Homeಕರ್ನಾಟಕಹಳತು-ವಿವೇಕ: ರೈತರ ಸಾಲ ರದ್ದು ಹೇಗಾಗಬೇಕು? – ಪ್ರೊ. ಎಂಡಿಎನ್

ಹಳತು-ವಿವೇಕ: ರೈತರ ಸಾಲ ರದ್ದು ಹೇಗಾಗಬೇಕು? – ಪ್ರೊ. ಎಂಡಿಎನ್

- Advertisement -
- Advertisement -

ಸಂಪನ್ಮೂಲಗಳನ್ನು ಮಾನವ ಶಕ್ತಿಯ ಮೂಲಕ ಸಿದ್ಧವಸ್ತುಗಳನ್ನಾಗಿ ಪರಿವರ್ತಿಸುವುದೇ ಬಂಡವಾಳದ ಉತ್ಪಾದನೆ. ಈ ದೃಷ್ಟಿಯಲ್ಲಿ ನಮ್ಮ ದೇಶದ ಒಟ್ಟು ಜನಸಂಖ್ಯೆಯ ಶೇಕಡ 75 ಭಾಗ ಇರುವ ರೈತರು ಮತ್ತು ರೈತ ಕೂಲಿಕಾರರೇ ನಮ್ಮ ದೇಶದ ಎಲ್ಲಾ ಬಂಡವಾಳವನ್ನು ಸೃಷ್ಟಿಸುತ್ತಿರುವವರು ಹಾಗೂ ಹೆಚ್ಚಿಸುತ್ತಿರುವವರು

ಹೀಗಿದ್ದರೂ ಇವರೆಲ್ಲಾ ನಿರಂತರ ಸಾಲಗಾರರಾಗಿದ್ದಾರೆ. ಇದಕ್ಕೆ ಕಾರಣ ಏನು? ಇಂತಹ ಸಾಲದಿಂದ ಇವರನ್ನು ಹೇಗೆ ಮುಕ್ತಿಗೊಳಿಸಬೇಕು? ಇವರಿಗೆಲ್ಲಾ ಸಮಾನ ಸ್ಥಾನಮಾನ, ಸಮಾನ ಗೌರವ ಮತ್ತು ಸಮಾಜ ಜೀವನ ವ್ಯವಸ್ಥೆಯನ್ನು ಹೇಗೆ ಸ್ಥಾಪಿಸಬೇಕು? ಈ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವುದೇ ರೈತ ಚಳವಳಿಯ ವಿಜಾರ ಮತ್ತು ಉದ್ದೇಶ.

ಇದನ್ನೂ ಓದಿ: ರೈತ ಹೋರಾಟ 80ನೇ ದಿನಕ್ಕೆ: ಪ್ರೊ ಎಂ.ಡಿ ನಂಜುಂಡಸ್ವಾಮಿಯವರನ್ನು ನೆನೆದ ರೈತ ಒಕ್ಕೂಟ

ಇವುಗಳಿಗೆ ಕರ್ನಾಟಕ ರೈತರು ಉತ್ತರ ಕಂಡುಕೊಂಡಿದ್ದಾರೆ. ತಮ್ಮ ಸಾಲಕ್ಕೆ ಬೆಲೆ ಮೋಸ ಕಾರಣ, ಬೆಲೆ ಸಮಾನತೆಯೇ ಇಂತ ಸಾಲಗಳಿಂದ ಮುಕ್ತಿ ಪಡೆಯಲು ಪರಿಹಾರ, ಬೆಲೆ ಸಮಾನತೆಯ ಕಾನೂನು ರಚನೆಗಾಗಿ ಹೋರಾಡಿ ಜಯಗಳಿಸಿದರೆ ಮಾತ್ರ ಸಮಾನ ಜೀವನ ವ್ಯವಸ್ಥೆಯ ಸ್ಥಾಪನೆ ಸಾಧ್ಯ. ಇದನ್ನೆಲ್ಲಾ ಅಹಿಂಸಾತ್ಮಕ ಸತ್ಯಾಗ್ರಹದಿಂದ ಸ್ಥಾಪಿಸಲು ಪ್ರಯತ್ನಿಸಬೇಕು. ಅಹಿಂಸಾತ್ಮಕ ಸತ್ಯಾಗ್ರಹಕ್ಕೆ ಮಣಿಯದ ಕಳ್ಳ ಸರ್ಕಾರಗಳು ಎದುರಾದರೆ ರೈತರೇ ರಾಜಕೀಯ ಶಕ್ತಿಯಾಗಿ ತಮ್ಮ ಓಟಿನ ಶಕ್ತಿಯಿಂದ ರೈತರದ್ದೇ ಆದ ಸರ್ಕಾರ ಸ್ಥಾಪಿಸಿಕೊಂಡು ರೈತರಿಗೆ ಸಮಾನ ಗೌರವ ಸ್ಥಾನವನ್ನು ದಕ್ಕಿಸಿಕೊಳ್ಳಬೇಕು. ಇದು ಕರ್ನಾಟಕದ ರೈತ ಚಳುವಳಿಯ ಸ್ವಾಭಿಮಾನದ ಹೋರಾಟದ ವಿಚಾರ ಮತ್ತು ಕಾರ್ಯಕ್ರಮ.

