Homeಕರ್ನಾಟಕಆರ್.ಎಸ್.ಎಸ್ ಸಖ್ಯಕ್ಕೆ ಬಂದದ್ದು ಮತ್ತು ಪ್ರಶ್ನಿಸಿ ಹೊರಬಂದದ್ದು..

ಆರ್.ಎಸ್.ಎಸ್ ಸಖ್ಯಕ್ಕೆ ಬಂದದ್ದು ಮತ್ತು ಪ್ರಶ್ನಿಸಿ ಹೊರಬಂದದ್ದು..

- Advertisement -
- Advertisement -

ನನ್ನ ಹಿನ್ನೆಲೆ ವಿಚಿತ್ರ. ಆದರೆ ಅದರ ಚಿತ್ರ ಮಾತ್ರ ಇನ್ನೂ ನನ್ನ ಮನಸ್ಸಿನಿಂದ ಅಳಿಸಿಹೋಗಿಲ್ಲ. ನಾನು ಆಗ ಬಹುಶಃ ಹತ್ತು ವರ್ಷದ ಹುಡುಗ. ಪಿರಿಯಾಪಟ್ಟಣದಿಂದ ಒಬ್ಬ ವ್ಯಕ್ತಿ ಸೈಕಲ್ ಮೇಲೆ ಬಂದು, ಮನೆಮನೆಗೂ ಹೋಗಿ, ನನ್ನಂತಹ ಎಳೆಯ ಹುಡುಗರನ್ನು ಹಿಡಿದುಕೊಂಡು ಬಂದು ಕಬಡ್ಡಿ, ಕೊಕೊ ಇತ್ಯಾದಿ ಆಟಗಳನ್ನು ಆಡಿಸುತ್ತಿದ್ದ. ಕೆಲವು ತಿಂಗಳುಗಳ ಕಾಲ ನಾವು ಅಂದರೆ ನಾನು ಮತ್ತು ನನ್ನ ಸ್ನೇಹಿತರು, ಕುಗ್ರಾಮದಲ್ಲೊಂದು ಮನರಂಜನೆ ಸಿಕ್ಕಿತಲ್ಲ ಎನ್ನುವ ಸಂತೋಷದಿಂದ ಆಟ ಆಡುವುದಕ್ಕಾಗಿ ಪ್ರತಿದಿನ ಮುಗ್ಧತೆಯಿಂದ ತಪ್ಪದೇ ಆ ವ್ಯಕ್ತಿಗಾಗಿ ಕಾಯುತ್ತಿದ್ದೆವು.

ಹೈಸ್ಕೂಲ್ ಹೆಡ್ಮಾಸ್ಟರ್ ಆಗಿದ್ದ ನಮ್ಮಪ್ಪ ಅಂದು ಸಂಜೆ ಸ್ಕೂಲ್ ಬಾಗಿಲು ಹಾಕಿಕೊಂಡು ಮನೆಗೆ ಹೋಗುವಾಗ ನಾವು ಆಟ ಆಡುತ್ತಿದ್ದ ಸ್ಥಳದಲ್ಲಿ ಕಾವಿ ಬಣ್ಣದ ಧ್ವಜವನ್ನ ನೆಟ್ಟಿರುವುದನ್ನ ಕಂಡರು ಅನಿಸುತ್ತದೆ. ಆದರೆ ಅಲ್ಲಿ ಅವರು ಏನನ್ನೂ ಮಾತನಾಡದೇ ಮನೆಗೆ ಬಂದರು. ಅವರು ಅಸಹನೆಗೊಂಡಿದ್ದರು ಅನ್ನುವುದು ನನಗೆ ಗೊತ್ತಾಗಿದ್ದು ನಾನು ಮನೆಗೆ ಬಂದ ಮೇಲೆ.

ನಮ್ಮಪ್ಪ ತನಿಖೆ ಮಾಡುವವರ ರೀತಿ “ಅದ್ಯಾರೊ, ನಿಮ್ಮನ್ನೆಲ್ಲಾ ಆಟ ಆಡಿಸುತ್ತಿದ್ದವರು?” ಅಂತ ಕೇಳಿದಾಗ ನಾನು, “ಅವರು ಪಿರಿಯಾಪಟ್ಟಣದಿಂದ ಸೈಕಲ್ಲಿನಲ್ಲಿ ಬರುತ್ತಾರೆ, ನಮಗೆ ಅನೇಕ ಆಟಗಳನ್ನು ಹೇಳಿಕೊಟ್ಟು, ಆಡಿಸುತ್ತಾರೆ. ಮೊದಲು ಒಂದು ಹಾಡನ್ನೂ ನಾವು ಹೇಳಬೇಕು” ಅಂತ ಹೇಳಿದಾಗ ನಮ್ಮಪ್ಪನಿಗೆ ಖಾತ್ರಿಯಾಗಿತ್ತೆನಿಸುತ್ತದೆ ಇದು ಆರ್.ಎಸ್.ಎಸ್‌ನ ಒಂದು ಶಾಖೆ ಎಂದು.

