Homeಕರ್ನಾಟಕಹಳತು-ವಿವೇಕ: ರೈತರ ಸಾಲ ರದ್ದು ಹೇಗಾಗಬೇಕು? – ಪ್ರೊ. ಎಂಡಿಎನ್

ಹಳತು-ವಿವೇಕ: ರೈತರ ಸಾಲ ರದ್ದು ಹೇಗಾಗಬೇಕು? – ಪ್ರೊ. ಎಂಡಿಎನ್

- Advertisement -
- Advertisement -

ಸಂಪನ್ಮೂಲಗಳನ್ನು ಮಾನವ ಶಕ್ತಿಯ ಮೂಲಕ ಸಿದ್ಧವಸ್ತುಗಳನ್ನಾಗಿ ಪರಿವರ್ತಿಸುವುದೇ ಬಂಡವಾಳದ ಉತ್ಪಾದನೆ. ಈ ದೃಷ್ಟಿಯಲ್ಲಿ ನಮ್ಮ ದೇಶದ ಒಟ್ಟು ಜನಸಂಖ್ಯೆಯ ಶೇಕಡ 75 ಭಾಗ ಇರುವ ರೈತರು ಮತ್ತು ರೈತ ಕೂಲಿಕಾರರೇ ನಮ್ಮ ದೇಶದ ಎಲ್ಲಾ ಬಂಡವಾಳವನ್ನು ಸೃಷ್ಟಿಸುತ್ತಿರುವವರು ಹಾಗೂ ಹೆಚ್ಚಿಸುತ್ತಿರುವವರು

ಹೀಗಿದ್ದರೂ ಇವರೆಲ್ಲಾ ನಿರಂತರ ಸಾಲಗಾರರಾಗಿದ್ದಾರೆ. ಇದಕ್ಕೆ ಕಾರಣ ಏನು? ಇಂತಹ ಸಾಲದಿಂದ ಇವರನ್ನು ಹೇಗೆ ಮುಕ್ತಿಗೊಳಿಸಬೇಕು? ಇವರಿಗೆಲ್ಲಾ ಸಮಾನ ಸ್ಥಾನಮಾನ, ಸಮಾನ ಗೌರವ ಮತ್ತು ಸಮಾಜ ಜೀವನ ವ್ಯವಸ್ಥೆಯನ್ನು ಹೇಗೆ ಸ್ಥಾಪಿಸಬೇಕು? ಈ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವುದೇ ರೈತ ಚಳವಳಿಯ ವಿಜಾರ ಮತ್ತು ಉದ್ದೇಶ.

ಇದನ್ನೂ ಓದಿ: ರೈತ ಹೋರಾಟ 80ನೇ ದಿನಕ್ಕೆ: ಪ್ರೊ ಎಂ.ಡಿ ನಂಜುಂಡಸ್ವಾಮಿಯವರನ್ನು ನೆನೆದ ರೈತ ಒಕ್ಕೂಟ

ಇವುಗಳಿಗೆ ಕರ್ನಾಟಕ ರೈತರು ಉತ್ತರ ಕಂಡುಕೊಂಡಿದ್ದಾರೆ. ತಮ್ಮ ಸಾಲಕ್ಕೆ ಬೆಲೆ ಮೋಸ ಕಾರಣ, ಬೆಲೆ ಸಮಾನತೆಯೇ ಇಂತ ಸಾಲಗಳಿಂದ ಮುಕ್ತಿ ಪಡೆಯಲು ಪರಿಹಾರ, ಬೆಲೆ ಸಮಾನತೆಯ ಕಾನೂನು ರಚನೆಗಾಗಿ ಹೋರಾಡಿ ಜಯಗಳಿಸಿದರೆ ಮಾತ್ರ ಸಮಾನ ಜೀವನ ವ್ಯವಸ್ಥೆಯ ಸ್ಥಾಪನೆ ಸಾಧ್ಯ. ಇದನ್ನೆಲ್ಲಾ ಅಹಿಂಸಾತ್ಮಕ ಸತ್ಯಾಗ್ರಹದಿಂದ ಸ್ಥಾಪಿಸಲು ಪ್ರಯತ್ನಿಸಬೇಕು. ಅಹಿಂಸಾತ್ಮಕ ಸತ್ಯಾಗ್ರಹಕ್ಕೆ ಮಣಿಯದ ಕಳ್ಳ ಸರ್ಕಾರಗಳು ಎದುರಾದರೆ ರೈತರೇ ರಾಜಕೀಯ ಶಕ್ತಿಯಾಗಿ ತಮ್ಮ ಓಟಿನ ಶಕ್ತಿಯಿಂದ ರೈತರದ್ದೇ ಆದ ಸರ್ಕಾರ ಸ್ಥಾಪಿಸಿಕೊಂಡು ರೈತರಿಗೆ ಸಮಾನ ಗೌರವ ಸ್ಥಾನವನ್ನು ದಕ್ಕಿಸಿಕೊಳ್ಳಬೇಕು. ಇದು ಕರ್ನಾಟಕದ ರೈತ ಚಳುವಳಿಯ ಸ್ವಾಭಿಮಾನದ ಹೋರಾಟದ ವಿಚಾರ ಮತ್ತು ಕಾರ್ಯಕ್ರಮ.

