Homeಕರ್ನಾಟಕಆರ್.ಎಸ್.ಎಸ್ ಸಖ್ಯಕ್ಕೆ ಬಂದದ್ದು ಮತ್ತು ಪ್ರಶ್ನಿಸಿ ಹೊರಬಂದದ್ದು..

ಆರ್.ಎಸ್.ಎಸ್ ಸಖ್ಯಕ್ಕೆ ಬಂದದ್ದು ಮತ್ತು ಪ್ರಶ್ನಿಸಿ ಹೊರಬಂದದ್ದು..

- Advertisement -
- Advertisement -

ನನ್ನ ಹಿನ್ನೆಲೆ ವಿಚಿತ್ರ. ಆದರೆ ಅದರ ಚಿತ್ರ ಮಾತ್ರ ಇನ್ನೂ ನನ್ನ ಮನಸ್ಸಿನಿಂದ ಅಳಿಸಿಹೋಗಿಲ್ಲ. ನಾನು ಆಗ ಬಹುಶಃ ಹತ್ತು ವರ್ಷದ ಹುಡುಗ. ಪಿರಿಯಾಪಟ್ಟಣದಿಂದ ಒಬ್ಬ ವ್ಯಕ್ತಿ ಸೈಕಲ್ ಮೇಲೆ ಬಂದು, ಮನೆಮನೆಗೂ ಹೋಗಿ, ನನ್ನಂತಹ ಎಳೆಯ ಹುಡುಗರನ್ನು ಹಿಡಿದುಕೊಂಡು ಬಂದು ಕಬಡ್ಡಿ, ಕೊಕೊ ಇತ್ಯಾದಿ ಆಟಗಳನ್ನು ಆಡಿಸುತ್ತಿದ್ದ. ಕೆಲವು ತಿಂಗಳುಗಳ ಕಾಲ ನಾವು ಅಂದರೆ ನಾನು ಮತ್ತು ನನ್ನ ಸ್ನೇಹಿತರು, ಕುಗ್ರಾಮದಲ್ಲೊಂದು ಮನರಂಜನೆ ಸಿಕ್ಕಿತಲ್ಲ ಎನ್ನುವ ಸಂತೋಷದಿಂದ ಆಟ ಆಡುವುದಕ್ಕಾಗಿ ಪ್ರತಿದಿನ ಮುಗ್ಧತೆಯಿಂದ ತಪ್ಪದೇ ಆ ವ್ಯಕ್ತಿಗಾಗಿ ಕಾಯುತ್ತಿದ್ದೆವು.

ಹೈಸ್ಕೂಲ್ ಹೆಡ್ಮಾಸ್ಟರ್ ಆಗಿದ್ದ ನಮ್ಮಪ್ಪ ಅಂದು ಸಂಜೆ ಸ್ಕೂಲ್ ಬಾಗಿಲು ಹಾಕಿಕೊಂಡು ಮನೆಗೆ ಹೋಗುವಾಗ ನಾವು ಆಟ ಆಡುತ್ತಿದ್ದ ಸ್ಥಳದಲ್ಲಿ ಕಾವಿ ಬಣ್ಣದ ಧ್ವಜವನ್ನ ನೆಟ್ಟಿರುವುದನ್ನ ಕಂಡರು ಅನಿಸುತ್ತದೆ. ಆದರೆ ಅಲ್ಲಿ ಅವರು ಏನನ್ನೂ ಮಾತನಾಡದೇ ಮನೆಗೆ ಬಂದರು. ಅವರು ಅಸಹನೆಗೊಂಡಿದ್ದರು ಅನ್ನುವುದು ನನಗೆ ಗೊತ್ತಾಗಿದ್ದು ನಾನು ಮನೆಗೆ ಬಂದ ಮೇಲೆ.

ನಮ್ಮಪ್ಪ ತನಿಖೆ ಮಾಡುವವರ ರೀತಿ “ಅದ್ಯಾರೊ, ನಿಮ್ಮನ್ನೆಲ್ಲಾ ಆಟ ಆಡಿಸುತ್ತಿದ್ದವರು?” ಅಂತ ಕೇಳಿದಾಗ ನಾನು, “ಅವರು ಪಿರಿಯಾಪಟ್ಟಣದಿಂದ ಸೈಕಲ್ಲಿನಲ್ಲಿ ಬರುತ್ತಾರೆ, ನಮಗೆ ಅನೇಕ ಆಟಗಳನ್ನು ಹೇಳಿಕೊಟ್ಟು, ಆಡಿಸುತ್ತಾರೆ. ಮೊದಲು ಒಂದು ಹಾಡನ್ನೂ ನಾವು ಹೇಳಬೇಕು” ಅಂತ ಹೇಳಿದಾಗ ನಮ್ಮಪ್ಪನಿಗೆ ಖಾತ್ರಿಯಾಗಿತ್ತೆನಿಸುತ್ತದೆ ಇದು ಆರ್.ಎಸ್.ಎಸ್‌ನ ಒಂದು ಶಾಖೆ ಎಂದು.

