Homeಮುಖಪುಟಅಮೆರಿಕದ ಶಾಖಕ್ಕೆ ಭಾರತದಲ್ಲಿ ಬೆವರಿದ ಫೇಸ್‌ಬುಕ್ - ರಾಜಾರಾಂ ತಲ್ಲೂರು

ಅಮೆರಿಕದ ಶಾಖಕ್ಕೆ ಭಾರತದಲ್ಲಿ ಬೆವರಿದ ಫೇಸ್‌ಬುಕ್ – ರಾಜಾರಾಂ ತಲ್ಲೂರು

ಸಾಮಾನ್ಯವಾಗಿ ಎಲ್ಲ ಕಾರ್ಪೊರೇಟ್ ಸಂಸ್ಥೆಗಳಂತೆಯೇ ಫೇಸ್‌ಬುಕ್ ಕೂಡ ತಾನು ಹೊಕ್ಕ ದೇಶಗಳಲ್ಲೆಲ್ಲ ಅಲ್ಲಿನ ಆಳುವವರನ್ನು ಖುಷಿಯಾಗಿಟ್ಟುಕೊಳ್ಳುವ ಕೌಶಲವನ್ನು ಚೆನ್ನಾಗಿ ಕರಗತ ಮಾಡಿಕೊಂಡಿದೆ. ಈ ಗೆದ್ದೆತ್ತಿನ ಬಾಲ ಹಿಡಿಯುವ ಕೌಶಲಕ್ಕೆ ವ್ಯಾಪಾರ ಬಿಟ್ಟರೆ ಬೇರೆ ಹಂಗಿಲ್ಲ.

- Advertisement -
- Advertisement -

ಈ ನವೆಂಬರ್‌ನಲ್ಲಿ ಅಮೆರಿಕದ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಅದರ ಕಾವು ಏರುತ್ತಿರುವಂತೆಯೇ ಫೇಸ್‌ಬುಕ್, ಟ್ವಿಟ್ಟರ್ ಮೊದಲಾದ ಸೋಷಿಯಲ್ ಮೀಡಿಯಾ ಕಂಪನಿಗಳ ಮ್ಯಾನೇಜ್ಮೆಂಟ್ ಕೋಣೆಗಳಲ್ಲಿ ಬೆವರು ಮೂಡತೊಡಗಿದೆ. ತಮಾಷೆ ಎಂದರೆ, ಡೆಮೊಕ್ರಾಟರು ಮತ್ತು ರಿಪಬ್ಲಿಕನ್ನರಿಬ್ಬರೂ ಮಿಲಿಯಗಟ್ಟಲೆ ಡಾಲರ್ ಜಾಹೀರಾತುಗಳನ್ನು ಇದೇ ಸೋಷಿಯಲ್ ಮೀಡಿಯಾ ಸಂಸ್ಥೆಗಳಿಗೆ ಸುರಿಯುತ್ತಾ, ಅಲ್ಲೇ ಅದೇ ಸೋಷಿಯಲ್ ಮೀಡಿಯಾಗಳಿಗೆ ವಾಚಾಮಗೋಚರ ಬೈಗುಳಮಳೆಯನ್ನೂ ಸುರಿಸುತ್ತಾ ತಮ್ಮ ಚುನಾವಣಾ ಪ್ರಚಾರಕ್ಕೆ ಬಿಸಿಯೇರಿಸಿಕೊಳ್ಳುತ್ತಿದ್ದಾರೆ.