ಕರ್ನಾಟಕದ ರೈತರ ಚಳವಳಿ ಮತ್ತು ಕಾರ್ಯಕ್ರಮ ಈ ದಿಕ್ಕಿನಲ್ಲಿ ನಡೆದಿದ್ದರೆ ನೆರೆ ರಾಜ್ಯವಾದ ಮಹಾರಾಷ್ಟ್ರದ ರೈತರ ಚಳವಳಿ ದಿಕ್ಕೆಟ್ಟಿದೆ. ದೇಶದ ಸಂಪತ್ತನ್ನು ದಿನೇ ದಿನೇ ಹೆಚ್ಚಿಸುತ್ತಿರುವ ನಾವು ರೈತರು ಸಾಲಗಾರರೇ ಅಲ್ಲ ಎಂದು ಕರ್ನಾಟಕದ ರೈತರು ಘೋಷಿಸಿಕೊಂಡಿದ್ದರೆ ಮಹಾರಾಷ್ಟ್ರದ ರೈತರು ಈ ಮುಖ್ಯ ವಿಷಯವನ್ನೇ ಮರೆತು ನಾವು ಪಾಪರಾಗಿದ್ದೇವೆ, ದಿವಾಳಿಯಾಗಿದ್ದೇವೆ ಎಂದು ಘೋಷಿಸಬೇಕೆಂದು ಮಹಾರಾಷ್ಟ್ರದ ನ್ಯಾಯಾಲಯಗಳಿಗೆ ಅರ್ಜಿ ಸಲ್ಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಹಳತು-ವಿವೇಕ: ಸಮಕಾಲೀನತೆಯಲ್ಲಿ ಕುವೆಂಪು-ಕ್ರಿಯೆ, ಪ್ರತಿಕ್ರಿಯೆ – ದಿ. ಎಂ. ಡಿ. ನಂಜುಂಡಸ್ವಾಮಿ

ಮಹಾರಾಷ್ಟ್ರದ ನ್ಯಾಯಾಲಯಗಳೇನಾದರೂ ಅಲ್ಲಿನ ರೈತರ ವಾದವನ್ನು ಒಪ್ಪಿ ಅವರೆಲ್ಲ ದಿವಾಳಿಗಳೆಂದು ಘೋಷಿಸಿದರೆ ಆಗುವ ಪರಿಣಾಮಗಳನ್ನು ಅವರೆಲ್ಲ ಯೋಚಿಸಿಲ್ಲ ಎಂದು ಕಾಣುತ್ತದೆ. ಅವರೆಲ್ಲರೂ ದಿವಾಳಿಗಳೆಂದು ನ್ಯಾಯಾಲಯ ಘೋಷಿಸಿದರೆ ಅವರೆಲ್ಲ ಇನ್ನು ಮುಂದೆ ಯಾವುದೇ ಹಣಕಾಸಿನ ಚಟುವಟಿಕೆಯಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ. ಅದಕ್ಕಿಂತ ಹೆಚ್ಚಾಗಿ ಯಾವುದೇ ಚುನಾವಣೆಯಲ್ಲಿ ಅಭ್ಯರ್ಥಿಗಳಾಗುವ ಹಾಗೂ ಮತದಾನದ ಹಕ್ಕುಗಳನ್ನೆಲ್ಲ ಕಳೆದುಕೊಳ್ಳುತ್ತಾರೆ. ಭಾರತದ ರೈತರಿಗಿರುವ ಏಕೈಕ ಅಮೂರ್ತ ಶಕ್ತಿಯಾದ ಮತ ಶಕ್ತಿಯನ್ನೂ ಕಳೆದುಕೊಂಡು ರೈತ ಶಾಶ್ವತ ಜೀತಗಾರನಾಗುತ್ತಾನೆ. ಈ ಮೂಲಕ ಸಾಲಗಳಿಂದ ವಿಮುಕ್ತನಾಗುವುದಿರಲಿ, ಸಾಲದ ಶಿಶುವಾಗಿಯೇ ಉಳಿದು ಬಿದಡುತ್ತಾನೆ.

