Homeಮುಖಪುಟಸಸ್ಯಹಾರಿಯಾಗಿದ್ದ ನಾನು ಬಾಡೂಟಕ್ಕೆ ತೆರೆದುಕೊಂಡದ್ದು ಹೀಗೆ...

ಸಸ್ಯಹಾರಿಯಾಗಿದ್ದ ನಾನು ಬಾಡೂಟಕ್ಕೆ ತೆರೆದುಕೊಂಡದ್ದು ಹೀಗೆ…

- Advertisement -
- Advertisement -

ಇತ್ತೀಚಿಗಷ್ಟೇ ನಡೆದ #ಬಾಡೇನಮ್‌ಗಾಡು ಅಭಿಯಾನದ ಬಗ್ಗೆ ತಿಳಿದು, ನಮ್ಮ ಆಫೀಸಿನಲ್ಲಿ ಎಲ್ಲರೂ ಒಟ್ಟಿಗೆ ಬಾಡು ಸೇವಿಸುತ್ತಿದ್ದ ಫೋಟೋಗಳನ್ನ ನೋಡಿದಾಗ, ಇದೇ ನೆಪದಲ್ಲಿ ನಾನು ಸಂಶೋಧನೆ ಇನ್ಸ್ಟಿಟ್ಯೂಟಿನವರೆಲ್ಲರೂ ಒಂದು ದಿನ ಒಟ್ಟಿಗೆ ಬಾಡು ತಿನ್ನಬಹುದಲ್ಲಾ ಅನ್ನಿಸಿತು. ನಾಳೆ ನಾವು ಒಂದಷ್ಟು ಜನ ಮತ್ತಿಕೆರೆಯ ಚಂದ್ರಪ್ಪ ಹೋಟೆಲಿನಲ್ಲಿ ಬಾಡು ತಿನ್ನಲಿದ್ದೇವೆ, ನೀವೂ ಜೊತೆಯಾಗಿ ಎಂದು ಒಂದು ಸ್ಟೇಟಸ್ ಬರೆದು ಹಾಕಿದೆ. ಅದನ್ನು ಗಮನಿಸಿದ ಕಿರಿಯ ಸಂಬಂಧಿಕರೊಬ್ಬರು, ನಮ್ಮ ಕುಟುಂಬದಲ್ಲಿ ಹಿರಿಯರೆನಿಸಿರುವ ಸಂಬಂಧಿಕರಿಗೆ ಆ ಸ್ಟೇಟಸ್‌ಅನ್ನು ಕಳುಹಿಸಿಕೊಟ್ಟು, ನೋಡಿ ನಮ್ಮ ಮನೆತನದ ಗೌರವ ಏನಾಗಬೇಕು, ನೀವಾದರೂ ಬುದ್ಧಿ ಹೇಳಿ ಅಂದರಂತೆ!

ಅದಕ್ಕವರು ನನಗೆ ಕರೆ ಮಾಡಿ, ಹಾಗೆ-ಹೀಗೆ ಅಂತ ’ಬುದ್ಧಿವಾದ’ ಹೇಳಲು ಶುರುವಿಟ್ಟರು. ಅವರು ಹೇಳಿದ್ದು ಇಷ್ಟು. ’ಈಗಿನ ಕಾಲದಲ್ಲಿ ನೀನು ಇದು ತಿನ್ನು ಅದು ತಿನ್ನು ಎಂದೆಲ್ಲಾ ಹೇಳಿದರೆ ನೀವು ಕೇಳುವುದಿಲ್ಲ, ನಾವು ಹೇಳುವುದಕ್ಕೂ ಆಗುವುದಿಲ್ಲ. ತಿನ್ನುವುದು ನಿಮ್ಮ ಹಕ್ಕು ಎನ್ನುತ್ತೀರಿ. ಆದರೆ ಅದನ್ನು ಪ್ರಚಾರ ಮಾಡಬಾರದಿತ್ತು. ಅದು ಅಗತ್ಯವಿರಲಿಲ್ಲ’ ಎಂದರು. ಹಾಗೆಲ್ಲ ಹಾಕಬೇಡ, ಜೋಯಿಸರ ಮನೆಯವರೇ ಹೀಗಾದರೆ ಹೇಗೆ ಎಂದು ಜನ ನಮ್ಮನ್ನು ಆಡಿಕೊಂಡು ನಗುತ್ತಾರೆ, ಪ್ರಶ್ನಿಸುತ್ತಾರೆ. ಅದಕ್ಕೇನು ಹೇಳುವುದು? ನಮಗೆ ಅವಮಾನವಾಗುತ್ತೆ. ಅದು ನಿಮ್ಮ ತಂದೆ-ತಾಯಿಯರಿಗೆ ಎಷ್ಟು ನೋವಾಗಿರಬಹುದು ಎಂದು ಯೋಚಿಸು ಎಂದರು. ಅದೂಅಲ್ಲದೆ, ಅವರು ನಾವು ಬಾಡು ತಿನ್ನಲಿದ್ದ ಜಾಗಕ್ಕೆ ಬಂದು ಅದನ್ನು ನಿಲ್ಲಿಸಲಿಕ್ಕೆ ಹೊರಡುವ ಯೋಚನೆಯಲ್ಲಿದ್ದಾಗ ಅವರನ್ನು ಅವರ ಪತ್ನಿ ತಡೆದರಂತೆ.