2012ರ ಹೊತ್ತಿಗೇ ಸೋಷಿಯಲ್ ಮೀಡಿಯಾಗಳು ಚುನಾವಣೆಗಳ ಮೇಲೆ ಪರಿಣಾಮ ಬೀರುವ ಸಾಮರ್ಥ್ಯ ಹೊಂದಿವೆ ಎಂಬುದು ಸಾಬೀತಾಗಿತ್ತು. 2016ರ ಚುನಾವಣೆಯಲ್ಲಿ ಅದನ್ನು ಕಾರ್ಯರೂಪಕ್ಕೂ ತಂದು ತೋರಿಸಿದ ಟ್ರಂಪ್ ಅಮೆರಿಕದ ಅಧ್ಯಕ್ಷರಾದದ್ದು ಈಗ ಇತಿಹಾಸ. ಈಗ 2020ರ ಚುನಾವಣೆಯ ಹೊತ್ತಿಗೆ ಅಲ್ಲಿ ಪರಿಸ್ಥಿತಿ ಬದಲಾಗಿದೆ. ಡೆಮೊಕ್ರಾಟರು ಮತ್ತು ರಿಪಬ್ಲಿಕನ್ನರಿಬ್ಬರೂ ಸೋಷಿಯಲ್ ಮೀಡಿಯಾದ ಸಾಮರ್ಥ್ಯವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ತೀರ್ಮಾನಿಸಿಕೊಂಡೇ ರಂಗಕ್ಕಿಳಿದಿರುವುದು ಫೇಸ್‌ಬುಕ್, ಟ್ವಿಟ್ಟರ್ ಇತ್ಯಾದಿಗಳ ತಲೆಬಿಸಿಗೆ ಮೂಲ ಕಾರಣ.

ಅಮೆರಿಕದ ಚುನಾವಣೆಯ ಹಾದಿಯಲ್ಲಿ ನಡೆದಿರುವ ಸೋಷಿಯಲ್ ಮೀಡಿಯಾ ಜಿದ್ದಾಜಿದ್ದಿ ಪ್ರಹಸನದಲ್ಲಿ ಒಂದು ಹೆಚ್ಚುವರಿ ಫಿಟ್ಟಿಂಗ್ ಆಗಿ ಕುಳಿತಿರುವ ಭಾರತಕ್ಕೆ ಮನಸ್ಸಿದ್ದರೆ, ಈ ಆಟವನ್ನು ಅರ್ಥಮಾಡಿಕೊಳ್ಳುವುದಕ್ಕೆ ಇದೊಂದು ಅವಕಾಶವೇ ಹೊರತು, ಈಗ ಭಾರತದಲ್ಲಿ ಎದ್ದಿರುವ ಫೇಸ್‌ಬುಕ್ ಭಾರತ ಸರ್ಕಾರದ ನಡುವಿನ ಸಂಬಂಧಗಳ ಚರ್ಚೆ ಅಲ್ಲಿಂದ ಮುಂದೆ ಸಾಗಲು ಈ ಪ್ರಕರಣ ಹಾದಿಮಾಡಿಕೊಟ್ಟೀತೆಂದು ಅನ್ನಿಸುವುದಿಲ್ಲ.

ಅಮೆರಿಕದ ಸಂವಹನ ಸಭ್ಯತೆಯ ಕಾಯಿದೆಯ ಸೆಕ್ಷನ್ 230ರ ಅಡಿಯಲ್ಲಿ, ಈ ಸೋಷಿಯಲ್ ಮೀಡಿಯಾಗಳನ್ನು ವೇದಿಕೆಗಳು (platforms) ಎಂದು ಪರಿಗಣಿಸಲಾಗಿರುವುದರಿಂದ ಅವಕ್ಕೆ ಪ್ರಕಾಶಕರಿಗೆ (publisher)ಗೆ ಅನ್ವಯವಾಗುವ ಸಾಂಪ್ರದಾಯಿಕ ಕಟ್ಟುನಿಟ್ಟಿನ ಕಾನೂನುಗಳು ಅನ್ವಯ ಆಗುವುದಿಲ್ಲ. ಆದರೆ ಈ ಚುನಾವಣೆಯ ಹೊತ್ತಿಗೆ ಈ ವೇದಿಕೆಗಳು ಎಲ್ಲರಿಗೂ ಸಮಾನ ಅವಕಾಶಗಳನ್ನು ಒದಗಿಸುವ ವೇದಿಕೆಗಳಲ್ಲ, ಅವರು ತಮ್ಮಲ್ಲಿ ಕಾಣಿಸಿಕೊಳ್ಳುವ ಪೋಸ್ಟ್‌ಗಳನ್ನು ಸೆನ್ಸಾರ್ ಮಾಡುವ, ನಿಯಂತ್ರಿಸುವ, ತಿದ್ದುವ, ಅಡಗಿಸಿಡುವ ಹತ್ಯಾರುಗಳನ್ನು ಹೊಂದಿವೆ ಎಂಬುದು ಬಹಿರಂಗಗೊಂಡಿದೆ. ಎಲ್ಲರ ಕಣ್ಣುಗಳೂ ಅವರ ಮೇಲೆ ನೆಟ್ಟಿವೆ. ವಿಶೇಷವಾಗಿ ಫೇಸ್‌ಬುಕ್, ಟ್ವಿಟ್ಟರ್‌ಗಳೆರಡೂ ಈ ಚುನಾವಣೆಯಲ್ಲಿ ಬಹಳ ಎಚ್ಚರಿಕೆಯ ಹೆಜ್ಜೆಗಳನ್ನು ಇಡತೊಡಗಿವೆ. ಹಾಗಾಗಿ ರಿಪಬ್ಲಿಕನ್ನರು ಮತ್ತು ಡೆಮೊಕ್ರಾಟರಿಬ್ಬರಿಗೂ ಕಾಸುಕೊಟ್ಟು ಬೈದುಕೊಳ್ಳಲು ಸಮಾನಾವಕಾಶಗಳು ಸಿಗತೊಡಗಿವೆ.

