Homeಕರ್ನಾಟಕಆರ್.ಎಸ್.ಎಸ್ ಸಖ್ಯಕ್ಕೆ ಬಂದದ್ದು ಮತ್ತು ಪ್ರಶ್ನಿಸಿ ಹೊರಬಂದದ್ದು..

ಆರ್.ಎಸ್.ಎಸ್ ಸಖ್ಯಕ್ಕೆ ಬಂದದ್ದು ಮತ್ತು ಪ್ರಶ್ನಿಸಿ ಹೊರಬಂದದ್ದು..

- Advertisement -
- Advertisement -

ನನ್ನ ಹಿನ್ನೆಲೆ ವಿಚಿತ್ರ. ಆದರೆ ಅದರ ಚಿತ್ರ ಮಾತ್ರ ಇನ್ನೂ ನನ್ನ ಮನಸ್ಸಿನಿಂದ ಅಳಿಸಿಹೋಗಿಲ್ಲ. ನಾನು ಆಗ ಬಹುಶಃ ಹತ್ತು ವರ್ಷದ ಹುಡುಗ. ಪಿರಿಯಾಪಟ್ಟಣದಿಂದ ಒಬ್ಬ ವ್ಯಕ್ತಿ ಸೈಕಲ್ ಮೇಲೆ ಬಂದು, ಮನೆಮನೆಗೂ ಹೋಗಿ, ನನ್ನಂತಹ ಎಳೆಯ ಹುಡುಗರನ್ನು ಹಿಡಿದುಕೊಂಡು ಬಂದು ಕಬಡ್ಡಿ, ಕೊಕೊ ಇತ್ಯಾದಿ ಆಟಗಳನ್ನು ಆಡಿಸುತ್ತಿದ್ದ. ಕೆಲವು ತಿಂಗಳುಗಳ ಕಾಲ ನಾವು ಅಂದರೆ ನಾನು ಮತ್ತು ನನ್ನ ಸ್ನೇಹಿತರು, ಕುಗ್ರಾಮದಲ್ಲೊಂದು ಮನರಂಜನೆ ಸಿಕ್ಕಿತಲ್ಲ ಎನ್ನುವ ಸಂತೋಷದಿಂದ ಆಟ ಆಡುವುದಕ್ಕಾಗಿ ಪ್ರತಿದಿನ ಮುಗ್ಧತೆಯಿಂದ ತಪ್ಪದೇ ಆ ವ್ಯಕ್ತಿಗಾಗಿ ಕಾಯುತ್ತಿದ್ದೆವು.

ಹೈಸ್ಕೂಲ್ ಹೆಡ್ಮಾಸ್ಟರ್ ಆಗಿದ್ದ ನಮ್ಮಪ್ಪ ಅಂದು ಸಂಜೆ ಸ್ಕೂಲ್ ಬಾಗಿಲು ಹಾಕಿಕೊಂಡು ಮನೆಗೆ ಹೋಗುವಾಗ ನಾವು ಆಟ ಆಡುತ್ತಿದ್ದ ಸ್ಥಳದಲ್ಲಿ ಕಾವಿ ಬಣ್ಣದ ಧ್ವಜವನ್ನ ನೆಟ್ಟಿರುವುದನ್ನ ಕಂಡರು ಅನಿಸುತ್ತದೆ. ಆದರೆ ಅಲ್ಲಿ ಅವರು ಏನನ್ನೂ ಮಾತನಾಡದೇ ಮನೆಗೆ ಬಂದರು. ಅವರು ಅಸಹನೆಗೊಂಡಿದ್ದರು ಅನ್ನುವುದು ನನಗೆ ಗೊತ್ತಾಗಿದ್ದು ನಾನು ಮನೆಗೆ ಬಂದ ಮೇಲೆ.

ನಮ್ಮಪ್ಪ ತನಿಖೆ ಮಾಡುವವರ ರೀತಿ “ಅದ್ಯಾರೊ, ನಿಮ್ಮನ್ನೆಲ್ಲಾ ಆಟ ಆಡಿಸುತ್ತಿದ್ದವರು?” ಅಂತ ಕೇಳಿದಾಗ ನಾನು, “ಅವರು ಪಿರಿಯಾಪಟ್ಟಣದಿಂದ ಸೈಕಲ್ಲಿನಲ್ಲಿ ಬರುತ್ತಾರೆ, ನಮಗೆ ಅನೇಕ ಆಟಗಳನ್ನು ಹೇಳಿಕೊಟ್ಟು, ಆಡಿಸುತ್ತಾರೆ. ಮೊದಲು ಒಂದು ಹಾಡನ್ನೂ ನಾವು ಹೇಳಬೇಕು” ಅಂತ ಹೇಳಿದಾಗ ನಮ್ಮಪ್ಪನಿಗೆ ಖಾತ್ರಿಯಾಗಿತ್ತೆನಿಸುತ್ತದೆ ಇದು ಆರ್.ಎಸ್.ಎಸ್‌ನ ಒಂದು ಶಾಖೆ ಎಂದು.

