Homeಮುಖಪುಟನಾ ಹ್ಯಾಂಗ ಮರೆಯಲಿ ನಿನ್ನ ಗಾಂಧಿ ತಾತ... : ಮಿಸ್ರಿಯಾ ಐ. ಪಜೀರ್

ನಾ ಹ್ಯಾಂಗ ಮರೆಯಲಿ ನಿನ್ನ ಗಾಂಧಿ ತಾತ… : ಮಿಸ್ರಿಯಾ ಐ. ಪಜೀರ್

- Advertisement -
- Advertisement -

ಭಿನ್ನ ಸಾಮಾಜಿಕ ಮತ್ತು ಪ್ರಾದೇಶಿಕ ಹಿನ್ನೆಲೆಗಳ ಬರಹಗಾರರು ನಮ್ಮಲ್ಲಿ ಬರೆಯಬೇಕೆಂಬುದು ಸಂಪಾದಕೀಯ ತಂಡದ ಎಲ್ಲರ ಅನಿಸಿಕೆ. ಅದರಲ್ಲೂ ಹೊಸತಲೆಮಾರಿನ ಹಲವಾರು ಬರಹಗಾರ್ತಿಯರ ಬರಹಗಳು ಇಲ್ಲಿರಬೇಕು. ಅದಕ್ಕಾಗಿ ಯಾರನ್ನು ಕೇಳಬೇಕೆಂದು ಪಟ್ಟಿ ಮಾಡಲು ಹೋದರೆ, ಪಟ್ಟಿ ಬಹಳ ದೊಡ್ಡದೇ ಆಯಿತು. ಒಬ್ಬರ ಅಂಕಣವನ್ನಷ್ಟೇ ಪ್ರಕಟಿಸಿದರೆ ದೊಡ್ಡ ನಷ್ಟ ಎನಿಸಿತು. ಈಗಲೇ ಪುಟಗಳನ್ನು ಹಿಗ್ಗಿಸುವ ಸಾಧ್ಯತೆಯೂ ಇಲ್ಲ. ಹಾಗಾಗಿ ಪ್ರತಿ ವಾರ ಒಬ್ಬೊಬ್ಬರಿಂದ ಬರೆಸಲು ತೀರ್ಮಾನಿಸಲಾಗಿದೆ. ಇನ್ನು ಮುಂದೆ ಈ ಜಾಗದಲ್ಲಿ ಹೊಸ ಬರಹಗಾರ್ತಿಯರು ಬರೆಯಲಿದ್ದಾರೆ.                                                                                                                    – ಸಂ.

ಸತ್ಯ ನುಡಿಯುವವರನ್ನು, ಗಾಂಧಿ ನಡೆದು ತೋರಿಸಿದ ಅಹಿಂಸಾ ಮಾರ್ಗದಲ್ಲಿ ಹೋರಾಡುವವರನ್ನು ದೇಶದ್ರೋಹಿಗಳನ್ನಾಗಿಯೂ, ಸುಳ್ಳನ್ನೇ ಸತ್ಯವೆಂಬಂತೆ ಬಿಂಬಿಸಿ ಹಿಂಸೆಯನ್ನೇ ಬಂಡವಾಳವಾಗಿಸಿಕೊಂಡವರನ್ನು ದೇಶಭಕ್ತರನ್ನಾಗಿಯೂ ಕಾಣುವ ಈ ದುರಂತ ದಿನಗಳಲ್ಲಿ ಬಾಲ್ಯದಲ್ಲಿ ನನ್ನ ಮನದಾಳದಲ್ಲಿ ಅಚ್ಚೊತ್ತಿದ ಗಾಂಧಿ ತಾತ ಕಾಡತೊಡಗಿದ್ದಾನೆ.

