Homeಮುಖಪುಟನಾ ಹ್ಯಾಂಗ ಮರೆಯಲಿ ನಿನ್ನ ಗಾಂಧಿ ತಾತ... : ಮಿಸ್ರಿಯಾ ಐ. ಪಜೀರ್

ನಾ ಹ್ಯಾಂಗ ಮರೆಯಲಿ ನಿನ್ನ ಗಾಂಧಿ ತಾತ… : ಮಿಸ್ರಿಯಾ ಐ. ಪಜೀರ್

- Advertisement -
- Advertisement -

ಭಿನ್ನ ಸಾಮಾಜಿಕ ಮತ್ತು ಪ್ರಾದೇಶಿಕ ಹಿನ್ನೆಲೆಗಳ ಬರಹಗಾರರು ನಮ್ಮಲ್ಲಿ ಬರೆಯಬೇಕೆಂಬುದು ಸಂಪಾದಕೀಯ ತಂಡದ ಎಲ್ಲರ ಅನಿಸಿಕೆ. ಅದರಲ್ಲೂ ಹೊಸತಲೆಮಾರಿನ ಹಲವಾರು ಬರಹಗಾರ್ತಿಯರ ಬರಹಗಳು ಇಲ್ಲಿರಬೇಕು. ಅದಕ್ಕಾಗಿ ಯಾರನ್ನು ಕೇಳಬೇಕೆಂದು ಪಟ್ಟಿ ಮಾಡಲು ಹೋದರೆ, ಪಟ್ಟಿ ಬಹಳ ದೊಡ್ಡದೇ ಆಯಿತು. ಒಬ್ಬರ ಅಂಕಣವನ್ನಷ್ಟೇ ಪ್ರಕಟಿಸಿದರೆ ದೊಡ್ಡ ನಷ್ಟ ಎನಿಸಿತು. ಈಗಲೇ ಪುಟಗಳನ್ನು ಹಿಗ್ಗಿಸುವ ಸಾಧ್ಯತೆಯೂ ಇಲ್ಲ. ಹಾಗಾಗಿ ಪ್ರತಿ ವಾರ ಒಬ್ಬೊಬ್ಬರಿಂದ ಬರೆಸಲು ತೀರ್ಮಾನಿಸಲಾಗಿದೆ. ಇನ್ನು ಮುಂದೆ ಈ ಜಾಗದಲ್ಲಿ ಹೊಸ ಬರಹಗಾರ್ತಿಯರು ಬರೆಯಲಿದ್ದಾರೆ.                                                                                                                    – ಸಂ.

ಸತ್ಯ ನುಡಿಯುವವರನ್ನು, ಗಾಂಧಿ ನಡೆದು ತೋರಿಸಿದ ಅಹಿಂಸಾ ಮಾರ್ಗದಲ್ಲಿ ಹೋರಾಡುವವರನ್ನು ದೇಶದ್ರೋಹಿಗಳನ್ನಾಗಿಯೂ, ಸುಳ್ಳನ್ನೇ ಸತ್ಯವೆಂಬಂತೆ ಬಿಂಬಿಸಿ ಹಿಂಸೆಯನ್ನೇ ಬಂಡವಾಳವಾಗಿಸಿಕೊಂಡವರನ್ನು ದೇಶಭಕ್ತರನ್ನಾಗಿಯೂ ಕಾಣುವ ಈ ದುರಂತ ದಿನಗಳಲ್ಲಿ ಬಾಲ್ಯದಲ್ಲಿ ನನ್ನ ಮನದಾಳದಲ್ಲಿ ಅಚ್ಚೊತ್ತಿದ ಗಾಂಧಿ ತಾತ ಕಾಡತೊಡಗಿದ್ದಾನೆ.