ಮಹಾರಾಷ್ಟ್ರದ ರೈತರು ಇಷ್ಟು ದಡ್ಡರೇ ಎಂದು ಯಾರಾದರೂ ಹುಬ್ಬೇರಿಸಬಹುದು. ಆದರೆ ಅವರು ದಡ್ಡರಲ್ಲ ಎನ್ನುವುದು ನಿಜವಾದರೂ ಅವರ ಚಳವಳಿಯ ನಾಯಕತ್ವವನ್ನು ಕೆಲವು ಬೇಜವಾಬ್ದಾರಿ ಹುಂಬರು ವಹಿಸಿಕೊಂಡಿದ್ದಾರೆ ಎನ್ನುವುದನ್ನು ಇನ್ನೂ ಗುರುತಿಸಿಕೊಂಡಿಲ್ಲದ ದಡ್ಡರು ಎಂದೇ ಹೇಳಬೇಕಾಗುತ್ತದೆ. ಈ ಹುಂಬ ನಾಯಕರು ಇದೊಂದು ಚಳವಳಿಯ ತಂತ್ರ! ಸಾಲ ಪಾವತಿಯನ್ನು ಅನಿರ್ದಿಷ್ಟ ಕಾಲ ತಪ್ಪಿಸಿಕೊಳ್ಳುವ ತಂತ್ರ ಎನ್ನುವ ಜಾಣ ವಾದವನ್ನು ಮಹಾರಾಷ್ಟ್ರದ ರೈತರ ಮುಂದಿಡಬಹುದು. ಆದರೆ, ಇಂತಹ ತಂತ್ರಗಳ ತಳಹದಿಯ ಆಧಾರದ ಮೇಲೆ ರೈತ ಚಳವಳಿ ರೂಪಿತವಾಗಬೇಕೋ ಅಥವಾ ಸತ್ಯದ ಆಧಾರದ ಮೇಲೆ ಹಾಗೂ ಸತ್ಯಾಗ್ರಹದ ಆಧಾರದ ಮೇಲೆ ರೈತ ಚಳವಳಿ ರೂಪಿತವಾಗಬೇಕೋ ಎನ್ನುವುದು ಅತಿ ಮುಖ್ಯವಾದ ಅಂಶ.

ಇದನ್ನೂ ಓದಿ: ಕೃಷಿ ಕಾಯ್ದೆಗಳ ಪರ ಪ್ರಚಾರ: ಒಕ್ಕೂಟ ಸರ್ಕಾರ ಖರ್ಚು ಮಾಡಿರುವ ಹಣ ಎಷ್ಟು ಗೊತ್ತೇ?

ಏಕೆಂದರೆ, ಸಮಾನತೆಯನ್ನು ತಂತ್ರಗಳ ಮೂಲಕ ದೊರಕಿಸಿಕೊಳ್ಳಲು ಸಾಧ್ಯವಿಲ್ಲ. ಕಾರಣ, ಅಸಮಾನತೆಯನ್ನು ಮುಂದುವರಿಸಬೇಕೆನ್ನುವವರ ಬಳಿ ತಂತ್ರಗಳಿಗೇನೂ ಅಭಾವವಿರುವುದಿಲ್ಲ. ಹಾಗೆಯೇ ಸಮಾನತೆಯನ್ನು ಯಾರೂ ಚಿನ್ನದ ತಟ್ಟೆಯಲ್ಲಿ ಅರ್ಪಿಸುವುದಿಲ್ಲ. ಅದನ್ನು ಹೋರಾಟದ ಮೂಲಕವೇ ದಕ್ಕಿಸಿಕೊಳ್ಳಬೇಕು. ಇದಕ್ಕೆ ತಾರ್ಕಿಕ ಹೋರಾಟದ ಮಾರ್ಗವೊಂದೇ ಇರುವ ದಾರಿ. ಸತ್ಯಾಗ್ರಹವೇ ಈ ಹೋರಾಟದ ಮಾರ್ಗ. ಇದೂ ಸೋತರೆ ಇರುವ ಇತರ ಏಕೈಕ ಮಾರ್ಗ ಅಧಿಕಾರಗ್ರಹಣ ಒಂದೇ.

