Homeಮುಖಪುಟಬೆಳ್ಳಿ ಚುಕ್ಕಿ: ಭೂಮಿ ಸೂರ್ಯನಿಗೆ ಹತ್ತಿರವಿದ್ದಾಗ ನಮಗೆ ಬೇಸಿಗೆ ಕಾಲ ಬರುತ್ತದೆಯೇ?

ಬೆಳ್ಳಿ ಚುಕ್ಕಿ: ಭೂಮಿ ಸೂರ್ಯನಿಗೆ ಹತ್ತಿರವಿದ್ದಾಗ ನಮಗೆ ಬೇಸಿಗೆ ಕಾಲ ಬರುತ್ತದೆಯೇ?

- Advertisement -
- Advertisement -

ಒಂದು ಪ್ರಸಂಗ: ಅಂದು ಶನಿವಾರ. ಕಿರಣ್ ಮತ್ತು ಆರಿಫ್ ಇಬ್ಬರೂ ಅರ್ಧ ದಿನದ ಶಾಲೆ ಮುಗಿಸಿ, ಮನೆ ಕಡೆಗೆ ನಡೆದುಕೊಂಡು ಹೋಗುತ್ತಿರಬೇಕಾದರೆ, ಕಿರಣ್ ಆರಿಫ್‌ಗೆ ಹೀಗಂದ: ’ಲೇ, ಆರಿಫ್ ಏನೋ ಇಷ್ಟೊಂದ್ ಬಿಸಿಲಿದೆ ಇವತ್ತು. ಮೈಯಲ್ಲಾ ಚುರ್ ಚುರ್ ಅಂತಿದೆ’. ಅದಕ್ಕೆ ಆರಿಫ್, ’ಏ ಬೇಸಿಗೆ ಕಾಲದಲ್ಲಿ ಬಿಸಿಲು ಬರ್‌ದಿರಾ ಮಳೆನಾ ಬರತ್ತೆ’ ಅಂದಾ. ಕಿರಣ್: ’ಏ ಅದ್ ನನಗೂ ಗೊತ್ತೋ. ಬೇಸಿಗೆ ಕಾಲ ಇದು ಅಂತ. ಆದರೆ, ಅದೆಂಗೋ ಬೇಸಿಗೆ ಕಾಲದಲ್ಲಿ ಬಿಸ್ಲು, ಮಳೆಗಾಲದಲ್ಲಿ ಮಳೆ, ಚಳಿಗಾಲದಲ್ಲಿ ಚಳಿ ಬರತ್ತೆ? ನಂಗಂತೂ ಇದು ಅರ್ಥಾನೇ ಆಗಿಲ್ಲ. ಆರಿಫ್: ’ಏ ಬಿಡೋ, ನನಗೆ ಈ ವರ್ಷ ಕಾಲಗಳು ಅನ್ನೋ ಪಾಠ ಐತೆ. ಅದನ್ನ ಇನ್ನೂ ಮೇಷ್ಟ್ರು ಪಾಠ ಹೇಳಿಲ್ಲ. ಅವ್ರು ಪಾಠ ಮಾಡಿದ್ಮೇಲೆ ನಾನೇ ನಿನಗೆ ಹೇಳ್ತಿನಿ. ಆದ್ರೇ ಈ ಜೋಸೆಫ್ ಅವ್ನಲ್ಲಾ’. ಕಿರಣ್: ’ಯಾರೇಳು? ಅದೇ ಆ ಪಕ್ದೂರೋನ್ ಅಲ್ವಾ’. ಆರಿಫ್: ’ಹೌದೋ ಅವ್ನೇ, ಅವ್ನು ಒಂದ್ ಕಥೆ ಹೇಳ್ತಿದ್ದಾ.. ಭೂಮಿ ಸೂರ್ಯನ ಸುತ್ತ ಅಂಡಾಕಾರದಲ್ಲಿರುವ ಕಕ್ಷೆಯಲ್ಲಿ ಸುತ್ತುತ್ತಿರಬೇಕಾದ್ರೆ, ಸೂರ್ಯನಿಗೆ ಹತ್ತಿರ ಬಂದಾಗ ಬೇಸಿಗೆ ಕಾಲ, ದೂರ ಹೊದಾಗ ಮಳೆಗಾಲ ಅಂತ. ಅದೆ ಇರಬೇಕೆನೊ!’.