ಕರ್ನಾಟಕದ ರೈತರ ಚಳವಳಿ ಮತ್ತು ಕಾರ್ಯಕ್ರಮ ಈ ದಿಕ್ಕಿನಲ್ಲಿ ನಡೆದಿದ್ದರೆ ನೆರೆ ರಾಜ್ಯವಾದ ಮಹಾರಾಷ್ಟ್ರದ ರೈತರ ಚಳವಳಿ ದಿಕ್ಕೆಟ್ಟಿದೆ. ದೇಶದ ಸಂಪತ್ತನ್ನು ದಿನೇ ದಿನೇ ಹೆಚ್ಚಿಸುತ್ತಿರುವ ನಾವು ರೈತರು ಸಾಲಗಾರರೇ ಅಲ್ಲ ಎಂದು ಕರ್ನಾಟಕದ ರೈತರು ಘೋಷಿಸಿಕೊಂಡಿದ್ದರೆ ಮಹಾರಾಷ್ಟ್ರದ ರೈತರು ಈ ಮುಖ್ಯ ವಿಷಯವನ್ನೇ ಮರೆತು ನಾವು ಪಾಪರಾಗಿದ್ದೇವೆ, ದಿವಾಳಿಯಾಗಿದ್ದೇವೆ ಎಂದು ಘೋಷಿಸಬೇಕೆಂದು ಮಹಾರಾಷ್ಟ್ರದ ನ್ಯಾಯಾಲಯಗಳಿಗೆ ಅರ್ಜಿ ಸಲ್ಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಹಳತು-ವಿವೇಕ: ಸಮಕಾಲೀನತೆಯಲ್ಲಿ ಕುವೆಂಪು-ಕ್ರಿಯೆ, ಪ್ರತಿಕ್ರಿಯೆ – ದಿ. ಎಂ. ಡಿ. ನಂಜುಂಡಸ್ವಾಮಿ

ಮಹಾರಾಷ್ಟ್ರದ ನ್ಯಾಯಾಲಯಗಳೇನಾದರೂ ಅಲ್ಲಿನ ರೈತರ ವಾದವನ್ನು ಒಪ್ಪಿ ಅವರೆಲ್ಲ ದಿವಾಳಿಗಳೆಂದು ಘೋಷಿಸಿದರೆ ಆಗುವ ಪರಿಣಾಮಗಳನ್ನು ಅವರೆಲ್ಲ ಯೋಚಿಸಿಲ್ಲ ಎಂದು ಕಾಣುತ್ತದೆ. ಅವರೆಲ್ಲರೂ ದಿವಾಳಿಗಳೆಂದು ನ್ಯಾಯಾಲಯ ಘೋಷಿಸಿದರೆ ಅವರೆಲ್ಲ ಇನ್ನು ಮುಂದೆ ಯಾವುದೇ ಹಣಕಾಸಿನ ಚಟುವಟಿಕೆಯಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ. ಅದಕ್ಕಿಂತ ಹೆಚ್ಚಾಗಿ ಯಾವುದೇ ಚುನಾವಣೆಯಲ್ಲಿ ಅಭ್ಯರ್ಥಿಗಳಾಗುವ ಹಾಗೂ ಮತದಾನದ ಹಕ್ಕುಗಳನ್ನೆಲ್ಲ ಕಳೆದುಕೊಳ್ಳುತ್ತಾರೆ. ಭಾರತದ ರೈತರಿಗಿರುವ ಏಕೈಕ ಅಮೂರ್ತ ಶಕ್ತಿಯಾದ ಮತ ಶಕ್ತಿಯನ್ನೂ ಕಳೆದುಕೊಂಡು ರೈತ ಶಾಶ್ವತ ಜೀತಗಾರನಾಗುತ್ತಾನೆ. ಈ ಮೂಲಕ ಸಾಲಗಳಿಂದ ವಿಮುಕ್ತನಾಗುವುದಿರಲಿ, ಸಾಲದ ಶಿಶುವಾಗಿಯೇ ಉಳಿದು ಬಿದಡುತ್ತಾನೆ.