ಅಪ್ಪ ನನ್ನನ್ನು ಮರುದಿನದಿಂದ ಸಂಜೆ ಅಲ್ಲಿಗೆ ಹೋಗದಂತೆ ನಿಷೇಧಿಸಿದರು. ಆರ್.ಎಸ್.ಎ.ಸ್ ಮತ್ತು ಗೋಡ್ಸೆ ನಂಟು ಮತ್ತು ಅವನ ಗಾಂಧಿ ಹತ್ಯೆಯ ಕೃತ್ಯದ ನೆನಪು ಅವರಲ್ಲಿ ಹಸಿಯಾಗಿಯೇ ಇನ್ನೂ ಉಳಿದಿತ್ತು. ಅದಲ್ಲದೇ ಅವರು ಮುಂಬೈ ಲಾ ಕಾಲೇಜಿನಲ್ಲಿ ಅಂಬೇಡ್ಕರ್ ಅವರ ವಿದ್ಯಾರ್ಥಿಯಾಗಿದ್ದವರೂ ಕೂಡ. ಅಂಬೇಡ್ಕರ್ ಅವರ ವ್ಯಕ್ತಿತ್ವದ ಒಂದು ಕಿರಣ ಬಹುಶಃ ನನ್ನ ತಂದೆಯವರಲ್ಲಿಯೂ ಬಂದು ಹೊಕ್ಕಿದ್ದಿರಬಹುದು. ಅಲ್ಲಿಗೆ ನನ್ನ ಆರ್.ಎಸ್.ಎಸ್ ಸಂಸ್ಥೆಯ ಒಡನಾಟ ಮೊಳಕೆಯಲ್ಲಿಯೇ ಒಣಗಿಹೋಯಿತು. ಬಹುಶಃ ಮತ್ತೊಂದು ಸಂದರ್ಭಕ್ಕೆ ಹವಣಿಸುತ್ತಿತ್ತು!

ನನ್ನ ಎಸ್.ಎಸ್.ಎಲ್.ಸಿ. ಮುಗಿದು ನಾನು ಬೆಂಗಳೂರಿನ ನನ್ನ ಅಣ್ಣನ ಮನೆಯಲ್ಲಿ ನೆಲೇಸಿ ನನ್ನ ಪಿ.ಯು.ಸಿ. ಮತ್ತು ಬಿ.ಎಸ್.ಸಿ. ತರಗತಿಗಳನ್ನು ಮುಗಿಸಿದೆ. ನಂತರ ನನ್ನ ಕೆಲವು ಸಹಪಾಠಿಗಳು ಲಾ ಕಾಲೇಜು ಸೇರಿದರು. ಯಾವುದೇ ಗೊತ್ತುಗುರಿ ಇಲ್ಲದೇ ನಾನೂ ಲಾ ಕಾಲೇಜನ್ನು ಸೇರಿದೆ. ಅದೇ ಸಮಯಕ್ಕೆ ಅಣ್ಣ ಮುಂಬೈಯಲ್ಲಿ ಕೆಲಸಕ್ಕೆ ಸೇರಿದ. ಆಗ ನನ್ನ ವಾಸ್ತವ್ಯವೇ ಒಂದು ದೊಡ್ಡ ಸಮಸ್ಯೆಯಾಗಿ ನನ್ನನ್ನು ಕಾಡಿತು. ಇದನ್ನು ನನ್ನ ಸ್ನೇಹಿತನೊಬ್ಬನ ಹತ್ತಿರ ತೋಡಿಕೊಂಡೆ. ಎಲ್ಲಾದರೂ ರೂಮು ಕೊಡಿಸೊ ಅಂತ ಅವನ ಹಿಂದೆ ಬಿದ್ದೆ. ಅವನೊಬ್ಬ ನಿಷ್ಠಾವಂತ ಸ್ವಯಂಸೇವಕ ಅನ್ನುವುದು ನನಗೆ ಅಲ್ಲಿಯವರೆಗೂ ತಿಳಿದಿರಲಿಲ್ಲ. ನನ್ನ ಅಣ್ಣನ ಮನೆಯನ್ನು ಖಾಲಿ ಮಾಡುವುದಕ್ಕೆ ಒಂದು ತಿಂಗಳ ಸಮಯವಿತ್ತು. ನಾನಿನ್ನೂ ಅಲ್ಲಿಯೇ ವಾಸಿಸುತ್ತಿದ್ದೆ. ಎರಡು ದಿನಗಳ ನಂತರ ಇನ್ನೂ ಖಾಲಿ ಮಾಡದ ಅಣ್ಣನ ಮನೆಗೆ ಬಂದ ಅವನು, “ನಿನಗೆ ಇರಲು ಒಂದು ಜಾಗ ಇದೆ, ಆದರೆ ಒಂದು ಷರತ್ತು, ನೀನು ಸಂಘಕ್ಕೆ ಸೇರಬೇಕು” ಅಂದ. ನನ್ನ ಚಿಕ್ಕವಯಸ್ಸಿನಲ್ಲಾದ ಪ್ರಕರಣ ಆಗಲೇ ನೆನಪಿನಿಂದ ಮಾಸಿಹೋಗಿತ್ತು. ನನ್ನ ತಂದೆ ಈಗ ದೂರದ ಊರಾದ ಶೃಂಗೇರಿ ಸ್ಕೂಲಿನಲ್ಲಿ ಮುಖ್ಯೋಪಾಧ್ಯಾಯರು. ಇರೋದಕ್ಕೆ ರೂಮು ಸಿಕ್ಕರೆ ಏನು ಬೇಕಾದರೂ ಮಾಡ್ತೀನಿ ಅನ್ನುವ ಪರಿಸ್ಥಿತಿಯನ್ನ ಎದುರಿಸುತ್ತಿದ್ದೆ ಆ ದಿನಗಳಲ್ಲಿ. ಇದು ಸಂಘದ ಸಹವಾಸದ ಎರಡನೇ ಇನ್ನಿಂಗ್ಸ್.

