Homeಮುಖಪುಟಬೆಳ್ಳಿ ಚುಕ್ಕಿ: ಭೂಮಿ ಸೂರ್ಯನಿಗೆ ಹತ್ತಿರವಿದ್ದಾಗ ನಮಗೆ ಬೇಸಿಗೆ ಕಾಲ ಬರುತ್ತದೆಯೇ?

ಬೆಳ್ಳಿ ಚುಕ್ಕಿ: ಭೂಮಿ ಸೂರ್ಯನಿಗೆ ಹತ್ತಿರವಿದ್ದಾಗ ನಮಗೆ ಬೇಸಿಗೆ ಕಾಲ ಬರುತ್ತದೆಯೇ?

- Advertisement -
- Advertisement -

ಒಂದು ಪ್ರಸಂಗ: ಅಂದು ಶನಿವಾರ. ಕಿರಣ್ ಮತ್ತು ಆರಿಫ್ ಇಬ್ಬರೂ ಅರ್ಧ ದಿನದ ಶಾಲೆ ಮುಗಿಸಿ, ಮನೆ ಕಡೆಗೆ ನಡೆದುಕೊಂಡು ಹೋಗುತ್ತಿರಬೇಕಾದರೆ, ಕಿರಣ್ ಆರಿಫ್‌ಗೆ ಹೀಗಂದ: ’ಲೇ, ಆರಿಫ್ ಏನೋ ಇಷ್ಟೊಂದ್ ಬಿಸಿಲಿದೆ ಇವತ್ತು. ಮೈಯಲ್ಲಾ ಚುರ್ ಚುರ್ ಅಂತಿದೆ’. ಅದಕ್ಕೆ ಆರಿಫ್, ’ಏ ಬೇಸಿಗೆ ಕಾಲದಲ್ಲಿ ಬಿಸಿಲು ಬರ್‌ದಿರಾ ಮಳೆನಾ ಬರತ್ತೆ’ ಅಂದಾ. ಕಿರಣ್: ’ಏ ಅದ್ ನನಗೂ ಗೊತ್ತೋ. ಬೇಸಿಗೆ ಕಾಲ ಇದು ಅಂತ. ಆದರೆ, ಅದೆಂಗೋ ಬೇಸಿಗೆ ಕಾಲದಲ್ಲಿ ಬಿಸ್ಲು, ಮಳೆಗಾಲದಲ್ಲಿ ಮಳೆ, ಚಳಿಗಾಲದಲ್ಲಿ ಚಳಿ ಬರತ್ತೆ? ನಂಗಂತೂ ಇದು ಅರ್ಥಾನೇ ಆಗಿಲ್ಲ. ಆರಿಫ್: ’ಏ ಬಿಡೋ, ನನಗೆ ಈ ವರ್ಷ ಕಾಲಗಳು ಅನ್ನೋ ಪಾಠ ಐತೆ. ಅದನ್ನ ಇನ್ನೂ ಮೇಷ್ಟ್ರು ಪಾಠ ಹೇಳಿಲ್ಲ. ಅವ್ರು ಪಾಠ ಮಾಡಿದ್ಮೇಲೆ ನಾನೇ ನಿನಗೆ ಹೇಳ್ತಿನಿ. ಆದ್ರೇ ಈ ಜೋಸೆಫ್ ಅವ್ನಲ್ಲಾ’. ಕಿರಣ್: ’ಯಾರೇಳು? ಅದೇ ಆ ಪಕ್ದೂರೋನ್ ಅಲ್ವಾ’. ಆರಿಫ್: ’ಹೌದೋ ಅವ್ನೇ, ಅವ್ನು ಒಂದ್ ಕಥೆ ಹೇಳ್ತಿದ್ದಾ.. ಭೂಮಿ ಸೂರ್ಯನ ಸುತ್ತ ಅಂಡಾಕಾರದಲ್ಲಿರುವ ಕಕ್ಷೆಯಲ್ಲಿ ಸುತ್ತುತ್ತಿರಬೇಕಾದ್ರೆ, ಸೂರ್ಯನಿಗೆ ಹತ್ತಿರ ಬಂದಾಗ ಬೇಸಿಗೆ ಕಾಲ, ದೂರ ಹೊದಾಗ ಮಳೆಗಾಲ ಅಂತ. ಅದೆ ಇರಬೇಕೆನೊ!’.

