Homeಮುಖಪುಟಬೆಳ್ಳಿ ಚುಕ್ಕಿ: ಭೂಮಿ ಸೂರ್ಯನಿಗೆ ಹತ್ತಿರವಿದ್ದಾಗ ನಮಗೆ ಬೇಸಿಗೆ ಕಾಲ ಬರುತ್ತದೆಯೇ?

ಬೆಳ್ಳಿ ಚುಕ್ಕಿ: ಭೂಮಿ ಸೂರ್ಯನಿಗೆ ಹತ್ತಿರವಿದ್ದಾಗ ನಮಗೆ ಬೇಸಿಗೆ ಕಾಲ ಬರುತ್ತದೆಯೇ?

- Advertisement -
- Advertisement -

ಒಂದು ಪ್ರಸಂಗ: ಅಂದು ಶನಿವಾರ. ಕಿರಣ್ ಮತ್ತು ಆರಿಫ್ ಇಬ್ಬರೂ ಅರ್ಧ ದಿನದ ಶಾಲೆ ಮುಗಿಸಿ, ಮನೆ ಕಡೆಗೆ ನಡೆದುಕೊಂಡು ಹೋಗುತ್ತಿರಬೇಕಾದರೆ, ಕಿರಣ್ ಆರಿಫ್‌ಗೆ ಹೀಗಂದ: ’ಲೇ, ಆರಿಫ್ ಏನೋ ಇಷ್ಟೊಂದ್ ಬಿಸಿಲಿದೆ ಇವತ್ತು. ಮೈಯಲ್ಲಾ ಚುರ್ ಚುರ್ ಅಂತಿದೆ’. ಅದಕ್ಕೆ ಆರಿಫ್, ’ಏ ಬೇಸಿಗೆ ಕಾಲದಲ್ಲಿ ಬಿಸಿಲು ಬರ್‌ದಿರಾ ಮಳೆನಾ ಬರತ್ತೆ’ ಅಂದಾ. ಕಿರಣ್: ’ಏ ಅದ್ ನನಗೂ ಗೊತ್ತೋ. ಬೇಸಿಗೆ ಕಾಲ ಇದು ಅಂತ. ಆದರೆ, ಅದೆಂಗೋ ಬೇಸಿಗೆ ಕಾಲದಲ್ಲಿ ಬಿಸ್ಲು, ಮಳೆಗಾಲದಲ್ಲಿ ಮಳೆ, ಚಳಿಗಾಲದಲ್ಲಿ ಚಳಿ ಬರತ್ತೆ? ನಂಗಂತೂ ಇದು ಅರ್ಥಾನೇ ಆಗಿಲ್ಲ. ಆರಿಫ್: ’ಏ ಬಿಡೋ, ನನಗೆ ಈ ವರ್ಷ ಕಾಲಗಳು ಅನ್ನೋ ಪಾಠ ಐತೆ. ಅದನ್ನ ಇನ್ನೂ ಮೇಷ್ಟ್ರು ಪಾಠ ಹೇಳಿಲ್ಲ. ಅವ್ರು ಪಾಠ ಮಾಡಿದ್ಮೇಲೆ ನಾನೇ ನಿನಗೆ ಹೇಳ್ತಿನಿ. ಆದ್ರೇ ಈ ಜೋಸೆಫ್ ಅವ್ನಲ್ಲಾ’. ಕಿರಣ್: ’ಯಾರೇಳು? ಅದೇ ಆ ಪಕ್ದೂರೋನ್ ಅಲ್ವಾ’. ಆರಿಫ್: ’ಹೌದೋ ಅವ್ನೇ, ಅವ್ನು ಒಂದ್ ಕಥೆ ಹೇಳ್ತಿದ್ದಾ.. ಭೂಮಿ ಸೂರ್ಯನ ಸುತ್ತ ಅಂಡಾಕಾರದಲ್ಲಿರುವ ಕಕ್ಷೆಯಲ್ಲಿ ಸುತ್ತುತ್ತಿರಬೇಕಾದ್ರೆ, ಸೂರ್ಯನಿಗೆ ಹತ್ತಿರ ಬಂದಾಗ ಬೇಸಿಗೆ ಕಾಲ, ದೂರ ಹೊದಾಗ ಮಳೆಗಾಲ ಅಂತ. ಅದೆ ಇರಬೇಕೆನೊ!’.