ಈ ಪ್ರಸಂಗದಲ್ಲಿ ಆರಿಫ್ ಹೇಳಿದ ಉತ್ತರ ನಿಮಗೆ ಸರಿ ಅನ್ನಿಸತ್ತಾ? ಭೂಮಿ ಸೂರ್ಯನಿಗೆ ಹತ್ತಿರವಿದ್ದಾಗ ಭೂಮಿಗೆ ಶಾಖವು ಹೆಚ್ಚಿರುತ್ತದೆ ಹಾಗಾಗಿ ಬೇಸಿಗೆ ಕಾಲ ಬರುತ್ತದೆ ಎಂಬ ಈ ವಿವರಣೆ ಸರಿಯೇ? ಅಥವಾ ತಪ್ಪೇ? ನಿಮಗೂ ಕೂತಹಲ ಹೆಚ್ಚುತ್ತಿರಬೇಕಲ್ಲವಾ?

ನಮಗೆಲ್ಲರಿಗೂ ತಿಳಿದಿರುವಹಾಗೆ ಭೂಮಿ ಸೂರ್ಯನ ಸುತ್ತ ಗೋಳಾಕಾರದಲ್ಲಿ ಸುತ್ತುತ್ತಿದೆ. ಅಲ್ಲದೇ, ಆ ಗೋಳಾಕಾರಕ್ಕೆ ಎರಡು ಕೇಂದ್ರ ಬಿಂದು ಇದ್ದು, ಸೂರ್ಯನು ಒಂದು ಕೇಂದ್ರ ಬಿಂದುವಿನಲ್ಲಿದ್ದಾನೆ ಎಂಬುದು ತಿಳಿದಿದೆ. ಹಾಗಿದ್ದಾಗ, ಭೂಮಿಯು ಸೂರ್ಯನ ಸುತ್ತ ಸುತ್ತವಾಗ, ವರ್ಷದ ಕೆಲವು ತಿಂಗಳು ಸೂರ್ಯನಿಂದ ದೂರ ಮತ್ತು ಕೆಲವು ತಿಂಗಳು ಸೂರ್ಯನ ಹತ್ತಿರ ಬರುವುದು ಸಹಜ. ಆದರೆ, ಭೂಮಿಯು ಸೂರ್ಯನಿಂದ ದೂರವಿದ್ದಾಗಿನ ಅಂತರ ಮತ್ತು ಹತ್ತಿರವಿದ್ದಾಗಿನ ಅಂತರವನ್ನು ತೆಗೆದುಕೊಂಡು ಅದರ ವ್ಯತ್ಯಾಸ ನೋಡಿದರೆ, ಕೇವಲ ಶೇ.2ರಷ್ಟು ಮಾತ್ರ ಬದಲಾಗುತ್ತದೆ. ಅಂದರೆ, ಖಗೋಳ ವಿಜ್ಞಾನದ ಮಾಪನದಲ್ಲಿ ಶೇ.೨ರಷ್ಟು ವ್ಯತ್ಯಾಸ ಅತೀ ಕಡಿಮೆಯದ್ದು. ಇದು ಭೂಮಿಗೆ ಭೌತಿಕವಾಗಿ ಅಥವಾ ಭೂಮಿಯ ವಾತಾವರಣಕ್ಕೆ ಯಾವ ಬದಲಾವಣೆಯನ್ನು ತರುವುದಿಲ್ಲ. ಈ ಅಂತರವು ಭೂಮಿಯಲ್ಲಿ ಬೇಸಿಗೆ ಕಾಲ, ಚಳಿ ಕಾಲ ಮತ್ತು ಮಳೆ ಕಾಲ ಎಂಬ ಯಾವ ಋತು ಬದಲಾವಣೆಯನ್ನು ಉಂಟುಮಾಡುವುದಿಲ್ಲ. ಹಾಗಾದರೆ, ಭೂಮಿಯ ಮೇಲೆ ಕಾಲಗಳು (seasons) ಹೇಗೆ ಉಂಟಾಗುತ್ತವೆ?

