Homeಕರ್ನಾಟಕಹಳತು-ವಿವೇಕ: ರೈತರ ಸಾಲ ರದ್ದು ಹೇಗಾಗಬೇಕು? – ಪ್ರೊ. ಎಂಡಿಎನ್

ಹಳತು-ವಿವೇಕ: ರೈತರ ಸಾಲ ರದ್ದು ಹೇಗಾಗಬೇಕು? – ಪ್ರೊ. ಎಂಡಿಎನ್

- Advertisement -
- Advertisement -

ಸಂಪನ್ಮೂಲಗಳನ್ನು ಮಾನವ ಶಕ್ತಿಯ ಮೂಲಕ ಸಿದ್ಧವಸ್ತುಗಳನ್ನಾಗಿ ಪರಿವರ್ತಿಸುವುದೇ ಬಂಡವಾಳದ ಉತ್ಪಾದನೆ. ಈ ದೃಷ್ಟಿಯಲ್ಲಿ ನಮ್ಮ ದೇಶದ ಒಟ್ಟು ಜನಸಂಖ್ಯೆಯ ಶೇಕಡ 75 ಭಾಗ ಇರುವ ರೈತರು ಮತ್ತು ರೈತ ಕೂಲಿಕಾರರೇ ನಮ್ಮ ದೇಶದ ಎಲ್ಲಾ ಬಂಡವಾಳವನ್ನು ಸೃಷ್ಟಿಸುತ್ತಿರುವವರು ಹಾಗೂ ಹೆಚ್ಚಿಸುತ್ತಿರುವವರು

ಹೀಗಿದ್ದರೂ ಇವರೆಲ್ಲಾ ನಿರಂತರ ಸಾಲಗಾರರಾಗಿದ್ದಾರೆ. ಇದಕ್ಕೆ ಕಾರಣ ಏನು? ಇಂತಹ ಸಾಲದಿಂದ ಇವರನ್ನು ಹೇಗೆ ಮುಕ್ತಿಗೊಳಿಸಬೇಕು? ಇವರಿಗೆಲ್ಲಾ ಸಮಾನ ಸ್ಥಾನಮಾನ, ಸಮಾನ ಗೌರವ ಮತ್ತು ಸಮಾಜ ಜೀವನ ವ್ಯವಸ್ಥೆಯನ್ನು ಹೇಗೆ ಸ್ಥಾಪಿಸಬೇಕು? ಈ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವುದೇ ರೈತ ಚಳವಳಿಯ ವಿಜಾರ ಮತ್ತು ಉದ್ದೇಶ.

ಇದನ್ನೂ ಓದಿ: ರೈತ ಹೋರಾಟ 80ನೇ ದಿನಕ್ಕೆ: ಪ್ರೊ ಎಂ.ಡಿ ನಂಜುಂಡಸ್ವಾಮಿಯವರನ್ನು ನೆನೆದ ರೈತ ಒಕ್ಕೂಟ

ಇವುಗಳಿಗೆ ಕರ್ನಾಟಕ ರೈತರು ಉತ್ತರ ಕಂಡುಕೊಂಡಿದ್ದಾರೆ. ತಮ್ಮ ಸಾಲಕ್ಕೆ ಬೆಲೆ ಮೋಸ ಕಾರಣ, ಬೆಲೆ ಸಮಾನತೆಯೇ ಇಂತ ಸಾಲಗಳಿಂದ ಮುಕ್ತಿ ಪಡೆಯಲು ಪರಿಹಾರ, ಬೆಲೆ ಸಮಾನತೆಯ ಕಾನೂನು ರಚನೆಗಾಗಿ ಹೋರಾಡಿ ಜಯಗಳಿಸಿದರೆ ಮಾತ್ರ ಸಮಾನ ಜೀವನ ವ್ಯವಸ್ಥೆಯ ಸ್ಥಾಪನೆ ಸಾಧ್ಯ. ಇದನ್ನೆಲ್ಲಾ ಅಹಿಂಸಾತ್ಮಕ ಸತ್ಯಾಗ್ರಹದಿಂದ ಸ್ಥಾಪಿಸಲು ಪ್ರಯತ್ನಿಸಬೇಕು. ಅಹಿಂಸಾತ್ಮಕ ಸತ್ಯಾಗ್ರಹಕ್ಕೆ ಮಣಿಯದ ಕಳ್ಳ ಸರ್ಕಾರಗಳು ಎದುರಾದರೆ ರೈತರೇ ರಾಜಕೀಯ ಶಕ್ತಿಯಾಗಿ ತಮ್ಮ ಓಟಿನ ಶಕ್ತಿಯಿಂದ ರೈತರದ್ದೇ ಆದ ಸರ್ಕಾರ ಸ್ಥಾಪಿಸಿಕೊಂಡು ರೈತರಿಗೆ ಸಮಾನ ಗೌರವ ಸ್ಥಾನವನ್ನು ದಕ್ಕಿಸಿಕೊಳ್ಳಬೇಕು. ಇದು ಕರ್ನಾಟಕದ ರೈತ ಚಳುವಳಿಯ ಸ್ವಾಭಿಮಾನದ ಹೋರಾಟದ ವಿಚಾರ ಮತ್ತು ಕಾರ್ಯಕ್ರಮ.