ಅಪ್ಪ ನನ್ನನ್ನು ಮರುದಿನದಿಂದ ಸಂಜೆ ಅಲ್ಲಿಗೆ ಹೋಗದಂತೆ ನಿಷೇಧಿಸಿದರು. ಆರ್.ಎಸ್.ಎ.ಸ್ ಮತ್ತು ಗೋಡ್ಸೆ ನಂಟು ಮತ್ತು ಅವನ ಗಾಂಧಿ ಹತ್ಯೆಯ ಕೃತ್ಯದ ನೆನಪು ಅವರಲ್ಲಿ ಹಸಿಯಾಗಿಯೇ ಇನ್ನೂ ಉಳಿದಿತ್ತು. ಅದಲ್ಲದೇ ಅವರು ಮುಂಬೈ ಲಾ ಕಾಲೇಜಿನಲ್ಲಿ ಅಂಬೇಡ್ಕರ್ ಅವರ ವಿದ್ಯಾರ್ಥಿಯಾಗಿದ್ದವರೂ ಕೂಡ. ಅಂಬೇಡ್ಕರ್ ಅವರ ವ್ಯಕ್ತಿತ್ವದ ಒಂದು ಕಿರಣ ಬಹುಶಃ ನನ್ನ ತಂದೆಯವರಲ್ಲಿಯೂ ಬಂದು ಹೊಕ್ಕಿದ್ದಿರಬಹುದು. ಅಲ್ಲಿಗೆ ನನ್ನ ಆರ್.ಎಸ್.ಎಸ್ ಸಂಸ್ಥೆಯ ಒಡನಾಟ ಮೊಳಕೆಯಲ್ಲಿಯೇ ಒಣಗಿಹೋಯಿತು. ಬಹುಶಃ ಮತ್ತೊಂದು ಸಂದರ್ಭಕ್ಕೆ ಹವಣಿಸುತ್ತಿತ್ತು!

ನನ್ನ ಎಸ್.ಎಸ್.ಎಲ್.ಸಿ. ಮುಗಿದು ನಾನು ಬೆಂಗಳೂರಿನ ನನ್ನ ಅಣ್ಣನ ಮನೆಯಲ್ಲಿ ನೆಲೇಸಿ ನನ್ನ ಪಿ.ಯು.ಸಿ. ಮತ್ತು ಬಿ.ಎಸ್.ಸಿ. ತರಗತಿಗಳನ್ನು ಮುಗಿಸಿದೆ. ನಂತರ ನನ್ನ ಕೆಲವು ಸಹಪಾಠಿಗಳು ಲಾ ಕಾಲೇಜು ಸೇರಿದರು. ಯಾವುದೇ ಗೊತ್ತುಗುರಿ ಇಲ್ಲದೇ ನಾನೂ ಲಾ ಕಾಲೇಜನ್ನು ಸೇರಿದೆ. ಅದೇ ಸಮಯಕ್ಕೆ ಅಣ್ಣ ಮುಂಬೈಯಲ್ಲಿ ಕೆಲಸಕ್ಕೆ ಸೇರಿದ. ಆಗ ನನ್ನ ವಾಸ್ತವ್ಯವೇ ಒಂದು ದೊಡ್ಡ ಸಮಸ್ಯೆಯಾಗಿ ನನ್ನನ್ನು ಕಾಡಿತು. ಇದನ್ನು ನನ್ನ ಸ್ನೇಹಿತನೊಬ್ಬನ ಹತ್ತಿರ ತೋಡಿಕೊಂಡೆ. ಎಲ್ಲಾದರೂ ರೂಮು ಕೊಡಿಸೊ ಅಂತ ಅವನ ಹಿಂದೆ ಬಿದ್ದೆ. ಅವನೊಬ್ಬ ನಿಷ್ಠಾವಂತ ಸ್ವಯಂಸೇವಕ ಅನ್ನುವುದು ನನಗೆ ಅಲ್ಲಿಯವರೆಗೂ ತಿಳಿದಿರಲಿಲ್ಲ. ನನ್ನ ಅಣ್ಣನ ಮನೆಯನ್ನು ಖಾಲಿ ಮಾಡುವುದಕ್ಕೆ ಒಂದು ತಿಂಗಳ ಸಮಯವಿತ್ತು. ನಾನಿನ್ನೂ ಅಲ್ಲಿಯೇ ವಾಸಿಸುತ್ತಿದ್ದೆ. ಎರಡು ದಿನಗಳ ನಂತರ ಇನ್ನೂ ಖಾಲಿ ಮಾಡದ ಅಣ್ಣನ ಮನೆಗೆ ಬಂದ ಅವನು, “ನಿನಗೆ ಇರಲು ಒಂದು ಜಾಗ ಇದೆ, ಆದರೆ ಒಂದು ಷರತ್ತು, ನೀನು ಸಂಘಕ್ಕೆ ಸೇರಬೇಕು” ಅಂದ. ನನ್ನ ಚಿಕ್ಕವಯಸ್ಸಿನಲ್ಲಾದ ಪ್ರಕರಣ ಆಗಲೇ ನೆನಪಿನಿಂದ ಮಾಸಿಹೋಗಿತ್ತು. ನನ್ನ ತಂದೆ ಈಗ ದೂರದ ಊರಾದ ಶೃಂಗೇರಿ ಸ್ಕೂಲಿನಲ್ಲಿ ಮುಖ್ಯೋಪಾಧ್ಯಾಯರು. ಇರೋದಕ್ಕೆ ರೂಮು ಸಿಕ್ಕರೆ ಏನು ಬೇಕಾದರೂ ಮಾಡ್ತೀನಿ ಅನ್ನುವ ಪರಿಸ್ಥಿತಿಯನ್ನ ಎದುರಿಸುತ್ತಿದ್ದೆ ಆ ದಿನಗಳಲ್ಲಿ. ಇದು ಸಂಘದ ಸಹವಾಸದ ಎರಡನೇ ಇನ್ನಿಂಗ್ಸ್.

