Homeಮುಖಪುಟಗುಜ್ಜರ್-ಬಕರ್ವಾಲ್- ಸೇನೆ ಸಂಬಂಧವೇನು? ಪೂಂಛ್‌ ಘಟನೆಗೆ ಸರಕಾರ ತ್ವರಿತವಾಗಿ ಸ್ಪಂದಿಸಿದ್ದೇಕೆ?

ಗುಜ್ಜರ್-ಬಕರ್ವಾಲ್- ಸೇನೆ ಸಂಬಂಧವೇನು? ಪೂಂಛ್‌ ಘಟನೆಗೆ ಸರಕಾರ ತ್ವರಿತವಾಗಿ ಸ್ಪಂದಿಸಿದ್ದೇಕೆ?

- Advertisement -
- Advertisement -

ಜಮ್ಮುವಿನಲ್ಲಿ ಸೇನಾ ವಶದಲ್ಲಿದ್ದ ಮೂವರು ನಾಗರಿಕರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಆ ಬಳಿಕ ಸೇನಾ ಸಿಬ್ಬಂದಿಗಳು ನಾಗರಿಕರಿಗೆ ಚಿತ್ರಹಿಂಸೆ ನೀಡುವ ವಿಡಿಯೋ ವೈರಲ್‌ ಆಗಿತ್ತು. ಇದು ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದ್ದವು. ಸೇನಾ ಸಿಬ್ಬಂದಿಗಳೇ ಮೂವರನ್ನು ಹತ್ಯೆ ಮಾಡಿದ್ದಾರೆಂದು ಸಂತ್ರಸ್ತರ ಕುಟುಂಬಸ್ಥರು ಆರೋಪಿಸಿದ್ದರು. ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವವರ ಹೇಳಿಕೆಯು ಸೇನಾ ಸಿಬ್ಬಂದಿಗಳ ಚಿತ್ರಹಿಂಸೆಯನ್ನು ದೃಢಪಡಿಸಿತ್ತು. ಇದರ ಬೆನ್ನಲ್ಲೇ ಎಚ್ಚರಗೊಂಡ ಭಾರತೀಯ ಸೇನೆ ಮತ್ತು ಕೇಂದ್ರ ಸರಕಾರ, ಕೇಂದ್ರ ಗೃಹ ಇಲಾಖೆ ಹಾನಿ ನಿಯಂತ್ರಿಸಲು ತ್ವರಿತವಾಗಿ ಯತ್ನಿಸಿದೆ. ಗುಜ್ಜರ್-ಬಕರ್ವಾಲ್ ಮತ್ತು ಸೇನೆ ನಡುವಿನ ಬಾಂದ್ಯವನ್ನು ಪುನಃಸ್ಥಾಪಿಸಲು ಮುಂದಾಗಿದೆ.

ನಾಗರಿಕರನ್ನು ಹಿಂಸಿಸುತ್ತಿರುವ ಶಂಕಿತ ವೀಡಿಯೊ ಕಾಣಿಸಿಕೊಂಡ ನಾಲ್ಕು ದಿನಗಳ ನಂತರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೇನಾ ಕಸ್ಟಡಿಯಲ್ಲಿ ಮೃತಪಟ್ಟ ಮೂವರು ನಾಗರಿಕರು ಮತ್ತು ಗಾಯಗೊಂಡ ಐವರ ಕುಟುಂಬಗಳನ್ನು ಭೇಟಿ ಮಾಡಿದರು. ಅವರು ಅವರಿಗೆ ನ್ಯಾಯವನ್ನು ಭರವಸೆ ನೀಡಿದ್ದಲ್ಲದೆ, ನಾಗರಿಕರ ಜೊತೆ ಗೌರವದಿಂದ ವರ್ತಿಸಲು ಸೈನ್ಯಕ್ಕೆ ಹೇಳಿದ್ದಾರೆ.