ಮಹಾರಾಷ್ಟ್ರದ ರೈತರು ಇಷ್ಟು ದಡ್ಡರೇ ಎಂದು ಯಾರಾದರೂ ಹುಬ್ಬೇರಿಸಬಹುದು. ಆದರೆ ಅವರು ದಡ್ಡರಲ್ಲ ಎನ್ನುವುದು ನಿಜವಾದರೂ ಅವರ ಚಳವಳಿಯ ನಾಯಕತ್ವವನ್ನು ಕೆಲವು ಬೇಜವಾಬ್ದಾರಿ ಹುಂಬರು ವಹಿಸಿಕೊಂಡಿದ್ದಾರೆ ಎನ್ನುವುದನ್ನು ಇನ್ನೂ ಗುರುತಿಸಿಕೊಂಡಿಲ್ಲದ ದಡ್ಡರು ಎಂದೇ ಹೇಳಬೇಕಾಗುತ್ತದೆ. ಈ ಹುಂಬ ನಾಯಕರು ಇದೊಂದು ಚಳವಳಿಯ ತಂತ್ರ! ಸಾಲ ಪಾವತಿಯನ್ನು ಅನಿರ್ದಿಷ್ಟ ಕಾಲ ತಪ್ಪಿಸಿಕೊಳ್ಳುವ ತಂತ್ರ ಎನ್ನುವ ಜಾಣ ವಾದವನ್ನು ಮಹಾರಾಷ್ಟ್ರದ ರೈತರ ಮುಂದಿಡಬಹುದು. ಆದರೆ, ಇಂತಹ ತಂತ್ರಗಳ ತಳಹದಿಯ ಆಧಾರದ ಮೇಲೆ ರೈತ ಚಳವಳಿ ರೂಪಿತವಾಗಬೇಕೋ ಅಥವಾ ಸತ್ಯದ ಆಧಾರದ ಮೇಲೆ ಹಾಗೂ ಸತ್ಯಾಗ್ರಹದ ಆಧಾರದ ಮೇಲೆ ರೈತ ಚಳವಳಿ ರೂಪಿತವಾಗಬೇಕೋ ಎನ್ನುವುದು ಅತಿ ಮುಖ್ಯವಾದ ಅಂಶ.

ಇದನ್ನೂ ಓದಿ: ಕೃಷಿ ಕಾಯ್ದೆಗಳ ಪರ ಪ್ರಚಾರ: ಒಕ್ಕೂಟ ಸರ್ಕಾರ ಖರ್ಚು ಮಾಡಿರುವ ಹಣ ಎಷ್ಟು ಗೊತ್ತೇ?

ಏಕೆಂದರೆ, ಸಮಾನತೆಯನ್ನು ತಂತ್ರಗಳ ಮೂಲಕ ದೊರಕಿಸಿಕೊಳ್ಳಲು ಸಾಧ್ಯವಿಲ್ಲ. ಕಾರಣ, ಅಸಮಾನತೆಯನ್ನು ಮುಂದುವರಿಸಬೇಕೆನ್ನುವವರ ಬಳಿ ತಂತ್ರಗಳಿಗೇನೂ ಅಭಾವವಿರುವುದಿಲ್ಲ. ಹಾಗೆಯೇ ಸಮಾನತೆಯನ್ನು ಯಾರೂ ಚಿನ್ನದ ತಟ್ಟೆಯಲ್ಲಿ ಅರ್ಪಿಸುವುದಿಲ್ಲ. ಅದನ್ನು ಹೋರಾಟದ ಮೂಲಕವೇ ದಕ್ಕಿಸಿಕೊಳ್ಳಬೇಕು. ಇದಕ್ಕೆ ತಾರ್ಕಿಕ ಹೋರಾಟದ ಮಾರ್ಗವೊಂದೇ ಇರುವ ದಾರಿ. ಸತ್ಯಾಗ್ರಹವೇ ಈ ಹೋರಾಟದ ಮಾರ್ಗ. ಇದೂ ಸೋತರೆ ಇರುವ ಇತರ ಏಕೈಕ ಮಾರ್ಗ ಅಧಿಕಾರಗ್ರಹಣ ಒಂದೇ.