ಅಂದಿನಿಂದ ನಾನು ಕಾರ್ಯಾಲಯದಲ್ಲಿ ವಾಸಿಸಲು ಪ್ರಾರಂಭಿಸಿದೆ. ಕೆಲವು ಪ್ರಚಾರಕರು ಮತ್ತು ನಿವಾಸಿಗಳ ಜತೆ ಬೇಗನೆ ಎದ್ದು ಪ್ರಾತಃ ಸ್ಮರಣೆಯ ಕಾರ್ಯಕ್ರಮಕ್ಕೆ ಹಾಜರಾಗುತ್ತಿದ್ದೆ. ನಂತರ ಏಳು ಗಂಟೆಗೆ ಬೆಳಗಿನ ಶಾಖೆಯ ಸಭೆ. ನಂತರ ನನ್ನ ಲಾ ಕಾಲೇಜು ಇತ್ಯಾದಿ. ಇಷ್ಟೇ ಆದರೆ ಹೇಗೋ ಅನುಸರಿಸಿಕೊಂಡು ಇದ್ದುಬಿಡಬಹುದು ಅಂತ ನನ್ನ ಮನಸ್ಸಿನಲ್ಲಿ ಅನಿಸತೊಡಗಿತು. ಆದರೆ ನನಗೊಂದು ಬಡ್ತಿ ಸಿಕ್ಕಿತು. ಅದು ಸಂಘದ ಪ್ರಮುಖ ಬೈಟಕ್ಕುಗಳಲ್ಲಿ ಕುಳಿತು ಅವರ ಮಾತುಗಳನ್ನು ಕೇಳುವ ಅವಕಾಶ. ನನಗೆ ಚಿಕ್ಕಂದಿನಲ್ಲಿ ನಮ್ಮಪ್ಪ ನನ್ನಲ್ಲಿ ಹುಟ್ಟುಹಾಕಿದ ಸೆಕ್ಯುಲರಿಸಂ ಬೀಜ ಮೊಳಕೆಯೊಡೆದು ಹೆಮ್ಮರವೇನೂ ಆಗದೆ, ಬಹುಶಃ ನನ್ನ ಸುಪ್ತಪ್ರಜ್ಞೆಯಲ್ಲಿ ತಟಸ್ಥವಾಗಿಯೇ ಇತ್ತು. ಈ ಭೈಟಕ್‌ಗಳಲ್ಲಿನ ವಿಚಾರ ಲಹರಿಗಳು ನನ್ನ ಕಿವಿಯ ಮೇಲೆ ಬೀಳುತ್ತಿದ್ದಂತೆ ಅದು ಮೊಳಕೆಯೊಡೆಯಲು ಶುರುವಾಯಿತು ಎನ್ನಬಹುದು. ಅದು ದೊಡ್ಡ ಮರವಾಗಿ ಬೆಳೆಯಲು ಹೆಚ್ಚು ಸಮಯವೇನು ಹಿಡಿಯಲಿಲ್ಲ. ಅದೇ ಕಾರಣಕ್ಕೆ ನಾನು ಅವರ ಸಂವಾದಗಳ ಮಧ್ಯೆ ಮೂಗು ತೂರಿಸಲು ಪ್ರಾರಂಭಿಸಿದೆ. ಒಂದು ದಿನ “ಹಾಗೇನಿಲ್ಲ, ನನ್ನ ಚಿಕ್ಕ ವಯಸ್ಸಿನ ಅನೇಕ ಸ್ನೇಹಿತರುಗಳ ನೀವು ಹೇಳುವ ಧರ್ಮಕ್ಕೆ ಸೇರಿದವರು.. ಅದಲ್ಲದೇ ನನಗೆ ಕನ್ನಡವನ್ನ ಕಲಿಸಿದವರೇ ಸೈಯದ್ ಹುಸೇನ್ ಅನ್ನುವ ಮೇಷ್ಟ್ರು” ಅಂದಾಗ ಅಲ್ಲಿ ನೆರೆದಿದ್ದ ಪ್ರಮುಖರ ಮುಖದಲ್ಲೆಲ್ಲಾ ಅಸಹನೆಯ ಸುಕ್ಕುಗಳು ಮೂಡತೊಡಗಿದವು.