1990ರ ದಶಕದ ಆರಂಭದಿಂದಲೂ ಕಸ್ಟಡಿ ಸಾವಿನ ಇತಿಹಾಸ ಹೊಂದಿರುವ ಈ ಪ್ರದೇಶದಲ್ಲಿ ರಕ್ಷಣಾ ಸಚಿವರು ನಾಗರಿಕರ ಕುಟುಂಬಗಳನ್ನು ಭೇಟಿ ಮಾಡುವುದು ಮತ್ತು ತಪ್ಪುಗಳನ್ನು ಒಪ್ಪಿಕೊಳ್ಳುವುದು ಅಪರೂಪ. ವಿಡಿಯೋ ವೈರಲ್‌ ಆದ ದಿನ ರಾಜನಾಥ್ ಸಿಂಗ್ ಸೇನೆ ಮತ್ತು ಸಚಿವಾಲಯದ ಉನ್ನತ ಅಧಿಕಾರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರು ಪರಿಸ್ಥಿತಿಯನ್ನು ಅವಲೋಕಿಸುವುದಲ್ಲದೆ, ಜನರಲ್ಲಿ ನಂಬಿಕೆಯನ್ನು ಪುನಃಸ್ಥಾಪಿಸಲು ತಕ್ಷಣ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸೂಚನೆಗಳನ್ನು ಕೂಡ ನೀಡಿದ್ದಾರೆ ಎಂದು ಸಚಿವರ ಆಪ್ತರು ಹೇಳಿದ್ದಾರೆ.

ತಕ್ಷಣ ಎಫ್‌ಐಆರ್‌ ದಾಖಲಿಸಿ ನ್ಯಾಯಾಲಯದ ವಿಚಾರಣೆಯನ್ನು ಘೋಷಿಸಲಾಗಿದೆ ಮತ್ತು ಅಧಿಕಾರಿಗಳನ್ನು ಸ್ಥಳಾಂತರಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಕೂಡ ಸೋಮವಾರ ಜಮ್ಮುವಿಗೆ ಭೇಟಿ ನೀಡಿ ಅವಲೋಕಿಸಿದ್ದಾರೆ. ಸೆಕ್ಟರ್ 6ರ ರಾಷ್ಟ್ರೀಯ ರೈಫಲ್ಸ್ ನ ಕಮಾಂಡರ್ ಮತ್ತು 16 ರಾಷ್ಟ್ರೀಯ ರೈಫಲ್ಸ್ ನ ಕಮಾಂಡಿಂಗ್ ಆಫೀಸರ್ ಬ್ರಿಗೇಡಿಯರ್ ಎಂ ಪಿ ಸಿಂಗ್ ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಮೃತರ ಕುಟುಂಬಗಳನ್ನು ಭೇಟಿ ಮಾಡಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಭರವಸೆ ನೀಡಿದ್ದರು. ಸೇನೆಯು ತಮ್ಮೊಂದಿಗೆ ಇದೆ ಎಂದು ಅವರು ಕುಟುಂಬಗಳಿಗೆ ಭರವಸೆ ನೀಡಿದ್ದರು.

ನಾಲ್ವರು ಯೋಧರು ಹುತಾತ್ಮರಾದ ನಂತರ ಗೃಹ ಸಚಿವಾಲಯವೂ ಕ್ರಮಕ್ಕೆ ಮುಂದಾಗಿತ್ತು. ಆದರೆ ನಾಗರಿಕರಿಗೆ ಚಿತ್ರಹಿಂಸೆಯ ವೀಡಿಯೋ ಹೊರಬಂದ ನಂತರ ತ್ವರಿತ ಮತ್ತು ಗೋಚರ ಕ್ರಮದ ಅಗತ್ಯವಿದೆ ಎಂದು ಕೇಂದ್ರವು ಸ್ಪಷ್ಟಪಡಿಸಿದೆ ಎಂದು ಮೂಲಗಳು ತಿಳಿಸಿವೆ. ಹತ್ಯೆಗೀಡಾದ ಮೂವರ ಮುಂದಿನ ಸಂಬಂಧಿಕರಿಗೆ ತಕ್ಷಣವೇ ಸುಮಾರು 30 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಲಾಯಿತು ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಕೊಲೆಗಾಗಿ ಎಫ್‌ಐಆರ್ ದಾಖಲಿಸಿದ್ದಾರೆ. ಸರ್ಕಾರಿ ಮೂಲಗಳ ಪ್ರಕಾರ ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆಯನ್ನು ಕೂಡ ನೀಡಲಾಗುತ್ತಿದೆ.

