Homeಕರ್ನಾಟಕಹಳತು-ವಿವೇಕ: ರೈತರ ಸಾಲ ರದ್ದು ಹೇಗಾಗಬೇಕು? – ಪ್ರೊ. ಎಂಡಿಎನ್

ಹಳತು-ವಿವೇಕ: ರೈತರ ಸಾಲ ರದ್ದು ಹೇಗಾಗಬೇಕು? – ಪ್ರೊ. ಎಂಡಿಎನ್

- Advertisement -
- Advertisement -

ಸಂಪನ್ಮೂಲಗಳನ್ನು ಮಾನವ ಶಕ್ತಿಯ ಮೂಲಕ ಸಿದ್ಧವಸ್ತುಗಳನ್ನಾಗಿ ಪರಿವರ್ತಿಸುವುದೇ ಬಂಡವಾಳದ ಉತ್ಪಾದನೆ. ಈ ದೃಷ್ಟಿಯಲ್ಲಿ ನಮ್ಮ ದೇಶದ ಒಟ್ಟು ಜನಸಂಖ್ಯೆಯ ಶೇಕಡ 75 ಭಾಗ ಇರುವ ರೈತರು ಮತ್ತು ರೈತ ಕೂಲಿಕಾರರೇ ನಮ್ಮ ದೇಶದ ಎಲ್ಲಾ ಬಂಡವಾಳವನ್ನು ಸೃಷ್ಟಿಸುತ್ತಿರುವವರು ಹಾಗೂ ಹೆಚ್ಚಿಸುತ್ತಿರುವವರು

ಹೀಗಿದ್ದರೂ ಇವರೆಲ್ಲಾ ನಿರಂತರ ಸಾಲಗಾರರಾಗಿದ್ದಾರೆ. ಇದಕ್ಕೆ ಕಾರಣ ಏನು? ಇಂತಹ ಸಾಲದಿಂದ ಇವರನ್ನು ಹೇಗೆ ಮುಕ್ತಿಗೊಳಿಸಬೇಕು? ಇವರಿಗೆಲ್ಲಾ ಸಮಾನ ಸ್ಥಾನಮಾನ, ಸಮಾನ ಗೌರವ ಮತ್ತು ಸಮಾಜ ಜೀವನ ವ್ಯವಸ್ಥೆಯನ್ನು ಹೇಗೆ ಸ್ಥಾಪಿಸಬೇಕು? ಈ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವುದೇ ರೈತ ಚಳವಳಿಯ ವಿಜಾರ ಮತ್ತು ಉದ್ದೇಶ.

ಇದನ್ನೂ ಓದಿ: ರೈತ ಹೋರಾಟ 80ನೇ ದಿನಕ್ಕೆ: ಪ್ರೊ ಎಂ.ಡಿ ನಂಜುಂಡಸ್ವಾಮಿಯವರನ್ನು ನೆನೆದ ರೈತ ಒಕ್ಕೂಟ

ಇವುಗಳಿಗೆ ಕರ್ನಾಟಕ ರೈತರು ಉತ್ತರ ಕಂಡುಕೊಂಡಿದ್ದಾರೆ. ತಮ್ಮ ಸಾಲಕ್ಕೆ ಬೆಲೆ ಮೋಸ ಕಾರಣ, ಬೆಲೆ ಸಮಾನತೆಯೇ ಇಂತ ಸಾಲಗಳಿಂದ ಮುಕ್ತಿ ಪಡೆಯಲು ಪರಿಹಾರ, ಬೆಲೆ ಸಮಾನತೆಯ ಕಾನೂನು ರಚನೆಗಾಗಿ ಹೋರಾಡಿ ಜಯಗಳಿಸಿದರೆ ಮಾತ್ರ ಸಮಾನ ಜೀವನ ವ್ಯವಸ್ಥೆಯ ಸ್ಥಾಪನೆ ಸಾಧ್ಯ. ಇದನ್ನೆಲ್ಲಾ ಅಹಿಂಸಾತ್ಮಕ ಸತ್ಯಾಗ್ರಹದಿಂದ ಸ್ಥಾಪಿಸಲು ಪ್ರಯತ್ನಿಸಬೇಕು. ಅಹಿಂಸಾತ್ಮಕ ಸತ್ಯಾಗ್ರಹಕ್ಕೆ ಮಣಿಯದ ಕಳ್ಳ ಸರ್ಕಾರಗಳು ಎದುರಾದರೆ ರೈತರೇ ರಾಜಕೀಯ ಶಕ್ತಿಯಾಗಿ ತಮ್ಮ ಓಟಿನ ಶಕ್ತಿಯಿಂದ ರೈತರದ್ದೇ ಆದ ಸರ್ಕಾರ ಸ್ಥಾಪಿಸಿಕೊಂಡು ರೈತರಿಗೆ ಸಮಾನ ಗೌರವ ಸ್ಥಾನವನ್ನು ದಕ್ಕಿಸಿಕೊಳ್ಳಬೇಕು. ಇದು ಕರ್ನಾಟಕದ ರೈತ ಚಳುವಳಿಯ ಸ್ವಾಭಿಮಾನದ ಹೋರಾಟದ ವಿಚಾರ ಮತ್ತು ಕಾರ್ಯಕ್ರಮ.