2020 ಜುಲೈ: ಭಾರತ ಅಮೆರಿಕಗಳಲ್ಲಿ ಸೋಷಿಯಲ್ ಮೀಡಿಯಾ ಬಳಕೆಯ ಹೋಲಿಕೆ

ಮೀಡಿಯಾ                   ಭಾರತ (ಕೋಟಿಗಳಲ್ಲಿ)        ಅಮೆರಿಕ (ಕೋಟಿಗಳಲ್ಲಿ)

ಟ್ವಿಟ್ಟರ್ ಖಾತೆಗಳು          1.7                                 6.2

ಫೇಸ್‌ಬುಕ್ ಖಾತೆಗಳು       29                                  19

ಇನ್ಸ್ಟಾಗ್ರಾಂ ಖಾತೆಗಳು      10                                  13

 

ಭಾರತದಲ್ಲಿ ಫೇಸ್‌ಬುಕ್ ಆಟ

ಸಾಮಾನ್ಯವಾಗಿ ಎಲ್ಲ ಕಾರ್ಪೊರೇಟ್ ಸಂಸ್ಥೆಗಳಂತೆಯೇ ಫೇಸ್‌ಬುಕ್ ಕೂಡ ತಾನು ಹೊಕ್ಕ ದೇಶಗಳಲ್ಲೆಲ್ಲ ಅಲ್ಲಿನ ಆಳುವವರನ್ನು ಖುಷಿಯಾಗಿಟ್ಟುಕೊಳ್ಳುವ ಕೌಶಲವನ್ನು ಚೆನ್ನಾಗಿ ಕರಗತ ಮಾಡಿಕೊಂಡಿದೆ. ಈ ಗೆದ್ದೆತ್ತಿನ ಬಾಲ ಹಿಡಿಯುವ ಕೌಶಲಕ್ಕೆ ವ್ಯಾಪಾರ ಬಿಟ್ಟರೆ ಬೇರೆ ಹಂಗಿಲ್ಲ. ಭಾರತದಲ್ಲೂ ಮೊದಲ ಪೂರ್ಣಪ್ರಮಾಣದ ಸೋಷಿಯಲ್ ಮೀಡಿಯಾ ಕಾಳಗದ ಚುನಾವಣೆ 2019ರಲ್ಲಿ ನಡೆದ ಬಳಿಕ, ವಿಶೇಷವಾಗಿ ಫೇಸ್‌ಬುಕ್ ಸ್ವಲ್ಪ ಎಚ್ಚರಿಕೆಯ ಹೆಜ್ಜೆಗಳನ್ನು ಇಡಲಾರಂಭಿಸಿದೆ; ಆದರೆ ಅದಕ್ಕೆ ಭಾರತದ ಸನ್ನಿವೇಶದ ಅರಿವಿಲ್ಲದಿರುವುದು, ಅದನ್ನು ಇನ್ನಷ್ಟು ಸಂಕಟಕ್ಕೆ ಸಿಕ್ಕಿಸಿಹಾಕಿದೆ ಮತ್ತು ಅದರ ವಿಶ್ವಾಸಾರ್ಹತೆಗೆ ಸಾಕಷ್ಟು ಹಾನಿಮಾಡಿದೆ.