ಘಟನೆಯ ನಂತರ ಗೃಹ ಸಚಿವ ಅಮಿತ್ ಶಾ ಕೂಡ ಜಮ್ಮು-ಕಾಶ್ಮೀರದ ಆಡಳಿತದ ಜೊತೆ ತಕ್ಷಣ ಮಾತುಕತೆ ನಡೆಸಿದ್ದರು. ಕಳೆದ ವಾರ ಸೇನಾ ಸಿಬ್ಬಂದಿಗಳು ಚಿತ್ರಹಿಂಸೆ ನೀಡಿ ನಾಗರಿಕರನ್ನು ಹತ್ಯೆ ಮಾಡುವ ವೀಡಿಯೋ ವೈರಲ್‌ ಆದ ನಂತರ ಸರ್ಕಾರವು ಎಷ್ಟು ಚುರುಕಾಗಿ ವರ್ತಿಸಿದೆ ಎಂಬುದನ್ನು ಈ ಬೆಳವಣಿಗೆಗಳು ಒತ್ತಿಹೇಳುತ್ತವೆ.

ಗುಜ್ಜರ್-ಬಕರ್ವಾಲ್ ಸಮುದಾಯ ಮತ್ತು ಸೇನೆ

ಗುಜ್ಜರ್-ಬಕರ್ವಾಲ್ ಸಮುದಾಯ ಕಾಶ್ಮೀರದ ಬುಡಕಟ್ಟು ಸಮುದಾಯವಾಗಿದೆ. ಇವರು ಸಾಂಪ್ರದಾಯಿಕವಾಗಿ ಭಾರತೀಯ ಸಶಸ್ತ್ರ ಪಡೆಗಳ ಜೊತೆ ನಿಕಟವಾದ ಸಂಬಂಧವನ್ನು ಹೊಂದಿರುವವರು ಎಂದು ಪರಿಗಣಿಸಲ್ಪಟ್ಟಿರುವ ಸಮುದಾಯಕ್ಕೆ ಸೇರಿದವರು. ಈ ಹಿಂದೆ ಈ ಪ್ರದೇಶದಲ್ಲಿ ಉಗ್ರಗಾಮಿಗಳನ್ನು ಮಟ್ಟ ಹಾಕಲು ಈ ಸಮುದಾಯ ಭದ್ರತಾ ಪಡೆಗಳಿಗೆ ಸಹಾಯ ಮಾಡಿದ್ದರು. ಗುಜ್ಜರ್-ಬಕರ್ವಾಲ್ ಸಮುದಾಯದ ಜೊತೆಗಿನ ನಂಬಿಕೆಯನ್ನು ಕಳೆದುಕೊಳ್ಳುವುದು ಈ ಪ್ರದೇಶದಲ್ಲಿ ಭದ್ರತಾ ಕಾರ್ಯಾಚರಣೆಗಳಿಗೆ ಹಾನಿಕಾರಕವಾಗಿದೆ ಎಂದು ಸೇನೆಗೆ ಕೂಡ ತಿಳಿದ ಸಂಗತಿಯೇ ಆಗಿದೆ.