ಅಂದಿನಿಂದ ನಾನು ಕಾರ್ಯಾಲಯದಲ್ಲಿ ವಾಸಿಸಲು ಪ್ರಾರಂಭಿಸಿದೆ. ಕೆಲವು ಪ್ರಚಾರಕರು ಮತ್ತು ನಿವಾಸಿಗಳ ಜತೆ ಬೇಗನೆ ಎದ್ದು ಪ್ರಾತಃ ಸ್ಮರಣೆಯ ಕಾರ್ಯಕ್ರಮಕ್ಕೆ ಹಾಜರಾಗುತ್ತಿದ್ದೆ. ನಂತರ ಏಳು ಗಂಟೆಗೆ ಬೆಳಗಿನ ಶಾಖೆಯ ಸಭೆ. ನಂತರ ನನ್ನ ಲಾ ಕಾಲೇಜು ಇತ್ಯಾದಿ. ಇಷ್ಟೇ ಆದರೆ ಹೇಗೋ ಅನುಸರಿಸಿಕೊಂಡು ಇದ್ದುಬಿಡಬಹುದು ಅಂತ ನನ್ನ ಮನಸ್ಸಿನಲ್ಲಿ ಅನಿಸತೊಡಗಿತು. ಆದರೆ ನನಗೊಂದು ಬಡ್ತಿ ಸಿಕ್ಕಿತು. ಅದು ಸಂಘದ ಪ್ರಮುಖ ಬೈಟಕ್ಕುಗಳಲ್ಲಿ ಕುಳಿತು ಅವರ ಮಾತುಗಳನ್ನು ಕೇಳುವ ಅವಕಾಶ. ನನಗೆ ಚಿಕ್ಕಂದಿನಲ್ಲಿ ನಮ್ಮಪ್ಪ ನನ್ನಲ್ಲಿ ಹುಟ್ಟುಹಾಕಿದ ಸೆಕ್ಯುಲರಿಸಂ ಬೀಜ ಮೊಳಕೆಯೊಡೆದು ಹೆಮ್ಮರವೇನೂ ಆಗದೆ, ಬಹುಶಃ ನನ್ನ ಸುಪ್ತಪ್ರಜ್ಞೆಯಲ್ಲಿ ತಟಸ್ಥವಾಗಿಯೇ ಇತ್ತು. ಈ ಭೈಟಕ್‌ಗಳಲ್ಲಿನ ವಿಚಾರ ಲಹರಿಗಳು ನನ್ನ ಕಿವಿಯ ಮೇಲೆ ಬೀಳುತ್ತಿದ್ದಂತೆ ಅದು ಮೊಳಕೆಯೊಡೆಯಲು ಶುರುವಾಯಿತು ಎನ್ನಬಹುದು. ಅದು ದೊಡ್ಡ ಮರವಾಗಿ ಬೆಳೆಯಲು ಹೆಚ್ಚು ಸಮಯವೇನು ಹಿಡಿಯಲಿಲ್ಲ. ಅದೇ ಕಾರಣಕ್ಕೆ ನಾನು ಅವರ ಸಂವಾದಗಳ ಮಧ್ಯೆ ಮೂಗು ತೂರಿಸಲು ಪ್ರಾರಂಭಿಸಿದೆ. ಒಂದು ದಿನ “ಹಾಗೇನಿಲ್ಲ, ನನ್ನ ಚಿಕ್ಕ ವಯಸ್ಸಿನ ಅನೇಕ ಸ್ನೇಹಿತರುಗಳ ನೀವು ಹೇಳುವ ಧರ್ಮಕ್ಕೆ ಸೇರಿದವರು.. ಅದಲ್ಲದೇ ನನಗೆ ಕನ್ನಡವನ್ನ ಕಲಿಸಿದವರೇ ಸೈಯದ್ ಹುಸೇನ್ ಅನ್ನುವ ಮೇಷ್ಟ್ರು” ಅಂದಾಗ ಅಲ್ಲಿ ನೆರೆದಿದ್ದ ಪ್ರಮುಖರ ಮುಖದಲ್ಲೆಲ್ಲಾ ಅಸಹನೆಯ ಸುಕ್ಕುಗಳು ಮೂಡತೊಡಗಿದವು.