ಅಪ್ಪ ನನ್ನನ್ನು ಮರುದಿನದಿಂದ ಸಂಜೆ ಅಲ್ಲಿಗೆ ಹೋಗದಂತೆ ನಿಷೇಧಿಸಿದರು. ಆರ್.ಎಸ್.ಎ.ಸ್ ಮತ್ತು ಗೋಡ್ಸೆ ನಂಟು ಮತ್ತು ಅವನ ಗಾಂಧಿ ಹತ್ಯೆಯ ಕೃತ್ಯದ ನೆನಪು ಅವರಲ್ಲಿ ಹಸಿಯಾಗಿಯೇ ಇನ್ನೂ ಉಳಿದಿತ್ತು. ಅದಲ್ಲದೇ ಅವರು ಮುಂಬೈ ಲಾ ಕಾಲೇಜಿನಲ್ಲಿ ಅಂಬೇಡ್ಕರ್ ಅವರ ವಿದ್ಯಾರ್ಥಿಯಾಗಿದ್ದವರೂ ಕೂಡ. ಅಂಬೇಡ್ಕರ್ ಅವರ ವ್ಯಕ್ತಿತ್ವದ ಒಂದು ಕಿರಣ ಬಹುಶಃ ನನ್ನ ತಂದೆಯವರಲ್ಲಿಯೂ ಬಂದು ಹೊಕ್ಕಿದ್ದಿರಬಹುದು. ಅಲ್ಲಿಗೆ ನನ್ನ ಆರ್.ಎಸ್.ಎಸ್ ಸಂಸ್ಥೆಯ ಒಡನಾಟ ಮೊಳಕೆಯಲ್ಲಿಯೇ ಒಣಗಿಹೋಯಿತು. ಬಹುಶಃ ಮತ್ತೊಂದು ಸಂದರ್ಭಕ್ಕೆ ಹವಣಿಸುತ್ತಿತ್ತು!

ನನ್ನ ಎಸ್.ಎಸ್.ಎಲ್.ಸಿ. ಮುಗಿದು ನಾನು ಬೆಂಗಳೂರಿನ ನನ್ನ ಅಣ್ಣನ ಮನೆಯಲ್ಲಿ ನೆಲೇಸಿ ನನ್ನ ಪಿ.ಯು.ಸಿ. ಮತ್ತು ಬಿ.ಎಸ್.ಸಿ. ತರಗತಿಗಳನ್ನು ಮುಗಿಸಿದೆ. ನಂತರ ನನ್ನ ಕೆಲವು ಸಹಪಾಠಿಗಳು ಲಾ ಕಾಲೇಜು ಸೇರಿದರು. ಯಾವುದೇ ಗೊತ್ತುಗುರಿ ಇಲ್ಲದೇ ನಾನೂ ಲಾ ಕಾಲೇಜನ್ನು ಸೇರಿದೆ. ಅದೇ ಸಮಯಕ್ಕೆ ಅಣ್ಣ ಮುಂಬೈಯಲ್ಲಿ ಕೆಲಸಕ್ಕೆ ಸೇರಿದ. ಆಗ ನನ್ನ ವಾಸ್ತವ್ಯವೇ ಒಂದು ದೊಡ್ಡ ಸಮಸ್ಯೆಯಾಗಿ ನನ್ನನ್ನು ಕಾಡಿತು. ಇದನ್ನು ನನ್ನ ಸ್ನೇಹಿತನೊಬ್ಬನ ಹತ್ತಿರ ತೋಡಿಕೊಂಡೆ. ಎಲ್ಲಾದರೂ ರೂಮು ಕೊಡಿಸೊ ಅಂತ ಅವನ ಹಿಂದೆ ಬಿದ್ದೆ. ಅವನೊಬ್ಬ ನಿಷ್ಠಾವಂತ ಸ್ವಯಂಸೇವಕ ಅನ್ನುವುದು ನನಗೆ ಅಲ್ಲಿಯವರೆಗೂ ತಿಳಿದಿರಲಿಲ್ಲ. ನನ್ನ ಅಣ್ಣನ ಮನೆಯನ್ನು ಖಾಲಿ ಮಾಡುವುದಕ್ಕೆ ಒಂದು ತಿಂಗಳ ಸಮಯವಿತ್ತು. ನಾನಿನ್ನೂ ಅಲ್ಲಿಯೇ ವಾಸಿಸುತ್ತಿದ್ದೆ. ಎರಡು ದಿನಗಳ ನಂತರ ಇನ್ನೂ ಖಾಲಿ ಮಾಡದ ಅಣ್ಣನ ಮನೆಗೆ ಬಂದ ಅವನು, “ನಿನಗೆ ಇರಲು ಒಂದು ಜಾಗ ಇದೆ, ಆದರೆ ಒಂದು ಷರತ್ತು, ನೀನು ಸಂಘಕ್ಕೆ ಸೇರಬೇಕು” ಅಂದ. ನನ್ನ ಚಿಕ್ಕವಯಸ್ಸಿನಲ್ಲಾದ ಪ್ರಕರಣ ಆಗಲೇ ನೆನಪಿನಿಂದ ಮಾಸಿಹೋಗಿತ್ತು. ನನ್ನ ತಂದೆ ಈಗ ದೂರದ ಊರಾದ ಶೃಂಗೇರಿ ಸ್ಕೂಲಿನಲ್ಲಿ ಮುಖ್ಯೋಪಾಧ್ಯಾಯರು. ಇರೋದಕ್ಕೆ ರೂಮು ಸಿಕ್ಕರೆ ಏನು ಬೇಕಾದರೂ ಮಾಡ್ತೀನಿ ಅನ್ನುವ ಪರಿಸ್ಥಿತಿಯನ್ನ ಎದುರಿಸುತ್ತಿದ್ದೆ ಆ ದಿನಗಳಲ್ಲಿ. ಇದು ಸಂಘದ ಸಹವಾಸದ ಎರಡನೇ ಇನ್ನಿಂಗ್ಸ್.