ಕರ್ನಾಟಕದ ರೈತರ ಚಳವಳಿ ಮತ್ತು ಕಾರ್ಯಕ್ರಮ ಈ ದಿಕ್ಕಿನಲ್ಲಿ ನಡೆದಿದ್ದರೆ ನೆರೆ ರಾಜ್ಯವಾದ ಮಹಾರಾಷ್ಟ್ರದ ರೈತರ ಚಳವಳಿ ದಿಕ್ಕೆಟ್ಟಿದೆ. ದೇಶದ ಸಂಪತ್ತನ್ನು ದಿನೇ ದಿನೇ ಹೆಚ್ಚಿಸುತ್ತಿರುವ ನಾವು ರೈತರು ಸಾಲಗಾರರೇ ಅಲ್ಲ ಎಂದು ಕರ್ನಾಟಕದ ರೈತರು ಘೋಷಿಸಿಕೊಂಡಿದ್ದರೆ ಮಹಾರಾಷ್ಟ್ರದ ರೈತರು ಈ ಮುಖ್ಯ ವಿಷಯವನ್ನೇ ಮರೆತು ನಾವು ಪಾಪರಾಗಿದ್ದೇವೆ, ದಿವಾಳಿಯಾಗಿದ್ದೇವೆ ಎಂದು ಘೋಷಿಸಬೇಕೆಂದು ಮಹಾರಾಷ್ಟ್ರದ ನ್ಯಾಯಾಲಯಗಳಿಗೆ ಅರ್ಜಿ ಸಲ್ಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಹಳತು-ವಿವೇಕ: ಸಮಕಾಲೀನತೆಯಲ್ಲಿ ಕುವೆಂಪು-ಕ್ರಿಯೆ, ಪ್ರತಿಕ್ರಿಯೆ – ದಿ. ಎಂ. ಡಿ. ನಂಜುಂಡಸ್ವಾಮಿ

ಮಹಾರಾಷ್ಟ್ರದ ನ್ಯಾಯಾಲಯಗಳೇನಾದರೂ ಅಲ್ಲಿನ ರೈತರ ವಾದವನ್ನು ಒಪ್ಪಿ ಅವರೆಲ್ಲ ದಿವಾಳಿಗಳೆಂದು ಘೋಷಿಸಿದರೆ ಆಗುವ ಪರಿಣಾಮಗಳನ್ನು ಅವರೆಲ್ಲ ಯೋಚಿಸಿಲ್ಲ ಎಂದು ಕಾಣುತ್ತದೆ. ಅವರೆಲ್ಲರೂ ದಿವಾಳಿಗಳೆಂದು ನ್ಯಾಯಾಲಯ ಘೋಷಿಸಿದರೆ ಅವರೆಲ್ಲ ಇನ್ನು ಮುಂದೆ ಯಾವುದೇ ಹಣಕಾಸಿನ ಚಟುವಟಿಕೆಯಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ. ಅದಕ್ಕಿಂತ ಹೆಚ್ಚಾಗಿ ಯಾವುದೇ ಚುನಾವಣೆಯಲ್ಲಿ ಅಭ್ಯರ್ಥಿಗಳಾಗುವ ಹಾಗೂ ಮತದಾನದ ಹಕ್ಕುಗಳನ್ನೆಲ್ಲ ಕಳೆದುಕೊಳ್ಳುತ್ತಾರೆ. ಭಾರತದ ರೈತರಿಗಿರುವ ಏಕೈಕ ಅಮೂರ್ತ ಶಕ್ತಿಯಾದ ಮತ ಶಕ್ತಿಯನ್ನೂ ಕಳೆದುಕೊಂಡು ರೈತ ಶಾಶ್ವತ ಜೀತಗಾರನಾಗುತ್ತಾನೆ. ಈ ಮೂಲಕ ಸಾಲಗಳಿಂದ ವಿಮುಕ್ತನಾಗುವುದಿರಲಿ, ಸಾಲದ ಶಿಶುವಾಗಿಯೇ ಉಳಿದು ಬಿದಡುತ್ತಾನೆ.