ನಾನು ಪ್ರಾಥಮಿಕ ಶಾಲೆಯಲ್ಲಿ ಕಲಿಯುತ್ತಿರುವಾಗ ಗಾಂಧೀಜಿಯವರ ಹೆಸರು ಕೇಳದ ದಿನಗಳೇ ಇರಲಿಲ್ಲ. ಮಕ್ಕಳ ಹಾಡಿನ ಮೂಲಕವೋ, ಅಭಿನಯ ಗೀತೆಗಳ ಮೂಲಕವೋ ಒಂದಲ್ಲ ಒಂದು ರೀತಿಯಲ್ಲಿ ಬಾಪೂಜಿಯ ಹೆಸರು ಹೇಳುತ್ತಿದ್ದೆವು. ನಾನು ಗಾಂಧೀಜಿಯ ಕುರಿತಾಗಿ ಕಲಿತ ಮೊದಲ ಹಾಡು “ಗಾಂಧಿ ತಾತ ನನ್ನಜ್ಜ, ಬಗ್ಗಿ ಬಗ್ಗಿ ನಡೆದಿದ್ದ… ಖಾದಿ ಬಟ್ಟೆ ತೊಡುತ್ತಿದ್ದ…” ಈ ಹಾಡಿನಿಂದಾಗಿ ನಮಗಾಗಲೇ ಗಾಂಧಿ ನಮ್ಮವರೆಂಬ ಭಾವನೆ ಮನಸ್ಸಿನಲ್ಲಿ ಮೂಡಿತ್ತು. ನನ್ನ ನಾಲ್ಕರ ಹರೆಯದ ಪುಟ್ಟ ಮಗಳು ಶಹೀಮಳಿಗೂ ಇದೇ ಹಾಡನ್ನು ಹಾಡಿಸುತ್ತೇನೆ.

ಗಾಂಧಿ ಖಾದಿಬಟ್ಟೆಯನ್ನು ಯಾಕೆ ತೊಡುತ್ತಿದ್ದರು ಗೊತ್ತಾ? ಎಂದು ಟೀಚರ್ ಪ್ರಶ್ನೆಯನ್ನು ಕೇಳುತ್ತಿದ್ದರು. ಇಲ್ಲವೆಂದಾಗ, ಅವರು ಅದಕ್ಕೆ ಕೊಡುತ್ತಿದ್ದ ಉತ್ತರವು ಅಷ್ಟೇ ಪರಿಣಾಮಕಾರಿಯಾಗಿರುತ್ತಿತ್ತು. ಬೆಂಚಿನಲ್ಲಿ ನಮ್ಮ ಪಕ್ಕದಲ್ಲೇ ಕುಳಿತಿರುವ ಗೆಳತಿಯರನ್ನು ತೋರಿಸಿ, ಅವಳ ಬಟ್ಟೆಯನ್ನು ನೀನು ತೊಡಲು ಇಷ್ಟಪಡುತ್ತೀಯಾ? ತೊಡಬಾರದೆಂದಲ್ಲ, ಇಷ್ಟಪಡುತ್ತೀಯಾ? ಇಲ್ಲ ತಾನೇ? ಅದೇರೀತಿ ಗಾಂಧೀಜಿಯವರು ಬ್ರಿಟಿಷರು ತಯಾರಿಸಿದ ಬಟ್ಟೆಯನ್ನು ತೊಟ್ಟುಕೊಳ್ಳಲು ಇಷ್ಟಪಡದೇ, ತಾನೇ ಸ್ವತಃ ಚರಕದಿಂದ ನೂಲನ್ನು ನೇಯ್ದು ಹತ್ತಿ ಬಟ್ಟೆ ತಯಾರಿಸುತ್ತಿದ್ದರು ಹಾಗೂ ಇತರರಿಗೂ ಅದನ್ನೇ ಉಡಲು ಉತ್ತೇಜಿಸುತ್ತಿದ್ದರು ಎಂದಾಗ ನಾವು ಪುಳಕಗೊಳ್ಳುತ್ತಿದ್ದೆವು. ಇದು ಬ್ರಿಟಿಷರ ವಿರುದ್ಧದ ಹೋರಾಟ ಎಂಬುವುದನ್ನು ಅರ್ಥೈಸಿಕೊಳ್ಳುವಷ್ಟು ಪ್ರಬುದ್ಧತೆ ನಮಗಾಗ ಇರಲಿಲ್ಲ.