ಅಂದಿನಿಂದ ನಾನು ಕಾರ್ಯಾಲಯದಲ್ಲಿ ವಾಸಿಸಲು ಪ್ರಾರಂಭಿಸಿದೆ. ಕೆಲವು ಪ್ರಚಾರಕರು ಮತ್ತು ನಿವಾಸಿಗಳ ಜತೆ ಬೇಗನೆ ಎದ್ದು ಪ್ರಾತಃ ಸ್ಮರಣೆಯ ಕಾರ್ಯಕ್ರಮಕ್ಕೆ ಹಾಜರಾಗುತ್ತಿದ್ದೆ. ನಂತರ ಏಳು ಗಂಟೆಗೆ ಬೆಳಗಿನ ಶಾಖೆಯ ಸಭೆ. ನಂತರ ನನ್ನ ಲಾ ಕಾಲೇಜು ಇತ್ಯಾದಿ. ಇಷ್ಟೇ ಆದರೆ ಹೇಗೋ ಅನುಸರಿಸಿಕೊಂಡು ಇದ್ದುಬಿಡಬಹುದು ಅಂತ ನನ್ನ ಮನಸ್ಸಿನಲ್ಲಿ ಅನಿಸತೊಡಗಿತು. ಆದರೆ ನನಗೊಂದು ಬಡ್ತಿ ಸಿಕ್ಕಿತು. ಅದು ಸಂಘದ ಪ್ರಮುಖ ಬೈಟಕ್ಕುಗಳಲ್ಲಿ ಕುಳಿತು ಅವರ ಮಾತುಗಳನ್ನು ಕೇಳುವ ಅವಕಾಶ. ನನಗೆ ಚಿಕ್ಕಂದಿನಲ್ಲಿ ನಮ್ಮಪ್ಪ ನನ್ನಲ್ಲಿ ಹುಟ್ಟುಹಾಕಿದ ಸೆಕ್ಯುಲರಿಸಂ ಬೀಜ ಮೊಳಕೆಯೊಡೆದು ಹೆಮ್ಮರವೇನೂ ಆಗದೆ, ಬಹುಶಃ ನನ್ನ ಸುಪ್ತಪ್ರಜ್ಞೆಯಲ್ಲಿ ತಟಸ್ಥವಾಗಿಯೇ ಇತ್ತು. ಈ ಭೈಟಕ್‌ಗಳಲ್ಲಿನ ವಿಚಾರ ಲಹರಿಗಳು ನನ್ನ ಕಿವಿಯ ಮೇಲೆ ಬೀಳುತ್ತಿದ್ದಂತೆ ಅದು ಮೊಳಕೆಯೊಡೆಯಲು ಶುರುವಾಯಿತು ಎನ್ನಬಹುದು. ಅದು ದೊಡ್ಡ ಮರವಾಗಿ ಬೆಳೆಯಲು ಹೆಚ್ಚು ಸಮಯವೇನು ಹಿಡಿಯಲಿಲ್ಲ. ಅದೇ ಕಾರಣಕ್ಕೆ ನಾನು ಅವರ ಸಂವಾದಗಳ ಮಧ್ಯೆ ಮೂಗು ತೂರಿಸಲು ಪ್ರಾರಂಭಿಸಿದೆ. ಒಂದು ದಿನ “ಹಾಗೇನಿಲ್ಲ, ನನ್ನ ಚಿಕ್ಕ ವಯಸ್ಸಿನ ಅನೇಕ ಸ್ನೇಹಿತರುಗಳ ನೀವು ಹೇಳುವ ಧರ್ಮಕ್ಕೆ ಸೇರಿದವರು.. ಅದಲ್ಲದೇ ನನಗೆ ಕನ್ನಡವನ್ನ ಕಲಿಸಿದವರೇ ಸೈಯದ್ ಹುಸೇನ್ ಅನ್ನುವ ಮೇಷ್ಟ್ರು” ಅಂದಾಗ ಅಲ್ಲಿ ನೆರೆದಿದ್ದ ಪ್ರಮುಖರ ಮುಖದಲ್ಲೆಲ್ಲಾ ಅಸಹನೆಯ ಸುಕ್ಕುಗಳು ಮೂಡತೊಡಗಿದವು.