ಮಹಾರಾಷ್ಟ್ರದ ರೈತರು ಇಷ್ಟು ದಡ್ಡರೇ ಎಂದು ಯಾರಾದರೂ ಹುಬ್ಬೇರಿಸಬಹುದು. ಆದರೆ ಅವರು ದಡ್ಡರಲ್ಲ ಎನ್ನುವುದು ನಿಜವಾದರೂ ಅವರ ಚಳವಳಿಯ ನಾಯಕತ್ವವನ್ನು ಕೆಲವು ಬೇಜವಾಬ್ದಾರಿ ಹುಂಬರು ವಹಿಸಿಕೊಂಡಿದ್ದಾರೆ ಎನ್ನುವುದನ್ನು ಇನ್ನೂ ಗುರುತಿಸಿಕೊಂಡಿಲ್ಲದ ದಡ್ಡರು ಎಂದೇ ಹೇಳಬೇಕಾಗುತ್ತದೆ. ಈ ಹುಂಬ ನಾಯಕರು ಇದೊಂದು ಚಳವಳಿಯ ತಂತ್ರ! ಸಾಲ ಪಾವತಿಯನ್ನು ಅನಿರ್ದಿಷ್ಟ ಕಾಲ ತಪ್ಪಿಸಿಕೊಳ್ಳುವ ತಂತ್ರ ಎನ್ನುವ ಜಾಣ ವಾದವನ್ನು ಮಹಾರಾಷ್ಟ್ರದ ರೈತರ ಮುಂದಿಡಬಹುದು. ಆದರೆ, ಇಂತಹ ತಂತ್ರಗಳ ತಳಹದಿಯ ಆಧಾರದ ಮೇಲೆ ರೈತ ಚಳವಳಿ ರೂಪಿತವಾಗಬೇಕೋ ಅಥವಾ ಸತ್ಯದ ಆಧಾರದ ಮೇಲೆ ಹಾಗೂ ಸತ್ಯಾಗ್ರಹದ ಆಧಾರದ ಮೇಲೆ ರೈತ ಚಳವಳಿ ರೂಪಿತವಾಗಬೇಕೋ ಎನ್ನುವುದು ಅತಿ ಮುಖ್ಯವಾದ ಅಂಶ.

ಇದನ್ನೂ ಓದಿ: ಕೃಷಿ ಕಾಯ್ದೆಗಳ ಪರ ಪ್ರಚಾರ: ಒಕ್ಕೂಟ ಸರ್ಕಾರ ಖರ್ಚು ಮಾಡಿರುವ ಹಣ ಎಷ್ಟು ಗೊತ್ತೇ?

ಏಕೆಂದರೆ, ಸಮಾನತೆಯನ್ನು ತಂತ್ರಗಳ ಮೂಲಕ ದೊರಕಿಸಿಕೊಳ್ಳಲು ಸಾಧ್ಯವಿಲ್ಲ. ಕಾರಣ, ಅಸಮಾನತೆಯನ್ನು ಮುಂದುವರಿಸಬೇಕೆನ್ನುವವರ ಬಳಿ ತಂತ್ರಗಳಿಗೇನೂ ಅಭಾವವಿರುವುದಿಲ್ಲ. ಹಾಗೆಯೇ ಸಮಾನತೆಯನ್ನು ಯಾರೂ ಚಿನ್ನದ ತಟ್ಟೆಯಲ್ಲಿ ಅರ್ಪಿಸುವುದಿಲ್ಲ. ಅದನ್ನು ಹೋರಾಟದ ಮೂಲಕವೇ ದಕ್ಕಿಸಿಕೊಳ್ಳಬೇಕು. ಇದಕ್ಕೆ ತಾರ್ಕಿಕ ಹೋರಾಟದ ಮಾರ್ಗವೊಂದೇ ಇರುವ ದಾರಿ. ಸತ್ಯಾಗ್ರಹವೇ ಈ ಹೋರಾಟದ ಮಾರ್ಗ. ಇದೂ ಸೋತರೆ ಇರುವ ಇತರ ಏಕೈಕ ಮಾರ್ಗ ಅಧಿಕಾರಗ್ರಹಣ ಒಂದೇ.