ಈ ಪ್ರಸಂಗದಲ್ಲಿ ಆರಿಫ್ ಹೇಳಿದ ಉತ್ತರ ನಿಮಗೆ ಸರಿ ಅನ್ನಿಸತ್ತಾ? ಭೂಮಿ ಸೂರ್ಯನಿಗೆ ಹತ್ತಿರವಿದ್ದಾಗ ಭೂಮಿಗೆ ಶಾಖವು ಹೆಚ್ಚಿರುತ್ತದೆ ಹಾಗಾಗಿ ಬೇಸಿಗೆ ಕಾಲ ಬರುತ್ತದೆ ಎಂಬ ಈ ವಿವರಣೆ ಸರಿಯೇ? ಅಥವಾ ತಪ್ಪೇ? ನಿಮಗೂ ಕೂತಹಲ ಹೆಚ್ಚುತ್ತಿರಬೇಕಲ್ಲವಾ?

ನಮಗೆಲ್ಲರಿಗೂ ತಿಳಿದಿರುವಹಾಗೆ ಭೂಮಿ ಸೂರ್ಯನ ಸುತ್ತ ಗೋಳಾಕಾರದಲ್ಲಿ ಸುತ್ತುತ್ತಿದೆ. ಅಲ್ಲದೇ, ಆ ಗೋಳಾಕಾರಕ್ಕೆ ಎರಡು ಕೇಂದ್ರ ಬಿಂದು ಇದ್ದು, ಸೂರ್ಯನು ಒಂದು ಕೇಂದ್ರ ಬಿಂದುವಿನಲ್ಲಿದ್ದಾನೆ ಎಂಬುದು ತಿಳಿದಿದೆ. ಹಾಗಿದ್ದಾಗ, ಭೂಮಿಯು ಸೂರ್ಯನ ಸುತ್ತ ಸುತ್ತವಾಗ, ವರ್ಷದ ಕೆಲವು ತಿಂಗಳು ಸೂರ್ಯನಿಂದ ದೂರ ಮತ್ತು ಕೆಲವು ತಿಂಗಳು ಸೂರ್ಯನ ಹತ್ತಿರ ಬರುವುದು ಸಹಜ. ಆದರೆ, ಭೂಮಿಯು ಸೂರ್ಯನಿಂದ ದೂರವಿದ್ದಾಗಿನ ಅಂತರ ಮತ್ತು ಹತ್ತಿರವಿದ್ದಾಗಿನ ಅಂತರವನ್ನು ತೆಗೆದುಕೊಂಡು ಅದರ ವ್ಯತ್ಯಾಸ ನೋಡಿದರೆ, ಕೇವಲ ಶೇ.2ರಷ್ಟು ಮಾತ್ರ ಬದಲಾಗುತ್ತದೆ. ಅಂದರೆ, ಖಗೋಳ ವಿಜ್ಞಾನದ ಮಾಪನದಲ್ಲಿ ಶೇ.೨ರಷ್ಟು ವ್ಯತ್ಯಾಸ ಅತೀ ಕಡಿಮೆಯದ್ದು. ಇದು ಭೂಮಿಗೆ ಭೌತಿಕವಾಗಿ ಅಥವಾ ಭೂಮಿಯ ವಾತಾವರಣಕ್ಕೆ ಯಾವ ಬದಲಾವಣೆಯನ್ನು ತರುವುದಿಲ್ಲ. ಈ ಅಂತರವು ಭೂಮಿಯಲ್ಲಿ ಬೇಸಿಗೆ ಕಾಲ, ಚಳಿ ಕಾಲ ಮತ್ತು ಮಳೆ ಕಾಲ ಎಂಬ ಯಾವ ಋತು ಬದಲಾವಣೆಯನ್ನು ಉಂಟುಮಾಡುವುದಿಲ್ಲ. ಹಾಗಾದರೆ, ಭೂಮಿಯ ಮೇಲೆ ಕಾಲಗಳು (seasons) ಹೇಗೆ ಉಂಟಾಗುತ್ತವೆ?