ನಾನು ಪ್ರಾಥಮಿಕ ಶಾಲೆಯಲ್ಲಿ ಕಲಿಯುತ್ತಿರುವಾಗ ಗಾಂಧೀಜಿಯವರ ಹೆಸರು ಕೇಳದ ದಿನಗಳೇ ಇರಲಿಲ್ಲ. ಮಕ್ಕಳ ಹಾಡಿನ ಮೂಲಕವೋ, ಅಭಿನಯ ಗೀತೆಗಳ ಮೂಲಕವೋ ಒಂದಲ್ಲ ಒಂದು ರೀತಿಯಲ್ಲಿ ಬಾಪೂಜಿಯ ಹೆಸರು ಹೇಳುತ್ತಿದ್ದೆವು. ನಾನು ಗಾಂಧೀಜಿಯ ಕುರಿತಾಗಿ ಕಲಿತ ಮೊದಲ ಹಾಡು “ಗಾಂಧಿ ತಾತ ನನ್ನಜ್ಜ, ಬಗ್ಗಿ ಬಗ್ಗಿ ನಡೆದಿದ್ದ… ಖಾದಿ ಬಟ್ಟೆ ತೊಡುತ್ತಿದ್ದ…” ಈ ಹಾಡಿನಿಂದಾಗಿ ನಮಗಾಗಲೇ ಗಾಂಧಿ ನಮ್ಮವರೆಂಬ ಭಾವನೆ ಮನಸ್ಸಿನಲ್ಲಿ ಮೂಡಿತ್ತು. ನನ್ನ ನಾಲ್ಕರ ಹರೆಯದ ಪುಟ್ಟ ಮಗಳು ಶಹೀಮಳಿಗೂ ಇದೇ ಹಾಡನ್ನು ಹಾಡಿಸುತ್ತೇನೆ.

ಗಾಂಧಿ ಖಾದಿಬಟ್ಟೆಯನ್ನು ಯಾಕೆ ತೊಡುತ್ತಿದ್ದರು ಗೊತ್ತಾ? ಎಂದು ಟೀಚರ್ ಪ್ರಶ್ನೆಯನ್ನು ಕೇಳುತ್ತಿದ್ದರು. ಇಲ್ಲವೆಂದಾಗ, ಅವರು ಅದಕ್ಕೆ ಕೊಡುತ್ತಿದ್ದ ಉತ್ತರವು ಅಷ್ಟೇ ಪರಿಣಾಮಕಾರಿಯಾಗಿರುತ್ತಿತ್ತು. ಬೆಂಚಿನಲ್ಲಿ ನಮ್ಮ ಪಕ್ಕದಲ್ಲೇ ಕುಳಿತಿರುವ ಗೆಳತಿಯರನ್ನು ತೋರಿಸಿ, ಅವಳ ಬಟ್ಟೆಯನ್ನು ನೀನು ತೊಡಲು ಇಷ್ಟಪಡುತ್ತೀಯಾ? ತೊಡಬಾರದೆಂದಲ್ಲ, ಇಷ್ಟಪಡುತ್ತೀಯಾ? ಇಲ್ಲ ತಾನೇ? ಅದೇರೀತಿ ಗಾಂಧೀಜಿಯವರು ಬ್ರಿಟಿಷರು ತಯಾರಿಸಿದ ಬಟ್ಟೆಯನ್ನು ತೊಟ್ಟುಕೊಳ್ಳಲು ಇಷ್ಟಪಡದೇ, ತಾನೇ ಸ್ವತಃ ಚರಕದಿಂದ ನೂಲನ್ನು ನೇಯ್ದು ಹತ್ತಿ ಬಟ್ಟೆ ತಯಾರಿಸುತ್ತಿದ್ದರು ಹಾಗೂ ಇತರರಿಗೂ ಅದನ್ನೇ ಉಡಲು ಉತ್ತೇಜಿಸುತ್ತಿದ್ದರು ಎಂದಾಗ ನಾವು ಪುಳಕಗೊಳ್ಳುತ್ತಿದ್ದೆವು. ಇದು ಬ್ರಿಟಿಷರ ವಿರುದ್ಧದ ಹೋರಾಟ ಎಂಬುವುದನ್ನು ಅರ್ಥೈಸಿಕೊಳ್ಳುವಷ್ಟು ಪ್ರಬುದ್ಧತೆ ನಮಗಾಗ ಇರಲಿಲ್ಲ.