ಎರಡು ದಶಕಗಳಿಂದ ಗುಜ್ಜರ್-ಗುಜ್ಜರ್-ಬಕರ್ವಾಲ್ ಪಿರ್ ಪಂಜಾಲ್ ಪ್ರದೇಶದ ಅರಣ್ಯಗಳಲ್ಲಿ ಭದ್ರತಾ ಏಜೆನ್ಸಿಗಳ ಕಣ್ಣು ಮತ್ತು ಕಿವಿಗಳಾಗಿದ್ದಾರೆ. ಪಿರ್ ಪಂಜಾಲ್‌ನ ಹಿಲ್ಕಾಕಾ ಪರ್ವತಗಳಲ್ಲಿ 2003ರಲ್ಲಿ ಸೇನೆಯು ಆಪರೇಷನ್ ಸರ್ಪ್ ವಿನಾಶ್ ಪ್ರಾರಂಭಿಸಿದಾಗ ಜಮ್ಮು ಮತ್ತು ಕಾಶ್ಮೀರದಲ್ಲಿ ಸೈನ್ಯದ ಜೊತೆಗೆ ಈ ಸಮುದಾಯವು ನಿಂತುಕೊಂಡಿತ್ತು.

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರವಾದದ ದಿನಗಳಲ್ಲಿ ಅವರು ಸೇನೆಯ ಅತ್ಯಂತ ವಿಶ್ವಾಸಾರ್ಹ ಸ್ನೇಹಿತರಾಗಿದ್ದರು. 2000ದ ದಶಕದ ಆರಂಭದಲ್ಲಿ ಈ ಪ್ರದೇಶದಲ್ಲಿ ಉಗ್ರಗಾಮಿ ಚಟುವಟಿಕೆಯನ್ನು ಮಟ್ಟ ಹಾಕುವಲ್ಲಿ ಅವರು ನಿರ್ಣಾಯಕ ಪಾತ್ರವನ್ನು ವಹಿಸಿದ್ದರು. ಅವರ ಅಲೆಮಾರಿ ಜೀವನಶೈಲಿಯನ್ನು ಗಮನಿಸಿದರೆ ಅವರು ಸೇನಾ ಅತ್ಯುತ್ತಮ ಮಾಹಿತಿದಾರರಲ್ಲಿ ಒಬ್ಬರಾಗಿದ್ದರು. ಈ ಪ್ರದೇಶದಲ್ಲಿ ನಾಗರಿಕರನ್ನು ಎದುರು ಹಾಕಿಕೊಂಡರೆ ಸೇನೆಗೆ ದೊಡ್ಡ ಸಮಸ್ಯೆಯಾಗಲಿದೆ ಎನ್ನವುದು ಸೇನೆಗೆ ತಿಳಿದಿದೆ. ಇತ್ತೀಚಿನ ಬೆಳವಣಿಗೆ ನಾಗರಿಕರಿಗೆ ಸೇನೆಯ ಮೇಲಿನ ವಿಶ್ವಾಸಕ್ಕೆ ಆಘಾತ ತಂದಿತ್ತು.

ಘಟನೆಯ ವಿವರ:

ಜಮ್ಮು ಮತ್ತು ಕಾಶ್ಮೀರದ ಪೂಂಛ್‌ ರಜೌರಿ ಪ್ರದೇಶದಲ್ಲಿ ಸೇನಾ ಸಿಬ್ಬಂದಿಗಳ ಚಿತ್ರಹಿಂಸೆಯಿಂದ ಸಫೀರ್ ಹುಸೇನ್ (43), ಮೊಹಮ್ಮದ್ ಶೌಕತ್‌ (27) ಮತ್ತು ಶಬೀರ್ ಅಹ್ಮದ್ (32) ಮೃತಪಟ್ಟಿದ್ದರು. ಅವರು ಗುಜ್ಜರ್-ಬಕರ್ವಾಲ್ ಸಮುದಾಯಕ್ಕೆ ಸೇರಿದವರಾಗಿದ್ದರು.