2014ರ ಚುನಾವಣೆಯಲ್ಲಿ ಆಗ ಪ್ರತಿಪಕ್ಷವಾಗಿದ್ದ NDA ಸೋಷಿಯಲ್ ಮೀಡಿಯಾ ಮೆಂದಷ್ಟೂ ಹಸುರಿದ್ದ ಹುಲ್ಲುಗಾವಲಾಗಿತ್ತು. ಆಗ ಪರಿಸ್ಥಿತಿ ಹಾಗಿತ್ತು. ಸೋಷಿಯಲ್ ಮೀಡಿಯಾದ ಮಟ್ಟಿಗೆ ಅದು ಮೋದಿಯವರ ಪಕ್ಷಕ್ಕೆ ಏಕಪಕ್ಷೀಯವಾದ ಗೆಲುವಾಗಿತ್ತು. ಆದರೆ 2018ರ ಹೊತ್ತಿಗೆ ಪ್ರತಿಪಕ್ಷಗಳು ಸ್ವಲ್ಪಮಟ್ಟಿಗೆ ಎಚ್ಚೆತ್ತುಕೊಂಡದ್ದರಿಂದಾಗಿ ಸೋಷಿಯಲ್ ಮೀಡಿಯಾ ಕೂಡ ಪೈಪೋಟಿಯ ಕಣವಾಯಿತು. ಆದರೆ, ಆಗಷ್ಟೇ ಸೋಷಿಯಲ್ ಮೀಡಿಯಾಕ್ಕೆ ಕಣ್ಣು ತೆರೆದಿದ್ದ ಪ್ರತಿಪಕ್ಷಗಳಿಗೆ ಸ್ಪಷ್ಟ ಗುರಿ ಇಲ್ಲದ್ದರಿಂದಾಗಿ, 2019ರಲ್ಲಿ ಮತ್ತೆ NDA ಮೇಲುಗೈ ಸಾಧಿಸಿತು. ಆದರೆ, ಫೇಸ್‌ಬುಕ್ ಪರಿಸ್ಥಿತಿ ಮೊದಲಿನಂತೆ ನಿಷ್ಕಳಂಕವಾಗಿ ಉಳಿದಿರಲಿಲ್ಲ. ಅದು ಎಲ್ಲರಿಗೂ ಸಮಾನಾವಕಾಶಗಳನ್ನು ಒದಗಿಸುವ ವೇದಿಕೆ ಅಲ್ಲ ಎಂಬುದು ನಿಧಾನಕ್ಕೆ ಬಯಲಿಗೆ ಬರತೊಡಗಿತು. ಚುನಾವಣೆ ತಯಾರಿಯ ಹೊತ್ತಿಗೇ ಇದು ಸುದ್ದಿಯಾಗತೊಡಗಿದ್ದರಿಂದಾಗಿ, ಆ ಮೊದಲು ಫೇಕ್ ಸುದ್ದಿಗಳು ಫೇಸ್‌ಬುಕ್‌ನಲ್ಲಿ ಹರಿದಾಡಿದ್ದನ್ನು ಒಪ್ಪಿಕೊಂಡ ಫೇಸ್‌ಬುಕ್, ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಅಂತಹ ಫೇಕ್ ಸುದ್ದಿಗಳನ್ನು ಗುರುತಿಸಿ, ಹರಡದಂತೆ ನಿಲ್ಲಿಸಲು, ಈಗಾಗಲೇ ಇರುವ 7500 ಮಾಡರೇಟರ್‌ಗಳ ಸಂಖ್ಯೆಯನ್ನು ದುಪ್ಪಟ್ಟು ಮಾಡಿ, ಅಂದಾಜು 20000 ಮಾಡರೇಟರ್‌ಗಳನ್ನು ನೇಮಿಸಿಕೊಳ್ಳುತ್ತಿರುವುದಾಗಿ 2018ರ ಸೆಪ್ಟಂಬರ್ ವೇಳೆಗೆ ಹೇಳಿತು. ಜೆನ್‌ಪ್ಯಾಕ್ಟ್, ಕಾಗ್ನಿಜೆಂಟ್ ಮತ್ತು ಎಕ್ಸೆಂಚರ್ ಸಂಸ್ಥೆಗಳು ಈ ಮಾಡರೇಷನ್‌ನ ಮಾನವಸಂಪನ್ಮೂಲಗಳನ್ನು ಒದಗಿಸುವ ಬಹುತೇಕ ಜಾಗತಿಕ ಗುತ್ತಿಗೆ ಹಿಡಿದಿವೆ.