ಗಾಂಧೀಜಿಯ ಕುರಿತಾಗಿ ಹಲವಾರು ಹಾಡುಗಳಿದ್ದವು. ಅವರನ್ನು ನಾನು ಅರಿತದ್ದೇ ಹಾಡಿನ ಮೂಲಕ. ‘ಗಾಂಧೀ ತಾತನ ಆಶ್ರಮದಲ್ಲಿ ಇದ್ದವು ಮೂರು ಕೋತಿಗಳು, ನೀತಿಯ ಸಾರುವ ಕೋತಿಗಳು….’ ಈ ಹಾಡಿಗೆ ನಮ್ಮ ಟೀಚರು ತರಗತಿಯಲ್ಲಿ ಮೂವರನ್ನು ಕೋತಿಗಳನ್ನಾಗಿ ಮಾಡಿ ಕಣ್ಣು, ಕಿವಿ, ಬಾಯಿ ಮುಚ್ಚಿಕೊಳ್ಳಲು ಹೇಳುತ್ತಿದ್ದರು. ಉಳಿದವರೆಲ್ಲಾ ಸೇರಿ ಹಾಡುತ್ತಾ ಅಭಿನಯಿಸುತ್ತಿದ್ದೆವು. ತನ್ಮೂಲಕ ಕೆಟ್ಟದ್ದನ್ನು ಕೇಳಬಾರದು, ನೋಡಬಾರದು, ಆಡಬಾರದು ಎಂಬ ಗಾಂಧೀಜಿಯವರ ಬೋಧನೆಯನ್ನು ಕಲಿತೆವು.

‘ಪುಟ್ಟ ಕೌಮುದಿ, ಹಿಂದೂಸ್ತಾನಕ್ಕೆ ಹಿಂದಿರುಗಿದುದು’ ಎಂಬ ಪಾಠಗಳು ಬರಿಯ ಪಾಠವಾಗಿರದೆ ದೇಶಭಕ್ತನೆಂದರೆ ಗಾಂಧೀಜಿ, ಗಾಂಧೀಜಿಯೆಂದರೆ ದೇಶಭಕ್ತ ಎಂಬಷ್ಟು ಗಾಢವಾಗಿ ನಮ್ಮನ್ನಾವರಿಸಿತ್ತು. ಸ್ವಾತಂತ್ರ್ಯ ದಿನಾಚರಣೆ ಬಂತೆಂದರೆ ಸಾಕು, ಅಂದಿನ ಸಮಾರಂಭಕ್ಕೆ ಅತಿಥಿಗಳಾಗಿ ಬರುತ್ತಿದ್ದ ಗಣ್ಯರ ಬಾಯಲ್ಲೂ ಗಾಂಧೀಜಿ. ಮಕ್ಕಳ ಭಾಷಣದಲ್ಲೂ ಗಾಂಧೀಜಿ. ದೇಶಭಕ್ತಿ ಗೀತೆಯಲ್ಲೂ ಗಾಂಧೀಜಿ.

‘ಇದು ಬಾಪೂಜೀ ಬೆಳಗಿದ ಭಾರತ…’
ಹಾಗೆಯೇ
ಕಾಥೇವಾಡದ ಪೋರಬಂದರಿನಲ್ಲಿ ಜನಿಸಿದರು….
ಮೋಹನದಾಸ ಕರಮಚಂದ ಗಾಂಧಿ ಎಂಬವರು….
ಈ ಹಾಡಿನ ಕೊನೆಯಲ್ಲಿ
ಜನವರಿ ತಿಂಗಳ 30 ರಂದು……
ಇಹವನು ತ್ಯಜಿಸಿದರು.

ನಾಥೂರಾಮನ ಗುಂಡಿಗೆ ಸಿಲುಕಿ ಜಾಗವ ಎದೆಯಲ್ಲಿ ಎಂಬ ಸಾಲುಗಳಿದ್ದವು. ನಮಗೆ ಅದಾಗಲೇ ಗೋಡ್ಸೆಯ ಬಗ್ಗೆ ಮನದಲ್ಲಿ ಅಸಹನೆ ಮೂಡಲಾರಂಭಿಸಿತ್ತು. ಆಶ್ಚರ್ಯವೆಂದರೆ ನಮಗೆ ಇದನ್ನೆಲ್ಲಾ ಕಲಿಸಿದ ಟೀಚರ್ ಬ್ರಾಹ್ಮಣರಾಗಿದ್ದರು. ಅವರು ಯಾವತ್ತೂ ನಮಗೆ ಗಾಂಧೀಜಿಯ ಚಿತ್ರಣವನ್ನು ಕೆಟ್ಟದಾಗಿ ಚಿತ್ರಿಸಿಕೊಡಲಿಲ್ಲ. ಅವರೆಂದರೆ ‘ಮಹಾತ್ಮ’ ಅದರಾಚೆಗೆ ಯಾವುದೇ ಅನ್ಯ ಕಲ್ಪನೆಗಳಿರಲಿಲ್ಲ.