ನಂತರ, ಇವನು ನಮ್ಮ ಗುಂಪಿಗೆ ಸರಿಹೊಂದುವುದಿಲ್ಲ ಎಂದು ನನ್ನನ್ನು ಈ ಘಟನೆ ನಡೆದ ದಿನಗಳ ನಂತರ ವಿದ್ಯಾರ್ಥಿ ಪರಿಷತ್‌ನ ಆಫೀಸನ್ನು ನೋಡಿಕೊಳ್ಳಲು ನಿಯೋಜಿಸಿಬಿಟ್ಟರು.

ಒಂದು ದಿನ ವಿದ್ಯಾರ್ಥಿ ಪರಿಷತ್‌ನ ಒಂದು ದೊಡ್ಡ ಸಭೆಯನ್ನು ಮೈಸೂರಿನಲ್ಲಿ ಆಯೋಜಿಸಲಾಗಿತ್ತು. ಅಂದು ಒಂದು ದೊಡ್ಡ ವ್ಯಾನಿನಲ್ಲಿ ಸ್ವಯಂಸೇವಕರ ಜತೆ ಮೈಸೂರಿಗೆ ನಾನೂ ಹೊರಟೆ. ದಾರಿಯಲ್ಲಿ ಅಂತ್ಯಾಕ್ಷರಿ ಆಟ ಆಡುವ ಮನಸ್ಸು ಎಲ್ಲರಿಗೂ ಆಯಿತು. ನನಗೂ ಖುಷಿ ಆಯಿತು. ಆದರೆ ಯಾವುದೇ ಸಿನೆಮಾ ಹಾಡು ಹಾಡುವುದನ್ನ ನಿಷೇಧಿಸಲಾಗಿತ್ತು. ಬರೀ ಸಂಘಗೀತೆಗಳು. ಒಂದು ಸಂಘಗೀತೆಯ ಚರಣ ಅಂತ್ಯಗೊಂಡಿದ್ದು ಒಂದು ಜನಾಂಗವನ್ನು ನಿಂದಿಸುವ ಶಬ್ದಗಳಿಂದ. ಅಂದು ನನ್ನ ಮನಸ್ಸಿನಲ್ಲಿ ವಿಪ್ಲವವೊಂದು ಆರಂಭಗೊಂಡಿತು. ಜಿಗುಪ್ಸೆಗೊಂಡ ನಾನು ಮೈಸೂರು ತಲುಪುವವರೆಗೂ ಮೌನದಿಂದಲೇ ಕುಳಿತುಬಿಟ್ಟಿದ್ದೆ.