ನಂತರ, ಇವನು ನಮ್ಮ ಗುಂಪಿಗೆ ಸರಿಹೊಂದುವುದಿಲ್ಲ ಎಂದು ನನ್ನನ್ನು ಈ ಘಟನೆ ನಡೆದ ದಿನಗಳ ನಂತರ ವಿದ್ಯಾರ್ಥಿ ಪರಿಷತ್‌ನ ಆಫೀಸನ್ನು ನೋಡಿಕೊಳ್ಳಲು ನಿಯೋಜಿಸಿಬಿಟ್ಟರು.

ಒಂದು ದಿನ ವಿದ್ಯಾರ್ಥಿ ಪರಿಷತ್‌ನ ಒಂದು ದೊಡ್ಡ ಸಭೆಯನ್ನು ಮೈಸೂರಿನಲ್ಲಿ ಆಯೋಜಿಸಲಾಗಿತ್ತು. ಅಂದು ಒಂದು ದೊಡ್ಡ ವ್ಯಾನಿನಲ್ಲಿ ಸ್ವಯಂಸೇವಕರ ಜತೆ ಮೈಸೂರಿಗೆ ನಾನೂ ಹೊರಟೆ. ದಾರಿಯಲ್ಲಿ ಅಂತ್ಯಾಕ್ಷರಿ ಆಟ ಆಡುವ ಮನಸ್ಸು ಎಲ್ಲರಿಗೂ ಆಯಿತು. ನನಗೂ ಖುಷಿ ಆಯಿತು. ಆದರೆ ಯಾವುದೇ ಸಿನೆಮಾ ಹಾಡು ಹಾಡುವುದನ್ನ ನಿಷೇಧಿಸಲಾಗಿತ್ತು. ಬರೀ ಸಂಘಗೀತೆಗಳು. ಒಂದು ಸಂಘಗೀತೆಯ ಚರಣ ಅಂತ್ಯಗೊಂಡಿದ್ದು ಒಂದು ಜನಾಂಗವನ್ನು ನಿಂದಿಸುವ ಶಬ್ದಗಳಿಂದ. ಅಂದು ನನ್ನ ಮನಸ್ಸಿನಲ್ಲಿ ವಿಪ್ಲವವೊಂದು ಆರಂಭಗೊಂಡಿತು. ಜಿಗುಪ್ಸೆಗೊಂಡ ನಾನು ಮೈಸೂರು ತಲುಪುವವರೆಗೂ ಮೌನದಿಂದಲೇ ಕುಳಿತುಬಿಟ್ಟಿದ್ದೆ.