ಗಾಂಧೀಜಿಯ ಕುರಿತಾಗಿ ಹಲವಾರು ಹಾಡುಗಳಿದ್ದವು. ಅವರನ್ನು ನಾನು ಅರಿತದ್ದೇ ಹಾಡಿನ ಮೂಲಕ. ‘ಗಾಂಧೀ ತಾತನ ಆಶ್ರಮದಲ್ಲಿ ಇದ್ದವು ಮೂರು ಕೋತಿಗಳು, ನೀತಿಯ ಸಾರುವ ಕೋತಿಗಳು….’ ಈ ಹಾಡಿಗೆ ನಮ್ಮ ಟೀಚರು ತರಗತಿಯಲ್ಲಿ ಮೂವರನ್ನು ಕೋತಿಗಳನ್ನಾಗಿ ಮಾಡಿ ಕಣ್ಣು, ಕಿವಿ, ಬಾಯಿ ಮುಚ್ಚಿಕೊಳ್ಳಲು ಹೇಳುತ್ತಿದ್ದರು. ಉಳಿದವರೆಲ್ಲಾ ಸೇರಿ ಹಾಡುತ್ತಾ ಅಭಿನಯಿಸುತ್ತಿದ್ದೆವು. ತನ್ಮೂಲಕ ಕೆಟ್ಟದ್ದನ್ನು ಕೇಳಬಾರದು, ನೋಡಬಾರದು, ಆಡಬಾರದು ಎಂಬ ಗಾಂಧೀಜಿಯವರ ಬೋಧನೆಯನ್ನು ಕಲಿತೆವು.

‘ಪುಟ್ಟ ಕೌಮುದಿ, ಹಿಂದೂಸ್ತಾನಕ್ಕೆ ಹಿಂದಿರುಗಿದುದು’ ಎಂಬ ಪಾಠಗಳು ಬರಿಯ ಪಾಠವಾಗಿರದೆ ದೇಶಭಕ್ತನೆಂದರೆ ಗಾಂಧೀಜಿ, ಗಾಂಧೀಜಿಯೆಂದರೆ ದೇಶಭಕ್ತ ಎಂಬಷ್ಟು ಗಾಢವಾಗಿ ನಮ್ಮನ್ನಾವರಿಸಿತ್ತು. ಸ್ವಾತಂತ್ರ್ಯ ದಿನಾಚರಣೆ ಬಂತೆಂದರೆ ಸಾಕು, ಅಂದಿನ ಸಮಾರಂಭಕ್ಕೆ ಅತಿಥಿಗಳಾಗಿ ಬರುತ್ತಿದ್ದ ಗಣ್ಯರ ಬಾಯಲ್ಲೂ ಗಾಂಧೀಜಿ. ಮಕ್ಕಳ ಭಾಷಣದಲ್ಲೂ ಗಾಂಧೀಜಿ. ದೇಶಭಕ್ತಿ ಗೀತೆಯಲ್ಲೂ ಗಾಂಧೀಜಿ.

‘ಇದು ಬಾಪೂಜೀ ಬೆಳಗಿದ ಭಾರತ…’
ಹಾಗೆಯೇ
ಕಾಥೇವಾಡದ ಪೋರಬಂದರಿನಲ್ಲಿ ಜನಿಸಿದರು….
ಮೋಹನದಾಸ ಕರಮಚಂದ ಗಾಂಧಿ ಎಂಬವರು….
ಈ ಹಾಡಿನ ಕೊನೆಯಲ್ಲಿ
ಜನವರಿ ತಿಂಗಳ 30 ರಂದು……
ಇಹವನು ತ್ಯಜಿಸಿದರು.

ನಾಥೂರಾಮನ ಗುಂಡಿಗೆ ಸಿಲುಕಿ ಜಾಗವ ಎದೆಯಲ್ಲಿ ಎಂಬ ಸಾಲುಗಳಿದ್ದವು. ನಮಗೆ ಅದಾಗಲೇ ಗೋಡ್ಸೆಯ ಬಗ್ಗೆ ಮನದಲ್ಲಿ ಅಸಹನೆ ಮೂಡಲಾರಂಭಿಸಿತ್ತು. ಆಶ್ಚರ್ಯವೆಂದರೆ ನಮಗೆ ಇದನ್ನೆಲ್ಲಾ ಕಲಿಸಿದ ಟೀಚರ್ ಬ್ರಾಹ್ಮಣರಾಗಿದ್ದರು. ಅವರು ಯಾವತ್ತೂ ನಮಗೆ ಗಾಂಧೀಜಿಯ ಚಿತ್ರಣವನ್ನು ಕೆಟ್ಟದಾಗಿ ಚಿತ್ರಿಸಿಕೊಡಲಿಲ್ಲ. ಅವರೆಂದರೆ ‘ಮಹಾತ್ಮ’ ಅದರಾಚೆಗೆ ಯಾವುದೇ ಅನ್ಯ ಕಲ್ಪನೆಗಳಿರಲಿಲ್ಲ.