ಕರ್ನಾಟಕದ ರೈತರ ಚಳವಳಿ ಮತ್ತು ಕಾರ್ಯಕ್ರಮ ಈ ದಿಕ್ಕಿನಲ್ಲಿ ನಡೆದಿದ್ದರೆ ನೆರೆ ರಾಜ್ಯವಾದ ಮಹಾರಾಷ್ಟ್ರದ ರೈತರ ಚಳವಳಿ ದಿಕ್ಕೆಟ್ಟಿದೆ. ದೇಶದ ಸಂಪತ್ತನ್ನು ದಿನೇ ದಿನೇ ಹೆಚ್ಚಿಸುತ್ತಿರುವ ನಾವು ರೈತರು ಸಾಲಗಾರರೇ ಅಲ್ಲ ಎಂದು ಕರ್ನಾಟಕದ ರೈತರು ಘೋಷಿಸಿಕೊಂಡಿದ್ದರೆ ಮಹಾರಾಷ್ಟ್ರದ ರೈತರು ಈ ಮುಖ್ಯ ವಿಷಯವನ್ನೇ ಮರೆತು ನಾವು ಪಾಪರಾಗಿದ್ದೇವೆ, ದಿವಾಳಿಯಾಗಿದ್ದೇವೆ ಎಂದು ಘೋಷಿಸಬೇಕೆಂದು ಮಹಾರಾಷ್ಟ್ರದ ನ್ಯಾಯಾಲಯಗಳಿಗೆ ಅರ್ಜಿ ಸಲ್ಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಹಳತು-ವಿವೇಕ: ಸಮಕಾಲೀನತೆಯಲ್ಲಿ ಕುವೆಂಪು-ಕ್ರಿಯೆ, ಪ್ರತಿಕ್ರಿಯೆ – ದಿ. ಎಂ. ಡಿ. ನಂಜುಂಡಸ್ವಾಮಿ

ಮಹಾರಾಷ್ಟ್ರದ ನ್ಯಾಯಾಲಯಗಳೇನಾದರೂ ಅಲ್ಲಿನ ರೈತರ ವಾದವನ್ನು ಒಪ್ಪಿ ಅವರೆಲ್ಲ ದಿವಾಳಿಗಳೆಂದು ಘೋಷಿಸಿದರೆ ಆಗುವ ಪರಿಣಾಮಗಳನ್ನು ಅವರೆಲ್ಲ ಯೋಚಿಸಿಲ್ಲ ಎಂದು ಕಾಣುತ್ತದೆ. ಅವರೆಲ್ಲರೂ ದಿವಾಳಿಗಳೆಂದು ನ್ಯಾಯಾಲಯ ಘೋಷಿಸಿದರೆ ಅವರೆಲ್ಲ ಇನ್ನು ಮುಂದೆ ಯಾವುದೇ ಹಣಕಾಸಿನ ಚಟುವಟಿಕೆಯಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ. ಅದಕ್ಕಿಂತ ಹೆಚ್ಚಾಗಿ ಯಾವುದೇ ಚುನಾವಣೆಯಲ್ಲಿ ಅಭ್ಯರ್ಥಿಗಳಾಗುವ ಹಾಗೂ ಮತದಾನದ ಹಕ್ಕುಗಳನ್ನೆಲ್ಲ ಕಳೆದುಕೊಳ್ಳುತ್ತಾರೆ. ಭಾರತದ ರೈತರಿಗಿರುವ ಏಕೈಕ ಅಮೂರ್ತ ಶಕ್ತಿಯಾದ ಮತ ಶಕ್ತಿಯನ್ನೂ ಕಳೆದುಕೊಂಡು ರೈತ ಶಾಶ್ವತ ಜೀತಗಾರನಾಗುತ್ತಾನೆ. ಈ ಮೂಲಕ ಸಾಲಗಳಿಂದ ವಿಮುಕ್ತನಾಗುವುದಿರಲಿ, ಸಾಲದ ಶಿಶುವಾಗಿಯೇ ಉಳಿದು ಬಿದಡುತ್ತಾನೆ.