ನನ್ನ ಮನಸ್ಸಿನಲ್ಲಿ ಎದ್ದ ವೈಚಾರಿಕ ಭಾವನೆಗಳು ಘನೀಭವಿಸಿ ರೂಪಪಡೆಯಲು ಪ್ರಾರಂಭವಾಗಿತ್ತು ಎನ್ನಬಹುದು. ಯಾವ ಪರಂಪರೆಯಲ್ಲಿಯೂ ಅದರಲ್ಲೂ ಭಾರತೀಯ ಪರಂಪರೆಯಲ್ಲಿ, ಅದು ನೈಜ ಸ್ವರೂಪದ್ದಾಗಿದ್ದರೆ, ಇನ್ನೊಂದು ಧರ್ಮಕ್ಕೆ ಸೇರಿದ ಜೀವಗಳ ಸಾವನ್ನ ಹಾಡಿನ ರೂಪದಲ್ಲಿ ವೈಭವಿ ಕರಿಸುತ್ತದೆಯೇ? ನನಗೆ ಗೊತ್ತಿದ್ದಂತೆ ನಮ್ಮ ಭಾರತೀಯ ಪರಂಪರೆಯ ಧರ್ಮದಲ್ಲಿ ಯಾವುದನ್ನ ಹಿಂದೂ ಅಂತ ಕರೆಯುತ್ತವೆಯೋ ಅದೊಂದು ಹನಿಹನಿಯಾಗಿ ಇಡೀ ಭೂಮಿಯನ್ನ ತಣಿಸುವ ಸೋನೆ ಮಳೆಯ ಹಾಗೆ ಅಲ್ಲವೇ? ಮಳೆ ಬಿದ್ದರೆ ಒಂದು ಪಂಗಡಕ್ಕಾಗಿ ಬೀಳುತ್ತದೆಯೇ? ಆದರೆ ಅದೇ ನೀರು ಶೇಖರಣೆಯಾಗಿ ಒಂದು ಗುಂಡಿಯಲ್ಲಿ ನಿಂತು, ಕೊಳೆತು ಬಗ್ಗಡವಾಗಿ ಕಾಯಿಲೆ ಹರಡಲು ಶುರುಮಾಡಿಬಿಟ್ಟರೆ? ಈ ರೀತಿಯ ದ್ವಂದ್ವಗಳು ನನ್ನನ್ನು ಕಾಡತೊಡಗಿತು.

ಇನ್ನು ಈ ವಾತಾವರಣದಲ್ಲಿದ್ದರೆ ನನ್ನ ಆಲೋಚನೆಗಳೂ ಇದೇ ರೀತಿ ಬಗ್ಗಡವಾಗಿಬಿಡಬಹುದು ಅನ್ನುವ ಭಯದಿಂದ ನಾನು ಆ ಸಭೆಗೆ ಹೋಗದೇ ವಾಪಸ್ಸು ಬೆಂಗಳೂರಿನ ಬಸ್ಸನ್ನು ಹತ್ತಿದೆ. ನಾನು ವಾಸಿಸುತ್ತಿದ್ದ ಸ್ಥಳಕ್ಕೆ ನನ್ನ ಬಟ್ಟೆ ಬರೆಯನ್ನು ತೆಗೆದುಕೊಳ್ಳುವುದಕ್ಕೂ ನಾನು ಅಲ್ಲಿಗೆ ಹೋಗಲಿಲ್ಲ.

ಇಲ್ಲಿಗೆ ಸಂಘದ ನನ್ನ ಎರಡನೇ ಇನ್ನಿಂಗ್ಸ್ ಕೂಡ ಕೊನೆಯಾಗಿತ್ತು. ಅದೇ ಕೊನೆಯಾಗಿತ್ತು.

ಕೆ ಶ್ರೀನಾಥ್

ಕೆ ಶ್ರೀನಾಥ್
ಮಾಜಿ ಕೈಗಾರಿಕೋದ್ಯಮಿ ಮತ್ತು ಹಾಲಿ ನಟ ಶ್ರೀನಾಥ್ ಈಗ ಸಾಹಿತ್ಯ ಕೃಷಿಯಲ್ಲಿ ನಿರತರಾಗಿದ್ದು, ಇತ್ತೀಚೆಗಷ್ಟೇ ಅವರು ಅನುವಾದಿಸಿರುವ ದಾಸ್ತೋವಸ್ಕಿಯ ’ಕರಮಜೋವ್ ಸಹೋದರರು’ ಪ್ರಕಟವಾಗಿದೆ.


ಇದನ್ನೂ ಓದಿ: ಆರ್‌ಎಸ್‌ಎಸ್‌ ಸಾಮಾಜಿಕ ನ್ಯಾಯದ ವಿರೋಧಿ, ಅದು ಮನುಸ್ಮೃತಿಯನ್ನು ನಂಬುತ್ತದೆ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...