ಈ ರೀತಿಯ ಕಂಟೆಂಟ್ ಮಾಡರೇಷನ್ ಎಂಬುದು ಬಹಳ ಮಾಯಕದ ಕೆಲಸ. ಯಾವುದು ಪ್ರಕಟಣೆಗೆ ಅನರ್ಹ ಎಂಬ ಒಂದು ಗ್ಲೋಬಲ್ ಮಾನದಂಡ ಮತ್ತು ಫೇಸ್‌ಬುಕ್‌ನ ವ್ಯಾವಹಾರಿಕ ಹಿತಾಸಕ್ತಿಗಳ ತಾಕಲಾಟದ ನಡುವೆ ಭಾರತದಂತಹ ವಿಸ್ತಾರವಾದ, ವೈವಿಧ್ಯಮಯವಾದ ದೇಶವೊಂದರ ಕೋಟಿಗಟ್ಟಲೆ ಫೇಸ್‌ಬುಕ್ ಪುಟಗಳ ಮೇಲೆ ಕಣ್ಣಿಡುವುದು ಮತ್ತು 24 ತಾಸುಗಳಲ್ಲಿ ಅದಕ್ಕೆ ಅಬದ್ಧವೆನ್ನಿಸಿದ್ದನ್ನು ಅಳಿಸಿಹಾಕುವುದು ಸವಾಲೆಂಬುದರಲ್ಲಿ ಸಂಶಯ ಇಲ್ಲ. ಆದರೆ ಈ ರೀತಿ ಕಣ್ಣಿಡುವವರು ಯಾರು? ಅವರನ್ನು ನೇಮಿಸಿಕೊಂಡವರು ಯಾರು? ಅವರ ಉದ್ದೇಶಗಳೇನು? ಎಂಬುದನ್ನೆಲ್ಲ ನಿಯಂತ್ರಿಸುವುದು ಸಾಂಸ್ಥಿಕವಾಗಿ ಬಹುತೇಕ ಅಸಾಧ್ಯ ಸನ್ನಿವೇಶ. ಭಾರತದಂತಹ ಪ್ರಮುಖ ಮಾರುಕಟ್ಟೆಯಲ್ಲಿ ತನ್ನದೇ ವ್ಯವಹಾರ ಹಿತಾಸಕ್ತಿಗಳನ್ನೂ ಹೊಂದಿರುವ ಫೇಸ್‌ಬುಕ್‌ನಂತಹ ಖಾಸಗಿ ಸಂಸ್ಥೆಗಂತೂ ಇದು ಕತ್ತಿಯ ಮೇಲಿನ ನಡಿಗೆ. ಇಲ್ಲಿನ ಆಳುವವರನ್ನು ಸಂತುಷ್ಟಗೊಳಿಸಿಕೊಂಡು ಮುಂದುವರಿಯುವುದು ಅದಕ್ಕೆ ಅನಿವಾರ್ಯ. ಹಾಗಾಗಿ ಇಂದು, ಭಾರತದಲ್ಲಿ ಫೇಸ್‌ಬುಕ್ ಗೋಡೆಯ ಮೇಲೆ ಯಾವ ಕಂಟೆಂಟ್ ಉಳಿಯುತ್ತದೆ- ಯಾವ ಕಂಟೆಂಟ್ ಅನ್ನು ಅಳಿಸಲಾಗುತ್ತದೆ ಎಂಬುದು ಉದಾಹರಣೆಗಳ ಸಮೇತ ಸುದ್ದಿಯಾಗತೊಡಗಿದೆ.

ಆಗಬೇಕಾದ್ದು ಏನು?

