Homeಮುಖಪುಟಬೆಳ್ಳಿ ಚುಕ್ಕಿ: ಭೂಮಿ ಸೂರ್ಯನಿಗೆ ಹತ್ತಿರವಿದ್ದಾಗ ನಮಗೆ ಬೇಸಿಗೆ ಕಾಲ ಬರುತ್ತದೆಯೇ?

ಬೆಳ್ಳಿ ಚುಕ್ಕಿ: ಭೂಮಿ ಸೂರ್ಯನಿಗೆ ಹತ್ತಿರವಿದ್ದಾಗ ನಮಗೆ ಬೇಸಿಗೆ ಕಾಲ ಬರುತ್ತದೆಯೇ?

- Advertisement -
- Advertisement -

ಒಂದು ಪ್ರಸಂಗ: ಅಂದು ಶನಿವಾರ. ಕಿರಣ್ ಮತ್ತು ಆರಿಫ್ ಇಬ್ಬರೂ ಅರ್ಧ ದಿನದ ಶಾಲೆ ಮುಗಿಸಿ, ಮನೆ ಕಡೆಗೆ ನಡೆದುಕೊಂಡು ಹೋಗುತ್ತಿರಬೇಕಾದರೆ, ಕಿರಣ್ ಆರಿಫ್‌ಗೆ ಹೀಗಂದ: ’ಲೇ, ಆರಿಫ್ ಏನೋ ಇಷ್ಟೊಂದ್ ಬಿಸಿಲಿದೆ ಇವತ್ತು. ಮೈಯಲ್ಲಾ ಚುರ್ ಚುರ್ ಅಂತಿದೆ’. ಅದಕ್ಕೆ ಆರಿಫ್, ’ಏ ಬೇಸಿಗೆ ಕಾಲದಲ್ಲಿ ಬಿಸಿಲು ಬರ್‌ದಿರಾ ಮಳೆನಾ ಬರತ್ತೆ’ ಅಂದಾ. ಕಿರಣ್: ’ಏ ಅದ್ ನನಗೂ ಗೊತ್ತೋ. ಬೇಸಿಗೆ ಕಾಲ ಇದು ಅಂತ. ಆದರೆ, ಅದೆಂಗೋ ಬೇಸಿಗೆ ಕಾಲದಲ್ಲಿ ಬಿಸ್ಲು, ಮಳೆಗಾಲದಲ್ಲಿ ಮಳೆ, ಚಳಿಗಾಲದಲ್ಲಿ ಚಳಿ ಬರತ್ತೆ? ನಂಗಂತೂ ಇದು ಅರ್ಥಾನೇ ಆಗಿಲ್ಲ. ಆರಿಫ್: ’ಏ ಬಿಡೋ, ನನಗೆ ಈ ವರ್ಷ ಕಾಲಗಳು ಅನ್ನೋ ಪಾಠ ಐತೆ. ಅದನ್ನ ಇನ್ನೂ ಮೇಷ್ಟ್ರು ಪಾಠ ಹೇಳಿಲ್ಲ. ಅವ್ರು ಪಾಠ ಮಾಡಿದ್ಮೇಲೆ ನಾನೇ ನಿನಗೆ ಹೇಳ್ತಿನಿ. ಆದ್ರೇ ಈ ಜೋಸೆಫ್ ಅವ್ನಲ್ಲಾ’. ಕಿರಣ್: ’ಯಾರೇಳು? ಅದೇ ಆ ಪಕ್ದೂರೋನ್ ಅಲ್ವಾ’. ಆರಿಫ್: ’ಹೌದೋ ಅವ್ನೇ, ಅವ್ನು ಒಂದ್ ಕಥೆ ಹೇಳ್ತಿದ್ದಾ.. ಭೂಮಿ ಸೂರ್ಯನ ಸುತ್ತ ಅಂಡಾಕಾರದಲ್ಲಿರುವ ಕಕ್ಷೆಯಲ್ಲಿ ಸುತ್ತುತ್ತಿರಬೇಕಾದ್ರೆ, ಸೂರ್ಯನಿಗೆ ಹತ್ತಿರ ಬಂದಾಗ ಬೇಸಿಗೆ ಕಾಲ, ದೂರ ಹೊದಾಗ ಮಳೆಗಾಲ ಅಂತ. ಅದೆ ಇರಬೇಕೆನೊ!’.