ಆ ಸುಂದರ ದಿನಗಳನ್ನು ಕೇಸರೀಕರಣವು ಅದೆಷ್ಟು ಬೇಗ ಧ್ವಂಸಗೊಳಿಸಿತೆಂದರೆ ನಾ ಕಲಿತ ಹಾಡುಗಳು ಈಗ ಯಾರ ಬಾಯಲ್ಲೂ ಕೇಳಸಿಗುವುದಿಲ್ಲ. ಶಾಲೆಯಲ್ಲಿ ಶಿಕ್ಷಕರೂ ಕೂಡಾ ಗಾಂಧೀಜಿಯ ತತ್ವಾದರ್ಶಗಳನ್ನು ಬೋಧಿಸುವ ಗೋಜಿಗೇ ಹೋಗುವುದಿಲ್ಲ. ಈಗಿನ ಮಕ್ಕಳು ಗಾಂಧೀಜಿಯ ಬಗ್ಗೆ ಬಹಳ ತುಚ್ಛವಾಗಿ ಮಾತನಾಡುವಷ್ಟರಮಟ್ಟಿಗೆ ಅವರ ಮೆದುಳು ತೊಳೆಯಲಾಗುತ್ತಿದೆ.

2 ವರ್ಷಗಳ ಹಿಂದೆ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬ್ರಾಹ್ಮಣ ಹುಡುಗನೊಬ್ಬ ನನ್ನ ಬಳಿಗೆ ಟ್ಯೂಷನ್‍ಗಾಗಿ ಬರುತ್ತಿದ್ದ. ಪ್ರತಿಯೊಂದು ವಿಚಾರಗಳನ್ನು ಪ್ರಶ್ನಿಸುವ ಗುಣ ಆತನಲ್ಲಿತ್ತು. ಇದನ್ನು ಗಮನಿಸಿದ ನಾನು “ನೀನು ವಿಚಾರವಾದಿಯಾಗುತ್ತಿ” ಎಂದಾಗ ಥಟ್ಟನೆ “ವಿಚಾರವಾದಿಯಾಗುವುದಿಲ್ಲ” ಎಂದ. ಆತನ ಪ್ರತಿಕ್ರಿಯೆಗೆ ಅವಾಕ್ಕಾದೆ. ಆತನ ವಯಸ್ಸಿನಲ್ಲಿ ನನಗೆ ವಿಚಾರವಾದಿ ಅಂದ್ರೆ ಏನೆಂದು ತಿಳಿಯುವುದು ಬಿಡಿ, ಆ ಪದವೇ ಗೊತ್ತಿರಲಿಲ್ಲ. ವ್ಯವಸ್ಥಿತವಾಗಿ ಎಳೆ ಮನಸ್ಸಿನೊಳಗೆ ಇದನ್ನೆಲ್ಲಾ ತುಂಬಿಕೊಡಲಾಗುತ್ತದೆ.