ಭೂಮಿಯ ಮೇಲೆ ವಿವಿಧ ಕಾಲಗಳು ಉಂಟಾಗಲು ಕಾರಣ ಭೂಮಿ ಸೂರ್ಯನಿಂದ ಹತ್ತಿರ ಮತ್ತು ದೂರ ಹೋಗುವುದರಿಂದಲ್ಲ ಬದಲಾಗಿ, ಭೂಮಿಯು ಸೂರ್ಯನ ಸುತ್ತ ತಿರುಗುತ್ತಿರುವ ಕಕ್ಷೆಯ ಲಂಭಕ್ಕೆ, ಭೂಮಿಯ ಅಕ್ಷವು 23.5 ಡಿಗ್ರಿ ಕೋನದಲ್ಲಿ ಬಾಗಿರುವುದರಿಂದ ಮತ್ತು ಭೂಮಿ ಸೂರ್ಯನ ಸುತ್ತು ಸುತ್ತುತ್ತಿದ್ದರೂ ಈ ಕೋನವು ಒಂದೇ ದಿಕ್ಕನಲ್ಲಿ ಮುಖ ಮಾಡಿರುತ್ತದೆ. ಈ ಕೋನದಿಂಲೇ, ಭೂಮಿಯ ಮೇಲೆ ಕಾಲಗಳು (seasons) ಬದಲಾಗುವುದು.

ಮತ್ತೊಂದು ವಿಸ್ಮಯದ ವಿಚಾರವೇಂದರೆ, ಉತ್ತರ ಗೋಳದಲ್ಲಿ ಬೇಸಿಗೆ ಕಾಲ ಇರುವಾಗ ಅಂದರೆ ನಮಗೆ ಬೇಸಿಗೆ ಕಾಲ ಇರುವಾಗ, ಭೂಮಿಯು ಸೂರ್ಯನಿಂದ ದೂರದಲ್ಲಿರುತ್ತಾನೆ! ಆದರೂ ನಮಗೆ ಬೇಸಿಗೆ ಕಾಲವಿರುತ್ತದೆ. ಏಕೆಂದರೆ, ಈ 23.5 ಡಿಗ್ರಿ ಕೋನವು ಆ ಸ್ಥಾನದಲ್ಲಿ ಸೂರ್ಯವಿರುವ ದಿಕ್ಕೆಗೆ ಬಾಗಿದ್ದು, ಉತ್ತರ ಗೋಳದಲ್ಲಿ ಸೂರ್ಯನ ಕಿರಣ ನೇರವಾಗಿ ಬೀಳುತ್ತಿರುತ್ತದೆ, ದಕ್ಷಿಣ ಗೋಳದಲ್ಲಿ ನೇರವಾಗಿ ಬೀಳದೆ, ಸೂರ್ಯನ ವಿರುದ್ಧ ದಿಕ್ಕಿನಲ್ಲಿ ಬಾಗಿರುತ್ತದೆ. ಆದುದರಿಂದ, ಉತ್ತರ ಗೋಳದಲ್ಲಿ ಬೇಸಿಗೆ ಕಾಲ, ದಕ್ಷಿಣ ಗೋಳದಲ್ಲಿ ಚಳಿಗಾಲ! ಹಾಗಾಗಿ, ಯಾವುದೇ ಸಂದರ್ಭದಲ್ಲಿ, ಭೂಮಿಯ 23.5 ಡಿಗ್ರಿ ಭಾಗುವಿಕೆಯ ಕಾರಣದಿಂದಾಗಿ, ಭೂಮಿಯ ಉತ್ತರ ಗೋಳದಲ್ಲಿ ಯಾವ ಕಾಲವಿರುವುದೋ, ದಕ್ಷಿಣ ಗೋಳದಲ್ಲಿ ಅದರ ವಿರುದ್ಧ ಕಾಲವಿರುತ್ತದೆ.


ಇದನ್ನೂ ಓದಿ: ಬೆಳ್ಳಿಚುಕ್ಕಿ: ಪಶ್ಚಿಮದಲ್ಲಿ ಹುಟ್ಟುವ ಸೂರ್ಯ ಮತ್ತು ಒಂದು ವರ್ಷಕ್ಕೂ ದೀರ್ಘವಾದ ಒಂದು ದಿನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...