ನಾನು ಅವರಿಗೆ ಕೇಳಿದ್ದಿಷ್ಟು. ನಮ್ಮ ಸಂಬಂಧಿಕರೇ ಉಪ್ಪಿಟ್ಟು, ಮೊಸರನ್ನದ ಫೋಟೋಗಳನ್ನ ದಿನನಿತ್ಯ ಹಂಚಿಕೊಂಡಾಗ ಬೇಸರ ಎನಿಸದ ನಮಗೆ, ಬಾಡಿನ ಫೋಟೋಗಳು ನೋಡಿದಾಗ ಯಾಕಿಷ್ಟು ಕಸಿವಿಸಿ ಆಗುತ್ತದೆ? ನನ್ನ ಆಹಾರ ನನ್ನ ಹಕ್ಕು. ನಿಮಗೆ ನಾನು ಬಾಡು ತಿನ್ನುವುದರಿಂದ ಅವಮಾನವಾಗುವುದಾದರೆ ಅದನ್ನು ನೀವೇ ಬಗೆಹರಿಸಿಕೊಳ್ಳಿ. ಒಂದು ಕುಟುಂಬದ ’ಶ್ರೇಷ್ಠ’ತೆಗೂ ಅವರ ಊಟಕ್ಕೂ ಸಂಬಂಧ ಕಟ್ಟುವುದನ್ನೇ ನಾವು ಇಲ್ಲಿ ಪ್ರಶ್ನಿಸುತ್ತಿರುವುದು ಎಂದೆ. ’ನೀನು, ನಿನ್ನ ಬುದ್ಧಿಯಂತೆ, ಇಚ್ಛೆಯಂತೆ ನಡೆದುಕೊಂಡರೂ, ನಮ್ಮ ಕುಟುಂಬಕ್ಕೆ (ಅವರು ಇಲ್ಲಿ ಕುಟುಂಬ ಎಂದು ಹೇಳುತ್ತಿರುವುದು, ನಿಜವಾಗಿ ಜಾತಿಯೇ ಆಗಿದೆ) ಅದು ಬಂದಿಲ್ಲ’ ಎಂಬುದು ಅವರ ವಾದವಾಗಿತ್ತು.