ಆ ಸುಂದರ ದಿನಗಳನ್ನು ಕೇಸರೀಕರಣವು ಅದೆಷ್ಟು ಬೇಗ ಧ್ವಂಸಗೊಳಿಸಿತೆಂದರೆ ನಾ ಕಲಿತ ಹಾಡುಗಳು ಈಗ ಯಾರ ಬಾಯಲ್ಲೂ ಕೇಳಸಿಗುವುದಿಲ್ಲ. ಶಾಲೆಯಲ್ಲಿ ಶಿಕ್ಷಕರೂ ಕೂಡಾ ಗಾಂಧೀಜಿಯ ತತ್ವಾದರ್ಶಗಳನ್ನು ಬೋಧಿಸುವ ಗೋಜಿಗೇ ಹೋಗುವುದಿಲ್ಲ. ಈಗಿನ ಮಕ್ಕಳು ಗಾಂಧೀಜಿಯ ಬಗ್ಗೆ ಬಹಳ ತುಚ್ಛವಾಗಿ ಮಾತನಾಡುವಷ್ಟರಮಟ್ಟಿಗೆ ಅವರ ಮೆದುಳು ತೊಳೆಯಲಾಗುತ್ತಿದೆ.

2 ವರ್ಷಗಳ ಹಿಂದೆ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬ್ರಾಹ್ಮಣ ಹುಡುಗನೊಬ್ಬ ನನ್ನ ಬಳಿಗೆ ಟ್ಯೂಷನ್‍ಗಾಗಿ ಬರುತ್ತಿದ್ದ. ಪ್ರತಿಯೊಂದು ವಿಚಾರಗಳನ್ನು ಪ್ರಶ್ನಿಸುವ ಗುಣ ಆತನಲ್ಲಿತ್ತು. ಇದನ್ನು ಗಮನಿಸಿದ ನಾನು “ನೀನು ವಿಚಾರವಾದಿಯಾಗುತ್ತಿ” ಎಂದಾಗ ಥಟ್ಟನೆ “ವಿಚಾರವಾದಿಯಾಗುವುದಿಲ್ಲ” ಎಂದ. ಆತನ ಪ್ರತಿಕ್ರಿಯೆಗೆ ಅವಾಕ್ಕಾದೆ. ಆತನ ವಯಸ್ಸಿನಲ್ಲಿ ನನಗೆ ವಿಚಾರವಾದಿ ಅಂದ್ರೆ ಏನೆಂದು ತಿಳಿಯುವುದು ಬಿಡಿ, ಆ ಪದವೇ ಗೊತ್ತಿರಲಿಲ್ಲ. ವ್ಯವಸ್ಥಿತವಾಗಿ ಎಳೆ ಮನಸ್ಸಿನೊಳಗೆ ಇದನ್ನೆಲ್ಲಾ ತುಂಬಿಕೊಡಲಾಗುತ್ತದೆ.