ಮಹಾರಾಷ್ಟ್ರದ ರೈತರ ದಿಕ್ಕೆಟ್ಟಿರುವ “ಸಾಲ ಮುಕ್ತಿ” ಕಾರ್ಯಕ್ರಮ ತಾತ್ಕಾಲಿಕ ಎಂದೇ ಭಾವಿಸಬಹುದೇನೋ, ಏಕೆಂದರೆ ಈಗಾಗಲೇ ನ್ಯಾಯಾಲಯಗಳು ಅಲ್ಲಿ ಕಾರ್ಯೋನ್ಮುಖವಾಗುವ ಮೊದಲೇ ಪಟ್ಟಭದ್ರರ ಪ್ರತಿನಿಧಿಯಾದ ಮಹಾರಾಷ್ಟ್ರ ಸರ್ಕಾರ ಸಾಲ ವಸೂಲಿ ಪ್ರಾರಂಭಿಸಿದೆ. ಈ ಸರ್ಕಾರದ ಬತ್ತಳಿಕೆಯಲ್ಲಿ ಹಾಗೂ ಈಗಿರುವ ಬಂಡವಾಳಶಾಹಿ ಕಾನೂನಿನ ಬತ್ತಳಿಕೆಯಲ್ಲಿ ಬಹಳಷ್ಟು ಬಾಣಗಳಿವೆ.

ಇದನ್ನೂ ಓದಿ: ರೈತರಿಗೆ ಬೆಂಬಲ: ಹರಿಯಾಣದ ಪ್ರತಿ ಹಳ್ಳಿಗೂ ಹರಡಿದ ಮಹಾಪಂಚಾಯತ್ – ಗ್ರೌಂಡ್ ರಿಪೋರ್ಟ್

ಈ ಕಾರಣ ಮಹಾರಾಷ್ಟ ರೈತರ “ದಿವಾಳಿ ಚಳವಳಿಯೇ ದಿವಾಳಿಯಾಗಿ ಅವರ ಹೋರಾಟ ಸರಿಯಾದ ವಿಚಾರಕ್ಕೆ ಹಾಗೂ ದಿಕ್ಕಿಗೆ ತಿರುಗಿಯೇ ತಿರುಗುತ್ತದೆ” ಹೋರಾಟದ ವಿಚಾರ ಪೂರ್ಣ ಬದಲಾದಾಗ ಹೋರಾಟದ ಹುಂಬ ನಾಯಕತ್ವ ಕೂಡ ಪೂರ್ಣವಾಗಿ ಮಾಯವಾಗುತ್ತದೆ. ಇಂತಹ ಬದಲಾವಣೆಗಾಗಿ ದೇಶದ ಎಲ್ಲಾ ರೈತರೂ ಆಶಿಸೋಣ, ಶ್ರಮಿಸೋಣ.

31 ಅಕ್ಟೋಬರ್ 1988 ರಂದು ಪ್ರೊ. ಎಂ ಡಿ ನಂಜುಂಡಸ್ವಾಮಿ ಅವರು ಬರೆದ ಈ ಲೇಖನವನ್ನು ರವಿಕುಮಾರ್ ಬಾಗಿ ಅವರು ಸಂಪಾದಿಸಿರುವ “ಹಳ್ಳಿ ಕಣ್ಣಲ್ಲಿ ಇಂಡಿಯ- ಪ್ರೊ. ಎಂ ಡಿ ನಂಜುಂಡಸ್ವಾಮಿ ಬರಹಗಳು” ಎಂಬ ಪುಸ್ತಕದಿಂದ ಆಯ್ದುಕೊಳ್ಳಲಾಗಿದೆ.

ಇದನ್ನೂ ಓದಿ: ಗಂಗೂಲಿಯ ಹೃದಯಾಘಾತಕ್ಕೆ ಮರುಗುವ ಮೋದಿಗೆ 60 ಹುತಾತ್ಮ ರೈತರು ಕಾಣುತ್ತಿಲ್ಲ: ಯೋಗೇಂದ್ರ ಯಾದವ್ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಹಬ್ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ

ವಿಶ್ವದ ಅತಿದೊಡ್ಡ ಲಿಕ್ವಿಫೈಡ್ ನ್ಯಾಚುರಲ್ ಗ್ಯಾಸ್ (ಎಲ್‌ಎನ್‌ಜಿ) ರಫ್ತು ಕೇಂದ್ರಗಳಲ್ಲಿ ಒಂದಾದ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಅಲ್ಲಿನ ಅನಿಲ ಸೌಲಭ್ಯಗಳಲ್ಲಿ...

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ....

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...