ಈ ಪ್ರಸಂಗದಲ್ಲಿ ಆರಿಫ್ ಹೇಳಿದ ಉತ್ತರ ನಿಮಗೆ ಸರಿ ಅನ್ನಿಸತ್ತಾ? ಭೂಮಿ ಸೂರ್ಯನಿಗೆ ಹತ್ತಿರವಿದ್ದಾಗ ಭೂಮಿಗೆ ಶಾಖವು ಹೆಚ್ಚಿರುತ್ತದೆ ಹಾಗಾಗಿ ಬೇಸಿಗೆ ಕಾಲ ಬರುತ್ತದೆ ಎಂಬ ಈ ವಿವರಣೆ ಸರಿಯೇ? ಅಥವಾ ತಪ್ಪೇ? ನಿಮಗೂ ಕೂತಹಲ ಹೆಚ್ಚುತ್ತಿರಬೇಕಲ್ಲವಾ?

ನಮಗೆಲ್ಲರಿಗೂ ತಿಳಿದಿರುವಹಾಗೆ ಭೂಮಿ ಸೂರ್ಯನ ಸುತ್ತ ಗೋಳಾಕಾರದಲ್ಲಿ ಸುತ್ತುತ್ತಿದೆ. ಅಲ್ಲದೇ, ಆ ಗೋಳಾಕಾರಕ್ಕೆ ಎರಡು ಕೇಂದ್ರ ಬಿಂದು ಇದ್ದು, ಸೂರ್ಯನು ಒಂದು ಕೇಂದ್ರ ಬಿಂದುವಿನಲ್ಲಿದ್ದಾನೆ ಎಂಬುದು ತಿಳಿದಿದೆ. ಹಾಗಿದ್ದಾಗ, ಭೂಮಿಯು ಸೂರ್ಯನ ಸುತ್ತ ಸುತ್ತವಾಗ, ವರ್ಷದ ಕೆಲವು ತಿಂಗಳು ಸೂರ್ಯನಿಂದ ದೂರ ಮತ್ತು ಕೆಲವು ತಿಂಗಳು ಸೂರ್ಯನ ಹತ್ತಿರ ಬರುವುದು ಸಹಜ. ಆದರೆ, ಭೂಮಿಯು ಸೂರ್ಯನಿಂದ ದೂರವಿದ್ದಾಗಿನ ಅಂತರ ಮತ್ತು ಹತ್ತಿರವಿದ್ದಾಗಿನ ಅಂತರವನ್ನು ತೆಗೆದುಕೊಂಡು ಅದರ ವ್ಯತ್ಯಾಸ ನೋಡಿದರೆ, ಕೇವಲ ಶೇ.2ರಷ್ಟು ಮಾತ್ರ ಬದಲಾಗುತ್ತದೆ. ಅಂದರೆ, ಖಗೋಳ ವಿಜ್ಞಾನದ ಮಾಪನದಲ್ಲಿ ಶೇ.೨ರಷ್ಟು ವ್ಯತ್ಯಾಸ ಅತೀ ಕಡಿಮೆಯದ್ದು. ಇದು ಭೂಮಿಗೆ ಭೌತಿಕವಾಗಿ ಅಥವಾ ಭೂಮಿಯ ವಾತಾವರಣಕ್ಕೆ ಯಾವ ಬದಲಾವಣೆಯನ್ನು ತರುವುದಿಲ್ಲ. ಈ ಅಂತರವು ಭೂಮಿಯಲ್ಲಿ ಬೇಸಿಗೆ ಕಾಲ, ಚಳಿ ಕಾಲ ಮತ್ತು ಮಳೆ ಕಾಲ ಎಂಬ ಯಾವ ಋತು ಬದಲಾವಣೆಯನ್ನು ಉಂಟುಮಾಡುವುದಿಲ್ಲ. ಹಾಗಾದರೆ, ಭೂಮಿಯ ಮೇಲೆ ಕಾಲಗಳು (seasons) ಹೇಗೆ ಉಂಟಾಗುತ್ತವೆ?