ನಂತರ, ಇವನು ನಮ್ಮ ಗುಂಪಿಗೆ ಸರಿಹೊಂದುವುದಿಲ್ಲ ಎಂದು ನನ್ನನ್ನು ಈ ಘಟನೆ ನಡೆದ ದಿನಗಳ ನಂತರ ವಿದ್ಯಾರ್ಥಿ ಪರಿಷತ್‌ನ ಆಫೀಸನ್ನು ನೋಡಿಕೊಳ್ಳಲು ನಿಯೋಜಿಸಿಬಿಟ್ಟರು.

ಒಂದು ದಿನ ವಿದ್ಯಾರ್ಥಿ ಪರಿಷತ್‌ನ ಒಂದು ದೊಡ್ಡ ಸಭೆಯನ್ನು ಮೈಸೂರಿನಲ್ಲಿ ಆಯೋಜಿಸಲಾಗಿತ್ತು. ಅಂದು ಒಂದು ದೊಡ್ಡ ವ್ಯಾನಿನಲ್ಲಿ ಸ್ವಯಂಸೇವಕರ ಜತೆ ಮೈಸೂರಿಗೆ ನಾನೂ ಹೊರಟೆ. ದಾರಿಯಲ್ಲಿ ಅಂತ್ಯಾಕ್ಷರಿ ಆಟ ಆಡುವ ಮನಸ್ಸು ಎಲ್ಲರಿಗೂ ಆಯಿತು. ನನಗೂ ಖುಷಿ ಆಯಿತು. ಆದರೆ ಯಾವುದೇ ಸಿನೆಮಾ ಹಾಡು ಹಾಡುವುದನ್ನ ನಿಷೇಧಿಸಲಾಗಿತ್ತು. ಬರೀ ಸಂಘಗೀತೆಗಳು. ಒಂದು ಸಂಘಗೀತೆಯ ಚರಣ ಅಂತ್ಯಗೊಂಡಿದ್ದು ಒಂದು ಜನಾಂಗವನ್ನು ನಿಂದಿಸುವ ಶಬ್ದಗಳಿಂದ. ಅಂದು ನನ್ನ ಮನಸ್ಸಿನಲ್ಲಿ ವಿಪ್ಲವವೊಂದು ಆರಂಭಗೊಂಡಿತು. ಜಿಗುಪ್ಸೆಗೊಂಡ ನಾನು ಮೈಸೂರು ತಲುಪುವವರೆಗೂ ಮೌನದಿಂದಲೇ ಕುಳಿತುಬಿಟ್ಟಿದ್ದೆ.