ಈ ಪ್ರಸಂಗದಲ್ಲಿ ಆರಿಫ್ ಹೇಳಿದ ಉತ್ತರ ನಿಮಗೆ ಸರಿ ಅನ್ನಿಸತ್ತಾ? ಭೂಮಿ ಸೂರ್ಯನಿಗೆ ಹತ್ತಿರವಿದ್ದಾಗ ಭೂಮಿಗೆ ಶಾಖವು ಹೆಚ್ಚಿರುತ್ತದೆ ಹಾಗಾಗಿ ಬೇಸಿಗೆ ಕಾಲ ಬರುತ್ತದೆ ಎಂಬ ಈ ವಿವರಣೆ ಸರಿಯೇ? ಅಥವಾ ತಪ್ಪೇ? ನಿಮಗೂ ಕೂತಹಲ ಹೆಚ್ಚುತ್ತಿರಬೇಕಲ್ಲವಾ?

ನಮಗೆಲ್ಲರಿಗೂ ತಿಳಿದಿರುವಹಾಗೆ ಭೂಮಿ ಸೂರ್ಯನ ಸುತ್ತ ಗೋಳಾಕಾರದಲ್ಲಿ ಸುತ್ತುತ್ತಿದೆ. ಅಲ್ಲದೇ, ಆ ಗೋಳಾಕಾರಕ್ಕೆ ಎರಡು ಕೇಂದ್ರ ಬಿಂದು ಇದ್ದು, ಸೂರ್ಯನು ಒಂದು ಕೇಂದ್ರ ಬಿಂದುವಿನಲ್ಲಿದ್ದಾನೆ ಎಂಬುದು ತಿಳಿದಿದೆ. ಹಾಗಿದ್ದಾಗ, ಭೂಮಿಯು ಸೂರ್ಯನ ಸುತ್ತ ಸುತ್ತವಾಗ, ವರ್ಷದ ಕೆಲವು ತಿಂಗಳು ಸೂರ್ಯನಿಂದ ದೂರ ಮತ್ತು ಕೆಲವು ತಿಂಗಳು ಸೂರ್ಯನ ಹತ್ತಿರ ಬರುವುದು ಸಹಜ. ಆದರೆ, ಭೂಮಿಯು ಸೂರ್ಯನಿಂದ ದೂರವಿದ್ದಾಗಿನ ಅಂತರ ಮತ್ತು ಹತ್ತಿರವಿದ್ದಾಗಿನ ಅಂತರವನ್ನು ತೆಗೆದುಕೊಂಡು ಅದರ ವ್ಯತ್ಯಾಸ ನೋಡಿದರೆ, ಕೇವಲ ಶೇ.2ರಷ್ಟು ಮಾತ್ರ ಬದಲಾಗುತ್ತದೆ. ಅಂದರೆ, ಖಗೋಳ ವಿಜ್ಞಾನದ ಮಾಪನದಲ್ಲಿ ಶೇ.೨ರಷ್ಟು ವ್ಯತ್ಯಾಸ ಅತೀ ಕಡಿಮೆಯದ್ದು. ಇದು ಭೂಮಿಗೆ ಭೌತಿಕವಾಗಿ ಅಥವಾ ಭೂಮಿಯ ವಾತಾವರಣಕ್ಕೆ ಯಾವ ಬದಲಾವಣೆಯನ್ನು ತರುವುದಿಲ್ಲ. ಈ ಅಂತರವು ಭೂಮಿಯಲ್ಲಿ ಬೇಸಿಗೆ ಕಾಲ, ಚಳಿ ಕಾಲ ಮತ್ತು ಮಳೆ ಕಾಲ ಎಂಬ ಯಾವ ಋತು ಬದಲಾವಣೆಯನ್ನು ಉಂಟುಮಾಡುವುದಿಲ್ಲ. ಹಾಗಾದರೆ, ಭೂಮಿಯ ಮೇಲೆ ಕಾಲಗಳು (seasons) ಹೇಗೆ ಉಂಟಾಗುತ್ತವೆ?