ಇದು ಇಂದಿನ ದಮನಕಾರಿ ವ್ಯವಸ್ಥೆಯ ಮುಖ್ಯ ಲಕ್ಷಣವೊಂದನ್ನು ಮುಂದಿಡುತ್ತಿದೆ. ಜಾತೀಯತೆ, ಪಿತೃಪ್ರಧಾನತೆ ಮತ್ತು ಮತಧರ್ಮಗಳು ಸೇರಿದಂತೆ ಇತರೆ ವ್ಯವಸ್ಥೆಗಳು ಜನರ ಜೀವನವನ್ನು ಮತ್ತು ನಡವಳಿಕೆಗಳನ್ನು ಪ್ರಭಾವಿಸುತ್ತವೆ ಎಂಬುದು ಒಂದು ಸಿದ್ಧಾಂತ. ಅದಕ್ಕೆ ಪ್ರತಿಯಾಗಿ ವ್ಯಕ್ತಿಗಳೇ ತಮ್ಮ ಜೀವನವನ್ನು ನಿರ್ಧರಿಸಿಕೊಳ್ಳುತ್ತಾರೆ ಎಂಬ ವ್ಯಕ್ತಿವಾದದ ಸಿದ್ಧಾಂತವೂ ಇದೆ. ಇಂದು ವ್ಯಕ್ತಿವಾದವನ್ನೇ ಮುಂದಿಡುತ್ತಾ, ನಿಮ್ಮ ಜೀವನವನ್ನು ನೀವು ಕಟ್ಟಿಕೊಳ್ಳುವುದು, ನಿಮ್ಮ ಶ್ರಮವೇ ನಿಮ್ಮ ಜೀವನವನ್ನು ನಿರ್ಧರಿಸುವುದು ಎಂದು ಜನರಿಗೆ ಹೇಳುತ್ತಾ, ವ್ಯಕ್ತಿಯೊಬ್ಬನಿಗೆ ತಾನು ಉಣ್ಣುವ ಆಹಾರವನ್ನು ಆಯ್ದುಕೊಳ್ಳುವ ’ಆಯ್ಕೆ’ಯಿದೆ ಎಂದು ನಂಬಿಸುತ್ತಲೇ, ಮತ್ತೊಂದೆಡೆ ’ಕುಟುಂಬ’ (ಜಾತಿ) ಎಂಬ ವ್ಯವಸ್ಥೆಯ ಕಟ್ಟಲೆಯನ್ನು ಒಟ್ಟೊಟ್ಟಿಗೆ ಮುಂದುವರೆಸಿಕೊಂಡು ಹೋಗುತ್ತಿದೆ. ಈ ವ್ಯವಸ್ಥೆಯು ತನಗೆ ಹಿತವೆನಿಸುವ ರೀತಿಯಲ್ಲಿ ವ್ಯಕ್ತಿವಾದ ಮತ್ತು ದಮನಕಾರಿ ವ್ಯವಸ್ಥೆಗಳನ್ನು ಒಟ್ಟೊಟ್ಟಿಗೆ ಮುಂದೆ ಕೊಂಡೊಯ್ಯುತ್ತಿದೆ. ಈ ವ್ಯವಸ್ಥೆಯಲ್ಲಿ ನನ್ನಂತ ಒಂದಷ್ಟು ಜನರು ಮಾತ್ರವೇ ತಮ್ಮ ’ಆಯ್ಕೆ’ಯನ್ನು ಚಲಾಯಿಸಬಹುದಾಗಿದೆ. ಅವರು ಯಾರು ಎಂಬುದು ಕೂಡ ಜಾತಿ ಮತ್ತು ಇತರೆ ದಮನಕಾರಿ ವ್ಯವಸ್ಥೆಗಳಿಂದಲೇ ನಿರ್ಧಾರವಾಗುತ್ತದೆ. ಹೀಗಿರುವಾಗ, ಆ ’ಆಯ್ಕೆ’ ಸಾಧ್ಯವಿದ್ದಾಗ ನನ್ನಂತೆ ಬ್ರಾಹ್ಮಣ ಜಾತಿಯ-ಮೇಲುಜಾತಿಯೆಂದು ಕರೆದುಕೊಳ್ಳಲ್ಪಟ್ಟ ಶೋಷಕ ಜಾತಿಯ ಮನೆಗಳ-ಮನಸ್ಸುಗಳ ಕೊಳಕನ್ನು ಪ್ರಶ್ನಿಸುವುದಕ್ಕೆ ಆ ’ಆಯ್ಕೆ’ಯನ್ನು ಬಳಸುವುದು ಸೂಕ್ತ ಎಂದು ನಾನು ನಂಬಿದ್ದೇನೆ.