ಭೂಮಿಯ ಮೇಲೆ ವಿವಿಧ ಕಾಲಗಳು ಉಂಟಾಗಲು ಕಾರಣ ಭೂಮಿ ಸೂರ್ಯನಿಂದ ಹತ್ತಿರ ಮತ್ತು ದೂರ ಹೋಗುವುದರಿಂದಲ್ಲ ಬದಲಾಗಿ, ಭೂಮಿಯು ಸೂರ್ಯನ ಸುತ್ತ ತಿರುಗುತ್ತಿರುವ ಕಕ್ಷೆಯ ಲಂಭಕ್ಕೆ, ಭೂಮಿಯ ಅಕ್ಷವು 23.5 ಡಿಗ್ರಿ ಕೋನದಲ್ಲಿ ಬಾಗಿರುವುದರಿಂದ ಮತ್ತು ಭೂಮಿ ಸೂರ್ಯನ ಸುತ್ತು ಸುತ್ತುತ್ತಿದ್ದರೂ ಈ ಕೋನವು ಒಂದೇ ದಿಕ್ಕನಲ್ಲಿ ಮುಖ ಮಾಡಿರುತ್ತದೆ. ಈ ಕೋನದಿಂಲೇ, ಭೂಮಿಯ ಮೇಲೆ ಕಾಲಗಳು (seasons) ಬದಲಾಗುವುದು.

ಮತ್ತೊಂದು ವಿಸ್ಮಯದ ವಿಚಾರವೇಂದರೆ, ಉತ್ತರ ಗೋಳದಲ್ಲಿ ಬೇಸಿಗೆ ಕಾಲ ಇರುವಾಗ ಅಂದರೆ ನಮಗೆ ಬೇಸಿಗೆ ಕಾಲ ಇರುವಾಗ, ಭೂಮಿಯು ಸೂರ್ಯನಿಂದ ದೂರದಲ್ಲಿರುತ್ತಾನೆ! ಆದರೂ ನಮಗೆ ಬೇಸಿಗೆ ಕಾಲವಿರುತ್ತದೆ. ಏಕೆಂದರೆ, ಈ 23.5 ಡಿಗ್ರಿ ಕೋನವು ಆ ಸ್ಥಾನದಲ್ಲಿ ಸೂರ್ಯವಿರುವ ದಿಕ್ಕೆಗೆ ಬಾಗಿದ್ದು, ಉತ್ತರ ಗೋಳದಲ್ಲಿ ಸೂರ್ಯನ ಕಿರಣ ನೇರವಾಗಿ ಬೀಳುತ್ತಿರುತ್ತದೆ, ದಕ್ಷಿಣ ಗೋಳದಲ್ಲಿ ನೇರವಾಗಿ ಬೀಳದೆ, ಸೂರ್ಯನ ವಿರುದ್ಧ ದಿಕ್ಕಿನಲ್ಲಿ ಬಾಗಿರುತ್ತದೆ. ಆದುದರಿಂದ, ಉತ್ತರ ಗೋಳದಲ್ಲಿ ಬೇಸಿಗೆ ಕಾಲ, ದಕ್ಷಿಣ ಗೋಳದಲ್ಲಿ ಚಳಿಗಾಲ! ಹಾಗಾಗಿ, ಯಾವುದೇ ಸಂದರ್ಭದಲ್ಲಿ, ಭೂಮಿಯ 23.5 ಡಿಗ್ರಿ ಭಾಗುವಿಕೆಯ ಕಾರಣದಿಂದಾಗಿ, ಭೂಮಿಯ ಉತ್ತರ ಗೋಳದಲ್ಲಿ ಯಾವ ಕಾಲವಿರುವುದೋ, ದಕ್ಷಿಣ ಗೋಳದಲ್ಲಿ ಅದರ ವಿರುದ್ಧ ಕಾಲವಿರುತ್ತದೆ.


ಇದನ್ನೂ ಓದಿ: ಬೆಳ್ಳಿಚುಕ್ಕಿ: ಪಶ್ಚಿಮದಲ್ಲಿ ಹುಟ್ಟುವ ಸೂರ್ಯ ಮತ್ತು ಒಂದು ವರ್ಷಕ್ಕೂ ದೀರ್ಘವಾದ ಒಂದು ದಿನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...