ಭೂಮಿಯ ಮೇಲೆ ವಿವಿಧ ಕಾಲಗಳು ಉಂಟಾಗಲು ಕಾರಣ ಭೂಮಿ ಸೂರ್ಯನಿಂದ ಹತ್ತಿರ ಮತ್ತು ದೂರ ಹೋಗುವುದರಿಂದಲ್ಲ ಬದಲಾಗಿ, ಭೂಮಿಯು ಸೂರ್ಯನ ಸುತ್ತ ತಿರುಗುತ್ತಿರುವ ಕಕ್ಷೆಯ ಲಂಭಕ್ಕೆ, ಭೂಮಿಯ ಅಕ್ಷವು 23.5 ಡಿಗ್ರಿ ಕೋನದಲ್ಲಿ ಬಾಗಿರುವುದರಿಂದ ಮತ್ತು ಭೂಮಿ ಸೂರ್ಯನ ಸುತ್ತು ಸುತ್ತುತ್ತಿದ್ದರೂ ಈ ಕೋನವು ಒಂದೇ ದಿಕ್ಕನಲ್ಲಿ ಮುಖ ಮಾಡಿರುತ್ತದೆ. ಈ ಕೋನದಿಂಲೇ, ಭೂಮಿಯ ಮೇಲೆ ಕಾಲಗಳು (seasons) ಬದಲಾಗುವುದು.

ಮತ್ತೊಂದು ವಿಸ್ಮಯದ ವಿಚಾರವೇಂದರೆ, ಉತ್ತರ ಗೋಳದಲ್ಲಿ ಬೇಸಿಗೆ ಕಾಲ ಇರುವಾಗ ಅಂದರೆ ನಮಗೆ ಬೇಸಿಗೆ ಕಾಲ ಇರುವಾಗ, ಭೂಮಿಯು ಸೂರ್ಯನಿಂದ ದೂರದಲ್ಲಿರುತ್ತಾನೆ! ಆದರೂ ನಮಗೆ ಬೇಸಿಗೆ ಕಾಲವಿರುತ್ತದೆ. ಏಕೆಂದರೆ, ಈ 23.5 ಡಿಗ್ರಿ ಕೋನವು ಆ ಸ್ಥಾನದಲ್ಲಿ ಸೂರ್ಯವಿರುವ ದಿಕ್ಕೆಗೆ ಬಾಗಿದ್ದು, ಉತ್ತರ ಗೋಳದಲ್ಲಿ ಸೂರ್ಯನ ಕಿರಣ ನೇರವಾಗಿ ಬೀಳುತ್ತಿರುತ್ತದೆ, ದಕ್ಷಿಣ ಗೋಳದಲ್ಲಿ ನೇರವಾಗಿ ಬೀಳದೆ, ಸೂರ್ಯನ ವಿರುದ್ಧ ದಿಕ್ಕಿನಲ್ಲಿ ಬಾಗಿರುತ್ತದೆ. ಆದುದರಿಂದ, ಉತ್ತರ ಗೋಳದಲ್ಲಿ ಬೇಸಿಗೆ ಕಾಲ, ದಕ್ಷಿಣ ಗೋಳದಲ್ಲಿ ಚಳಿಗಾಲ! ಹಾಗಾಗಿ, ಯಾವುದೇ ಸಂದರ್ಭದಲ್ಲಿ, ಭೂಮಿಯ 23.5 ಡಿಗ್ರಿ ಭಾಗುವಿಕೆಯ ಕಾರಣದಿಂದಾಗಿ, ಭೂಮಿಯ ಉತ್ತರ ಗೋಳದಲ್ಲಿ ಯಾವ ಕಾಲವಿರುವುದೋ, ದಕ್ಷಿಣ ಗೋಳದಲ್ಲಿ ಅದರ ವಿರುದ್ಧ ಕಾಲವಿರುತ್ತದೆ.


ಇದನ್ನೂ ಓದಿ: ಬೆಳ್ಳಿಚುಕ್ಕಿ: ಪಶ್ಚಿಮದಲ್ಲಿ ಹುಟ್ಟುವ ಸೂರ್ಯ ಮತ್ತು ಒಂದು ವರ್ಷಕ್ಕೂ ದೀರ್ಘವಾದ ಒಂದು ದಿನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...