ಮಹಾರಾಷ್ಟ್ರದ ರೈತರು ಇಷ್ಟು ದಡ್ಡರೇ ಎಂದು ಯಾರಾದರೂ ಹುಬ್ಬೇರಿಸಬಹುದು. ಆದರೆ ಅವರು ದಡ್ಡರಲ್ಲ ಎನ್ನುವುದು ನಿಜವಾದರೂ ಅವರ ಚಳವಳಿಯ ನಾಯಕತ್ವವನ್ನು ಕೆಲವು ಬೇಜವಾಬ್ದಾರಿ ಹುಂಬರು ವಹಿಸಿಕೊಂಡಿದ್ದಾರೆ ಎನ್ನುವುದನ್ನು ಇನ್ನೂ ಗುರುತಿಸಿಕೊಂಡಿಲ್ಲದ ದಡ್ಡರು ಎಂದೇ ಹೇಳಬೇಕಾಗುತ್ತದೆ. ಈ ಹುಂಬ ನಾಯಕರು ಇದೊಂದು ಚಳವಳಿಯ ತಂತ್ರ! ಸಾಲ ಪಾವತಿಯನ್ನು ಅನಿರ್ದಿಷ್ಟ ಕಾಲ ತಪ್ಪಿಸಿಕೊಳ್ಳುವ ತಂತ್ರ ಎನ್ನುವ ಜಾಣ ವಾದವನ್ನು ಮಹಾರಾಷ್ಟ್ರದ ರೈತರ ಮುಂದಿಡಬಹುದು. ಆದರೆ, ಇಂತಹ ತಂತ್ರಗಳ ತಳಹದಿಯ ಆಧಾರದ ಮೇಲೆ ರೈತ ಚಳವಳಿ ರೂಪಿತವಾಗಬೇಕೋ ಅಥವಾ ಸತ್ಯದ ಆಧಾರದ ಮೇಲೆ ಹಾಗೂ ಸತ್ಯಾಗ್ರಹದ ಆಧಾರದ ಮೇಲೆ ರೈತ ಚಳವಳಿ ರೂಪಿತವಾಗಬೇಕೋ ಎನ್ನುವುದು ಅತಿ ಮುಖ್ಯವಾದ ಅಂಶ.

ಇದನ್ನೂ ಓದಿ: ಕೃಷಿ ಕಾಯ್ದೆಗಳ ಪರ ಪ್ರಚಾರ: ಒಕ್ಕೂಟ ಸರ್ಕಾರ ಖರ್ಚು ಮಾಡಿರುವ ಹಣ ಎಷ್ಟು ಗೊತ್ತೇ?

ಏಕೆಂದರೆ, ಸಮಾನತೆಯನ್ನು ತಂತ್ರಗಳ ಮೂಲಕ ದೊರಕಿಸಿಕೊಳ್ಳಲು ಸಾಧ್ಯವಿಲ್ಲ. ಕಾರಣ, ಅಸಮಾನತೆಯನ್ನು ಮುಂದುವರಿಸಬೇಕೆನ್ನುವವರ ಬಳಿ ತಂತ್ರಗಳಿಗೇನೂ ಅಭಾವವಿರುವುದಿಲ್ಲ. ಹಾಗೆಯೇ ಸಮಾನತೆಯನ್ನು ಯಾರೂ ಚಿನ್ನದ ತಟ್ಟೆಯಲ್ಲಿ ಅರ್ಪಿಸುವುದಿಲ್ಲ. ಅದನ್ನು ಹೋರಾಟದ ಮೂಲಕವೇ ದಕ್ಕಿಸಿಕೊಳ್ಳಬೇಕು. ಇದಕ್ಕೆ ತಾರ್ಕಿಕ ಹೋರಾಟದ ಮಾರ್ಗವೊಂದೇ ಇರುವ ದಾರಿ. ಸತ್ಯಾಗ್ರಹವೇ ಈ ಹೋರಾಟದ ಮಾರ್ಗ. ಇದೂ ಸೋತರೆ ಇರುವ ಇತರ ಏಕೈಕ ಮಾರ್ಗ ಅಧಿಕಾರಗ್ರಹಣ ಒಂದೇ.