ಹೀಗೆ ಒಂದು ದಿನ ಆತ ನನ್ನಲ್ಲಿ ಕೆಲವೊಂದು ಆಘಾತಕಾರಿ ವಿಷಯಗಳನ್ನು ಮಾತಾಡಿದ. “ಅಕ್ಕ, ಗಾಂಧೀಜಿ ಒಳ್ಳೆಯವರೇ, ಕೆಟ್ಟವರೇ?” “ಒಳ್ಳೆಯವರು” ಎಂದೆ. ಇಲ್ಲ, “ಕೆಟ್ಟವರು” ಎಂದ. ಆತ ಯಾತಕ್ಕಾಗಿ ಆ ರೀತಿ ಹೇಳುತ್ತಿದ್ದಾನೆಂದು ತಿಳಿಯಲು ಪ್ರಯತ್ನಿಸಿದೆ. ಚಿನ್ನ ಧರಿಸಬಾರದು ಎಂಬುದಾಗಿ ಗಾಂಧೀಜಿ ಹೇಳಿದ್ದಾರೆಂಬುದು ಆತನಿಂದ ನಾನು ಪಡೆದ ಉತ್ತರವಾಗಿತ್ತು. ನಾನು, ನೀನು ಚಿನ್ನ ಧರಿಸುತ್ತಿಲ್ಲವೇ? ಹಾಗಿದ್ದರೆ ಅವರ್ಯಾಕೆ ನಿನಗೆ ಕೆಟ್ಟವರಾಗಿ ಕಾಣುತ್ತಾರೆ ಎಂದೆ. ಅವರನ್ನೇ ಏಕೆ ರಾಷ್ಟ್ರಪಿತನೆನ್ನಬೇಕು, ಬೇರೆ ಯಾರೂ ಇಲ್ಲವೇ? ಆತ ಮರುಪ್ರಶ್ನೆ ಹಾಕಿದ. ನಿನ್ನ ಪ್ರಕಾರ ಯಾರಾಗಬೇಕಿತ್ತು ಎಂದಾಗ ಮೌನವಾದ. ಸ್ವಲ್ಪ ಹೊತ್ತು ಕಳೆದು “ಅವರು ಕೂಡಾ ಕೊಲೆ ಮಾಡಿದ್ದಾರೆ” ಎಂದ. ಇದನ್ನು ಕೇಳಿಸಿಕೊಂಡ ನನಗೆ ಸಿಟ್ಟು ತಡೆಯಲಾಗಲಿಲ್ಲ. ಗಾಂಧಿ ಕೊಲೆಗಾರನಲ್ಲ, ಗಾಂಧಿಯನ್ನು ಗುಂಡಿಕ್ಕಿ ಕೊಂದ ಗೋಡ್ಸೆ ಕೊಲೆಗಾರ. ಆತನೊಬ್ಬ ದೇಶದ್ರೋಹಿ. ನಿನ್ನ ಪ್ರಕಾರ ಆತ ರಾಷ್ಟ್ರಪಿತನಾಗಬೇಕಿತ್ತು ತಾನೇ? ಎಂದು ಖಾರವಾಗಿಯೇ ಕೇಳಿದೆ. ಅಲ್ಲಿಂದ ಮುಂದೆ ಆತನಿಗೆ ಒಂದೊಂದೇ ವಿಚಾರಗಳನ್ನು ಸಾವಧಾನವಾಗಿ ಮನವರಿಕೆ ಮಾಡುತ್ತಾ ಬಂದೆ. ಇದನ್ನರಿತ ಆತನ ಹೆತ್ತವರು ನನ್ನ ಬಳಿ ಟ್ಯೂಷನ್ ಕೊಡಿಸುವುದನ್ನು ನಿಲ್ಲಿಸಿಯೇ ಬಿಟ್ಟರು.

ಸತ್ಯವನ್ನು ಇಂದಿನ ಪೀಳಿಗೆಗೆ ಮನದಟ್ಟು ಮಾಡಿಕೊಡುವುದು ಬಹುದೊಡ್ಡ ಸವಾಲೇ ಸರಿ. ಹಾಗಾಗಿ ಗಾಂಧೀಜಿಯವರ ಆತ್ಮಕಥೆಯಾದ ‘ನನ್ನ ಸತ್ಯಾನ್ವೇಷಣೆ’ಯನ್ನು ಎಲ್ಲಾ ಹೆತ್ತವರೂ ಓದಲೇಬೇಕು, ಮಕ್ಕಳಿಗೂ ಓದಿಸಬೇಕು. ಮಹಾತ್ಮ ಗಾಂಧಿಯ ಬಗ್ಗೆ ನೂರು ಭಿನ್ನಾಭಿಪ್ರಾಯಗಳಿರಬಹುದು. ಆದರೆ ಅವರು ರಾಷ್ಟ್ರಪಿತನೆಂಬುದನ್ನು ಅಲ್ಲಗಳೆಯುವಂತೆಯೇ ಇಲ್ಲ. ಗಾಂಧಿಗೆ ಪರ್ಯಾಯವಾಗಿ ಇನ್ನೊಬ್ಬ ಗಾಂಧಿ ಹುಟ್ಟಲು ಸಾಧ್ಯವೇ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....