ಇನ್ನೊಂದು ವಿಷಯವಿದೆ. ಪಾಪ ನನ್ನ ಆ ಸಂಬಂಧಿಕರು, ನಾನು ಇದೇ ಮೊದಲಬಾರಿ ಬಾಡು ತಿನ್ನುತ್ತಿರುವುದು ಎಂದು ಎಣಿಸಿರಬೇಕು. ಅದಕ್ಕೆ ಅಷ್ಟು ಕೋಪ, ಸಿಟ್ಟು, ಆಕ್ರೋಶ. ನಾನು ಹೈದರಾಬಾದಿನ ಟಿಸ್‌ನಲ್ಲಿ (TISS) ಕಮ್ಯುನಿಸ್ಟರು, ಅಂಬೇಡ್ಕರವಾದಿಗಳ ಜೊತೆ ಸೇರಿಯೇ ಹೀಗಾದೆ ಎಂದು ಅವರೂ ಸೇರಿದಂತೆ ನನ್ನ ಹೆತ್ತವರೂ ನಂಬಿ ತಿಳಿದಿರುವುದುಂಟು. ಆದರೆ, ಹಾಗೇನಿಲ್ಲ. ಸಸ್ಯಾಹಾರಿತ್ವದ ಬಗ್ಗೆ ಬಹಳ ಹೆಮ್ಮೆಪಡುತ್ತಿದ್ದ ನಾನು, ಒಮ್ಮೆ ಮೈಸೂರಿನಿಂದ ಮಧ್ಯರಾತ್ರಿ ಸೈಕಲಿನಲ್ಲಿ ಬೆಂಗಳೂರಿನ ಕಡೆಗೆ ಹೊರಟೆ. ಶ್ರೀರಂಗಪಟ್ಟಣದ ಬಳಿ ಬರುವ ಹೊತ್ತಿಗೆ ಸುಮಾರು 2 ಗಂಟೆಯಾಗಿತ್ತು. ಹಸಿದಿತ್ತು. ಕಾಸು ಕಡಿಮೆಯಿತ್ತು. ದೊಡ್ಡ ಹೋಟೆಲುಗಳಿಗೆ ಹೋಗುವಷ್ಟಿರಲಿಲ್ಲ. Omn ಗಾಡಿಯೊಂದರಲ್ಲಿ ಊಟ ಸಿಗುತ್ತಿತ್ತು. ಹೋಗಿ ನೋಡಿದೆ. ಪರೋಟ ಮತ್ತು ಚಿಕನ್ ಕರಿಯಷ್ಟೇ ಇದ್ದದ್ದು. ಒಂದು ಕ್ಷಣ ಯೋಚಿಸಿದೆ. ಹಸಿವಿಗೆ ಆಹಾರವೇ ಮುಖ್ಯ. ಏನಾದರೇನು? ಎಂದು ತಿಂದೆ. ಬಹಳ ರುಚಿಕರವಾಗಿದ್ದ ಚಿಕನ್ ತಿಂದ ನನಗೆ, ಇಷ್ಟು ವರ್ಷ ಇಷ್ಟು ರುಚಿಯಾದ ಆಹಾರವನ್ನು ಏಕೆ ತಿನ್ನಲಿಲ್ಲ ಅನ್ನಿಸಿತು. ಅಲ್ಲಿಂದ ಇಲ್ಲಿಗೆ, ಅವಕಾಶ ಸಿಕ್ಕಾಗಲೆಲ್ಲಾ ಚಿಕನ್, ಮಟನ್ ಅಷ್ಟೇ ಅಲ್ಲದೆ ಪೋರ್ಕ್ ಮತ್ತು ಬೀಫ್ ಸೇರಿದಂತೆ ಎಲ್ಲಾ ಬಾಡನ್ನು ಮಿಸ್ ಮಾಡದೆ ತಿನ್ನುತ್ತೇನೆ. ಇಂದು ನನಗೆ ವೈಯಕ್ತಿಕವಾಗಿ, ಮಾಂಸಾಹಾರದಲ್ಲಿರುವಷ್ಟು ರುಚಿ ಮತ್ತು ವೆರೈಟಿಯ ಖಾದ್ಯಗಳು ಸಸ್ಯಾಹಾರದಲ್ಲಿಲ್ಲ ಎನಿಸುತ್ತದೆ. ಮಾಂಸಾಹಾರ ಸೇವನೆ ಇಂದು ನನ್ನ ಸಿದ್ಧಾಂತದ ಒಂದು ಭಾಗ ಎಂಬುದು ಎಷ್ಟು ಸತ್ಯವೋ ನಾನು ಮಾಂಸಾಹಾರ ಸೇವನೆಗೆ ಇಳಿದಿದ್ದು ಹಸಿವಿನಿಂದ, ಸಿದ್ಧಾಂತಗಳಿಂದಲ್ಲ ಎಂಬುದೂ ಅಷ್ಟೇ ಸತ್ಯ.

ಅದರಂತೆಯೇ, ಎಲ್ಲಾ ಜಾತಿ, ವರ್ಗಗಳ ಮಕ್ಕಳು ಸೇರಿ ಬೆರೆಯಬೇಕಿರುವ ಶಾಲಾ-ಕಾಲೇಜುಗಳ ಬಹಳಷ್ಟು ಕ್ಯಾಂಟೀನುಗಳಲ್ಲಿ ದುಡ್ಡುಕೊಟ್ಟರೂ ಮಾಂಸಾಹಾರವೇಕೆ ಸಿಗುವುದಿಲ್ಲ ಎಂಬ ಪ್ರಶ್ನೆಯನ್ನೂ #ಬಾಡೇನಮ್‌ಗಾಡು ಹಿನ್ನೆಲೆಯಲ್ಲಿ ಕೇಳಬೇಕೆನ್ನಿಸಿತು.

  • ಶಶಾಂಕ್, NIASನಲ್ಲಿ ಸಂಶೋಧನಾ ವಿದ್ಯಾರ್ಥಿ

ಇದನ್ನೂ ಓದಿ: ಆಹಾರ ಶ್ರೇಷ್ಠತೆಯ ರಾಜಕೀಯದ ವಿವಿಧ ಮುಖಗಳು

ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ತರಕಾರಿ ದುಬಾರಿ; ಕೃಷಿಕ-ಗ್ರಾಹಕ ಕಂಗಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...