ಭೂಮಿಯ ಮೇಲೆ ವಿವಿಧ ಕಾಲಗಳು ಉಂಟಾಗಲು ಕಾರಣ ಭೂಮಿ ಸೂರ್ಯನಿಂದ ಹತ್ತಿರ ಮತ್ತು ದೂರ ಹೋಗುವುದರಿಂದಲ್ಲ ಬದಲಾಗಿ, ಭೂಮಿಯು ಸೂರ್ಯನ ಸುತ್ತ ತಿರುಗುತ್ತಿರುವ ಕಕ್ಷೆಯ ಲಂಭಕ್ಕೆ, ಭೂಮಿಯ ಅಕ್ಷವು 23.5 ಡಿಗ್ರಿ ಕೋನದಲ್ಲಿ ಬಾಗಿರುವುದರಿಂದ ಮತ್ತು ಭೂಮಿ ಸೂರ್ಯನ ಸುತ್ತು ಸುತ್ತುತ್ತಿದ್ದರೂ ಈ ಕೋನವು ಒಂದೇ ದಿಕ್ಕನಲ್ಲಿ ಮುಖ ಮಾಡಿರುತ್ತದೆ. ಈ ಕೋನದಿಂಲೇ, ಭೂಮಿಯ ಮೇಲೆ ಕಾಲಗಳು (seasons) ಬದಲಾಗುವುದು.

ಮತ್ತೊಂದು ವಿಸ್ಮಯದ ವಿಚಾರವೇಂದರೆ, ಉತ್ತರ ಗೋಳದಲ್ಲಿ ಬೇಸಿಗೆ ಕಾಲ ಇರುವಾಗ ಅಂದರೆ ನಮಗೆ ಬೇಸಿಗೆ ಕಾಲ ಇರುವಾಗ, ಭೂಮಿಯು ಸೂರ್ಯನಿಂದ ದೂರದಲ್ಲಿರುತ್ತಾನೆ! ಆದರೂ ನಮಗೆ ಬೇಸಿಗೆ ಕಾಲವಿರುತ್ತದೆ. ಏಕೆಂದರೆ, ಈ 23.5 ಡಿಗ್ರಿ ಕೋನವು ಆ ಸ್ಥಾನದಲ್ಲಿ ಸೂರ್ಯವಿರುವ ದಿಕ್ಕೆಗೆ ಬಾಗಿದ್ದು, ಉತ್ತರ ಗೋಳದಲ್ಲಿ ಸೂರ್ಯನ ಕಿರಣ ನೇರವಾಗಿ ಬೀಳುತ್ತಿರುತ್ತದೆ, ದಕ್ಷಿಣ ಗೋಳದಲ್ಲಿ ನೇರವಾಗಿ ಬೀಳದೆ, ಸೂರ್ಯನ ವಿರುದ್ಧ ದಿಕ್ಕಿನಲ್ಲಿ ಬಾಗಿರುತ್ತದೆ. ಆದುದರಿಂದ, ಉತ್ತರ ಗೋಳದಲ್ಲಿ ಬೇಸಿಗೆ ಕಾಲ, ದಕ್ಷಿಣ ಗೋಳದಲ್ಲಿ ಚಳಿಗಾಲ! ಹಾಗಾಗಿ, ಯಾವುದೇ ಸಂದರ್ಭದಲ್ಲಿ, ಭೂಮಿಯ 23.5 ಡಿಗ್ರಿ ಭಾಗುವಿಕೆಯ ಕಾರಣದಿಂದಾಗಿ, ಭೂಮಿಯ ಉತ್ತರ ಗೋಳದಲ್ಲಿ ಯಾವ ಕಾಲವಿರುವುದೋ, ದಕ್ಷಿಣ ಗೋಳದಲ್ಲಿ ಅದರ ವಿರುದ್ಧ ಕಾಲವಿರುತ್ತದೆ.


ಇದನ್ನೂ ಓದಿ: ಬೆಳ್ಳಿಚುಕ್ಕಿ: ಪಶ್ಚಿಮದಲ್ಲಿ ಹುಟ್ಟುವ ಸೂರ್ಯ ಮತ್ತು ಒಂದು ವರ್ಷಕ್ಕೂ ದೀರ್ಘವಾದ ಒಂದು ದಿನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...