ಮಹಾರಾಷ್ಟ್ರದ ರೈತರ ದಿಕ್ಕೆಟ್ಟಿರುವ “ಸಾಲ ಮುಕ್ತಿ” ಕಾರ್ಯಕ್ರಮ ತಾತ್ಕಾಲಿಕ ಎಂದೇ ಭಾವಿಸಬಹುದೇನೋ, ಏಕೆಂದರೆ ಈಗಾಗಲೇ ನ್ಯಾಯಾಲಯಗಳು ಅಲ್ಲಿ ಕಾರ್ಯೋನ್ಮುಖವಾಗುವ ಮೊದಲೇ ಪಟ್ಟಭದ್ರರ ಪ್ರತಿನಿಧಿಯಾದ ಮಹಾರಾಷ್ಟ್ರ ಸರ್ಕಾರ ಸಾಲ ವಸೂಲಿ ಪ್ರಾರಂಭಿಸಿದೆ. ಈ ಸರ್ಕಾರದ ಬತ್ತಳಿಕೆಯಲ್ಲಿ ಹಾಗೂ ಈಗಿರುವ ಬಂಡವಾಳಶಾಹಿ ಕಾನೂನಿನ ಬತ್ತಳಿಕೆಯಲ್ಲಿ ಬಹಳಷ್ಟು ಬಾಣಗಳಿವೆ.

ಇದನ್ನೂ ಓದಿ: ರೈತರಿಗೆ ಬೆಂಬಲ: ಹರಿಯಾಣದ ಪ್ರತಿ ಹಳ್ಳಿಗೂ ಹರಡಿದ ಮಹಾಪಂಚಾಯತ್ – ಗ್ರೌಂಡ್ ರಿಪೋರ್ಟ್

ಈ ಕಾರಣ ಮಹಾರಾಷ್ಟ ರೈತರ “ದಿವಾಳಿ ಚಳವಳಿಯೇ ದಿವಾಳಿಯಾಗಿ ಅವರ ಹೋರಾಟ ಸರಿಯಾದ ವಿಚಾರಕ್ಕೆ ಹಾಗೂ ದಿಕ್ಕಿಗೆ ತಿರುಗಿಯೇ ತಿರುಗುತ್ತದೆ” ಹೋರಾಟದ ವಿಚಾರ ಪೂರ್ಣ ಬದಲಾದಾಗ ಹೋರಾಟದ ಹುಂಬ ನಾಯಕತ್ವ ಕೂಡ ಪೂರ್ಣವಾಗಿ ಮಾಯವಾಗುತ್ತದೆ. ಇಂತಹ ಬದಲಾವಣೆಗಾಗಿ ದೇಶದ ಎಲ್ಲಾ ರೈತರೂ ಆಶಿಸೋಣ, ಶ್ರಮಿಸೋಣ.

31 ಅಕ್ಟೋಬರ್ 1988 ರಂದು ಪ್ರೊ. ಎಂ ಡಿ ನಂಜುಂಡಸ್ವಾಮಿ ಅವರು ಬರೆದ ಈ ಲೇಖನವನ್ನು ರವಿಕುಮಾರ್ ಬಾಗಿ ಅವರು ಸಂಪಾದಿಸಿರುವ “ಹಳ್ಳಿ ಕಣ್ಣಲ್ಲಿ ಇಂಡಿಯ- ಪ್ರೊ. ಎಂ ಡಿ ನಂಜುಂಡಸ್ವಾಮಿ ಬರಹಗಳು” ಎಂಬ ಪುಸ್ತಕದಿಂದ ಆಯ್ದುಕೊಳ್ಳಲಾಗಿದೆ.

ಇದನ್ನೂ ಓದಿ: ಗಂಗೂಲಿಯ ಹೃದಯಾಘಾತಕ್ಕೆ ಮರುಗುವ ಮೋದಿಗೆ 60 ಹುತಾತ್ಮ ರೈತರು ಕಾಣುತ್ತಿಲ್ಲ: ಯೋಗೇಂದ್ರ ಯಾದವ್ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...