತಾವರಣಕ್ಕೆ ಯಾವ ಬದಲಾವಣೆಯನ್ನು ತರುವುದಿಲ್ಲ. ಈ ಅಂತರವು ಭೂಮಿಯಲ್ಲಿ ಬೇಸಿಗೆ ಕಾಲ, ಚಳಿ ಕಾಲ ಮತ್ತು ಮಳೆ ಕಾಲ ಎಂಬ ಯಾವ ಋತು ಬದಲಾವಣೆಯನ್ನು ಉಂಟುಮಾಡುವುದಿಲ್ಲ. ಹಾಗಾದರೆ, ಭೂಮಿಯ ಮೇಲೆ ಕಾಲಗಳು (seasons) ಹೇಗೆ ಉಂಟಾಗುತ್ತವೆ?

ಭೂಮಿಯ ಮೇಲೆ ವಿವಿಧ ಕಾಲಗಳು ಉಂಟಾಗಲು ಕಾರಣ ಭೂಮಿ ಸೂರ್ಯನಿಂದ ಹತ್ತಿರ ಮತ್ತು ದೂರ ಹೋಗುವುದರಿಂದಲ್ಲ ಬದಲಾಗಿ, ಭೂಮಿಯು ಸೂರ್ಯನ ಸುತ್ತ ತಿರುಗುತ್ತಿರುವ ಕಕ್ಷೆಯ ಲಂಭಕ್ಕೆ, ಭೂಮಿಯ ಅಕ್ಷವು 23.5 ಡಿಗ್ರಿ ಕೋನದಲ್ಲಿ ಬಾಗಿರುವುದರಿಂದ ಮತ್ತು ಭೂಮಿ ಸೂರ್ಯನ ಸುತ್ತು ಸುತ್ತುತ್ತಿದ್ದರೂ ಈ ಕೋನವು ಒಂದೇ ದಿಕ್ಕನಲ್ಲಿ ಮುಖ ಮಾಡಿರುತ್ತದೆ. ಈ ಕೋನದಿಂಲೇ, ಭೂಮಿಯ ಮೇಲೆ ಕಾಲಗಳು (seasons) ಬದಲಾಗುವುದು.

ಮತ್ತೊಂದು ವಿಸ್ಮಯದ ವಿಚಾರವೇಂದರೆ, ಉತ್ತರ ಗೋಳದಲ್ಲಿ ಬೇಸಿಗೆ ಕಾಲ ಇರುವಾಗ ಅಂದರೆ ನಮಗೆ ಬೇಸಿಗೆ ಕಾಲ ಇರುವಾಗ, ಭೂಮಿಯು ಸೂರ್ಯನಿಂದ ದೂರದಲ್ಲಿರುತ್ತಾನೆ! ಆದರೂ ನಮಗೆ ಬೇಸಿಗೆ ಕಾಲವಿರುತ್ತದೆ. ಏಕೆಂದರೆ, ಈ 23.5 ಡಿಗ್ರಿ ಕೋನವು ಆ ಸ್ಥಾನದಲ್ಲಿ ಸೂರ್ಯವಿರುವ ದಿಕ್ಕೆಗೆ ಬಾಗಿದ್ದು, ಉತ್ತರ ಗೋಳದಲ್ಲಿ ಸೂರ್ಯನ ಕಿರಣ ನೇರವಾಗಿ ಬೀಳುತ್ತಿರುತ್ತದೆ, ದಕ್ಷಿಣ ಗೋಳದಲ್ಲಿ ನೇರವಾಗಿ ಬೀಳದೆ, ಸೂರ್ಯನ ವಿರುದ್ಧ ದಿಕ್ಕಿನಲ್ಲಿ ಬಾಗಿರುತ್ತದೆ. ಆದುದರಿಂದ, ಉತ್ತರ ಗೋಳದಲ್ಲಿ ಬೇಸಿಗೆ ಕಾಲ, ದಕ್ಷಿಣ ಗೋಳದಲ್ಲಿ ಚಳಿಗಾಲ! ಹಾಗಾಗಿ, ಯಾವುದೇ ಸಂದರ್ಭದಲ್ಲಿ, ಭೂಮಿಯ 23.5 ಡಿಗ್ರಿ ಭಾಗುವಿಕೆಯ ಕಾರಣದಿಂದಾಗಿ, ಭೂಮಿಯ ಉತ್ತರ ಗೋಳದಲ್ಲಿ ಯಾವ ಕಾಲವಿರುವುದೋ, ದಕ್ಷಿಣ ಗೋಳದಲ್ಲಿ ಅದರ ವಿರುದ್ಧ ಕಾಲವಿರುತ್ತದೆ.


ಇದನ್ನೂ ಓದಿ: ಬೆಳ್ಳಿಚುಕ್ಕಿ: ಪಶ್ಚಿಮದಲ್ಲಿ ಹುಟ್ಟುವ ಸೂರ್ಯ ಮತ್ತು ಒಂದು ವರ್ಷಕ್ಕೂ ದೀರ್ಘವಾದ ಒಂದು ದಿನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...