ಹೀಗೆ ಒಂದು ದಿನ ಆತ ನನ್ನಲ್ಲಿ ಕೆಲವೊಂದು ಆಘಾತಕಾರಿ ವಿಷಯಗಳನ್ನು ಮಾತಾಡಿದ. “ಅಕ್ಕ, ಗಾಂಧೀಜಿ ಒಳ್ಳೆಯವರೇ, ಕೆಟ್ಟವರೇ?” “ಒಳ್ಳೆಯವರು” ಎಂದೆ. ಇಲ್ಲ, “ಕೆಟ್ಟವರು” ಎಂದ. ಆತ ಯಾತಕ್ಕಾಗಿ ಆ ರೀತಿ ಹೇಳುತ್ತಿದ್ದಾನೆಂದು ತಿಳಿಯಲು ಪ್ರಯತ್ನಿಸಿದೆ. ಚಿನ್ನ ಧರಿಸಬಾರದು ಎಂಬುದಾಗಿ ಗಾಂಧೀಜಿ ಹೇಳಿದ್ದಾರೆಂಬುದು ಆತನಿಂದ ನಾನು ಪಡೆದ ಉತ್ತರವಾಗಿತ್ತು. ನಾನು, ನೀನು ಚಿನ್ನ ಧರಿಸುತ್ತಿಲ್ಲವೇ? ಹಾಗಿದ್ದರೆ ಅವರ್ಯಾಕೆ ನಿನಗೆ ಕೆಟ್ಟವರಾಗಿ ಕಾಣುತ್ತಾರೆ ಎಂದೆ. ಅವರನ್ನೇ ಏಕೆ ರಾಷ್ಟ್ರಪಿತನೆನ್ನಬೇಕು, ಬೇರೆ ಯಾರೂ ಇಲ್ಲವೇ? ಆತ ಮರುಪ್ರಶ್ನೆ ಹಾಕಿದ. ನಿನ್ನ ಪ್ರಕಾರ ಯಾರಾಗಬೇಕಿತ್ತು ಎಂದಾಗ ಮೌನವಾದ. ಸ್ವಲ್ಪ ಹೊತ್ತು ಕಳೆದು “ಅವರು ಕೂಡಾ ಕೊಲೆ ಮಾಡಿದ್ದಾರೆ” ಎಂದ. ಇದನ್ನು ಕೇಳಿಸಿಕೊಂಡ ನನಗೆ ಸಿಟ್ಟು ತಡೆಯಲಾಗಲಿಲ್ಲ. ಗಾಂಧಿ ಕೊಲೆಗಾರನಲ್ಲ, ಗಾಂಧಿಯನ್ನು ಗುಂಡಿಕ್ಕಿ ಕೊಂದ ಗೋಡ್ಸೆ ಕೊಲೆಗಾರ. ಆತನೊಬ್ಬ ದೇಶದ್ರೋಹಿ. ನಿನ್ನ ಪ್ರಕಾರ ಆತ ರಾಷ್ಟ್ರಪಿತನಾಗಬೇಕಿತ್ತು ತಾನೇ? ಎಂದು ಖಾರವಾಗಿಯೇ ಕೇಳಿದೆ. ಅಲ್ಲಿಂದ ಮುಂದೆ ಆತನಿಗೆ ಒಂದೊಂದೇ ವಿಚಾರಗಳನ್ನು ಸಾವಧಾನವಾಗಿ ಮನವರಿಕೆ ಮಾಡುತ್ತಾ ಬಂದೆ. ಇದನ್ನರಿತ ಆತನ ಹೆತ್ತವರು ನನ್ನ ಬಳಿ ಟ್ಯೂಷನ್ ಕೊಡಿಸುವುದನ್ನು ನಿಲ್ಲಿಸಿಯೇ ಬಿಟ್ಟರು.

ಸತ್ಯವನ್ನು ಇಂದಿನ ಪೀಳಿಗೆಗೆ ಮನದಟ್ಟು ಮಾಡಿಕೊಡುವುದು ಬಹುದೊಡ್ಡ ಸವಾಲೇ ಸರಿ. ಹಾಗಾಗಿ ಗಾಂಧೀಜಿಯವರ ಆತ್ಮಕಥೆಯಾದ ‘ನನ್ನ ಸತ್ಯಾನ್ವೇಷಣೆ’ಯನ್ನು ಎಲ್ಲಾ ಹೆತ್ತವರೂ ಓದಲೇಬೇಕು, ಮಕ್ಕಳಿಗೂ ಓದಿಸಬೇಕು. ಮಹಾತ್ಮ ಗಾಂಧಿಯ ಬಗ್ಗೆ ನೂರು ಭಿನ್ನಾಭಿಪ್ರಾಯಗಳಿರಬಹುದು. ಆದರೆ ಅವರು ರಾಷ್ಟ್ರಪಿತನೆಂಬುದನ್ನು ಅಲ್ಲಗಳೆಯುವಂತೆಯೇ ಇಲ್ಲ. ಗಾಂಧಿಗೆ ಪರ್ಯಾಯವಾಗಿ ಇನ್ನೊಬ್ಬ ಗಾಂಧಿ ಹುಟ್ಟಲು ಸಾಧ್ಯವೇ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...