ನನ್ನ ಮನಸ್ಸಿನಲ್ಲಿ ಎದ್ದ ವೈಚಾರಿಕ ಭಾವನೆಗಳು ಘನೀಭವಿಸಿ ರೂಪಪಡೆಯಲು ಪ್ರಾರಂಭವಾಗಿತ್ತು ಎನ್ನಬಹುದು. ಯಾವ ಪರಂಪರೆಯಲ್ಲಿಯೂ ಅದರಲ್ಲೂ ಭಾರತೀಯ ಪರಂಪರೆಯಲ್ಲಿ, ಅದು ನೈಜ ಸ್ವರೂಪದ್ದಾಗಿದ್ದರೆ, ಇನ್ನೊಂದು ಧರ್ಮಕ್ಕೆ ಸೇರಿದ ಜೀವಗಳ ಸಾವನ್ನ ಹಾಡಿನ ರೂಪದಲ್ಲಿ ವೈಭವಿ ಕರಿಸುತ್ತದೆಯೇ? ನನಗೆ ಗೊತ್ತಿದ್ದಂತೆ ನಮ್ಮ ಭಾರತೀಯ ಪರಂಪರೆಯ ಧರ್ಮದಲ್ಲಿ ಯಾವುದನ್ನ ಹಿಂದೂ ಅಂತ ಕರೆಯುತ್ತವೆಯೋ ಅದೊಂದು ಹನಿಹನಿಯಾಗಿ ಇಡೀ ಭೂಮಿಯನ್ನ ತಣಿಸುವ ಸೋನೆ ಮಳೆಯ ಹಾಗೆ ಅಲ್ಲವೇ? ಮಳೆ ಬಿದ್ದರೆ ಒಂದು ಪಂಗಡಕ್ಕಾಗಿ ಬೀಳುತ್ತದೆಯೇ? ಆದರೆ ಅದೇ ನೀರು ಶೇಖರಣೆಯಾಗಿ ಒಂದು ಗುಂಡಿಯಲ್ಲಿ ನಿಂತು, ಕೊಳೆತು ಬಗ್ಗಡವಾಗಿ ಕಾಯಿಲೆ ಹರಡಲು ಶುರುಮಾಡಿಬಿಟ್ಟರೆ? ಈ ರೀತಿಯ ದ್ವಂದ್ವಗಳು ನನ್ನನ್ನು ಕಾಡತೊಡಗಿತು.

ಇನ್ನು ಈ ವಾತಾವರಣದಲ್ಲಿದ್ದರೆ ನನ್ನ ಆಲೋಚನೆಗಳೂ ಇದೇ ರೀತಿ ಬಗ್ಗಡವಾಗಿಬಿಡಬಹುದು ಅನ್ನುವ ಭಯದಿಂದ ನಾನು ಆ ಸಭೆಗೆ ಹೋಗದೇ ವಾಪಸ್ಸು ಬೆಂಗಳೂರಿನ ಬಸ್ಸನ್ನು ಹತ್ತಿದೆ. ನಾನು ವಾಸಿಸುತ್ತಿದ್ದ ಸ್ಥಳಕ್ಕೆ ನನ್ನ ಬಟ್ಟೆ ಬರೆಯನ್ನು ತೆಗೆದುಕೊಳ್ಳುವುದಕ್ಕೂ ನಾನು ಅಲ್ಲಿಗೆ ಹೋಗಲಿಲ್ಲ.

ಇಲ್ಲಿಗೆ ಸಂಘದ ನನ್ನ ಎರಡನೇ ಇನ್ನಿಂಗ್ಸ್ ಕೂಡ ಕೊನೆಯಾಗಿತ್ತು. ಅದೇ ಕೊನೆಯಾಗಿತ್ತು.

ಕೆ ಶ್ರೀನಾಥ್

ಕೆ ಶ್ರೀನಾಥ್
ಮಾಜಿ ಕೈಗಾರಿಕೋದ್ಯಮಿ ಮತ್ತು ಹಾಲಿ ನಟ ಶ್ರೀನಾಥ್ ಈಗ ಸಾಹಿತ್ಯ ಕೃಷಿಯಲ್ಲಿ ನಿರತರಾಗಿದ್ದು, ಇತ್ತೀಚೆಗಷ್ಟೇ ಅವರು ಅನುವಾದಿಸಿರುವ ದಾಸ್ತೋವಸ್ಕಿಯ ’ಕರಮಜೋವ್ ಸಹೋದರರು’ ಪ್ರಕಟವಾಗಿದೆ.


ಇದನ್ನೂ ಓದಿ: ಆರ್‌ಎಸ್‌ಎಸ್‌ ಸಾಮಾಜಿಕ ನ್ಯಾಯದ ವಿರೋಧಿ, ಅದು ಮನುಸ್ಮೃತಿಯನ್ನು ನಂಬುತ್ತದೆ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...