ಮಹಾರಾಷ್ಟ್ರದ ರೈತರ ದಿಕ್ಕೆಟ್ಟಿರುವ “ಸಾಲ ಮುಕ್ತಿ” ಕಾರ್ಯಕ್ರಮ ತಾತ್ಕಾಲಿಕ ಎಂದೇ ಭಾವಿಸಬಹುದೇನೋ, ಏಕೆಂದರೆ ಈಗಾಗಲೇ ನ್ಯಾಯಾಲಯಗಳು ಅಲ್ಲಿ ಕಾರ್ಯೋನ್ಮುಖವಾಗುವ ಮೊದಲೇ ಪಟ್ಟಭದ್ರರ ಪ್ರತಿನಿಧಿಯಾದ ಮಹಾರಾಷ್ಟ್ರ ಸರ್ಕಾರ ಸಾಲ ವಸೂಲಿ ಪ್ರಾರಂಭಿಸಿದೆ. ಈ ಸರ್ಕಾರದ ಬತ್ತಳಿಕೆಯಲ್ಲಿ ಹಾಗೂ ಈಗಿರುವ ಬಂಡವಾಳಶಾಹಿ ಕಾನೂನಿನ ಬತ್ತಳಿಕೆಯಲ್ಲಿ ಬಹಳಷ್ಟು ಬಾಣಗಳಿವೆ.

ಇದನ್ನೂ ಓದಿ: ರೈತರಿಗೆ ಬೆಂಬಲ: ಹರಿಯಾಣದ ಪ್ರತಿ ಹಳ್ಳಿಗೂ ಹರಡಿದ ಮಹಾಪಂಚಾಯತ್ – ಗ್ರೌಂಡ್ ರಿಪೋರ್ಟ್

ಈ ಕಾರಣ ಮಹಾರಾಷ್ಟ ರೈತರ “ದಿವಾಳಿ ಚಳವಳಿಯೇ ದಿವಾಳಿಯಾಗಿ ಅವರ ಹೋರಾಟ ಸರಿಯಾದ ವಿಚಾರಕ್ಕೆ ಹಾಗೂ ದಿಕ್ಕಿಗೆ ತಿರುಗಿಯೇ ತಿರುಗುತ್ತದೆ” ಹೋರಾಟದ ವಿಚಾರ ಪೂರ್ಣ ಬದಲಾದಾಗ ಹೋರಾಟದ ಹುಂಬ ನಾಯಕತ್ವ ಕೂಡ ಪೂರ್ಣವಾಗಿ ಮಾಯವಾಗುತ್ತದೆ. ಇಂತಹ ಬದಲಾವಣೆಗಾಗಿ ದೇಶದ ಎಲ್ಲಾ ರೈತರೂ ಆಶಿಸೋಣ, ಶ್ರಮಿಸೋಣ.

31 ಅಕ್ಟೋಬರ್ 1988 ರಂದು ಪ್ರೊ. ಎಂ ಡಿ ನಂಜುಂಡಸ್ವಾಮಿ ಅವರು ಬರೆದ ಈ ಲೇಖನವನ್ನು ರವಿಕುಮಾರ್ ಬಾಗಿ ಅವರು ಸಂಪಾದಿಸಿರುವ “ಹಳ್ಳಿ ಕಣ್ಣಲ್ಲಿ ಇಂಡಿಯ- ಪ್ರೊ. ಎಂ ಡಿ ನಂಜುಂಡಸ್ವಾಮಿ ಬರಹಗಳು” ಎಂಬ ಪುಸ್ತಕದಿಂದ ಆಯ್ದುಕೊಳ್ಳಲಾಗಿದೆ.

ಇದನ್ನೂ ಓದಿ: ಗಂಗೂಲಿಯ ಹೃದಯಾಘಾತಕ್ಕೆ ಮರುಗುವ ಮೋದಿಗೆ 60 ಹುತಾತ್ಮ ರೈತರು ಕಾಣುತ್ತಿಲ್ಲ: ಯೋಗೇಂದ್ರ ಯಾದವ್ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...