ಮಹಾರಾಷ್ಟ್ರದ ರೈತರ ದಿಕ್ಕೆಟ್ಟಿರುವ “ಸಾಲ ಮುಕ್ತಿ” ಕಾರ್ಯಕ್ರಮ ತಾತ್ಕಾಲಿಕ ಎಂದೇ ಭಾವಿಸಬಹುದೇನೋ, ಏಕೆಂದರೆ ಈಗಾಗಲೇ ನ್ಯಾಯಾಲಯಗಳು ಅಲ್ಲಿ ಕಾರ್ಯೋನ್ಮುಖವಾಗುವ ಮೊದಲೇ ಪಟ್ಟಭದ್ರರ ಪ್ರತಿನಿಧಿಯಾದ ಮಹಾರಾಷ್ಟ್ರ ಸರ್ಕಾರ ಸಾಲ ವಸೂಲಿ ಪ್ರಾರಂಭಿಸಿದೆ. ಈ ಸರ್ಕಾರದ ಬತ್ತಳಿಕೆಯಲ್ಲಿ ಹಾಗೂ ಈಗಿರುವ ಬಂಡವಾಳಶಾಹಿ ಕಾನೂನಿನ ಬತ್ತಳಿಕೆಯಲ್ಲಿ ಬಹಳಷ್ಟು ಬಾಣಗಳಿವೆ.

ಇದನ್ನೂ ಓದಿ: ರೈತರಿಗೆ ಬೆಂಬಲ: ಹರಿಯಾಣದ ಪ್ರತಿ ಹಳ್ಳಿಗೂ ಹರಡಿದ ಮಹಾಪಂಚಾಯತ್ – ಗ್ರೌಂಡ್ ರಿಪೋರ್ಟ್

ಈ ಕಾರಣ ಮಹಾರಾಷ್ಟ ರೈತರ “ದಿವಾಳಿ ಚಳವಳಿಯೇ ದಿವಾಳಿಯಾಗಿ ಅವರ ಹೋರಾಟ ಸರಿಯಾದ ವಿಚಾರಕ್ಕೆ ಹಾಗೂ ದಿಕ್ಕಿಗೆ ತಿರುಗಿಯೇ ತಿರುಗುತ್ತದೆ” ಹೋರಾಟದ ವಿಚಾರ ಪೂರ್ಣ ಬದಲಾದಾಗ ಹೋರಾಟದ ಹುಂಬ ನಾಯಕತ್ವ ಕೂಡ ಪೂರ್ಣವಾಗಿ ಮಾಯವಾಗುತ್ತದೆ. ಇಂತಹ ಬದಲಾವಣೆಗಾಗಿ ದೇಶದ ಎಲ್ಲಾ ರೈತರೂ ಆಶಿಸೋಣ, ಶ್ರಮಿಸೋಣ.

31 ಅಕ್ಟೋಬರ್ 1988 ರಂದು ಪ್ರೊ. ಎಂ ಡಿ ನಂಜುಂಡಸ್ವಾಮಿ ಅವರು ಬರೆದ ಈ ಲೇಖನವನ್ನು ರವಿಕುಮಾರ್ ಬಾಗಿ ಅವರು ಸಂಪಾದಿಸಿರುವ “ಹಳ್ಳಿ ಕಣ್ಣಲ್ಲಿ ಇಂಡಿಯ- ಪ್ರೊ. ಎಂ ಡಿ ನಂಜುಂಡಸ್ವಾಮಿ ಬರಹಗಳು” ಎಂಬ ಪುಸ್ತಕದಿಂದ ಆಯ್ದುಕೊಳ್ಳಲಾಗಿದೆ.

ಇದನ್ನೂ ಓದಿ: ಗಂಗೂಲಿಯ ಹೃದಯಾಘಾತಕ್ಕೆ ಮರುಗುವ ಮೋದಿಗೆ 60 ಹುತಾತ್ಮ ರೈತರು ಕಾಣುತ್ತಿಲ್ಲ: ಯೋಗೇಂದ್ರ ಯಾದವ್ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...