ಸೋಷಿಯಲ್ ಮೀಡಿಯಾ ಎಂಬುದು ಸರ್ವಸಮರ್ಥ ಮಾಧ್ಯಮ ಎಂಬುದು ಸಾಬೀತಾದ ಮೇಲೆ ಅದರ ಸುಸೂತ್ರ ನಿರ್ವಹಣೆಗಾಗಿ ಬೇರೆ ಮಾಧ್ಯಮಗಳಿಗಿರುವಂತಹ ಕಾನೂನುಬದ್ಧ ನಿಯಂತ್ರಣಗಳು ಒಂದು ಜಾಗತಿಕ ನಿಯಮಗಳ ಚೌಕಟ್ಟಿನಲ್ಲಿ ರೂಪುಗೊಳ್ಳುವುದು ಅಗತ್ಯವಿದೆ.

ಆನ್‌ಲೈನ್ ದ್ವೇಷಸಾಧನೆಯ ಮಾತುಗಳು, ಲೈಂಗಿಕವಾದ ಕಂಟೆಂಟ್‌ಗಳನ್ನು ಆನ್‌ಲೈನ್‌ನಿಂದ ಹೊರತೆಗೆಯಲು ಸಮರ್ಥವಾದ ಪರಿಕರಗಳನ್ನು ಈಗ ಬಹುತೇಕ ಎಲ್ಲ ಸೋಷಿಯಲ್ ಮೀಡಿಯಾಗಳೂ ಹೊಂದಿವೆ. ಅದಕ್ಕೆ ಜಾಗತಿಕವಾದ ವ್ಯವಸ್ಥೆಯೂ ಇದೆ.

ಆದರೆ, ಇದರ ಮುಸುಕಿನಲ್ಲಿ ರಾಜಕೀಯ ಉದ್ದೇಶಗಳ ಕಾರಣಕ್ಕಾಗಿ ಒಂದು ರಾಜಕೀಯ ಪಕ್ಷದ ಹಿತಾಸಕ್ತಿಗಳನ್ನು ರಕ್ಷಿಸುವ, ಇನ್ನೊಂದರ ಹಿತಾಸಕ್ತಿಗಳಿಗೆ ಹಾನಿ ಮಾಡುವ ಕಂಟೆಂಟ್‌ಗಳನ್ನು ಹಾಗೇ ಉಳಿಸುವಂತಹ ರಂಗೋಲಿಯಡಿ ತೂರಿ ನಡೆಯುವ ಆಟಗಳನ್ನು ಸಾಂಸ್ಥಿಕ ನಿಯಮಗಳು ನಿಭಾಯಿಸುವುದು ಭಾರತದ ಸಂದರ್ಭದಲ್ಲಿ ಕಷ್ಟ ಇದೆ. ಇಲ್ಲಿ ಭಾವನೆಗಳಿಗೆ ಧಕ್ಕೆ ಉಂಟಾದ ಕುರಿತು ಸೈಬರ್ ಕ್ರೈಮ್ ದೂರುಗಳು ಚಾಲ್ತಿಯಲ್ಲಿವೆಯಾದರೂ ಅದು ಅಂತಹ ಪ್ರಕಟಣೆಗಳಿಗೆ ಅವಕಾಶಕೊಡುವ, ಅದನ್ನು ಹರಡುವ ಸಮಾನ ದೋಷಿ ಆಗಿರುವ ಸೋಷಿಯಲ್ ಮೀಡಿಯಾ ಫ್ಲಾಟ್‌ಫಾರಂಅನ್ನು ಏನೂ ಮಾಡಲು ಸಾಧ್ಯವಾಗುವುದಿಲ್ಲ. ಈ ಫ್ಲಾಟ್‌ಫಾರಂಗಳು ಅವು ಕಾರ್ಯಾಚರಿಸುವ ದೇಶದ ನೆಲದ ಕಾನೂನಿಗೆ ಉತ್ತರದಾಯಿ ಆಗುವ ತನಕ ಈ ಸಮಸ್ಯೆ ಪರಿಹಾರ ಆಗುವ ಲಕ್ಷಣಗಳು ಕಾಣುತ್ತಿಲ್ಲ.


ಇದನ್ನೂ ಓದಿ: ’ಮೈ ಡಿಯರ್ ಮೀಡಿಯಾ’: ಸುದ್ದಿಮನೆಗಳು ಸ್ಥಿತ್ಯಂತರಗೊಂಡ ಬಗೆ – ರಾಜಾರಾಂ ತಲ್ಲೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...