ಡಿಸೆಂಬರ್ 22ರಂದ ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ನಾಲ್ವರು ಸೈನಿಕರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ ಭಾರತೀಯ ಸೇನಾ ಸಿಬ್ಬಂದಿಗಳು ಎಂಟು ನಾಗರಿಕರನ್ನು ವಶಕ್ಕೆ ಪಡೆದುಕೊಂಡಿದ್ದರು. ಅವರಲ್ಲಿ ಮೂವರು ಚಿತ್ರಹಿಂಸೆಗೆ ಒಳಗಾಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಇತರ ಐವರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಬಳಿಕ  ಚಿತ್ರಹಿಂಸೆಯ ವಿಡಿಯೋ ವೈರಲ್‌ ಆಗಿತ್ತು. ಇದು ನಾಗರಿಕರಿಗೆ ಸೇನೆಯ ಮೇಲಿನ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋ ವೈರಲ್‌ ಬೆನ್ನಲ್ಲೇ ಈ ಪ್ರದೇಶದಲ್ಲಿ ಇಂಟರ್‌ನೆಟ್‌ ಬಂದ್ ಮಾಡಿ , ಭಾರೀ ಸಂಖ್ಯೆಯಲ್ಲಿ ಭದ್ರತಾ ಪಡೆಗಳನ್ನು ನಿಯೋಜನೆ ಮಾಡಲಾಗಿತ್ತು. ಸಂತ್ರಸ್ತರ ಕುಟುಂಬಸ್ಥರನ್ನು ಇತರರು ಭೇಟಿ ಮಾಡದಂತೆ ನಿರ್ಬಂಧವನ್ನು ವಿಧಿಸಲಾಗಿತ್ತು.

ಅವರಿಗೇಕೆ ಈ ರೀತಿ ಶಿಕ್ಷೆ ವಿಧಿಸಿದರು?

ಅವರಿಗೇಕೆ ಈ ರೀತಿ ಶಿಕ್ಷೆ ವಿಧಿಸಿದರು? ಈಗ ನನ್ನ ಮಗನನ್ನು ಯಾರು ವಾಪಾಸ್ಸು ಕೊಡುತ್ತಾರೆ? ನಾನು ಇನ್ನು ಭದ್ರತಾ ಪಡೆಗಳನ್ನು ಹೇಗೆ ನಂಬಲಿ? ಇದು ಪೂಂಛ್‌ನಲ್ಲಿ ಸೇನೆಯಿಂದ ಚಿತ್ರಹಿಂಸೆಗೆ ಒಳಗಾಗಿ ಮೃತಪಟ್ಟ ನಾಗರಿಕನೋರ್ವನ ತಂದೆಯ ಕಣ್ಣೀರಿನ ಪ್ರಶ್ನೆ. ಅವರು ಅವರನ್ನು ಕೊಲ್ಲಲು ಬಯಸಿದ್ದರೆ, ಸೇನೆಯು ಅವರನ್ನು ಶೂಟ್‌ ಮಾಡಿ ಕೊಲ್ಲಬೇಕಿತ್ತು. ಇಷ್ಟೊಂದು ಚಿತ್ರಹಿಂಸೆ ನೀಡಿ ನನ್ನ ಮಗನನ್ನು ಏಕೆ ಕೊಲ್ಲಬೇಕು? ಎಂದು ಮೃತ ಮೊಹಮ್ಮದ್ ಶೋಕತ್ (26) ತಂದೆ ನಜೀರ್ ಹುಸೇನ್ ಅವರು ಕೇಳಿದ್ದಾರೆ.

ಮೊಹಮ್ಮದ್ ಶೋಕತ್ ಪತ್ನಿ ಕೌಶರ್‌ ಬಿ ಈ ಬಗ್ಗೆ ದುಃಖವನ್ನು ವ್ಯಕ್ತಪಡಿಸುತ್ತಾ, ತನ್ನ ಪತಿಯ ದೇಹವು ಕಪ್ಪು ಬಣ್ಣಕ್ಕೆ ತಿರುಗಿತ್ತು, ಆ ರೀತಿ ಅವರಿಗೆ ಚಿತ್ರಹಿಂಸೆ ನೀಡಲಾಗಿತ್ತು ಎಂದು ಹೇಳಿದ್ದಾರೆ.

ಇದನ್ನು ಓದಿ: ಪೂಂಛ್‌ನಲ್ಲಿ ನಾಗರಿಕರ ಹತ್ಯೆ ಪ್ರಕರಣ: ವಿವರಣೆ ಕೋರಿದ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...