ನನ್ನ ಮನಸ್ಸಿನಲ್ಲಿ ಎದ್ದ ವೈಚಾರಿಕ ಭಾವನೆಗಳು ಘನೀಭವಿಸಿ ರೂಪಪಡೆಯಲು ಪ್ರಾರಂಭವಾಗಿತ್ತು ಎನ್ನಬಹುದು. ಯಾವ ಪರಂಪರೆಯಲ್ಲಿಯೂ ಅದರಲ್ಲೂ ಭಾರತೀಯ ಪರಂಪರೆಯಲ್ಲಿ, ಅದು ನೈಜ ಸ್ವರೂಪದ್ದಾಗಿದ್ದರೆ, ಇನ್ನೊಂದು ಧರ್ಮಕ್ಕೆ ಸೇರಿದ ಜೀವಗಳ ಸಾವನ್ನ ಹಾಡಿನ ರೂಪದಲ್ಲಿ ವೈಭವಿ ಕರಿಸುತ್ತದೆಯೇ? ನನಗೆ ಗೊತ್ತಿದ್ದಂತೆ ನಮ್ಮ ಭಾರತೀಯ ಪರಂಪರೆಯ ಧರ್ಮದಲ್ಲಿ ಯಾವುದನ್ನ ಹಿಂದೂ ಅಂತ ಕರೆಯುತ್ತವೆಯೋ ಅದೊಂದು ಹನಿಹನಿಯಾಗಿ ಇಡೀ ಭೂಮಿಯನ್ನ ತಣಿಸುವ ಸೋನೆ ಮಳೆಯ ಹಾಗೆ ಅಲ್ಲವೇ? ಮಳೆ ಬಿದ್ದರೆ ಒಂದು ಪಂಗಡಕ್ಕಾಗಿ ಬೀಳುತ್ತದೆಯೇ? ಆದರೆ ಅದೇ ನೀರು ಶೇಖರಣೆಯಾಗಿ ಒಂದು ಗುಂಡಿಯಲ್ಲಿ ನಿಂತು, ಕೊಳೆತು ಬಗ್ಗಡವಾಗಿ ಕಾಯಿಲೆ ಹರಡಲು ಶುರುಮಾಡಿಬಿಟ್ಟರೆ? ಈ ರೀತಿಯ ದ್ವಂದ್ವಗಳು ನನ್ನನ್ನು ಕಾಡತೊಡಗಿತು.

ಇನ್ನು ಈ ವಾತಾವರಣದಲ್ಲಿದ್ದರೆ ನನ್ನ ಆಲೋಚನೆಗಳೂ ಇದೇ ರೀತಿ ಬಗ್ಗಡವಾಗಿಬಿಡಬಹುದು ಅನ್ನುವ ಭಯದಿಂದ ನಾನು ಆ ಸಭೆಗೆ ಹೋಗದೇ ವಾಪಸ್ಸು ಬೆಂಗಳೂರಿನ ಬಸ್ಸನ್ನು ಹತ್ತಿದೆ. ನಾನು ವಾಸಿಸುತ್ತಿದ್ದ ಸ್ಥಳಕ್ಕೆ ನನ್ನ ಬಟ್ಟೆ ಬರೆಯನ್ನು ತೆಗೆದುಕೊಳ್ಳುವುದಕ್ಕೂ ನಾನು ಅಲ್ಲಿಗೆ ಹೋಗಲಿಲ್ಲ.

ಇಲ್ಲಿಗೆ ಸಂಘದ ನನ್ನ ಎರಡನೇ ಇನ್ನಿಂಗ್ಸ್ ಕೂಡ ಕೊನೆಯಾಗಿತ್ತು. ಅದೇ ಕೊನೆಯಾಗಿತ್ತು.

ಕೆ ಶ್ರೀನಾಥ್

ಕೆ ಶ್ರೀನಾಥ್
ಮಾಜಿ ಕೈಗಾರಿಕೋದ್ಯಮಿ ಮತ್ತು ಹಾಲಿ ನಟ ಶ್ರೀನಾಥ್ ಈಗ ಸಾಹಿತ್ಯ ಕೃಷಿಯಲ್ಲಿ ನಿರತರಾಗಿದ್ದು, ಇತ್ತೀಚೆಗಷ್ಟೇ ಅವರು ಅನುವಾದಿಸಿರುವ ದಾಸ್ತೋವಸ್ಕಿಯ ’ಕರಮಜೋವ್ ಸಹೋದರರು’ ಪ್ರಕಟವಾಗಿದೆ.


ಇದನ್ನೂ ಓದಿ: ಆರ್‌ಎಸ್‌ಎಸ್‌ ಸಾಮಾಜಿಕ ನ್ಯಾಯದ ವಿರೋಧಿ, ಅದು ಮನುಸ್ಮೃತಿಯನ್ನು ನಂಬುತ್ತದೆ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...